Homeಅಂತರಾಷ್ಟ್ರೀಯಆಸ್ಟ್ರೇಲಿಯಾದಾದ್ಯಂತ ಪ್ರಬಲಗೊಂಡ ಗಾಝಾ ಪರ ಹೋರಾಟ: ಭಾನುವಾರ 40 ನಗರಗಳಲ್ಲಿ ಬೃಹತ್ ಪ್ರತಿಭಟನೆ

ಆಸ್ಟ್ರೇಲಿಯಾದಾದ್ಯಂತ ಪ್ರಬಲಗೊಂಡ ಗಾಝಾ ಪರ ಹೋರಾಟ: ಭಾನುವಾರ 40 ನಗರಗಳಲ್ಲಿ ಬೃಹತ್ ಪ್ರತಿಭಟನೆ

- Advertisement -
- Advertisement -

ಸಿಡ್ನಿಯ ಹಾರ್ಬರ್ ಬ್ರಿಡ್ಜ್‌ನ ಐತಿಹಾಸಿಕ ರ‍್ಯಾಲಿಯ ಬಳಿಕ, ಆಸ್ಟ್ರೇಲಿಯಾದಾದ್ಯಂತ ಭಾನುವಾರ (ಆ.24) ಗಾಝಾ ಪರ ಬೃಹತ್ ಪ್ರತಿಭಟನೆಗಳು ನಡೆದಿವೆ.

ಗಾಝಾದಲ್ಲಿ ನರಮೇಧವನ್ನು ನಿಲ್ಲಿಸಬೇಕು, ಅಲ್ಲಿ ಕೃತಕ ಕ್ಷಾಮ ಸೃಷ್ಟಿಸಿರುವ ಇಸ್ರೇಲ್‌ಗೆ ಜಾಗತಿಕ ನಿರ್ಬಂಧ ಹೇರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುವುದಾಗಿ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಆಗಸ್ಟ್ 11ರಂದು ಘೋಷಿಸಿದ್ದಾರೆ. ಇದು ಆಸ್ಟ್ರೇಲಿಯಾ ಮತ್ತು ಇಸ್ರೇಲ್ ನಡುವಿನ ಸಂಬಂಧ ಹದೆಗೆಟ್ಟಿರುವುದನ್ನು ಸೂಚಿಸಿದೆ.

ಈ ಬೆಳವಣಿಗೆಯು ಆಸ್ಟ್ರೇಲಿಯಾದ ಗಾಝಾ ಪರ ಪ್ರತಿಭಟನೆಗೆ ಆಡಳಿತವೇ ಬೆಂಬಲ ನೀಡಿದಂತಾಗಿದೆ. ಪ್ರತಿಭಟನಾಕಾರರಿಗೂ ಯಾವುದೇ ಅಡತಡೆಗಳು ಎದುರಾಗುತ್ತಿಲ್ಲ ಎಂದು ವರದಿಗಳು ಹೇಳಿವೆ.

ಭಾನುವಾರ ಆಸ್ಟ್ರೇಲಿಯಾದಾದ್ಯಂತ 40ಕ್ಕೂ ಹೆಚ್ಚು ನಗರಗಳಲ್ಲಿ ಪ್ರತಿಭಟನೆಗಳು ನಡೆದಿವೆ ಎಂದು ‘ಪ್ಯಾಲೆಸ್ಟೈನ್ ಆಕ್ಷನ್ ಗ್ರೂಪ್’ ತಿಳಿಸಿದೆ. ವಿವಿಧ ರಾಜ್ಯಗಳ ರಾಜಧಾನಿಗಳಾದ ಸಿಡ್ನಿ, ಬ್ರಿಸ್ಬೇನ್ ಮತ್ತು ಮೆಲ್ಬೋರ್ನ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬ್ರಿಸ್ಬೇನ್‌ನಲ್ಲಿ ಸುಮಾರು 50,000 ಜನರು ಸೇರಿದಂತೆ ದೇಶದಾದ್ಯಂತ ಸುಮಾರು 350,000ಕ್ಕೂ ಹೆಚ್ಚು ಜನರು ಪ್ರತಿಭಟನಾ ರ‍್ಯಾಲಿಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಗ್ರೂಪ್ ಹೇಳಿದೆ.

ಆದರೆ, ಪೊಲೀಸರು ಬ್ರಿಸ್ಬೇನ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇವಲ 10,000 ಜನರು ಮಾತ್ರ ಭಾಗವಹಿಸಿದ್ದಾರೆಂದು ಅಂದಾಜಿಸಿದ್ದಾರೆ. ಸಿಡ್ನಿ ಮತ್ತು ಮೆಲ್ಬೋರ್ನ್‌ನಲ್ಲಿನ ಜನಸಂದಣಿಯ ಗಾತ್ರದ ಬಗ್ಗೆ ಪೊಲೀಸರು ಖಚಿತ ಮಾಹಿತಿ ನೀಡಿಲ್ಲ ಎಂದು ಅಲ್‌ ಜಝೀರಾ ವರದಿ ಮಾಡಿದೆ.

ಸಿಡ್ನಿಯ ಪ್ರತಿಭಟನೆಯ ಆಯೋಜಕ ಜೋಶ್ ಲೀಸ್ ಅವರು, “ಆಸ್ಟ್ರೇಲಿಯನ್ನರು ಗಾಝಾದಲ್ಲಿ ನರಮೇಧವನ್ನು ಕೊನೆಗೊಳಿಸಬೇಕು ಮತ್ತು ನಮ್ಮ ಸರ್ಕಾರ ಇಸ್ರೇಲ್‌ಗೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಲು ಬೀದಿಗೆ ಬಂದಿದ್ದಾರೆ” ಎಂದು ಹೇಳಿದ್ದಾರೆ. ಪ್ರತಿಭಟಾ ರ‍್ಯಾಲಿಗಳಲ್ಲಿ ಭಾಗವಹಿಸಿದವರು ಪ್ಯಾಲೆಸ್ತೀನ್ ಧ್ವಜಗಳನ್ನು ಹಿಡಿದು ‘ಫ್ರೀ ಫ್ರೀ ಪ್ಯಾಲೆಸ್ಟೈನ್’ ಎಂಬ ಘೋಷಣೆಗಳನ್ನು ಕೂಗಿದರು ಎಂದು ಅಲ್ ಜಝೀರಾ ವಿವರಿಸಿದೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುತ್ತೇವೆ ಎಂಬ ಆಸ್ಟ್ರೇಲಿಯಾ ಪ್ರಧಾನಿ ಅಂಥೋನಿ ಅಲ್ಬನೀಸ್ ಅವರ ಹೇಳಿಕೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಡುವೆ ಆಸ್ಟ್ರೇಲಿಯಾದಲ್ಲಿ ಪ್ರತಿಭಟನೆಗಳು ಹೆಚ್ಚಾಗುತ್ತಿವೆ.

ಫ್ರಾನ್ಸ್, ಯುನೈಟೆಡ್ ಕಿಂಗ್‌ಡಂ ಮತ್ತು ಕೆನಡಾ ದೇಶಗಳು ದ್ವಿರಾಷ್ಟ್ರ ಸೂತ್ರವನ್ನು ಬೆಂಬಲಿಸಿದ್ದು, ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುವುದಾಗಿ ಘೋಷಿಸಿವೆ. ಇದಕ್ಕೆ ಆಸ್ಟ್ರೇಲಿಯಾದ ಅಲ್ಬನೀಸ್‌ ಅವರ ಲೇಬರ್ ಸರ್ಕಾರ ಧ್ವನಿಗೂಡಿಸಿದೆ. ಇಸ್ರೇಲ್ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಆಗಸ್ಟ್ 3ರಂದು ಪ್ಯಾಲೆಸ್ತೀನ್ ಪರ ಅಥವಾ ಗಾಝಾ ಜನತೆಯ ಪರ ಬೃಹತ್ ಪ್ರತಿಭಟನೆ ನಡೆದಿತ್ತು. ಲಕ್ಷಾಂತರ ಜನರು ಐತಿಹಾಸಿಕ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದ್ದರು. ಆ ಬಳಿಕ ಆಗಸ್ಟ್ 11ರಂದು ಪ್ರಧಾನಿ ಅಲ್ಬನೀಸ್ ಪ್ರತ್ಯೇಕ ಪ್ಯಾಲೆಸ್ತೀನ್ ರಾಷ್ಟ್ರದ ಬಗ್ಗೆ ಹೇಳಿಕೆ ನೀಡಿದ್ದಾರೆ.

ಯುದ್ಧ ನೀತಿಯನ್ನು ಉಲ್ಲಂಘಿಸಿದ ಕಾರಣಕ್ಕೆ ಜಾಗತಿಕವಾಗಿ ಖಂಡನೆಗೆ ಗುರಿಯಾಗಿರುವ ಇಸ್ರೇಲ್, ಗಾಝಾ ಮೇಲಿನ ತನ್ನ 22 ತಿಂಗಳ ಸುದೀರ್ಘ ದಾಳಿಯಲ್ಲಿ 62,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಹತ್ಯೆ ಮಾಡಿದೆ. ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಲ್ಲಿನ ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ವಿರುದ್ಧ ಯುದ್ಧ ಅಪರಾಧಗಳಿಗಾಗಿ ಬಂಧನ ವಾರಂಟ್ ಹೊರಡಿಸಿದೆ.

ಇಸ್ರೇಲ್ ತಕ್ಷಣವೇ ಗಾಜಾಕ್ಕೆ ವಿದೇಶಿ ಮಾಧ್ಯಮಗಳ ಪ್ರವೇಶಕ್ಕೆ ಅನುಮತಿಸಬೇಕೆಂದು 27 ದೇಶಗಳ ಕರೆ: ಹೇಳಿಕೆ ಬಿಡುಗಡೆ ಮಾಡಿದ ಮೀಡಿಯಾ ಫ್ರೀಡಮ್ ಕೋಯಲಿಶನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...