Homeಕರ್ನಾಟಕಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಸಭೆ ವಿಫಲ; ಹೋರಾಟ ತೀವ್ರಗೊಳಿಸಲು ನಿರ್ಧಾರ

ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಸಭೆ ವಿಫಲ; ಹೋರಾಟ ತೀವ್ರಗೊಳಿಸಲು ನಿರ್ಧಾರ

- Advertisement -
- Advertisement -

ಒಳ ಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕ ಶೇಕಡ 1ರಷ್ಟು ಮೀಸಲಾತಿ ಕೊಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ (ಆ.23) ನಡೆದ ಸಭೆ ವಿಫಲಗೊಂಡಿದೆ.

ಅಲೆಮಾರಿ ಜನಾಂಗದ ಮುಖಂಡರು, ಹೋರಾಟಗಾರರು ಮತ್ತು ಚಿಂತಕರುಗಳ ಜೊತೆ ಕಾವೇರಿ ನಿವಾಸದಲ್ಲಿ ಸಿಎಂ ಸಭೆ ನಡೆಸಿದ್ದು, ಪ್ರತ್ಯೇಕ ಮೀಸಲಾತಿ ಕಲ್ಪಿಸಲು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಿಎಂ ಸಭೆಯಲ್ಲಿ ಬೇಡಿಕೆ ಈಡೇರದ ಹಿನ್ನೆಲೆ ಹೋರಾಟ ಮುಂದುವರಿಸಲು ಅಲೆಮಾರಿ ಸಮುದಾಯದ ಮುಖಂಡರು ಮತ್ತು ಇತರ ಹೋರಾಟಗಾರರು ತೀರ್ಮಾನಿಸಿದ್ದಾರೆ.

ಶೇ. 1ರಷ್ಟು ಒಳ ಮೀಸಲಾತಿ ಪಡೆಯುವವರೆಗೂ, ‘ಎ’ ಗುಂಪಿನಲ್ಲಿ ಸೇರಿಸುವವರೆಗೂ ಹೋರಾಟ ಮುಂದುವರೆಯುತ್ತದೆ. ರಾಜ್ಯದ ಎಲ್ಲಾ ತಾಲೂಕುಗಳಲ್ಲೂ ಹೋರಾಟವನ್ನು ತೀವ್ರಗೊಳಿಸುತ್ತೇವೆ. ಅಲೆಮಾರಿಗಳನ್ನು ಮೀಸಲಾತಿಯಿಂದ ವಂಚಿಸುವ ಅನ್ಯಾಯ ಮಾಡಿದ ಸಚಿವ ಸಂಪುಟದ ಎಲ್ಲಾ ಮಂತ್ರಿಗಳಿಗೆ ಪ್ರತಿಭಟನಾ ಹಕ್ಕೊತ್ತಾಯ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಸಿಎಂ ಸಭೆ ಬಳಿಕ ಹೇಳಿಕೆ ನೀಡಿರುವ ಅಲೆಮಾರಿ ಸಮುದಾಯದ ಮುಖಂಡ ಚಾವಡೆ ಲೋಕೇಶ್‌ ಗೋಸಂಗಿ, “ಹೋರಾಟದ ಮಾದರಿ ಬದಲಿಸೋಣ. ನಮ್ಮ ಕಷ್ಟ ಜನರಿಗೆ ಗೊತ್ತಾಗಲಿ. ಅಲೆಮಾರಿಗಳು ವಾಪಸ್‌ ಹೋರಾಟಕ್ಕೆ ಬರುವಾಗ ಟೆಂಟ್‌ಗಳು, ಕೌದಿಗಳನ್ನು ತನ್ನಿ. ಫ್ರೀಡಂ ಪಾರ್ಕ್‌ನಲ್ಲಿ ಟೆಂಟ್‌ ಹಾಕಿ ಇಲ್ಲಿಯೇ ಊಟ ಮಾಡಿಕೊಂಡು ಜೀವನ ಮಾಡೋಣ. ತಂಗಡಗಿಯಂತಹ ಸಚಿವರಿಗೆ ಹಸಿದಿದ್ದರೆ ಅವರಿಗೂ ಊಟ ಹಾಕೋಣ. ನಾವು ನ್ಯಾಯ ಪಡೆದೇ ವಾಪಸ್‌ ಹೋಗೋಣ” ಎಂದು ಸಮುದಾಯಕ್ಕೆ ಕರೆ ಕೊಟ್ಟಿದ್ದಾರೆ.

ಒಳ ಮೀಸಲಾತಿ ಹೋರಾಟಗಾರ ಪ್ರೊ. ಎ.ಎಸ್ ಪ್ರಭಾಕರ್ ಹೇಳಿಕೆ ನೀಡಿ ” ಮುಖ್ಯಮಂತ್ರಿಗಳ ಬಗ್ಗೆ ನಮಗೆ ಭರವಸೆ ಇತ್ತು. ಆದರೆ, ಅವರ ಮಾತಿನಲ್ಲಿ ವಿಷಾದ, ಹತಾಶೆ ಇತ್ತು. ಅವರಂತಹ ಗಟ್ಟಿ ಸೈದ್ಧಾಂತಿಕ ರಾಜಕಾರಣಿ ಇವತ್ತು ಹತಾಶೆಗೆ ಒಳಗಾಗಿದ್ದಾರೆ ಎಂದರೆ ದೊಡ್ಡ ದೊಡ್ಡ ಲಾಬಿಗಳು ಅವರನ್ನು ಮಣಿಸುತ್ತಿವೆ” ಎಂದಿದ್ದಾರೆ.

“ನಾವು ಹೋರಾಟ ಮುಂದುವರೆಸಬೇಕು. ಆದರೆ, ಅಲೆಮಾರಿಗಳು ಶೇ. 90ರಷ್ಟು ಜನರು ಕೂಲಿ ಕಾರ್ಮಿಕರು. ಅವರು ಬೆಂಗಳೂರಿಗೆ ಬರುವುದು ಬಹಳ ಕಷ್ಟ. ಹಾಗಾಗಿ, ನಮ್ಮ ನಮ್ಮ ಜಿಲ್ಲೆಗಳಲ್ಲಿ ಹೋರಾಟ ಮುಂದುವರೆಸೋಣ” ಎಂದು ಸಮುದಾಯಕ್ಕೆ ಕರೆ ಕೊಟ್ಟಿದ್ದಾರೆ.

“ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ತೀರ್ಪಿನ ದೊಡ್ಡ ಬಲವಿದೆ. ಸಂವಿಧಾನದ ಬಲವಿದೆ. ಕೋರ್ಟ್‌ಗೆ ಹೋಗುವುದು ಸೇರಿದಂತೆ ಇನ್ನೂ ಯಾವ ಯಾವ ಸಾಧ್ಯತೆಗಳಿವೆ ಎಂಬುದನ್ನು ಪರಿಶೀಲಿಸುತ್ತೇವೆ. ನಮ್ಮವರು ಯಾರೂ ಕೂಡ ಹತಾಶರಾಗಬಾರದು. 101 ಸಮುದಾಯಗಳು ನಮ್ಮ ಸಹೋದರರು. ಇದೊಂದು ಸಣ್ಣ ದಾಯಾದಿ ಕಲಹ ಅಷ್ಟೇ. ನಾವು ಯಾರನ್ನೂ ದೂಷಿಸಬಾರದು. ಐಕ್ಯತೆ ಬಹಳ ಮುಖ್ಯ. ನಾವು ಅಲೆಮಾರಿಗಳು ಈ ವ್ಯವಸ್ಥೆಯ ಅಂತರಾತ್ಮವನ್ನು ಕಲಕುತ್ತೇವೆ. ನಮ್ಮ ಅನ್ನ ಕಸಿದುಕೊಂಡ ಪ್ರತಿಯೊಬ್ಬರ ಹೃದಯವನ್ನು ಕಾಡುತ್ತೇವೆ” ಎಂದು ಹೇಳಿದ್ದಾರೆ.

ಒಳ ಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್‌ ಹೇಳಿಕೆ ನೀಡಿ “ನಾವು ಸೋತಿದ್ದೇವೆ ಎಂಬುದು ಸುಳ್ಳು. ದಯವಿಟ್ಟು ಯಾರೂ ನಿರಾಶರಾಗಬೇಡಿ. ನಾವು 11ನೇ ತಾರೀಖು ಹೋರಾಟಕ್ಕೆ ಕೂತಾಗ ಕೆಲವರು ಮುಖ್ಯವಾಗಿ ರಾಜಕಾರಣಿಗಳು ಇದು ಆಗುವ ಮಾತಲ್ಲ, ಹೋರಾಟ ಕೈಬಿಡಿ ಎಂದರು. ಮಳೆ, ಗಾಳಿ, ಚಳಿ ಎಂದು ಹೆದರಿಸಿದರು, ಜನ ಬರುವುದಿಲ್ಲ ಎಂದರು. ಆದರೆ, ಕೊನೆಗೆ ಏನಾಯಿತು. ಸರ್ಕಾರದ ಮೇಲೆ ಒತ್ತಡ ತಂದು ಒಳ ಮೀಸಲಾತಿ ಜಾರಿಗೊಳಿಸಿದ್ದೀವಿ. ಆದರೆ, 6%  ನಮಗೆ ಸಮಾಧಾನ ತಂದಿಲ್ಲ. ನಾವು ಸಂತಸಪಟ್ಟಿಲ್ಲ. ನಾವು 35 ವರ್ಷ ಹೋರಾಡಿದ್ದು ಇದಕ್ಕೆ ಮಾತ್ರವೇ? ಅಲೆಮಾರಿಗಳನ್ನು ಮರೆತುಬಿಡಲು ಸಾಧ್ಯವೇ?” ಎಂದು ಪ್ರಶ್ನಿಸಿದ್ದಾರೆ.

“ನಾಗಮೋಹನ್‌ ದಾಸ್‌ರವರು ಸಹ ಕಣ್ಣೀರು ಹಾಕುತ್ತಿದ್ದಾರೆ. ನಾನಂದುಕೊಂಡ ಸಮುದಾಯಕ್ಕೆ ನ್ಯಾಯ ಕೊಡಲು ಸಾಧ್ಯವಾಗಿಲ್ಲ ಎಂಬ ನೋವು ಅವರನ್ನು ಕಾಡುತ್ತಿದೆ. ಅವರು ವೇತನ ಪಡೆಯದೇ ಕೆಲಸ ಮಾಡಿದ್ದಾರೆ. ನಾವು ಹೋರಾಟ ಮುಂದುವರೆಸೋಣ. ಹೋರಾಟದ ಟೆಂಟ್‌ ಮುಂದುವರೆಯುತ್ತದೆ. ಪ್ರತಿದಿನ 50 ಜನ ಇದ್ದು ಹೋರಾಟ ಮುಂದುವರೆಸೋಣ. ಬಾಬಾ ಸಾಹೇಬರು ಹೇಳಿದಂತೆ ಮಹಾತ್ಮರು ಬರುವರು, ಮಹಾತ್ಮರು ಹೋಗುವರು. ಮಂತ್ರಿಗಳು ಬಂದು ಹೋಗುವರು ಯಾರೂ ಉದ್ದಾರ ಮಾಡುವುದಿಲ್ಲ. ನಿಮ್ಮ ಉದ್ಧಾರ ನಿಮ್ಮ ಕೈಯಲ್ಲಿದೆ ಎಂದು ಹೇಳಿದ್ದಾರೆ. ಹಾಗಾಗಿ ನಮ್ಮ ಹೋರಾಟವೇ ನಮಗೆ ಹಕ್ಕು ಕೊಡಿಸುತ್ತದೆ” ಎಂದಿದ್ದಾರೆ.

“ಪೂನಾ ಒಪ್ಪಂದ ಆದಾಗ ಬಾಬಾ ಸಾಹೇಬರು ಸೋತರೆ? ಹತಾಶರಾಗಿ ಕೈಬಿಟ್ಟರೆ? ಇಲ್ಲ ಅವರು ಹೋರಾಟ ಮುಂದುವರೆಸಿ ನಮಗೆಲ್ಲ ಮೀಸಲಾತಿ ಕೊಡಲಿಲ್ಲವೇ? ಅದೇ ರೀತಿ ಒಳ ಮೀಸಲಾತಿಗಾಗಿಯೂ ಯಾವ ಸರ್ಕಾರ, ಯಾವ ರಾಜಕಾರಣಿಗಳು ಮಾಡದ್ದನ್ನು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಮೂಲಕ ಜಾರಿ ಮಾಡಿಸಿಕೊಂಡಿದ್ದೀವಿ. 370ಜೆ, ಒಳ ಮೀಸಲಾತಿ ಎಲ್ಲವೂ ಸಂವಿಧಾನದ ಮೂಲಕ ಜಾರಿಯಾಗಿದೆ. ಸುಪ್ರೀಂ ಕೋರ್ಟ್‌ನ ತೀರ್ಪು ಸತ್ತಿಲ್ಲ. ಅದನ್ನು ಇಟ್ಟುಕೊಂಡು ಕಾನೂನು ಹೋರಾಟ ಸಹ ಮಾಡೋಣ. 1% ಮೀಸಲಾತಿ ನಮಗೆ ದಕ್ಕೆ ದಕ್ಕುತ್ತದೆ. ನಮ್ಮ ಪರವಾಗಿ ಪ್ರೊ.ಹರಗೋಪಾಲ್‌ ನಮ್ಮ ಹೋರಾಟಕ್ಕೆ ಬೆಂಬಲ ಘೋಷಿಸಿ ಇಲ್ಲಿಗೆ ಬರುತ್ತಿದ್ದಾರೆ. ಮೀಸಲಾತಿ ನಮ್ಮ ಭಿಕ್ಷೆಯಲ್ಲ, ಹಕ್ಕು ಎಂದು ಸಾರಿದ್ದಾರೆ. ಪ್ರೊ.ಸಾಯಿಬಾಬಾರವರು ಎಷ್ಟು ಹೋರಾಟ ಮಾಡಿದ್ದಾರೆ? ಪಾಪಾ ಅವರನ್ನು ಜೈಲಿಗೆ ಹಾಕಿದರೂ ಹೋರಾಟ ಬಿಡಲಿಲ್ಲ. ಹಾಗಾಗಿ ನಾವು ಹತಾಶರಾಗುವುದು ಬೇಡ. ನಿಮ್ಮ ಕೈಮುಗಿದು ಹೇಳುತ್ತೇನೆ, ನಿರಾಶರಾಗಬೇಡಿ, ಜೊತೆಗೂಡಿ ಹೋರಾಡೋಣ ಬನ್ನಿ” ಎಂದು ಕರೆ ಕೊಟ್ಟಿದ್ದಾರೆ.

ಒಳ ಮೀಸಲಾತಿ ಹೋರಾಟಗಾರ ಸಣ್ಣ ಮಾರಣ್ಣ ಹೇಳಿಕೆ ನೀಡಿ, “ಈ ರಾಜ್ಯದ ದುರ್ಬಲ ಮುಖ್ಯಮಂತ್ರಿ ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯನವರು ಮಾತ್ರ. ನಾವು ಅವರನ್ನು ಧೀಮಂತ ನಾಯಕ ಎಂದುಕೊಂಡಿದ್ದೆವು. ಆದರೆ, ಇವತ್ತು ಕೆಲವರ ಬಲಾಢ್ಯರ ಒತ್ತಡಕ್ಕೆ ರಾಜ್ಯದ ಮುಖ್ಯಮಂತ್ರಿ ಮಣಿದಿದ್ದಾರೆ. ಆದರೆ, ನಾವು ಕುಗ್ಗಬಾರದು, ಹೋರಾಟ ಮುಂದುವರೆಸೋಣ” ಎಂದಿದ್ದಾರೆ.

ಇನ್ನೊಬ್ಬರು ಒಳ ಮೀಸಲಾತಿ ಹೋರಾಟಗಾರ ವೀರೇಶ್‌ ಹೇಳಿಕೆ ನೀಡಿ “ನನಗೆ ಮಾತೇ ತೋಚುತ್ತಿಲ್ಲ. ನನ್ನ ಎರಡು ವರ್ಷದ ಅವಧಿಯಲ್ಲಿ ಕುಟುಂಬದಿಂದ ಹೊರಗಿದ್ದು ಒಳ ಮೀಸಲಾತಿಯ ಹೋರಾಟಕ್ಕೆ ಮೀಸಲಿಟ್ಟಿದ್ದೆ. ಈ ಹಿಂದೆಯೇ ನಾಗಮೋಹನ್‌ ದಾಸ್‌ರವರಿಗೆ 3% ಮೀಸಲಾತಿ ಕೊಡಬೇಕೆಂದು ಮನವಿ ಕೊಟ್ಟಿದ್ದೆವು. ಅವರು ಸೂಕ್ತ ದತ್ತಾಂಶದೊಂದಿಗೆ ಉತ್ತಮ ವರ್ಗೀಕರಣ ಮಾಡಿ ವರದಿ ನೀಡಿದ್ದರು. 59 ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಮಾಡಿ 1% ಮೀಸಲಾತಿ ನಿಗದಿ ಮಾಡಿದ್ದರು. ಆದರೆ, ಸರ್ಕಾರ ಅಲೆಮಾರಿಗಳಿಗೆ ಅನ್ಯಾಯ ಮಾಡಿ ನಮ್ಮಿಂದ 1% ಕಿತ್ತುಕೊಂಡಿದೆ. ನಮಗೆ ಶಿಕ್ಷಣ, ಉದ್ಯೋಗ, ಮನೆ, ಬಂಡವಾಳ ಇಲ್ಲದೇ ನಮಗೆ ಮರಣಶಾಸನ ಬರೆಯಲಾಗಿದೆ. ಮುಖ್ಯಮಂತ್ರಿಗಳು ಒತ್ತಡಕ್ಕೆ ಮಣಿದು ನಮ್ಮ ಕತ್ತು ಕುಯ್ದಿದ್ದಾರೆ. ನಮ್ಮನ್ನು ಮತ್ತೆ ಜೀತಕ್ಕೆ, ಭಿಕ್ಷೆಗೆ ಕಳಿಸುತ್ತಿದ್ದಾರೆ. ಮಾನವೀಯತೆ, ಮನುಷ್ಯತ್ವ ಸರ್ಕಾರಕ್ಕೆ ಇದ್ದಿದ್ದರೆ ಈ ರೀತಿ ಮಾಡುತ್ತಿರಲಿಲ್ಲ. ನಾವು ಹೋರಾಟವನ್ನು ಮುಂದುವರೆಸುತ್ತೇವೆ. ನಾವು ಸುಪ್ರೀಂ ಕೋರ್ಟ್‌ ಕದ ತಟ್ಟಿ ನ್ಯಾಯ ಪಡೆಯೋಣ” ಎಂದು ಬೇಸರ ಹೊರ ಹಾಕಿದ್ದಾರೆ.

“1% ಮೀಸಲಾತಿ ಕೊಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಅಲೆಮಾರಿಗಳಿಗೆ ವಿಶೇಷ ಮಂಡಳಿ ರಚನೆ ಮಾಡಬಹುದು, ಅನುದಾನ ಕೊಡಬಹುದು ಇತ್ಯಾದಿ ಹೇಳಿದ್ದಾರೆ. ಅದಕ್ಕೆ ನಾವು ಒಪ್ಪಿಲ್ಲ. ನಮಗೆ ವರ್ಗೀಕರಣವೇ ಬಹಳ ಮುಖ್ಯ ಎಂದು ಪಟ್ಟು ಹಿಡಿದೆವು. ಕಟ್ಟಕಡೆಯ ಅಲೆಮಾರಿ ಜನರು ನೋವಿನಲ್ಲಿರುವಾಗ ಖುಷಿಯ ಮಾತೆಲ್ಲಿ?” ಎಂದು ಒಳ ಮೀಸಲಾತಿ ಹೋರಾಟಗಾರ ಬಾಲಗುರುಮೂರ್ತಿ ಪ್ರಶ್ನಿಸಿದ್ದಾರೆ.

ಆಗಸ್ಟ್ 19ರಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ನ್ಯಾ.ನಾಗಮೋಹನ್‌ ದಾಸ್ ಅವರ ಒಳ ಮೀಸಲಾತಿ ವರದಿಯನ್ನು ಅಂಗೀಕರಿಸಿರುವ ಸರ್ಕಾರ, ಎಡಗೈ, ಬಲಗೈಗೆ ತಲಾ ಶೇ 6, ಕೊಲಂಬೋ, ಅಲೆಮಾರಿಗಳಿಗೆ ಶೇ. 5 ಮೀಸಲಾತಿ ಘೋಷಿಸಿದೆ. ನಾಗಮೋಹನ್ ದಾಸ್ ಆಯೋಗದ ವರದಿಯಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ 1 ಶೇ. ಮೀಸಲಾತಿ ಪ್ರಸ್ತಾಪಿಸಿದ್ದರೂ, ಸರ್ಕಾರ ಅವರನ್ನು ಕೊಲಂಬೋ ಜೊತೆ ಸೇರಿಸಿ ಅನ್ಯಾಯ ಮಾಡಿದೆ ಎಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿರಂತರ ಹೋರಾಟ ನಡೆಯುತ್ತಿದೆ.

ದೂರುದಾರನನ್ನು ಬಂಧಿಸಲಾಗಿದೆ, ಹೆಚ್ಚಿನ ಮಾಹಿತಿ ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ: ಪರಮೇಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...