Homeಕರ್ನಾಟಕಮಾಜಿ ‘ಅನರ್ಹ’ರ ಮಂತ್ರಿಗಿರಿ ಹುಮ್ಮಸ್ಸಿಗೆ ‘ಧನುರ್ಮಾಸ’ದ ಅಡ್ಡಗಾಲು

ಮಾಜಿ ‘ಅನರ್ಹ’ರ ಮಂತ್ರಿಗಿರಿ ಹುಮ್ಮಸ್ಸಿಗೆ ‘ಧನುರ್ಮಾಸ’ದ ಅಡ್ಡಗಾಲು

- Advertisement -
- Advertisement -

ಉಪಚುನಾವಣೆಯಲ್ಲಿ ಗೆದ್ದ ಮಾಜಿ ಅನರ್ಹ ಕಂ ಹಾಲಿ ಅರ್ಹ ಶಾಸಕರು ಯಡ್ಯೂರಪ್ಪನವರ ಸಂಪುಟದಲ್ಲಿ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲು ತುದಿಗಾಲ ಮೇಲೆ ನಿಂತಿರೋದೇನೊ ನಿಜ. ಆದರೆ ಇನ್ನೂ ಒಂದು ತಿಂಗಳ ಕಾಲ ಅವರು ಮಂತ್ರಿಗಿರಿಯಿಂದ ದೂರವೇ ಉಳಿಯಬೇಕಾದ ಸಾಧ್ಯತೆಯೇ ಹೆಚ್ಚು ಎನ್ನಲಾಗುತ್ತಿದೆ. ಅವರ ಪಾಲಿಗೆ ವಿಲನ್ ಆಗಿ ಕಾಡುತ್ತಿರೋದು ಡಿಸೆಂಬರ್ ಮಾಹೆಯ ಮಧ್ಯಂತರದಲ್ಲಿ ಶುರುವಾಗಲಿರುವ ಧನುರ್ಮಾಸವಂತೆ!

ಹೌದು, ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಯಡ್ಯೂರಪ್ಪನವರು ದಿಲ್ಲಿಗೆ ದೌಡಾಯಿಸಿ, ಅಮಿತ್ ಶಾಗೆ ವರದಿ ಒಪ್ಪಿಸಿ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಪಡೆದು ಬರಬೇಕಿತ್ತು. ಈ ವಾರಾಂತ್ಯದೊಳಗೆ ನೂತನ ಸಚಿವರ ಪ್ರಮಾಣ ವಚನವೂ ಮುಗಿದು ಖಾತೆ ಹಂಚಿಕೆಯಾಗಬೇಕಿತ್ತು. ಆದರೆ ಅದ್ಯಾಕೋ, ಬಂಪರ್ ಬೆಳೆ ತೆಗೆದರು ಸಹಾ ದಿಲ್ಲಿ ನಾಯಕರಿಂದ ಯಡ್ಯೂರಪ್ಪನವರಿಗೆ ಇದುವರೆಗೆ ಬುಲಾವ್ ಬಂದಿಲ್ಲ. ನವದೆಹಲಿಯ ಫರ್ಮಾನು ಇಲ್ಲದೆ ಸ್ವಂತಕ್ಕೆ ಸಂಪುಟ ವಿಸ್ತರಿಸುವ ಸ್ವಾತಂತ್ರ್ಯವೂ ಯಡ್ಯೂರಪ್ಪನವರಿಗೆ ಇಲ್ಲ. ಹಾಗಾಗಿ, ನಿನ್ನೆ ಮಾಧ್ಯಮದವರು ನೀವು ಯಾವಾಗ ದಿಲ್ಲಿಗೆ ಹೋಗುತ್ತೀರಿ? ಎಂದು ಕೇಳಿದ ಪ್ರಶ್ನೆಗೆ ಇನ್ನು ಮೂರ್‍ನಾಲ್ಕು ದಿನವಂತೂ ನಾನು ದಿಲ್ಲಿ ಕಡೆಗೆ ಹೋಗಲ್ಲ, ಯಾವಾಗ ರಾಷ್ಟ್ರೀಯ ಅಧ್ಯಕ್ಷರು ಕರೀತಾರೋ (ಅಮಿತ್ ಶಾ) ಆಗ ಹೋಗ್ತೀನಿ. ಬಹುಶಃ ಮುಂದಿನ ವಾರವೇ ನನಗೆ ದಿಲ್ಲಿಗೆ ಹೋಗಲು ಸಾಧ್ಯವಾಗುತ್ತೇನೊ ಎಂಬ ಉತ್ತರ ಕೊಟ್ಟಿದ್ದಾರೆ.

ಇದೇ ೧೬ರಂದು (ಬರುವ ಸೋಮವಾರದಿಂದ) ಧನುರ್ಮಾಸ ಶುರುವಾಗಲಿದೆ. ಕವಡೆ ಶಾಸ್ತ್ರ, ಜ್ಯೋತಿಷ್ಯ, ಪಂಚಾಂಗಗಳನ್ನು ವಿಪರೀತ ನಂಬುವ ಯಡ್ಯೂರಪ್ಪನವರು ಧನುರ್ಮಾಸದಲ್ಲಿ ತಮ್ಮ ಸಂಪುಟ ಪನರ್ರಚನೆಗಾಗಲಿ, ವಿಸ್ತರಣೆಗಾಗಲಿ ಕೈಹಾಕಲಾರರು ಅನ್ನೋ ಮಾತನ್ನು ಅವರ ಒಡನಾಡಿಗಳು ಹೇಳುತ್ತಿದ್ದಾರೆ. ಧನುರ್ಮಾಸದಲ್ಲಿ ಯಾವ ಶುಭಕಾರ್ಯಗಳು ನಡೆಯಬಾರದು, ನಡೆದರೆ ವಿಘ್ನ ಎದುರಾಗಲಿದೆ ಎಂಬ ಮೂಢನಂಬಿಕೆಯೇ ಇದಕ್ಕೆ ಕಾರಣ. ಈಗ ಶುರುವಾಗುವ ಇದು ಜನವರಿ ಮೂರನೇ ವಾರದಲ್ಲಿ ಮಕರ ಸಂಕ್ರಮಣದೊಂದಿಗೆ ಮುಕ್ತಾಯವಾಗಲಿದೆ. ಅಲ್ಲೀವರೆಗೂ ಯಡ್ಯೂರಪ್ಪನವರ ಸಂಪುಟದ ಗಾತ್ರ ಹಿಗ್ಗದು ಎಂದೇ ಅಂದಾಜಿಸಲಾಗಿದೆ. ಹಾಗೇನಾದರು ಆದಲ್ಲಿ ಚುನಾವಣೆಯಲ್ಲಿ ಗೆದ್ದು ಅರ್ಹರಾದರು ಮಂತ್ರಿಭಾಗ್ಯ ಕಾಣಲು ಮಾಜಿ ಅನರ್ಹರು ಒಂದು ತಿಂಗಳು ವಿರಹವೇದನೆ ಅನುಭವಿಸದೆ ವಿಧಿಯಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...