Homeಮುಖಪುಟವಿಶೇಷ ಚೇತನರ 'ಅಪಹಾಸ್ಯ': ಸಮಯ್ ರೈನಾ ಸೇರಿದಂತೆ ಐವರಿಗೆ ಕ್ಷಮೆಯಾಚಿಸಲು ಸೂಚಿಸಿದ ಸುಪ್ರೀಂ ಕೋರ್ಟ್

ವಿಶೇಷ ಚೇತನರ ‘ಅಪಹಾಸ್ಯ’: ಸಮಯ್ ರೈನಾ ಸೇರಿದಂತೆ ಐವರಿಗೆ ಕ್ಷಮೆಯಾಚಿಸಲು ಸೂಚಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ವಿಶೇಷ ಚೇತನರನ್ನು ಅಪಹಾಸ್ಯ ಮಾಡಿದ್ದಕ್ಕಾಗಿ ಸಮಯ್ ರೈನಾ ಸೇರಿದಂತೆ ಐವರು ಹಾಸ್ಯ ಕಲಾವಿದರಿಗೆ ತಮ್ಮ ಯೂಟ್ಯೂಬ್ ಚಾನೆಲ್‌ಗಳಲ್ಲಿ ಮತ್ತು ಇತರ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಬೇಷರತ್ ಕ್ಷಮೆಯಾಚಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಆ.25) ಸೂಚಿಸಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು, ಸಮಯ್ ರೈನಾ, ವಿಪುನ್ ಗೋಯಲ್, ಬಲರಾಜ್ ಪರಮಜೀತ್ ಸಿಂಗ್ ಘಾಯ್, ಸೋನಾಲಿ ಥಕ್ಕರ್ ಅಲಿಯಾಸ್ ಸೋನಾಲಿ ಆದಿತ್ಯ ದೇಸಾಯಿ ಮತ್ತು ನಿಶಾಂತ್ ಜಗದೀಶ್ ತನ್ವರ್ ಅವರ ಹಾಸ್ಯಗಳ ವಿರುದ್ದ M/s ಕ್ಯೂರ್ ಫೌಂಡೇಶನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದೆ. ವಿಶೇಷ ಚೇತನರ ಅವಹೇಳನ ತಡೆಯಲು ಮಾರ್ಗಸೂಚಿಗಳನ್ನು ರೂಪಿಸುವಂತೆ ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದರು.

ಈ ಐವರು ವಿಶೇಷ ಚೇತನರು, ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (ಎಸ್‌ಎಂಎ) ಮತ್ತು ದೃಷ್ಟಿಹೀನತೆಯಿಂದ ಬಳಲುತ್ತಿರುವವರನ್ನು ಅಪಹಾಸ್ಯ ಮಾಡಿದ ಆರೋಪ ಹೊರಿಸಲಾಗಿದೆ.

ಮುಂದಿನ ವಿಚಾರಣೆಯ ದಿನದಂದು ಹಾಸ್ಯ ಕಲಾವಿದರು ಪಾವತಿಸಬೇಕಾದ ದಂಡವನ್ನು ನಿರ್ಧರಿಸುವುದಾಗಿ ಪೀಠ ಹೇಳಿದೆ. “ಪಶ್ಚಾತ್ತಾಪದ ಪ್ರಮಾಣವು ಅಪರಾಧದ ಮಟ್ಟಕ್ಕಿಂತ ಹೆಚ್ಚಾಗಿರಬೇಕು, ಅದು ತಪ್ಪನ್ನು ತೊಳೆದಂತೆ” ಎಂದು ನ್ಯಾಯಮೂರ್ತಿ ಕಾಂತ್ ಹೇಳಿದ್ದಾರೆ.

ತನ್ನ ಕಾರ್ಯಕ್ರಮದಲ್ಲಿ ಬೇಷರತ್ತಾದ ಕ್ಷಮೆಯಾಚನೆಯನ್ನು ಪ್ರಸಾರ ಮಾಡಲಾಗುವುದು ಎಂಬ ಪ್ರತಿಜ್ಞೆಗೆ ಒಳಪಟ್ಟು ದೈಹಿಕ ಹಾಜರಾತಿಯಿಂದ ವಿನಾಯಿತಿ ಪಡೆದ ಸೋನಾಲಿ ಥಕ್ಕರ್ ಅಲಿಯಾಸ್ ಸೋನಾಲಿ ಆದಿತ್ಯ ದೇಸಾಯಿ ಹೊರತುಪಡಿಸಿ, ಉಳಿದ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಭಾರತದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ಹಾಸ್ಯಕ್ಕೆ ಸರ್ಕಾರ ಮಾರ್ಗಸೂಚಿ ರೂಪಿಸುವ ಬಗ್ಗೆ ನ್ಯಾಯಾಲಯಕ್ಕೆ ಹೇಳಿಕೆ ಕೊಟ್ಟಿದ್ದು, ಆದರೆ ಸಂಪೂರ್ಣ ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದಿದ್ದಾರೆ.

“ಉತ್ತಮ ಪ್ರಜ್ಞೆ ಮೇಲುಗೈ ಸಾಧಿಸಿದೆ’ ಮತ್ತು ಹಾಸ್ಯ ಕಲಾವಿದರು ಕ್ಷಮೆಯಾಚಿಸಲಿದ್ದಾರೆ ಎಂದು ಹಿರಿಯ ವಕೀಲೆ ಅಪರತಿಜಾ ಸಿಂಗ್ ಪೀಠಕ್ಕೆ ತಿಳಿಸಿದ್ದಾರೆ. ಹಾಸ್ಯವು ಬೇರೆಯವರ ಗೌರವಕ್ಕೆ ಧಕ್ಕೆ ತರಬಾರದು ಎಂದು ಪೀಠ ಹೇಳಿದೆ.

ಐಟಿ ಕಾಯ್ದೆಯಡಿಯಲ್ಲಿ ಆರೋಪಿಗಳಿಗೆ ದಂಡ ವಿಧಿಸಲಾಗುವುದು ಎಂದು ನ್ಯಾಯಮೂರ್ತಿ ಕಾಂತ್ ಹೇಳಿದ್ದು, ಕಲಾವಿದರು ತಪ್ಪ ತಪ್ಪುಗಳನ್ನು ತಿದ್ದಿಕೊಂಡು ಮುಂದೆ ವಿಶೇಷ ಚೇತನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ತಮ್ಮ ವೇದಿಕೆಗಳನ್ನು ಬಳಸಬೇಕು ಎಂದು ಸಲಹೆ ನೀಡಿದ್ದಾರೆ.

ಇಂಡಿಯಾಸ್ ಗಾಟ್ ಲೇಟೆಂಟ್ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಒಟ್ಟುಗೂಡಿಸುವಂತೆ ಯೂಟ್ಯೂಬರ್‌ಗಳಾದ ರಣವೀರ್ ಅಲಹಾಬಾದಿಯಾ ಮತ್ತು ಆಶಿಶ್ ಚಂಚ್ಲಾನಿ ಸಲ್ಲಿಸಿದ ಎರಡು ಅರ್ಜಿಗಳು ಮತ್ತು ಹಾಸ್ಯ ಕಲಾವಿದರಾದ ಸಮಯ್ ರೈನಾ, ವಿಪುನ್ ಗೋಯಲ್, ಬಲರಾಜ್ ಪರಮಜೀತ್ ಸಿಂಗ್ ಘಾಯ್, ಸೋನಾಲಿ ಥಕ್ಕರ್ ಅಲಿಯಾಸ್ ಸೋನಾಲಿ ಆದಿತ್ಯ ದೇಸಾಯಿ ಮತ್ತು ನಿಶಾಂತ್ ಜಗದೀಶ್ ತನ್ವರ್ ಅವರು ವಿಶೇಷ ಚೇತನರ ವಿರುದ್ದ ಅಸಂವೇದನಾಶೀಲ ಹಾಸ್ಯ ಮಾಡರುವುದಾಗಿ ಆರೋಪಿಸಿ M/s ಕ್ಯೂರ್ ಫೌಂಡೇಶನ್ ಸಲ್ಲಿಸಿದ ಒಂದು ಅರ್ಜಿ ಸೇರಿದಂತೆ ಪೀಠವು 3 ಪ್ರಕರಣಗಳನ್ನು ವಿಚಾರಣೆ ನಡೆಸಿದೆ.

ದೇಶದೆಲ್ಲೆಡೆ ಸದ್ದು ಮಾಡಿದ ನೋಯ್ಡಾ ವರದಕ್ಷಿಣೆ ದುರಂತ: ಜೀವಂತ ಸುಟ್ಟು ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...