Homeಕರ್ನಾಟಕ‘ಆದಿವಾಸಿಗಳ ಮೇಲೆ ನಡೆಯುತ್ತಿರುವ ಯುದ್ಧ ನಿಲ್ಲಲಿ’: ಬೆಂಗಳೂರಿನಲ್ಲಿ ಸೋನಿ ಸೋರಿ ಕಳವಳ

‘ಆದಿವಾಸಿಗಳ ಮೇಲೆ ನಡೆಯುತ್ತಿರುವ ಯುದ್ಧ ನಿಲ್ಲಲಿ’: ಬೆಂಗಳೂರಿನಲ್ಲಿ ಸೋನಿ ಸೋರಿ ಕಳವಳ

- Advertisement -
- Advertisement -

ಬೆಂಗಳೂರು: ಮಧ್ಯ ಭಾರತದ ಬಸ್ತಾರ್ ಪ್ರದೇಶವು ಕಳೆದ ಕೆಲವು ತಿಂಗಳುಗಳಿಂದ ಸರ್ಕಾರದ ಸಶಸ್ತ್ರ ಪಡೆಗಳು ಮತ್ತು ಆದಿವಾಸಿಗಳ ನಡುವಿನ ಸಂಘರ್ಷದ ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ. ‘ಆಪರೇಷನ್ ಕಾಗರ್’ ಎಂಬ ಕಾರ್ಯಾಚರಣೆಯು ನಕ್ಸಲರ ನಿಗ್ರಹದ ಹೆಸರಿನಲ್ಲಿ ಬುಡಕಟ್ಟು ಸಮುದಾಯಗಳ ಮೇಲೆ ನಡೆಸುತ್ತಿರುವ ದಮನಕಾರಿ ಕ್ರಮವಾಗಿದೆ. ಇದು ಸಂವಿಧಾನದ ಆಶಯಗಳನ್ನು ಬದಿಗಿಟ್ಟು ನಡೆಯುತ್ತಿರುವ ಯುದ್ಧವಿದ್ದಂತೆ. ಈ ಪರಿಸ್ಥಿತಿಯು ಮೂಲನಿವಾಸಿಗಳ ಬದುಕು ಮತ್ತು ಸಂವಿಧಾನದ ಮೇಲಿನ ನಂಬಿಕೆಯನ್ನು ಅಲುಗಾಡಿಸಿದೆ,” ಎಂದು ಛತ್ತೀಸ್‌ಗಡದ ಆದಿವಾಸಿಗಳ ಪರ ಹೋರಾಟಗಾರ್ತಿ ಸೋನಿ ಸೋರಿ ಹೇಳಿದರು.

ಶನಿವಾರ ಬೆಂಗಳೂರಿನ ಆಶೀರ್ವದ್ ಸಭಾಂಗಣದಲ್ಲಿ ಆಯೋಜಿಸಿದ್ದ ‘ಆದಿವಾಸಿಗಳ ಮೇಲೆ ನಡೆಸುತ್ತಿರುವ ಯುದ್ಧ ನಿಲ್ಲಲಿ’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಸಂಘರ್ಷದ ಮೂಲ ಕಾರ್ಪೊರೇಟ್ ಬಂಡವಾಳಶಾಹಿಗಳ ಹಿತಾಸಕ್ತಿ ಎಂದು ಬಲವಾಗಿ ಪ್ರತಿಪಾದಿಸಿದರು. “ದಂಡಕಾರಣ್ಯದಲ್ಲಿ ಅಡಗಿರುವ ರೂ.70 ಲಕ್ಷ ಕೋಟಿ ಮೌಲ್ಯದ ಖನಿಜ ಸಂಪತ್ತೇ ಈ ಯುದ್ಧಕ್ಕೆ ಮೂಲ ಕಾರಣ. ಈ ಸಂಪತ್ತನ್ನು ಕಾರ್ಪೊರೇಟ್‌ಗಳಿಗೆ ಹಸ್ತಾಂತರಿಸುವ ಉದ್ದೇಶದಿಂದಲೇ ಆಪರೇಷನ್ ಕಾಗರ್ ಜಾರಿಗೊಳಿಸಲಾಗಿದೆ ಎಂಬುದು ಮಾನವ ಹಕ್ಕುಗಳ ಕಾರ್ಯಕರ್ತರ ದೃಢವಾದ ನಂಬಿಕೆ,” ಎಂದರು.

ಸೋನಿ ಸೋರಿ ಅವರ ಪ್ರಕಾರ, ಅಭಿವೃದ್ಧಿಯ ಹೆಸರಿನಲ್ಲಿ ಬುಡಕಟ್ಟು ಜನಾಂಗದವರು ಶತಮಾನಗಳಿಂದ ವಾಸಿಸುತ್ತಿರುವ ಪ್ರದೇಶಗಳನ್ನು ನಾಶ ಮಾಡಲಾಗುತ್ತಿದೆ. ಇದು ಅವರ ಸಾಂಸ್ಕೃತಿಕ ಪರಂಪರೆ, ಸ್ವಯಂ ಆಡಳಿತ ಮತ್ತು ಸ್ವ-ನಿರ್ಣಯದ ಹಕ್ಕುಗಳಿಗೆ ಗಂಭೀರ ಅಪಾಯ ತಂದೊಡ್ಡಿದೆ. “ಬುಡಕಟ್ಟು ಜನಾಂಗದವರ ಬದುಕುವ ಹಕ್ಕನ್ನು ಹರಣ ಮಾಡಲಾಗುತ್ತಿದ್ದು, ಇದು ಸಂವಿಧಾನದ ಮೂಲಭೂತ ಹಕ್ಕುಗಳನ್ನೇ ಕಡೆಗಣಿಸಿದಂತಾಗಿದೆ,” ಎಂದು ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಕಲಿ ಎನ್‌ಕೌಂಟರ್‌ಗಳು ಮತ್ತು ಸತ್ಯಶೋಧನೆಗೆ ನಿರಾಕರಣೆ

ಮಾತು ಮುಂದುವರೆಸಿದ ಸೋನಿ, ಈ ಕಾರ್ಯಾಚರಣೆಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಗಳು ವ್ಯಾಪಕವಾಗಿ ನಡೆಯುತ್ತಿವೆ ಎಂದು ಆರೋಪಿಸಿದರು. “ಕಳೆದ ಒಂದು ವರ್ಷದಲ್ಲೇ ನಡೆದ 70ಕ್ಕೂ ಹೆಚ್ಚು ಎನ್‌ಕೌಂಟರ್‌ಗಳಲ್ಲಿ 600ಕ್ಕೂ ಹೆಚ್ಚು ಮಾವೋವಾದಿಗಳು ಮತ್ತು ಆದಿವಾಸಿಗಳನ್ನು ಕೊಲ್ಲಲಾಗಿದೆ ಎಂದು ಸರ್ಕಾರ ಹೇಳಿದರೂ, ಈ ಕುರಿತು ಯಾವುದೇ ತನಿಖೆ ನಡೆದಿಲ್ಲ. ಎನ್‌ಕೌಂಟರ್‌ಗಳು ನಕಲಿ ಎಂದು ನಮ್ಮ ಸಮುದಾಯದಲ್ಲಿ ಎಲ್ಲರಿಗೂ ಗೊತ್ತು. ಆಪರೇಷನ್ ಕಾಗರ್ ಪ್ರಾರಂಭವಾದಾಗಿನಿಂದ, ಯಾವುದೇ ಮಾನವ ಹಕ್ಕುಗಳ ಸಂಘಟನೆ ಅಥವಾ ಸ್ವತಂತ್ರ ಸತ್ಯಶೋಧನಾ ತಂಡಕ್ಕೆ ಬಸ್ತಾರ್‌ಗೆ ಭೇಟಿ ನೀಡಲು ಅವಕಾಶ ನೀಡಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಈ ರೀತಿಯ ನಿಯಂತ್ರಣವು ಅದರ ಪಾರದರ್ಶಕತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಇದು ಮಾನವ ಹಕ್ಕುಗಳ ಸಂಘಟನೆಗಳ ಕಾರ್ಯವೈಖರಿಗೆ ದೊಡ್ಡ ಅಡ್ಡಿಯಾಗಿದೆ,” ಎಂದು ಅವರು ವಿವರಿಸಿದರು.

ಶಾಂತಿ ಮಾತುಕತೆಗಳ ನಿರಾಕರಣೆ

ಸೋನಿ ಸೋರಿ ಅವರು, ಆದಿವಾಸಿಗಳು ದಶಕಗಳ ಕಾಲ ಹೋರಾಡಿ ಪಡೆದ ಕಾನೂನುಗಳಾದ 1996ರ ಪೆಸಾ ಕಾಯ್ದೆ ಮತ್ತು 2006ರ ಅರಣ್ಯ ಹಕ್ಕು ಕಾಯ್ದೆಗಳನ್ನು ಜಾರಿಗೊಳಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಆಪಾದಿಸಿದರು. “ಈ ಕಾಯ್ದೆಗಳನ್ನು ತಿದ್ದುಪಡಿಗಳ ಹೆಸರಿನಲ್ಲಿ ದುರ್ಬಲಗೊಳಿಸಲಾಗುತ್ತಿದೆ. ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದರೆ, ನಮ್ಮನ್ನು ನಕ್ಸಲೀಯರೆಂದು ಬಂಧಿಸಲಾಗುತ್ತದೆ ಅಥವಾ ಗುಂಡಿಕ್ಕಿ ಕೊಲ್ಲಲಾಗುತ್ತದೆ. ಕಳೆದ 35 ವರ್ಷಗಳಲ್ಲಿ 8,000ಕ್ಕೂ ಹೆಚ್ಚು ಆದಿವಾಸಿ ಜನರನ್ನು ನಕಲಿ ಎನ್‌ಕೌಂಟರ್‌ಗಳಲ್ಲಿ ಕೊಲ್ಲಲಾಗಿದೆ, ಆದರೆ ಯಾವುದೇ ತನಿಖೆ ನಡೆದಿಲ್ಲ. ರಾಜಕೀಯ ನಾಯಕರ ಪಾತ್ರವನ್ನು ಪೊಲೀಸರೇ ನಿರ್ವಹಿಸುತ್ತಿರುವ ಈ ಪ್ರದೇಶದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳು ಸಂಪೂರ್ಣವಾಗಿ ನಶಿಸಿವೆ,” ಎಂದರು.

ಶಾಂತಿ ಮಾತುಕತೆಗಳ ಅಸಮರ್ಥತೆಯ ಕುರಿತು ಮಾತನಾಡಿದ ಅವರು, “ಒಂದೆಡೆ, ಮಾವೋವಾದಿ ಪಕ್ಷವು ಶಾಂತಿ ಮಾತುಕತೆಗಳಿಗೆ ಸಿದ್ಧವಿರುವುದಾಗಿ ಘೋಷಿಸಿ, ಅಖಿಲ ಭಾರತ ಮತ್ತು ರಾಜ್ಯ ಮಟ್ಟದಲ್ಲಿ ಶಾಂತಿ ಸಮಿತಿಗಳನ್ನು ರಚಿಸಲು ಪ್ರಯತ್ನಿಸುತ್ತಿದೆ. ಆದರೆ ಸರ್ಕಾರವು ‘ಹತ್ಯೆ ಮಾಡುತ್ತೇವೆ, ನಿರ್ಮೂಲನೆ ಮಾಡುತ್ತೇವೆ’ ಎಂಬ ಧೋರಣೆ ಹೊಂದಿದೆ. ಈ ನಿರ್ದಯಿ ನಿಲುವಿನಿಂದಾಗಿ ಶಾಂತಿಯುತ ಪರಿಹಾರದ ಅವಕಾಶಗಳು ಕಳೆದುಹೋಗುತ್ತಿವೆ,” ಎಂದು ವಿಷಾದ ವ್ಯಕ್ತಪಡಿಸಿದರು. ಹಲವಾರು ರಾಜಕೀಯ ವಿರೋಧ ಪಕ್ಷಗಳು ಮತ್ತು ಎಡಪಂಥೀಯ ಸಂಘಟನೆಗಳು ಶಾಂತಿ ಮಾತುಕತೆ ನಡೆಸುವಂತೆ ಒತ್ತಾಯಿಸಿದರೂ, ಹತ್ಯಾಕಾಂಡಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ನಮ್ಮ ಜವಾಬ್ದಾರಿ

ಕೊನೆಯಲ್ಲಿ, ಸೋನಿ ಸೋರಿ ಅವರು ಎಲ್ಲರಿಗೂ ಒಂದು ಪ್ರಮುಖ ಕರೆ ನೀಡಿದರು. “ಸಂವಿಧಾನದ ಐದನೇ ಮತ್ತು ಆರನೇ ಶೆಡ್ಯೂಲ್‌ಗಳ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದರೆ ಮಾತ್ರ ಬುಡಕಟ್ಟು ಜನಾಂಗದವರ ಪರಿಸ್ಥಿತಿ ಸುಧಾರಿಸಬಹುದು. ಆದರೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ಇರುವ ವಿಶೇಷ ಅಧಿಕಾರಗಳನ್ನು ಸರಿಯಾಗಿ ಬಳಸುತ್ತಿಲ್ಲ. ಈ ಎಲ್ಲಾ ಅಧಿಕಾರಗಳನ್ನು ಪ್ರಸ್ತುತ ಸರ್ಕಾರವು ತನ್ನ ಕೈಯಲ್ಲಿ ಹಿಡಿದಿಟ್ಟುಕೊಂಡಿದೆ,” ಎಂದರು.

“ಆಪರೇಷನ್ ಕಾಗರ್ ಅನ್ನು ತಕ್ಷಣವೇ ನಿಲ್ಲಿಸಿ, ಶಾಂತಿ ಮಾತುಕತೆಗಳನ್ನು ಪ್ರಾರಂಭಿಸಬೇಕು ಎಂದು ನಾವು ಆಗ್ರಹಿಸುತ್ತಿದ್ದೇವೆ. ಈ ಯುದ್ಧವು ಬುಡಕಟ್ಟು ಜನರ ಬದುಕನ್ನು ಮಾತ್ರವಲ್ಲದೆ, ದೇಶದ ಪ್ರಜಾಪ್ರಭುತ್ವ ಮತ್ತು ಮಾನವೀಯತೆಯ ಮೌಲ್ಯಗಳನ್ನೂ ನಾಶ ಮಾಡುತ್ತಿದೆ. ಸರ್ಕಾರಗಳು ಸರ್ವಾಧಿಕಾರಿ ಪ್ರವೃತ್ತಿಗಳನ್ನು ಬಿಟ್ಟು, ಶಾಂತಿ ಮತ್ತು ಪ್ರಜಾಸತ್ತಾತ್ಮಕ ಮಾರ್ಗಗಳನ್ನು ಅನುಸರಿಸಬೇಕು. ಆದಿವಾಸಿಗಳ ಹಕ್ಕುಗಳು ಮತ್ತು ಜೀವಗಳನ್ನು ರಕ್ಷಿಸಲು, ಶಾಂತಿ ಮಾತುಕತೆಯ ಮೂಲಕ ಕದನ ವಿರಾಮ ಘೋಷಿಸುವುದು ಪ್ರಜಾಪ್ರಭುತ್ವದ ಕರ್ತವ್ಯ. ಈ ಚಳುವಳಿಯನ್ನು ನಿರ್ಮಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ,” ಎಂದು ಸೋನಿ ಸೋರಿ ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು.

ಪ್ರತ್ಯೇಕ ಒಳಮೀಸಲಾತಿ ಇಲ್ಲ ಎಂದಿದ್ದಕ್ಕೆ ಫ್ರೀಡಂ ಪಾರ್ಕಿನಲ್ಲಿ ಬಿಕ್ಕಿ ಬಿಕ್ಕಿ ಅತ್ತ ಅಲೆಮಾರಿ ಸಮುದಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...