Homeಕರ್ನಾಟಕಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಸಭೆ ವಿಫಲ; ಹೋರಾಟ ತೀವ್ರಗೊಳಿಸಲು ನಿರ್ಧಾರ

ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಸಭೆ ವಿಫಲ; ಹೋರಾಟ ತೀವ್ರಗೊಳಿಸಲು ನಿರ್ಧಾರ

- Advertisement -
- Advertisement -

ಒಳ ಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕ ಶೇಕಡ 1ರಷ್ಟು ಮೀಸಲಾತಿ ಕೊಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ (ಆ.23) ನಡೆದ ಸಭೆ ವಿಫಲಗೊಂಡಿದೆ.

ಅಲೆಮಾರಿ ಜನಾಂಗದ ಮುಖಂಡರು, ಹೋರಾಟಗಾರರು ಮತ್ತು ಚಿಂತಕರುಗಳ ಜೊತೆ ಕಾವೇರಿ ನಿವಾಸದಲ್ಲಿ ಸಿಎಂ ಸಭೆ ನಡೆಸಿದ್ದು, ಪ್ರತ್ಯೇಕ ಮೀಸಲಾತಿ ಕಲ್ಪಿಸಲು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಿಎಂ ಸಭೆಯಲ್ಲಿ ಬೇಡಿಕೆ ಈಡೇರದ ಹಿನ್ನೆಲೆ ಹೋರಾಟ ಮುಂದುವರಿಸಲು ಅಲೆಮಾರಿ ಸಮುದಾಯದ ಮುಖಂಡರು ಮತ್ತು ಇತರ ಹೋರಾಟಗಾರರು ತೀರ್ಮಾನಿಸಿದ್ದಾರೆ.

ಶೇ. 1ರಷ್ಟು ಒಳ ಮೀಸಲಾತಿ ಪಡೆಯುವವರೆಗೂ, ‘ಎ’ ಗುಂಪಿನಲ್ಲಿ ಸೇರಿಸುವವರೆಗೂ ಹೋರಾಟ ಮುಂದುವರೆಯುತ್ತದೆ. ರಾಜ್ಯದ ಎಲ್ಲಾ ತಾಲೂಕುಗಳಲ್ಲೂ ಹೋರಾಟವನ್ನು ತೀವ್ರಗೊಳಿಸುತ್ತೇವೆ. ಅಲೆಮಾರಿಗಳನ್ನು ಮೀಸಲಾತಿಯಿಂದ ವಂಚಿಸುವ ಅನ್ಯಾಯ ಮಾಡಿದ ಸಚಿವ ಸಂಪುಟದ ಎಲ್ಲಾ ಮಂತ್ರಿಗಳಿಗೆ ಪ್ರತಿಭಟನಾ ಹಕ್ಕೊತ್ತಾಯ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಸಿಎಂ ಸಭೆ ಬಳಿಕ ಹೇಳಿಕೆ ನೀಡಿರುವ ಅಲೆಮಾರಿ ಸಮುದಾಯದ ಮುಖಂಡ ಚಾವಡೆ ಲೋಕೇಶ್‌ ಗೋಸಂಗಿ, “ಹೋರಾಟದ ಮಾದರಿ ಬದಲಿಸೋಣ. ನಮ್ಮ ಕಷ್ಟ ಜನರಿಗೆ ಗೊತ್ತಾಗಲಿ. ಅಲೆಮಾರಿಗಳು ವಾಪಸ್‌ ಹೋರಾಟಕ್ಕೆ ಬರುವಾಗ ಟೆಂಟ್‌ಗಳು, ಕೌದಿಗಳನ್ನು ತನ್ನಿ. ಫ್ರೀಡಂ ಪಾರ್ಕ್‌ನಲ್ಲಿ ಟೆಂಟ್‌ ಹಾಕಿ ಇಲ್ಲಿಯೇ ಊಟ ಮಾಡಿಕೊಂಡು ಜೀವನ ಮಾಡೋಣ. ತಂಗಡಗಿಯಂತಹ ಸಚಿವರಿಗೆ ಹಸಿದಿದ್ದರೆ ಅವರಿಗೂ ಊಟ ಹಾಕೋಣ. ನಾವು ನ್ಯಾಯ ಪಡೆದೇ ವಾಪಸ್‌ ಹೋಗೋಣ” ಎಂದು ಸಮುದಾಯಕ್ಕೆ ಕರೆ ಕೊಟ್ಟಿದ್ದಾರೆ.

ಒಳ ಮೀಸಲಾತಿ ಹೋರಾಟಗಾರ ಪ್ರೊ. ಎ.ಎಸ್ ಪ್ರಭಾಕರ್ ಹೇಳಿಕೆ ನೀಡಿ ” ಮುಖ್ಯಮಂತ್ರಿಗಳ ಬಗ್ಗೆ ನಮಗೆ ಭರವಸೆ ಇತ್ತು. ಆದರೆ, ಅವರ ಮಾತಿನಲ್ಲಿ ವಿಷಾದ, ಹತಾಶೆ ಇತ್ತು. ಅವರಂತಹ ಗಟ್ಟಿ ಸೈದ್ಧಾಂತಿಕ ರಾಜಕಾರಣಿ ಇವತ್ತು ಹತಾಶೆಗೆ ಒಳಗಾಗಿದ್ದಾರೆ ಎಂದರೆ ದೊಡ್ಡ ದೊಡ್ಡ ಲಾಬಿಗಳು ಅವರನ್ನು ಮಣಿಸುತ್ತಿವೆ” ಎಂದಿದ್ದಾರೆ.

“ನಾವು ಹೋರಾಟ ಮುಂದುವರೆಸಬೇಕು. ಆದರೆ, ಅಲೆಮಾರಿಗಳು ಶೇ. 90ರಷ್ಟು ಜನರು ಕೂಲಿ ಕಾರ್ಮಿಕರು. ಅವರು ಬೆಂಗಳೂರಿಗೆ ಬರುವುದು ಬಹಳ ಕಷ್ಟ. ಹಾಗಾಗಿ, ನಮ್ಮ ನಮ್ಮ ಜಿಲ್ಲೆಗಳಲ್ಲಿ ಹೋರಾಟ ಮುಂದುವರೆಸೋಣ” ಎಂದು ಸಮುದಾಯಕ್ಕೆ ಕರೆ ಕೊಟ್ಟಿದ್ದಾರೆ.

“ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ತೀರ್ಪಿನ ದೊಡ್ಡ ಬಲವಿದೆ. ಸಂವಿಧಾನದ ಬಲವಿದೆ. ಕೋರ್ಟ್‌ಗೆ ಹೋಗುವುದು ಸೇರಿದಂತೆ ಇನ್ನೂ ಯಾವ ಯಾವ ಸಾಧ್ಯತೆಗಳಿವೆ ಎಂಬುದನ್ನು ಪರಿಶೀಲಿಸುತ್ತೇವೆ. ನಮ್ಮವರು ಯಾರೂ ಕೂಡ ಹತಾಶರಾಗಬಾರದು. 101 ಸಮುದಾಯಗಳು ನಮ್ಮ ಸಹೋದರರು. ಇದೊಂದು ಸಣ್ಣ ದಾಯಾದಿ ಕಲಹ ಅಷ್ಟೇ. ನಾವು ಯಾರನ್ನೂ ದೂಷಿಸಬಾರದು. ಐಕ್ಯತೆ ಬಹಳ ಮುಖ್ಯ. ನಾವು ಅಲೆಮಾರಿಗಳು ಈ ವ್ಯವಸ್ಥೆಯ ಅಂತರಾತ್ಮವನ್ನು ಕಲಕುತ್ತೇವೆ. ನಮ್ಮ ಅನ್ನ ಕಸಿದುಕೊಂಡ ಪ್ರತಿಯೊಬ್ಬರ ಹೃದಯವನ್ನು ಕಾಡುತ್ತೇವೆ” ಎಂದು ಹೇಳಿದ್ದಾರೆ.

ಒಳ ಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್‌ ಹೇಳಿಕೆ ನೀಡಿ “ನಾವು ಸೋತಿದ್ದೇವೆ ಎಂಬುದು ಸುಳ್ಳು. ದಯವಿಟ್ಟು ಯಾರೂ ನಿರಾಶರಾಗಬೇಡಿ. ನಾವು 11ನೇ ತಾರೀಖು ಹೋರಾಟಕ್ಕೆ ಕೂತಾಗ ಕೆಲವರು ಮುಖ್ಯವಾಗಿ ರಾಜಕಾರಣಿಗಳು ಇದು ಆಗುವ ಮಾತಲ್ಲ, ಹೋರಾಟ ಕೈಬಿಡಿ ಎಂದರು. ಮಳೆ, ಗಾಳಿ, ಚಳಿ ಎಂದು ಹೆದರಿಸಿದರು, ಜನ ಬರುವುದಿಲ್ಲ ಎಂದರು. ಆದರೆ, ಕೊನೆಗೆ ಏನಾಯಿತು. ಸರ್ಕಾರದ ಮೇಲೆ ಒತ್ತಡ ತಂದು ಒಳ ಮೀಸಲಾತಿ ಜಾರಿಗೊಳಿಸಿದ್ದೀವಿ. ಆದರೆ, 6%  ನಮಗೆ ಸಮಾಧಾನ ತಂದಿಲ್ಲ. ನಾವು ಸಂತಸಪಟ್ಟಿಲ್ಲ. ನಾವು 35 ವರ್ಷ ಹೋರಾಡಿದ್ದು ಇದಕ್ಕೆ ಮಾತ್ರವೇ? ಅಲೆಮಾರಿಗಳನ್ನು ಮರೆತುಬಿಡಲು ಸಾಧ್ಯವೇ?” ಎಂದು ಪ್ರಶ್ನಿಸಿದ್ದಾರೆ.

“ನಾಗಮೋಹನ್‌ ದಾಸ್‌ರವರು ಸಹ ಕಣ್ಣೀರು ಹಾಕುತ್ತಿದ್ದಾರೆ. ನಾನಂದುಕೊಂಡ ಸಮುದಾಯಕ್ಕೆ ನ್ಯಾಯ ಕೊಡಲು ಸಾಧ್ಯವಾಗಿಲ್ಲ ಎಂಬ ನೋವು ಅವರನ್ನು ಕಾಡುತ್ತಿದೆ. ಅವರು ವೇತನ ಪಡೆಯದೇ ಕೆಲಸ ಮಾಡಿದ್ದಾರೆ. ನಾವು ಹೋರಾಟ ಮುಂದುವರೆಸೋಣ. ಹೋರಾಟದ ಟೆಂಟ್‌ ಮುಂದುವರೆಯುತ್ತದೆ. ಪ್ರತಿದಿನ 50 ಜನ ಇದ್ದು ಹೋರಾಟ ಮುಂದುವರೆಸೋಣ. ಬಾಬಾ ಸಾಹೇಬರು ಹೇಳಿದಂತೆ ಮಹಾತ್ಮರು ಬರುವರು, ಮಹಾತ್ಮರು ಹೋಗುವರು. ಮಂತ್ರಿಗಳು ಬಂದು ಹೋಗುವರು ಯಾರೂ ಉದ್ದಾರ ಮಾಡುವುದಿಲ್ಲ. ನಿಮ್ಮ ಉದ್ಧಾರ ನಿಮ್ಮ ಕೈಯಲ್ಲಿದೆ ಎಂದು ಹೇಳಿದ್ದಾರೆ. ಹಾಗಾಗಿ ನಮ್ಮ ಹೋರಾಟವೇ ನಮಗೆ ಹಕ್ಕು ಕೊಡಿಸುತ್ತದೆ” ಎಂದಿದ್ದಾರೆ.

“ಪೂನಾ ಒಪ್ಪಂದ ಆದಾಗ ಬಾಬಾ ಸಾಹೇಬರು ಸೋತರೆ? ಹತಾಶರಾಗಿ ಕೈಬಿಟ್ಟರೆ? ಇಲ್ಲ ಅವರು ಹೋರಾಟ ಮುಂದುವರೆಸಿ ನಮಗೆಲ್ಲ ಮೀಸಲಾತಿ ಕೊಡಲಿಲ್ಲವೇ? ಅದೇ ರೀತಿ ಒಳ ಮೀಸಲಾತಿಗಾಗಿಯೂ ಯಾವ ಸರ್ಕಾರ, ಯಾವ ರಾಜಕಾರಣಿಗಳು ಮಾಡದ್ದನ್ನು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಮೂಲಕ ಜಾರಿ ಮಾಡಿಸಿಕೊಂಡಿದ್ದೀವಿ. 370ಜೆ, ಒಳ ಮೀಸಲಾತಿ ಎಲ್ಲವೂ ಸಂವಿಧಾನದ ಮೂಲಕ ಜಾರಿಯಾಗಿದೆ. ಸುಪ್ರೀಂ ಕೋರ್ಟ್‌ನ ತೀರ್ಪು ಸತ್ತಿಲ್ಲ. ಅದನ್ನು ಇಟ್ಟುಕೊಂಡು ಕಾನೂನು ಹೋರಾಟ ಸಹ ಮಾಡೋಣ. 1% ಮೀಸಲಾತಿ ನಮಗೆ ದಕ್ಕೆ ದಕ್ಕುತ್ತದೆ. ನಮ್ಮ ಪರವಾಗಿ ಪ್ರೊ.ಹರಗೋಪಾಲ್‌ ನಮ್ಮ ಹೋರಾಟಕ್ಕೆ ಬೆಂಬಲ ಘೋಷಿಸಿ ಇಲ್ಲಿಗೆ ಬರುತ್ತಿದ್ದಾರೆ. ಮೀಸಲಾತಿ ನಮ್ಮ ಭಿಕ್ಷೆಯಲ್ಲ, ಹಕ್ಕು ಎಂದು ಸಾರಿದ್ದಾರೆ. ಪ್ರೊ.ಸಾಯಿಬಾಬಾರವರು ಎಷ್ಟು ಹೋರಾಟ ಮಾಡಿದ್ದಾರೆ? ಪಾಪಾ ಅವರನ್ನು ಜೈಲಿಗೆ ಹಾಕಿದರೂ ಹೋರಾಟ ಬಿಡಲಿಲ್ಲ. ಹಾಗಾಗಿ ನಾವು ಹತಾಶರಾಗುವುದು ಬೇಡ. ನಿಮ್ಮ ಕೈಮುಗಿದು ಹೇಳುತ್ತೇನೆ, ನಿರಾಶರಾಗಬೇಡಿ, ಜೊತೆಗೂಡಿ ಹೋರಾಡೋಣ ಬನ್ನಿ” ಎಂದು ಕರೆ ಕೊಟ್ಟಿದ್ದಾರೆ.

ಒಳ ಮೀಸಲಾತಿ ಹೋರಾಟಗಾರ ಸಣ್ಣ ಮಾರಣ್ಣ ಹೇಳಿಕೆ ನೀಡಿ, “ಈ ರಾಜ್ಯದ ದುರ್ಬಲ ಮುಖ್ಯಮಂತ್ರಿ ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯನವರು ಮಾತ್ರ. ನಾವು ಅವರನ್ನು ಧೀಮಂತ ನಾಯಕ ಎಂದುಕೊಂಡಿದ್ದೆವು. ಆದರೆ, ಇವತ್ತು ಕೆಲವರ ಬಲಾಢ್ಯರ ಒತ್ತಡಕ್ಕೆ ರಾಜ್ಯದ ಮುಖ್ಯಮಂತ್ರಿ ಮಣಿದಿದ್ದಾರೆ. ಆದರೆ, ನಾವು ಕುಗ್ಗಬಾರದು, ಹೋರಾಟ ಮುಂದುವರೆಸೋಣ” ಎಂದಿದ್ದಾರೆ.

ಇನ್ನೊಬ್ಬರು ಒಳ ಮೀಸಲಾತಿ ಹೋರಾಟಗಾರ ವೀರೇಶ್‌ ಹೇಳಿಕೆ ನೀಡಿ “ನನಗೆ ಮಾತೇ ತೋಚುತ್ತಿಲ್ಲ. ನನ್ನ ಎರಡು ವರ್ಷದ ಅವಧಿಯಲ್ಲಿ ಕುಟುಂಬದಿಂದ ಹೊರಗಿದ್ದು ಒಳ ಮೀಸಲಾತಿಯ ಹೋರಾಟಕ್ಕೆ ಮೀಸಲಿಟ್ಟಿದ್ದೆ. ಈ ಹಿಂದೆಯೇ ನಾಗಮೋಹನ್‌ ದಾಸ್‌ರವರಿಗೆ 3% ಮೀಸಲಾತಿ ಕೊಡಬೇಕೆಂದು ಮನವಿ ಕೊಟ್ಟಿದ್ದೆವು. ಅವರು ಸೂಕ್ತ ದತ್ತಾಂಶದೊಂದಿಗೆ ಉತ್ತಮ ವರ್ಗೀಕರಣ ಮಾಡಿ ವರದಿ ನೀಡಿದ್ದರು. 59 ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಮಾಡಿ 1% ಮೀಸಲಾತಿ ನಿಗದಿ ಮಾಡಿದ್ದರು. ಆದರೆ, ಸರ್ಕಾರ ಅಲೆಮಾರಿಗಳಿಗೆ ಅನ್ಯಾಯ ಮಾಡಿ ನಮ್ಮಿಂದ 1% ಕಿತ್ತುಕೊಂಡಿದೆ. ನಮಗೆ ಶಿಕ್ಷಣ, ಉದ್ಯೋಗ, ಮನೆ, ಬಂಡವಾಳ ಇಲ್ಲದೇ ನಮಗೆ ಮರಣಶಾಸನ ಬರೆಯಲಾಗಿದೆ. ಮುಖ್ಯಮಂತ್ರಿಗಳು ಒತ್ತಡಕ್ಕೆ ಮಣಿದು ನಮ್ಮ ಕತ್ತು ಕುಯ್ದಿದ್ದಾರೆ. ನಮ್ಮನ್ನು ಮತ್ತೆ ಜೀತಕ್ಕೆ, ಭಿಕ್ಷೆಗೆ ಕಳಿಸುತ್ತಿದ್ದಾರೆ. ಮಾನವೀಯತೆ, ಮನುಷ್ಯತ್ವ ಸರ್ಕಾರಕ್ಕೆ ಇದ್ದಿದ್ದರೆ ಈ ರೀತಿ ಮಾಡುತ್ತಿರಲಿಲ್ಲ. ನಾವು ಹೋರಾಟವನ್ನು ಮುಂದುವರೆಸುತ್ತೇವೆ. ನಾವು ಸುಪ್ರೀಂ ಕೋರ್ಟ್‌ ಕದ ತಟ್ಟಿ ನ್ಯಾಯ ಪಡೆಯೋಣ” ಎಂದು ಬೇಸರ ಹೊರ ಹಾಕಿದ್ದಾರೆ.

“1% ಮೀಸಲಾತಿ ಕೊಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಅಲೆಮಾರಿಗಳಿಗೆ ವಿಶೇಷ ಮಂಡಳಿ ರಚನೆ ಮಾಡಬಹುದು, ಅನುದಾನ ಕೊಡಬಹುದು ಇತ್ಯಾದಿ ಹೇಳಿದ್ದಾರೆ. ಅದಕ್ಕೆ ನಾವು ಒಪ್ಪಿಲ್ಲ. ನಮಗೆ ವರ್ಗೀಕರಣವೇ ಬಹಳ ಮುಖ್ಯ ಎಂದು ಪಟ್ಟು ಹಿಡಿದೆವು. ಕಟ್ಟಕಡೆಯ ಅಲೆಮಾರಿ ಜನರು ನೋವಿನಲ್ಲಿರುವಾಗ ಖುಷಿಯ ಮಾತೆಲ್ಲಿ?” ಎಂದು ಒಳ ಮೀಸಲಾತಿ ಹೋರಾಟಗಾರ ಬಾಲಗುರುಮೂರ್ತಿ ಪ್ರಶ್ನಿಸಿದ್ದಾರೆ.

ಆಗಸ್ಟ್ 19ರಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ನ್ಯಾ.ನಾಗಮೋಹನ್‌ ದಾಸ್ ಅವರ ಒಳ ಮೀಸಲಾತಿ ವರದಿಯನ್ನು ಅಂಗೀಕರಿಸಿರುವ ಸರ್ಕಾರ, ಎಡಗೈ, ಬಲಗೈಗೆ ತಲಾ ಶೇ 6, ಕೊಲಂಬೋ, ಅಲೆಮಾರಿಗಳಿಗೆ ಶೇ. 5 ಮೀಸಲಾತಿ ಘೋಷಿಸಿದೆ. ನಾಗಮೋಹನ್ ದಾಸ್ ಆಯೋಗದ ವರದಿಯಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ 1 ಶೇ. ಮೀಸಲಾತಿ ಪ್ರಸ್ತಾಪಿಸಿದ್ದರೂ, ಸರ್ಕಾರ ಅವರನ್ನು ಕೊಲಂಬೋ ಜೊತೆ ಸೇರಿಸಿ ಅನ್ಯಾಯ ಮಾಡಿದೆ ಎಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿರಂತರ ಹೋರಾಟ ನಡೆಯುತ್ತಿದೆ.

ದೂರುದಾರನನ್ನು ಬಂಧಿಸಲಾಗಿದೆ, ಹೆಚ್ಚಿನ ಮಾಹಿತಿ ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ: ಪರಮೇಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...