Homeದಲಿತ್ ಫೈಲ್ಸ್ದಲಿತ ಇಂಜಿನಿಯರ್‌ಗೆ ಶೂನಿಂದ ಹಲ್ಲೆ: ಬಿಜೆಪಿ ಕಾರ್ಯಕರ್ತನ ಬಂಧನ

ದಲಿತ ಇಂಜಿನಿಯರ್‌ಗೆ ಶೂನಿಂದ ಹಲ್ಲೆ: ಬಿಜೆಪಿ ಕಾರ್ಯಕರ್ತನ ಬಂಧನ

- Advertisement -
- Advertisement -

ದಲಿತ ಇಂಜಿನಿಯರ್‌ಗೆ ಕಚೇರಿಯೊಳಗೆ ಶೂನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಬಲಿಯಾದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಭಾನುವಾರ (ಆ.24) ಬಂಧಿಸಿದ್ದಾರೆ.

ಘಟನೆಯ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ವಿದ್ಯುತ್ ಇಲಾಖೆಯ ಸೂಪರಿಂಟೆಂಡಿಂಗ್ ಇಂಜಿನಿಯರ್‌ ಲಾಲ್ ಸಿಂಗ್ ಅವರಿಗೆ ಥಳಿಸಿರುವುದನ್ನು ನೋಡಬಹುದು.

ಪೊಲೀಸ್ ದೂರಿನ ಪ್ರಕಾರ, ಈ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ.

“ಲಾಲ್ ಸಿಂಗ್ ತಮ್ಮ ದೂರಿನಲ್ಲಿ, ಮುನ್ನಾ ಬಹದ್ದೂರ್ ಎಂಬ ವ್ಯಕ್ತಿ ಕೆಲವು ಅಪರಿಚಿತ ವ್ಯಕ್ತಿಗಳೊಂದಿಗೆ ತಮ್ಮ ಕಚೇರಿಗೆ ಅನುಮತಿಯಿಲ್ಲದೆ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಶೂನಿಂದ ಥಳಿಸಿದ್ದಾರೆ” ಎಂದು ಹೇಳಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಓಂವೀರ್ ಸಿಂಗ್ ಮಾಹಿತಿ ನೀಡಿದ್ದಾರೆ.

ಅಧಿಕಾರಿ ಮೇಲೆ ಹಲ್ಲೆ ನಡೆಸಿದವರು ಕೆಲವು ಪ್ರಮುಖ ಕಡತಗಳನ್ನು ಹರಿದು ಹಾಕಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ ಲಾಲ್ ಸಿಂಗ್ ಮತ್ತು ಅವರ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು  “ಅಧಿಕಾರದ ಅರ್ಥ ಹಿಂಸೆ ನೀಡುವುದಲ್ಲ” ಎಂಬ ಸಂದೇಶದೊಂದಿಗೆ ವಿಡಿಯೋ ಹಂಚಿಕೊಂಡಿದ್ದಾರೆ.

ಬಂಧನಕ್ಕೊಳಗಾಗುವ ಮೊದಲು ಮುನ್ನಾ ಬಹದ್ದೂರ್ ಮಾಧ್ಯಮಗಳೊಂದಿಗೆ ಮಾತನಾಡಿದ್ದು, “ತನ್ನ ಪ್ರದೇಶದಲ್ಲಿನ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲು ಲಾಲ್ ಸಿಂಗ್ ಅವರ ಕಚೇರಿಗೆ ಹೋಗಿದ್ದಾಗ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಮುನ್ನಾ ಬಹದ್ದೂರ್ ಮತ್ತು ಆತನ ಜೊತೆಗಿನ ಇತರರ ವಿರುದ್ಧ ಬಿಎನ್‌ಎಸ್‌ನ ಸಂಬಂಧಿತ ಸೆಕ್ಷನ್‌ಗಳು ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್‌ಪಿ ಓಂವೀರ್ ಸಿಂಗ್ ತಿಳಿಸಿದ್ದಾರೆ.

“ನಾವು ಮುನ್ನಾ ಬಹದ್ದೂರ್ ಅವರನ್ನು ಬಂಧಿಸಿದ್ದೇವೆ ಮತ್ತು ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಬೇರೆ ಯಾರಾದರೂ ಭಾಗಿಯಾಗಿರುವುದು ಕಂಡುಬಂದರೆ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಅಧಿಕಾರಿ ಹೇಳಿದ್ದಾರೆ.

ಮುನ್ನಾ ಬಹದ್ದೂರ್ ಪಕ್ಷದ ಕಾರ್ಯಕರ್ತ ಮತ್ತು ಪಕ್ಷದ ಮಾಜಿ ಪದಾಧಿಕಾರಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಮಿಶ್ರಾ ದೃಢಪಡಿಸಿದ್ದು, ಹಲ್ಲೆ ಘಟನೆ ಸಂಬಂಧ ಮುನ್ನಾ ವಿರುದ್ದ ಪಕ್ಷದಿಂದ ಕ್ರಮ ಕೈಗೊಳ್ಳುವ ಬಗ್ಗೆ ಸಾರಿಗೆ ಸಚಿವ ದಯಾಶಂಕರ್ ಸಿಂಗ್ ಮತ್ತು ಇತರ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ಮಿಶ್ರಾ ತಿಳಿಸಿದ್ದಾರೆ.

36 ಲಕ್ಷ ರೂ. ವರದಕ್ಷಿಣೆ ತರುವಂತೆ ಮಹಿಳೆಗೆ ಬೆಂಕಿ ಹಚ್ಚಿ ಕೊಂದ ಗಂಡನ ಮನೆಯವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...