Homeಮುಖಪುಟಎಸ್‌ಐಆರ್ 'ಸಾಂಸ್ಥಿಕ ಮತಗಳ್ಳತನ', ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ: ರಾಹುಲ್ ಗಾಂಧಿ

ಎಸ್‌ಐಆರ್ ‘ಸಾಂಸ್ಥಿಕ ಮತಗಳ್ಳತನ’, ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ: ರಾಹುಲ್ ಗಾಂಧಿ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಾಂಸ್ಥಿಕ ಮತಗಳ್ಳತನವಾಗಿದೆ. ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಎಸ್‌ಐಆರ್ ಮತ್ತು ಮತಗಳ್ಳತನದ ವಿರುದ್ದ ಬಿಹಾರದಲ್ಲಿ ಹಮ್ಮಿಕೊಂಡಿರುವ ‘ವೋಟರ್ ಅಧಿಕಾರ್’ ಯಾತ್ರೆಯಲ್ಲಿ ಭಾನುವಾರ ಅವರು ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನಕಲಿ ಮತದಾರರನ್ನು ಹೇಗೆ ಸೇರ್ಪಡೆ ಮಾಡಲಾಗಿದೆ ಎಂಬ ನಮ್ಮ ಪ್ರಶ್ನೆಗೆ ಚುನಾವಣಾ ಆಯೋಗ ಉತ್ತರ ನೀಡಿಲ್ಲ. ಹಾಗಾಗಿ, ಅದರ ಎಲ್ಲರಿಗೂ ಸ್ಪಷ್ಟವಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಬಿಹಾರದ ಅರಾರಿಯಾದಲ್ಲಿ ‘ವೋಟರ್ ಅಧಿಕಾರ್’ ಯಾತ್ರೆಯ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಮುಂಬರುವ ಬಿಹಾರ ಚುನಾವಣೆಗಾಗಿ ಇಂಡಿಯಾ ಒಕ್ಕೂಟವು ‘ಸೈದ್ಧಾಂತಿಕ ಮತ್ತು ರಾಜಕೀಯವಾಗಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದೆ. ಚುನಾವಣೆಯ ಫಲಿತಾಂಶ ನಮಗೆ ಫಲಪ್ರದವಾಗಲಿದೆ. ನಾವೆಲ್ಲ ಸಾಮಾನ್ಯ ಪ್ರಣಾಳಿಕೆಯೊಂದಿಗೆ ಮತದಾರರ ಮುಂದೆ ಹೋಗುತ್ತೇವೆ” ಎಂದಿದ್ದಾರೆ.

ಮತಗಳ್ಳತನಕ್ಕೆ ಸಂಬಂಧಿಸಿದ ತನ್ನ ಆರೋಪಕ್ಕೆ ಚುನಾವಣಾ ಆಯೋಗ ಪ್ರಮಾಣಪತ್ರ ಕೇಳಿದೆ ಎಂದ ರಾಹುಲ್ ಗಾಂಧಿ, ಅನುರಾಗ್ ಠಾಕೂರ್ ಅಂತಹದ್ದೇ ಆರೋಪ ಮಾಡಿದರೂ ಅವರಿಂದ ಪ್ರಮಾಣಪತ್ರ ಕೇಳಿಲ್ಲ ಎಂದಿದ್ದಾರೆ.

“ನಾನು ಮಹದೇವಪುರದ ಮತಗಳ್ಳತನದ ಕುರಿತು ಪತ್ರಿಕಾಗೋಷ್ಠಿ ಮಾಡುತ್ತಿದ್ದೆ. ಐದು ನಿಮಿಷಗಳಲ್ಲಿ, ರಾಹುಲ್ ಗಾಂಧಿ ಪ್ರಮಾಣಪತ್ರ ನೀಡಬೇಕು. ಅವರು ಪ್ರಮಾಣಪತ್ರ ಸಲ್ಲಿಸದಿದ್ದರೆ ಆರೋಪಗಳನ್ನು ಸ್ವೀಕರಿಸುವುದಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ. ಕೆಲ ದಿನಗಳ ನಂತರ, ಅನುರಾಗ್ ಠಾಕೂರ್ ಅದೇ  ರೀತಿಯ ಆರೋಪಗಳನ್ನು ಮಾಡಿದರು. ಆದರೆ, ಅವರಿಂದ ಯಾವುದೇ ಪ್ರಮಾಣಪತ್ರ ಕೇಳಿಲ್ಲ. ನಾನು ನಕಲಿ ಮತದಾರರ ಬಗ್ಗೆ ಮಾತನಾಡಿದ್ದೆ, ಅವರು ಕೂಡ ಅದನ್ನೇ ಮಾಡಿದ್ದರು. ಐದು ನಿಮಿಷಗಳಲ್ಲಿ ನನ್ನಿಂದ ಪ್ರಮಾಣಪತ್ರ ಕೇಳಲಾಯಿತು. ಆದರೆ, ಇಂದಿನವರೆಗೆ ಅನುರಾಗ್ ಠಾಕೂರ್ ಅವರಿಂದ ಕೇಳಿಲ್ಲ” ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಸಿಪಿಐ (ಎಂಎಲ್) ನ ದೀಪಂಕರ್ ಭಟ್ಟಾಚಾರ್ಯ ಮತ್ತು ವಿಐಪಿಯ ಮುಖೇಶ್ ಸೈನಿ ಇದ್ದರು.

ಇದಕ್ಕೂ ಮೊದಲು ಅರಾರಿಯಾದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿದ ಮೋದಿ ಸರ್ಕಾರ, ಈಗ ಚುನಾವಣಾ ಆಯೋಗದ ಸಹಾಯದಿಂದ ಎಸ್‌ಐಆರ್ ಮೂಲಕ ಬಡವರ ಮತಗಳನ್ನು ಕದಿಯಲು ಬಯಸುತ್ತಿದೆ. ಇದಕ್ಕೆ ಬಿಹಾರದಲ್ಲಿ ಇಂಡಿಯಾ ಒಕ್ಕೂಟ ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

“ಚುನಾವಣಾ ಆಯೋಗ ತಟಸ್ಥವಾಗಿಲ್ಲ, ಅವರು ಮತಗಳನ್ನು ಕದಿಯುತ್ತಿದ್ದಾರೆ. ಎಸ್‌ಐಆರ್ ಎಂಬುವುದು ಮತಗಳನ್ನು ಕದಿಯಲು ಚುನಾವಣಾ ಆಯೋಗ ಮಾಡಿರುವ ಸಾಂಸ್ಥಿಕ ಪ್ರಯತ್ನವಾಗಿದೆ. ಪ್ರತಿಪಕ್ಷಗಳು ಮತದಾರರನ್ನು ಕೈಬಿಟ್ಟ ಬಗ್ಗೆ ದೂರು ನೀಡುತ್ತಿವೆ. ಆದರೆ, ಬಿಜೆಪಿ ಯಾವುದೇ ದೂರು ನೀಡುತ್ತಿಲ್ಲ. ಅದೇಕೆ ಹೀಗೆ? ಏಕೆಂದರೆ, ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಮತ್ತು ಬಿಜೆಪಿ ನಡುವೆ ಒಪ್ಪಂದ ಇದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ಸರಿಯಾದ’ ಮತದಾರರ ಪಟ್ಟಿಯನ್ನು ಒದಗಿಸುವುದು ಚುನಾವಣಾ ಆಯೋಗದ ಕೆಲಸ. ಆದರೆ, ಅವರು ಮಹಾರಾಷ್ಟ್ರ, ಹರಿಯಾಣ ಮತ್ತು ಕರ್ನಾಟಕದಲ್ಲಿ ಆ ಕೆಲಸ ಮಾಡಿಲ್ಲ” ಎಂದು ಒತ್ತಿ ಹೇಳಿದ ರಾಹುಲ್ ಗಾಂಧಿ, “ಚುನಾವಣಾ ಆಯೋಗ ತನ್ನ ನಡವಳಿಕೆಯನ್ನು ಬದಲಾಯಿಸಿರುವುದನ್ನು ಸಾಬೀತುಪಡಿಸುವುದು ನಮ್ಮ ಪ್ರಯತ್ನವಾಗಿದೆ” ಎಂದು ಹೇಳಿದ್ದಾರೆ.

ಚುನಾವಣಾ ಆಯೋಗವು ‘ಗೋದಿ ಆಯೋಗ’ವಾಗಿ ಮಾರ್ಪಟ್ಟಿದೆ. ಚುನಾವಣಾ ಸಂಸ್ಥೆಯ ವಿಶ್ವಾಸಾರ್ಹತೆ ತಳಮಟ್ಟಕ್ಕೆ ಕುಸಿದಿದೆ ಎಂದು ತೇಜಸ್ವಿ ಯಾದವ್ ಆರೋಪಿಸಿದ್ದಾರೆ. ನರೇಂದ್ರ ಮೋದಿ ಸುಳ್ಳು ಹೇಳುತ್ತಿದ್ದಾರೆ. ಅಕ್ರಮ ಮತದಾರರನ್ನು ಪತ್ತೆ ಮಾಡಲು ಎಸ್‌ಐಆರ್ ಮಾಡಲಾಗುತ್ತದೆ ಎಂದು ಪ್ರಧಾನಿ ಹೇಳಿಕೊಂಡಿದ್ದಾರೆ ಆದರೆ, ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಚುನಾವಣಾ ಆಯೋಗವು ಹಾಗೆ ಉಲ್ಲೇಖಿಸಿಲ್ಲ” ಎಂದಿದ್ದಾರೆ.

“ತನ್ನ ವರ್ಚಸ್ಸು ನಷ್ಟಕ್ಕೆ ಚುನಾವಣಾ ಆಯೋಗವನ್ನೇ ದೂಷಿಸಬೇಕು” ಎಂದು ಭಟ್ಟಾಚಾರ್ಯ ಹೇಳಿದ್ದು, “ಇದು ಚುನಾವಣಾ ಆಯೋಗವಲ್ಲ, ಬದಲಾಗಿ ಭಾರತದ ಚುನಾವಣಾ ಲೋಪ” (It is not the Election Commission, but the Election Omission of India) ಎಂದು ಕರೆದಿದ್ದಾರೆ.

‘ಬಿಜೆಪಿ ಗೆಲ್ಲಬೇಕೆಂದು ಬಯಸುವ ಕ್ಷೇತ್ರಗಳಿಗೆ ಇತರ ರಾಜ್ಯಗಳಿಂದ ಜನರನ್ನು ಕರೆ ತರಲಿದೆ’: ಚರ್ಚೆಗೆ ಕಾರಣವಾದ ಕೇರಳ ಬಿಜೆಪಿ ನಾಯಕನ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...