Homeಮುಖಪುಟ'ಬಿಜೆಪಿ ಗೆಲ್ಲಬೇಕೆಂದು ಬಯಸುವ ಕ್ಷೇತ್ರಗಳಿಗೆ ಇತರ ರಾಜ್ಯಗಳಿಂದ ಜನರನ್ನು ಕರೆ ತರಲಿದೆ': ಚರ್ಚೆಗೆ ಕಾರಣವಾದ ಕೇರಳ...

‘ಬಿಜೆಪಿ ಗೆಲ್ಲಬೇಕೆಂದು ಬಯಸುವ ಕ್ಷೇತ್ರಗಳಿಗೆ ಇತರ ರಾಜ್ಯಗಳಿಂದ ಜನರನ್ನು ಕರೆ ತರಲಿದೆ’: ಚರ್ಚೆಗೆ ಕಾರಣವಾದ ಕೇರಳ ಬಿಜೆಪಿ ನಾಯಕನ ಹೇಳಿಕೆ

- Advertisement -
- Advertisement -

ತಮ್ಮ ಪಕ್ಷ ಗೆಲ್ಲಲು ಉದ್ದೇಶಿಸುವ ಕ್ಷೇತ್ರಗಳಿಗೆ ಇತರ ರಾಜ್ಯಗಳ ಜನರನ್ನು ಕರೆತರಲಿದೆ ಎಂದು ಬಿಜೆಪಿ ಕೇರಳ ಘಟಕದ ಉಪಾಧ್ಯಕ್ಷ ಬಿ. ಗೋಪಾಲಕೃಷ್ಣನ್ ಹೇಳಿರುವುದು ಚರ್ಚೆಗೆ ಕಾರಣವಾಗಿದೆ.

“ನಾವು ಗೆಲ್ಲಲು ಉದ್ದೇಶಿಸಿರುವ ಕ್ಷೇತ್ರಗಳಿಗೆ ಜಮ್ಮುಕಾಶ್ಮೀರದಿಂದಲೂ ಜನರನ್ನು ಕರೆತರುತ್ತೇವೆ, ಅವರನ್ನು ಒಂದು ವರ್ಷದ ಅವಧಿಗೆ ಅಲ್ಲಿ ನೆಲೆಗೊಳಿಸಿ ಅವರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮಾಡುತ್ತೇವೆ. ಈ ಬಗ್ಗೆ ಯಾವುದೇ ಸಂಶಯ ಬೇಡ. ಭವಿಷ್ಯದಲ್ಲಿಯೂ ಅದನ್ನು ಮತ್ತೆ ಮಾಡುತ್ತೇವೆ” ಎಂದು ಗೋಪಾಲಕೃಷ್ಣನ್‌ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

2024ರ ಲೋಕಸಭಾ ಚುನಾವಣೆಗೆ ಮುನ್ನ ತ್ರಿಶೂರ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಮತದಾರರ ನೋಂದಣಿ ಅಕ್ರಮಗಳು ನಡೆದಿವೆ ಎಂಬ ಕಾಂಗ್ರೆಸ್ ಆರೋಪಗಳ ನಡುವೆಯೇ ಗೋಪಾಲಕೃಷ್ಣನ್‌ರ ಈ ಹೇಳಿಕೆ ಹೊರಬಿದ್ದಿದೆ. ತ್ರಿಶೂರಿನ ಬಿಜೆಪಿ ಸಂಸದ ಸುರೇಶ್ ಗೋಪಿಯವರು ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಸುಳ್ಳು ಘೋಷಣೆಯನ್ನು ಸಲ್ಲಿಸಿದ್ದರು ಎಂದೂ ಕಾಂಗ್ರೆಸ್ ಆರೋಪಿಸಿದೆ.

ಸುರೇಶ್ ಗೋಪಿ ಮೂಲಕ ಬಿಜೆಪಿ ಕೇರಳದಲ್ಲಿ ತನ್ನ ಮೊದಲ ಲೋಕಸಭಾ ಕ್ಷೇತ್ರವನ್ನು ಗೆದ್ದಿದೆ. ಸುರೇಶ್ ಗೋಪಿ ಸಿಪಿಐ ಅಭ್ಯರ್ಥಿ ವಿ.ಎಸ್ ಸುನಿಲ್‌ ಕುಮಾರ್ ಅವರನ್ನು 74,600ಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿದ್ದರು. ಆದರೆ, 2019 ಮತ್ತು 2024ರ ನಡುವೆ ತ್ರಿಶೂರಿನಲ್ಲಿ ಮತದಾರರ ಸಂಖ್ಯೆಯಲ್ಲಿ 1,46,656ರಷ್ಟು ಶಂಕಾಸ್ಪದ ಮತ್ತು ಅಸಹಜ ಏರಿಕೆ ಕಂಡು ಬಂದಿದ್ದು,ಇದು ಜನಸಂಖ್ಯಾ ಪ್ರವೃತ್ತಿಗೆ ಅನುಗುಣವಾಗಿಲ್ಲ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ.

ತ್ರಿಶೂರಿನಲ್ಲಿ ಮತದಾರರ ನೋಂದಣಿಗಾಗಿ ಬಿಜೆಪಿಯು ಸುಳ್ಳು ವಿಳಾಸಗಳನ್ನು ಬಳಸಿಕೊಂಡಿತ್ತು ಎಂಬ ಆರೋಪಗಳನ್ನು ನಿರಾಕರಿಸಿದ ಗೋಪಾಲಕೃಷ್ಣನ್,‌ ತಮ್ಮ ವಿಳಾಸಗಳಲ್ಲಿ ಹೊರಗಿನವರ ಹೆಸರುಗಳನ್ನು ಹೇಗೆ ಸೇರಿಸಲಾಗಿದೆ ಎನ್ನುವುದು ಮನೆ ಮಾಲಿಕರಿಗೆ ತಿಳಿದಿರಲಿಲ್ಲ ಎಂಬ ಆರೋಪಗಳು ಕೇಳಿ ಬಂದ ಒಂದೆರಡು ಪ್ರಕರಣಗಳಿರಬಹುದು ಎಂದು ಹೇಳಿದ್ದಾರೆ. ಕ್ಷೇತ್ರದಲ್ಲಿ ನಕಲಿ ಮತದಾನ ನಡೆದಿಲ್ಲ ಎಂದಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ.ಟಿ ರಮೇಶ್ ಅವರೂ ಆರೋಪಗಳನ್ನು ತಳ್ಳಿಹಾಕಿದ್ದು, ತ್ರಿಶೂರ್ ನಿವಾಸಿಗಳನ್ನು ಮಾತ್ರ ಮತದಾರರನ್ನಾಗಿ ನೋಂದಾಯಿಸಲಾಗಿತ್ತು ಎಂದಿದ್ದಾರೆ. ಚುನಾವಣಾ ಆಯೋಗವು ಮಾನ್ಯತೆ ನೀಡಿರುವ ಆರು ಗುರುತಿನ ಚೀಟಿಗಳಲ್ಲಿ ಒಂದನ್ನು, ಆರು ತಿಂಗಳು ವಾಸವಾಗಿರುವ ಪುರಾವೆ ಮತ್ತು ನೆರೆಹೊರೆಯವರ ದೃಢೀಕರಣ ಹೊಂದಿರುವ ಯಾರೇ ಆದರೂ ಕಾಶ್ಮೀರ ಸೇರಿದಂತೆ ಭಾರತದಲ್ಲಿ ಎಲ್ಲಿಯೇ ಆದರೂ ಮತದಾರರಾಗಿ ನೋಂದಾಯಿಸಿಕೊಳ್ಳಬಹುದು ಎಂದು ಬೆಟ್ಟು ಮಾಡಿದ ಅವರು, ನಕಲಿ ಮತದಾರರನ್ನು ಸೇರಿಸಿದ್ದು ಬಿಜೆಪಿಯಲ್ಲ, ಸಿಪಿಎಂ ಮತ್ತು ಕಾಂಗ್ರೆಸ್ ಎಂದು ಆರೋಪಿಸಿದ್ದಾರೆ.

ಕಳೆದ ವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ಕಾಂಗ್ರೆಸ್‌ನ ಆರೋಪಗಳಿಗೆ ಪ್ರತಿಕ್ರಿಯಿಸಿದ್ದ ಸುರೇಶ್ ಗೋಪಿ,‌ “ಮತದಾರರ ಪಟ್ಟಿಯಲ್ಲಿ ಕೈವಾಡ ನಡೆದಿದೆ ಎಂಬ ಆರೋಪಕ್ಕೆ ಚುನಾವಣಾ ಆಯೋಗವು ಉತ್ತರಿಸಬೇಕು. ನಾನು ಓರ್ವ ಸಚಿವ ಮತ್ತು ನಾನು ನನ್ನ ಕರ್ತವ್ಯಗಳನ್ನು ಪೂರೈಸಿದ್ದೇನೆ. ಉತ್ತರಿಸಬೇಕಾದವರು ಉತ್ತರಿಸುತ್ತಾರೆ. ನಿಮಗೆ ಹೆಚ್ಚಿನ ಪ್ರಶ್ನೆಗಳಿದ್ದರೆ ಅವರನ್ನು ಕೇಳಿ ಅಥವಾ ವಿಷಯವು ಸರ್ವೋಚ್ಚ ನ್ಯಾಯಾಲಯದ ಮುಂದೆ ಬರುವವರೆಗೆ ಕಾಯಿರಿ” ಎಂದು ಹೇಳಿದ್ದರು.

ಸಮಾಜವಾದಿ ಪಕ್ಷದಿಂದ ಟಿಎಂಸಿ, ಬಿಜೆಡಿ ಮತ್ತು ಎಎಪಿಯವರೆಗೆ: ಮತದಾರರ ಪಟ್ಟಿಯ ಅಕ್ರಮಗಳೊಂದಿಗೆ ರಾಜಕೀಯ ಪಕ್ಷಗಳು ಚುನಾವಣಾ ಆಯೋಗದ ಬಾಗಿಲು ತಟ್ಟಿದ ಬಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...