Homeಅಂತರಾಷ್ಟ್ರೀಯಆಸ್ಟ್ರೇಲಿಯಾದಾದ್ಯಂತ ಪ್ರಬಲಗೊಂಡ ಗಾಝಾ ಪರ ಹೋರಾಟ: ಭಾನುವಾರ 40 ನಗರಗಳಲ್ಲಿ ಬೃಹತ್ ಪ್ರತಿಭಟನೆ

ಆಸ್ಟ್ರೇಲಿಯಾದಾದ್ಯಂತ ಪ್ರಬಲಗೊಂಡ ಗಾಝಾ ಪರ ಹೋರಾಟ: ಭಾನುವಾರ 40 ನಗರಗಳಲ್ಲಿ ಬೃಹತ್ ಪ್ರತಿಭಟನೆ

- Advertisement -
- Advertisement -

ಸಿಡ್ನಿಯ ಹಾರ್ಬರ್ ಬ್ರಿಡ್ಜ್‌ನ ಐತಿಹಾಸಿಕ ರ‍್ಯಾಲಿಯ ಬಳಿಕ, ಆಸ್ಟ್ರೇಲಿಯಾದಾದ್ಯಂತ ಭಾನುವಾರ (ಆ.24) ಗಾಝಾ ಪರ ಬೃಹತ್ ಪ್ರತಿಭಟನೆಗಳು ನಡೆದಿವೆ.

ಗಾಝಾದಲ್ಲಿ ನರಮೇಧವನ್ನು ನಿಲ್ಲಿಸಬೇಕು, ಅಲ್ಲಿ ಕೃತಕ ಕ್ಷಾಮ ಸೃಷ್ಟಿಸಿರುವ ಇಸ್ರೇಲ್‌ಗೆ ಜಾಗತಿಕ ನಿರ್ಬಂಧ ಹೇರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುವುದಾಗಿ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಆಗಸ್ಟ್ 11ರಂದು ಘೋಷಿಸಿದ್ದಾರೆ. ಇದು ಆಸ್ಟ್ರೇಲಿಯಾ ಮತ್ತು ಇಸ್ರೇಲ್ ನಡುವಿನ ಸಂಬಂಧ ಹದೆಗೆಟ್ಟಿರುವುದನ್ನು ಸೂಚಿಸಿದೆ.

ಈ ಬೆಳವಣಿಗೆಯು ಆಸ್ಟ್ರೇಲಿಯಾದ ಗಾಝಾ ಪರ ಪ್ರತಿಭಟನೆಗೆ ಆಡಳಿತವೇ ಬೆಂಬಲ ನೀಡಿದಂತಾಗಿದೆ. ಪ್ರತಿಭಟನಾಕಾರರಿಗೂ ಯಾವುದೇ ಅಡತಡೆಗಳು ಎದುರಾಗುತ್ತಿಲ್ಲ ಎಂದು ವರದಿಗಳು ಹೇಳಿವೆ.

ಭಾನುವಾರ ಆಸ್ಟ್ರೇಲಿಯಾದಾದ್ಯಂತ 40ಕ್ಕೂ ಹೆಚ್ಚು ನಗರಗಳಲ್ಲಿ ಪ್ರತಿಭಟನೆಗಳು ನಡೆದಿವೆ ಎಂದು ‘ಪ್ಯಾಲೆಸ್ಟೈನ್ ಆಕ್ಷನ್ ಗ್ರೂಪ್’ ತಿಳಿಸಿದೆ. ವಿವಿಧ ರಾಜ್ಯಗಳ ರಾಜಧಾನಿಗಳಾದ ಸಿಡ್ನಿ, ಬ್ರಿಸ್ಬೇನ್ ಮತ್ತು ಮೆಲ್ಬೋರ್ನ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬ್ರಿಸ್ಬೇನ್‌ನಲ್ಲಿ ಸುಮಾರು 50,000 ಜನರು ಸೇರಿದಂತೆ ದೇಶದಾದ್ಯಂತ ಸುಮಾರು 350,000ಕ್ಕೂ ಹೆಚ್ಚು ಜನರು ಪ್ರತಿಭಟನಾ ರ‍್ಯಾಲಿಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಗ್ರೂಪ್ ಹೇಳಿದೆ.

ಆದರೆ, ಪೊಲೀಸರು ಬ್ರಿಸ್ಬೇನ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇವಲ 10,000 ಜನರು ಮಾತ್ರ ಭಾಗವಹಿಸಿದ್ದಾರೆಂದು ಅಂದಾಜಿಸಿದ್ದಾರೆ. ಸಿಡ್ನಿ ಮತ್ತು ಮೆಲ್ಬೋರ್ನ್‌ನಲ್ಲಿನ ಜನಸಂದಣಿಯ ಗಾತ್ರದ ಬಗ್ಗೆ ಪೊಲೀಸರು ಖಚಿತ ಮಾಹಿತಿ ನೀಡಿಲ್ಲ ಎಂದು ಅಲ್‌ ಜಝೀರಾ ವರದಿ ಮಾಡಿದೆ.

ಸಿಡ್ನಿಯ ಪ್ರತಿಭಟನೆಯ ಆಯೋಜಕ ಜೋಶ್ ಲೀಸ್ ಅವರು, “ಆಸ್ಟ್ರೇಲಿಯನ್ನರು ಗಾಝಾದಲ್ಲಿ ನರಮೇಧವನ್ನು ಕೊನೆಗೊಳಿಸಬೇಕು ಮತ್ತು ನಮ್ಮ ಸರ್ಕಾರ ಇಸ್ರೇಲ್‌ಗೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಲು ಬೀದಿಗೆ ಬಂದಿದ್ದಾರೆ” ಎಂದು ಹೇಳಿದ್ದಾರೆ. ಪ್ರತಿಭಟಾ ರ‍್ಯಾಲಿಗಳಲ್ಲಿ ಭಾಗವಹಿಸಿದವರು ಪ್ಯಾಲೆಸ್ತೀನ್ ಧ್ವಜಗಳನ್ನು ಹಿಡಿದು ‘ಫ್ರೀ ಫ್ರೀ ಪ್ಯಾಲೆಸ್ಟೈನ್’ ಎಂಬ ಘೋಷಣೆಗಳನ್ನು ಕೂಗಿದರು ಎಂದು ಅಲ್ ಜಝೀರಾ ವಿವರಿಸಿದೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುತ್ತೇವೆ ಎಂಬ ಆಸ್ಟ್ರೇಲಿಯಾ ಪ್ರಧಾನಿ ಅಂಥೋನಿ ಅಲ್ಬನೀಸ್ ಅವರ ಹೇಳಿಕೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಡುವೆ ಆಸ್ಟ್ರೇಲಿಯಾದಲ್ಲಿ ಪ್ರತಿಭಟನೆಗಳು ಹೆಚ್ಚಾಗುತ್ತಿವೆ.

ಫ್ರಾನ್ಸ್, ಯುನೈಟೆಡ್ ಕಿಂಗ್‌ಡಂ ಮತ್ತು ಕೆನಡಾ ದೇಶಗಳು ದ್ವಿರಾಷ್ಟ್ರ ಸೂತ್ರವನ್ನು ಬೆಂಬಲಿಸಿದ್ದು, ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುವುದಾಗಿ ಘೋಷಿಸಿವೆ. ಇದಕ್ಕೆ ಆಸ್ಟ್ರೇಲಿಯಾದ ಅಲ್ಬನೀಸ್‌ ಅವರ ಲೇಬರ್ ಸರ್ಕಾರ ಧ್ವನಿಗೂಡಿಸಿದೆ. ಇಸ್ರೇಲ್ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಆಗಸ್ಟ್ 3ರಂದು ಪ್ಯಾಲೆಸ್ತೀನ್ ಪರ ಅಥವಾ ಗಾಝಾ ಜನತೆಯ ಪರ ಬೃಹತ್ ಪ್ರತಿಭಟನೆ ನಡೆದಿತ್ತು. ಲಕ್ಷಾಂತರ ಜನರು ಐತಿಹಾಸಿಕ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದ್ದರು. ಆ ಬಳಿಕ ಆಗಸ್ಟ್ 11ರಂದು ಪ್ರಧಾನಿ ಅಲ್ಬನೀಸ್ ಪ್ರತ್ಯೇಕ ಪ್ಯಾಲೆಸ್ತೀನ್ ರಾಷ್ಟ್ರದ ಬಗ್ಗೆ ಹೇಳಿಕೆ ನೀಡಿದ್ದಾರೆ.

ಯುದ್ಧ ನೀತಿಯನ್ನು ಉಲ್ಲಂಘಿಸಿದ ಕಾರಣಕ್ಕೆ ಜಾಗತಿಕವಾಗಿ ಖಂಡನೆಗೆ ಗುರಿಯಾಗಿರುವ ಇಸ್ರೇಲ್, ಗಾಝಾ ಮೇಲಿನ ತನ್ನ 22 ತಿಂಗಳ ಸುದೀರ್ಘ ದಾಳಿಯಲ್ಲಿ 62,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಹತ್ಯೆ ಮಾಡಿದೆ. ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಲ್ಲಿನ ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ವಿರುದ್ಧ ಯುದ್ಧ ಅಪರಾಧಗಳಿಗಾಗಿ ಬಂಧನ ವಾರಂಟ್ ಹೊರಡಿಸಿದೆ.

ಇಸ್ರೇಲ್ ತಕ್ಷಣವೇ ಗಾಜಾಕ್ಕೆ ವಿದೇಶಿ ಮಾಧ್ಯಮಗಳ ಪ್ರವೇಶಕ್ಕೆ ಅನುಮತಿಸಬೇಕೆಂದು 27 ದೇಶಗಳ ಕರೆ: ಹೇಳಿಕೆ ಬಿಡುಗಡೆ ಮಾಡಿದ ಮೀಡಿಯಾ ಫ್ರೀಡಮ್ ಕೋಯಲಿಶನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...