Homeಮುಖಪುಟನಿಷೇಧಿತ ಜಮಾತೆ ಇಸ್ಲಾಮಿಗೆ ಸಂಬಂಧಿಸಿದ 215 ಶಾಲೆಗಳನ್ನು ವಶಕ್ಕೆ ಪಡೆದ ಜಮ್ಮು ಕಾಶ್ಮೀರ ಸರ್ಕಾರ

ನಿಷೇಧಿತ ಜಮಾತೆ ಇಸ್ಲಾಮಿಗೆ ಸಂಬಂಧಿಸಿದ 215 ಶಾಲೆಗಳನ್ನು ವಶಕ್ಕೆ ಪಡೆದ ಜಮ್ಮು ಕಾಶ್ಮೀರ ಸರ್ಕಾರ

- Advertisement -
- Advertisement -

ಪ್ರತಿಪಕ್ಷಗಳ ವಿರೋಧದ ನಡುವೆಯೂ ಜಮ್ಮು ಕಾಶ್ಮೀರ ಸರ್ಕಾರ ನಿಷೇಧಿತ ಜಮಾತೆ ಇಸ್ಲಾಮಿಗೆ ಸಂಬಂಧಿಸಿದ 215 ಶಾಲೆಗಳನ್ನು ತನ್ನ ವಶಕ್ಕೆ ಪಡೆದಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಕಾಶ್ಮೀರ ಕಣಿವೆಯ 10 ಜಿಲ್ಲೆಗಳ ಶಾಲೆಗಳ ಕಾರ್ಯನಿರ್ವಹಣೆಯನ್ನು ಕಂದಾಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಮತ್ತು ಸರ್ಕಾರಿ ಶಾಲೆಗಳ ಪ್ರಾಂಶುಪಾಲರನ್ನು ಒಳಗೊಂಡ ವಿಶೇಷ ತಂಡ ವಹಿಸಿಕೊಂಡಿವೆ ಎಂದು ವರದಿ ಹೇಳಿದೆ.

ಜಮಾತೆ ಇಸ್ಲಾಮಿ ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದ ಶೈಕ್ಷಣಿಕ ಸಂಸ್ಥೆಯಾದ ಫಲಾಹ್-ಎ-ಆಮ್ ಟ್ರಸ್ಟ್ ನಡೆಸುತ್ತಿದ್ದ ಶಾಲೆಗಳನ್ನು ಸ್ವಾಧೀನಪಡಿಸಿಕೊಳ್ಳುವುದಾಗಿ ಸರ್ಕಾರ ಶುಕ್ರವಾರ ಘೋಷಿಸಿತ್ತು.

ಕೇಂದ್ರಾಡಳಿತ ಪ್ರದೇಶದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸುತ್ತಿದೆ ಎಂಬ ಆರೋಪದ ಮೇಲೆ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಜಮಾತೆ ಇಸ್ಲಾಮಿ ಜಮ್ಮು ಕಾಶ್ಮೀರವನ್ನು 2019ರಲ್ಲಿ ನಿಷೇಧಿಸಲಾಗಿದೆ. (ಜಮಾತೆ ಇಸ್ಲಾಮಿ ಹಿಂದ್ ಭಾರತದಲ್ಲಿ ನಿಷೇಧಿಸಲ್ಪಟ್ಟಿಲ್ಲ ಎರಡೂ ಸಂಘಟನೆಗಳಿಗೆ ವ್ಯತ್ಯಾಸಗಳಿವೆ)

215 ಶಾಲೆಗಳ ವ್ಯವಸ್ಥಾಪಕ ಸಮಿತಿಯ ಸಿಂಧುತ್ವವು ಮುಕ್ತಾಯಗೊಂಡಿದ್ದು, ಆ ಸಂಸ್ಥೆಗಳ ವಿರುದ್ಧ ಗುಪ್ತಚರ ಸಂಸ್ಥೆಗಳು ಪ್ರತಿಕೂಲ ವರದಿ ನೀಡಿವೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ ಎಂದು ದಿ ಹಿಂದೂ ವರದಿ ವಿವರಿಸಿದೆ.

“ಈ ಶಾಲೆಗಳಲ್ಲಿ ದಾಖಲಾದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಕಾಪಾಡುವ ಸಲುವಾಗಿ 215 ಶಾಲೆಗಳ ವ್ಯವಸ್ಥಾಪಕ ಸಮಿತಿಯನ್ನು ಸಂಬಂಧಪಟ್ಟ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಥವಾ ಉಪ ಆಯುಕ್ತರು ವಹಿಸಿಕೊಳ್ಳಬೇಕೆಂದು ಈ ಮೂಲಕ ಆದೇಶಿಸಲಾಗಿದೆ” ಎಂದು ಜಮ್ಮು ಮತ್ತು ಕಾಶ್ಮೀರ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ ಆದೇಶವನ್ನು ದಿ ಹಿಂದೂ ವರದಿ ಉಲ್ಲೇಖಿಸಿದೆ ತಿಳಿಸಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಅಥವಾ ಜಿಲ್ಲಾಧಿಕಾರಿಗಳು ಹೊಸ ವ್ಯವಸ್ಥಾಪಕ ಸಮಿತಿಯನ್ನು ಪ್ರಸ್ತಾಪಿಸುತ್ತಾರೆ ಎಂದು ಆದೇಶದಲ್ಲಿ ಸೇರಿಸಲಾಗಿದೆ.

ಆದರೆ, ಜಮ್ಮು ಕಾಶ್ಮೀರದ ಶಿಕ್ಷಣ ಸಚಿವೆ ಸಕೀನಾ ಇಟ್ಟೂ ಅವರು, ಈ ಶಾಲೆಗಳನ್ನು ಜಿಲ್ಲಾಧಿಕಾರಿಗಳಲ್ಲ, ಸರ್ಕಾರಿ ಶಾಲೆಗಳ ಪ್ರಾಂಶುಪಾಲರು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ವಿರೋಧ ಪಕ್ಷಗಳ ಟೀಕೆಗಳ ನಡುವೆ ಶಾಲೆಗಳ ಸ್ವಾಧೀನ “ತಾತ್ಕಾಲಿಕ” ಎಂದು ಇಟ್ಟೂ ತಿಳಿಸಿದ್ದಾರೆ.

“ಸರ್ಕಾರ ಸ್ವಾಧೀನಪಡಿಸಿಕೊಂಡ ಶಾಲೆಗಳ ಸಿಬ್ಬಂದಿ ಮುಂದುವರಿಯುತ್ತಾರೆ. ಸಿಐಡಿ ಪರಿಶೀಲನೆಯ ನಂತರ ಹೊಸ ನಿರ್ವಹಣಾ ಸಮಿತಿಗಳನ್ನು ರಚಿಸಲಾಗುವುದು. ಮೂರು ತಿಂಗಳ ನಂತರ ಪ್ರಕ್ರಿಯೆಯನ್ನು ಪರಿಶೀಲಿಸಲಾಗುವುದು” ಎಂದು ಸಚಿವೆ ಇಟ್ಟೂ ಹೇಳಿದ್ಧಾರೆ.

ಶಾಲೆಗಳ ಸ್ವಾಧೀನದ ಬಗ್ಗೆ ಪ್ರತಿಕ್ರಿಯಿಸಿದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, “ಕಾಶ್ಮೀರಿಗಳು ತಮ್ಮ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ಕಳೆದ ವರ್ಷ ನ್ಯಾಷನಲ್ ಕಾನ್ಫರೆನ್ಸ್‌ಗೆ ಮತ ಹಾಕಿದ್ದರು. ಆದರೆ, ನ್ಯಾಷನಲ್ ಕಾನ್ಫರೆನ್ಸ್ ಕೇಂದ್ರಾಡಳಿತ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಶಾಲೆಗಳನ್ನು ಗುರಿಯಾಗಿಸಿಕೊಂಡಿದೆ” ಎಂದು ಅವರು ಆರೋಪಿಸಿದ್ದಾರೆ.

ಎಸ್‌ಐಆರ್ ‘ಸಾಂಸ್ಥಿಕ ಮತಗಳ್ಳತನ’, ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...