Homeಕರ್ನಾಟಕಶಿವಮೊಗ್ಗ | ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ: ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ | ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ: ಪತ್ನಿ, ಪ್ರಿಯಕರನಿಗೆ ಮರಣದಂಡನೆ

- Advertisement -
- Advertisement -

ಒಂಭತ್ತು ವರ್ಷಗಳ ಹಿಂದೆ ಭದ್ರಾವತಿಯಲ್ಲಿ ನಡೆದ ಸರ್ಕಾರಿ ಶಾಲೆಯ ಶಿಕ್ಷಕ ಇಮ್ತಿಯಾಝ್ ಅಹ್ಮದ್ ಎಂಬವರ ಕೊಲೆ ಪ್ರಕರಣದಲ್ಲಿ ಮೃತರ ಪತ್ನಿ ಮತ್ತು ಪ್ರಿಯಕರನಿಗೆ ಮರಣದಂಡನೆ ವಿಧಿಸಿ ಭದ್ರಾವತಿಯ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶನಿವಾರ (ಆ.23) ಆದೇಶಿಸಿದೆ.

ಸರ್ಕಾರಿ ಶಾಲೆಯ ಶಿಕ್ಷಕಿ ಲಕ್ಷ್ಮಿ ಮತ್ತು ಆಕೆಯ ಪ್ರಿಯಕರ, ಚಾಲಕ ಕೃಷ್ಣಮೂರ್ತಿ ಅಲಿಯಾಸ್ ಕಿಟ್ಟಿ ಮರಣದಂಡನೆ ಶಿಕ್ಷೆ ಘೋಷಣೆಯಾದವರು. ಪ್ರಕರಣದಲ್ಲಿ ಸಾಕ್ಷಿ ನಾಶಕ್ಕೆ ನೆರವಾದ ಮೂರನೇ ಅಪರಾಧಿ ಶಿವರಾಜ್ ಎಂಬಾತನಿಗೆ ಏಳು ವರ್ಷಗಳ ಜೈಲು ಶಿಕ್ಷೆಯ ಜೊತೆಗೆ ದಂಡ ವಿಧಿಸಲಾಗಿದೆ.

ಮೃತ ಶಿಕ್ಷಕ ಇಮ್ತಿಯಾಝ್ ಮತ್ತು ಲಕ್ಷ್ಮಿ ಇಬ್ಬರೂ ಕಲಬುರಗಿಯ ಒಂದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದಾಗ ಮದುವೆಯಾಗಿದ್ದರು. ಇಮ್ತಿಯಾಜ್ ಸೊರಬ ಮೂಲದವರು, ಲಕ್ಷ್ಮಿ ಭದ್ರಾವತಿಯ ನಿವಾಸಿ. ಮದುವೆಯ ನಂತರ ಇಬ್ಬರೂ ಭದ್ರಾವತಿಗೆ ಸ್ಥಳಾಂತರಗೊಂಡಿದ್ದರು. ಈ ನಡುವೆ ದಂಪತಿಗೆ ಒಬ್ಬ ಮಗ ಹುಟ್ಟಿದ್ದ.

ಭದ್ರಾವತಿಯ ಜನ್ನಾಪುರದಲ್ಲಿ ವಾಸವಿದ್ದ ಲಕ್ಷ್ಮಿ ಅವರಿಗೆ ಬಾಲ್ಯದ ಸ್ನೇಹಿತ, ವೃತ್ತಿಯಲ್ಲಿ ಚಾಲಕನಾಗಿದ್ದ ಕೃಷ್ಣಮೂರ್ತಿ ಜೊತೆ ಆತ್ಮೀಯತೆ ಬೆಳೆದಿತ್ತು. ಬಳಿಕ ಅದು ಅಕ್ರಮ ಸಂಬಂಧಕ್ಕೆ ತಿರುಗಿತ್ತೆನ್ನಲಾಗಿದೆ. ಇದನ್ನು ಇಮ್ತಿಯಾಝ್ ವಿರೋಧಿಸಿದ್ದರು. ಈ ಕಾರಣಕ್ಕೆ ಇಮ್ತಿಯಾಝ್ ಅವರನ್ನು ಲಕ್ಷ್ಮಿ ಮತ್ತು ಕೃಷ್ಣಮೂರ್ತಿ ಹಾಗೂ ಕೃಷ್ಣ ಮೂರ್ತಿಯ ಸ್ನೇಹಿತ ಶಿವರಾಜ ಸೇರಿ 2016ರ ಜುಲೈ 7ರಂದು ಜನ್ನಾಪುರದ ಮನೆಯಲ್ಲಿ ತಲೆಗೆ ರಾಡ್ ಮತ್ತು ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದರು. ಮೃತದೇಹವನ್ನು ನೈಲಾನ್ ದಾರದಲ್ಲಿ ಕಟ್ಟಿ ಭದ್ರಾವತಿಯ ಹೊಸಸೇತುವೆ ಸಮೀಪ ಭದ್ರಾ ನದಿಗೆ ಎಸೆದಿದ್ದರು.

ಪ್ರಕರಣದ ಸಂಬಂಧ ಇಮ್ತಿಯಾಝ್ ಅವರ ಸಹೋದರ ಇಜಾಝ್ ಅಹ್ಮದ್ ದಾಖಲಿಸಿದ್ದ ದೂರು ಆಧರಿಸಿ ತನಿಖೆ ನಡೆಸಿದ್ದ ಭದ್ರಾವತಿಯ ನ್ಯೂ ಟೌನ್ ಪೊಲೀಸರು, ಲಕ್ಷ್ಮಿ, ಕೃಷ್ಣಮೂರ್ತಿ ಹಾಗೂ ಶಿವರಾಜನನ್ನು ಬಂಧಿಸಿ ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು ಲಕ್ಷ್ಮಿ ಹಾಗೂ ಕೃಷ್ಣಮೂರ್ತಿಗೆ ಮರಣದಂಡನೆ ಹಾಗೂ ಶಿವರಾಜ್‌ಗೆ ಏಳು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಕ್ಷ್ಯಾಧಾರಗಳೊಂದಿಗೆ ಸಾಬೀತುಪಡಿಸುವಲ್ಲಿ ಯಶಸ್ವಿಯಾದ ಕಾರಣ ನ್ಯಾಯಾಲಯವು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದೆ ಎಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಹೇಳಿದ್ದಾರೆ. ಪ್ರಕರಣದಲ್ಲಿ ರತ್ನಮ್ಮ ಅವರು ಸಾರ್ವಜನಿಕ ಅಭಿಯೋಜಕರಾಗಿದ್ದರು.

ಪ್ರತ್ಯೇಕ ಒಳಮೀಸಲಾತಿ ಇಲ್ಲ ಎಂದಿದ್ದಕ್ಕೆ ಫ್ರೀಡಂ ಪಾರ್ಕಿನಲ್ಲಿ ಬಿಕ್ಕಿ ಬಿಕ್ಕಿ ಅತ್ತ ಅಲೆಮಾರಿ ಸಮುದಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...