Homeಮುಖಪುಟ'ಇಂಡಿಯಾ' ಅಭ್ಯರ್ಥಿ ಸುದರ್ಶನ್ ರೆಡ್ಡಿ ವಿರುದ್ಧ ಅಮಿತ್ ಶಾ ಹೇಳಿಕೆ: ನಿವೃತ್ತ ನ್ಯಾಯಾಧೀಶರಿಂದ ಖಂಡನೆ

‘ಇಂಡಿಯಾ’ ಅಭ್ಯರ್ಥಿ ಸುದರ್ಶನ್ ರೆಡ್ಡಿ ವಿರುದ್ಧ ಅಮಿತ್ ಶಾ ಹೇಳಿಕೆ: ನಿವೃತ್ತ ನ್ಯಾಯಾಧೀಶರಿಂದ ಖಂಡನೆ

- Advertisement -
- Advertisement -

ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ‘ಇಂಡಿಯಾ ಒಕ್ಕೂಟ’ದ ಅಭ್ಯರ್ಥಿಯಾಗಿರುವ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರ ವಿರುದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಹೇಳಿಕೆಯನ್ನು ಸುಪ್ರೀಂ ಕೋರ್ಟ್‌ನ ಹಲವು ಮಾಜಿ ನ್ಯಾಯಮೂರ್ತಿಗಳು ಸೇರಿದಂತೆ 18 ನಿವೃತ್ತ ನ್ಯಾಯಾಧೀಶರ ಗುಂಪು ಖಂಡಿಸಿದೆ.

ಅಮಿತ್ ಶಾ ಅವರ ಹೇಳಿಕೆ ‘ದುರದೃಷ್ಟಕರ’ ಮತ್ತು ಸುಪ್ರೀಂ ಕೋರ್ಟ್ ತೀರ್ಪಿನ ‘ಪೂರ್ವಾಗ್ರಹ ಪೀಡಿತ ತಪ್ಪು ವ್ಯಾಖ್ಯಾನ’ ಎಂದು ಎಂದು ನ್ಯಾಯಾಧೀಶರ ಗುಂಪು ಹೇಳಿದೆ.

“2011ರ ಸಲ್ವಾ ಜುಡುಂ ತೀರ್ಪಿನ ಮೂಲಕ ನ್ಯಾಯಮೂರ್ತಿ ಸುದರ್ಶನ್‌ ರೆಡ್ಡಿ ಅವರು ‘ನಕ್ಸಲಿಸಂ’ ಅನ್ನು ಬೆಂಬಲಿಸಿದ್ದಾರೆ” ಎಂದು ಅಮಿತ್ ಶಾ ಆರೋಪಿಸಿದ್ದರು. “ನ್ಯಾಯಾಲಯವು ಜಾಗೃತ ಚಳವಳಿಯ ವಿರುದ್ಧ ತೀರ್ಪು ನೀಡದಿದ್ದರೆ 2020ರ ವೇಳೆಗೆ ಎಡಪಂಥೀಯ ಉಗ್ರವಾದ ಕೊನೆಗೊಳ್ಳುತ್ತಿತ್ತು” ಎಂದಿದ್ದರು.

ಕೇರಳದಲ್ಲಿ ಮಾತನಾಡಿದ್ದ ಅಮಿತ್ ಶಾ, “ನಕ್ಸಲ್ ವಿರೋಧಿ ಪ್ರಯತ್ನಗಳಿಗೆ ಅಡ್ಡಿಯಾಗುವ ಸಿದ್ಧಾಂತದಿಂದ ಸುದರ್ಶನ್‌ ರೆಡ್ಡಿ ಪ್ರೇರಿತರಾಗಿದ್ದಾರೆ” ಎಂದು ಆರೋಪಿಸಿದ್ದರು.

ನಿವೃತ್ತ ನ್ಯಾಯಾಧೀಶರ ಜಂಟಿ ಹೇಳಿಕೆಯಲ್ಲಿ, “ಸಲ್ವಾ ಜುಡುಂ ತೀರ್ಪು ಯಾವುದೇ ರೀತಿಯಲ್ಲೂ ನಕ್ಸಲಿಸಂ ಅನ್ನು ಬೆಂಬಲಿಸುವುದಿಲ್ಲ ಎಂದು ತಿಳಿಸಲಾಗಿದೆ. ಅಮಿತ್ ಶಾ ಅವರ ಹೇಳಿಕೆಗಳನ್ನು ‘ನ್ಯಾಯಾಂಗದ ತಾರ್ಕಿಕತೆಯ ವಿರೂಪಗೊಳಿಸುವ ಪ್ರಯತ್ನ” ಎಂದು ಖಂಡಿಸಲಾಗಿದೆ.

“ಹಿರಿಯ ರಾಜಕೀಯ ನಾಯಕರೊಬ್ಬರು ಸುಪ್ರೀಂ ಕೋರ್ಟ್ ತೀರ್ಪನ್ನು ತಪ್ಪಾಗಿ ನಿರೂಪಿಸುವುದರಿಂದ ನ್ಯಾಯಾಂಗದ ಸ್ವಾತಂತ್ರ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿಗಳಾದ ಕುರಿಯನ್ ಜೋಸೆಫ್, ಮದನ್ ಬಿ ಲೋಕೂರ್, ಜೆ ಚೆಲಮೇಶ್ವರ್, ಎ.ಕೆ ಪಟ್ನಾಯಕ್, ಅಭಯ್ ಓಕಾ, ವಿಕ್ರಮಜಿತ್ ಸೇನ್, ಗೋಪಾಲ ಗೌಡ, ಮಾಜಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ಹೈಕೋರ್ಟ್ ನ್ಯಾಯಾಧೀಶರಾದ ಎಸ್. ಮುರಳೀಧರ್, ಗೋವಿಂದ್ ಮಾಥುರ್, ಸಂಜೀವ್ ಬ್ಯಾನರ್ಜಿ ಮತ್ತು ಅಂಜನಾ ಪ್ರಕಾಶ್ ಜಂಟಿ ಹೇಳಿಕೆಗೆ ಸಹಿ ಹಾಕಿದ್ದಾರೆ.

ರಾಜಕೀಯ ಚರ್ಚೆಯಲ್ಲಿ, ವಿಶೇಷವಾಗಿ ಉನ್ನತ ಸಾಂವಿಧಾನಿಕ ಚುನಾವಣೆಗಳ ಸಮಯದಲ್ಲಿ ಸಂಯಮ ಮತ್ತು ನಾಗರಿಕತೆ ಕಾಪಾಡಿಕೊಳ್ಳಬೇಕು ಎಂದು ಹೇಳಿಕೆಯು ಒತ್ತಾಯಿಸಿದೆ. “ಸೈದ್ಧಾಂತಿಕ ಹೋರಾಟಗಳು ಪ್ರಚಾರಗಳ ಭಾಗವಾಗಿರಬಹುದು. ಆದರೆ, ಅವುಗಳನ್ನು ಘನತೆಯಿಂದ ನಡೆಸಬೇಕು. ಅಶ್ಲೀಲ ಪದಗಳಿಂದ ನಿಂದಿಸುವುದು ಸ್ಪರ್ಧಿಸುತ್ತಿರುವ ಹುದ್ದೆಗಳನ್ನು ಅವಮಾನಿಸುತ್ತದೆ” ಎಂದು ಹೇಳಿಕೆ ಅಭಿಪ್ರಾಯಪಟ್ಟಿದೆ.

ಅಮಿತ್ ಶಾ ಹೇಳಿಕೆಗೆ ಸಂಕ್ಷಿಪ್ತವಾಗಿ ಪ್ರತಿಕ್ರಿಯಿಸಿರುವ ನ್ಯಾಯಮೂರ್ತಿ ರೆಡ್ಡಿ ಅವರು, ರಾಜಕೀಯ ಹೇಳಿಕೆ ನೀಡಲು ನಿರಾಕರಿಸಿದ್ದಾರೆ. “ಸಲ್ವಾ ಜುಡುಂ ಕುರಿತ ತೀರ್ಪು ಸುಪ್ರೀಂ ಕೋರ್ಟ್‌ನದ್ದು, ನನ್ನೊಬ್ಬನದ್ದೇ ಅಲ್ಲ” ಎಂದು ಹೇಳಿದ್ದಾರೆ. ಅಮಿತ್ ಶಾ ಅವರು ಹೇಳಿಕೆ ನೀಡುವ ಮೊದಲು ಪೂರ್ಣ ತೀರ್ಪನ್ನು ಓದಿಲ್ಲ ಎಂದನಿಸುತ್ತದೆ” ಎಂದಿದ್ದಾರೆ.

ನ್ಯಾಯಮೂರ್ತಿಗಳಾದ ಸುದರ್ಶನ್‌ ರೆಡ್ಡಿ ಮತ್ತು ಎಸ್.ಎಸ್ ನಿಜ್ಜರ್ ಅವರು ನೀಡಿದ್ದ 2011ರ ಸುಪ್ರೀಂ ಕೋರ್ಟ್ ತೀರ್ಪು, ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಬುಡಕಟ್ಟು ಯುವಕರು ಮತ್ತು ಮಾಜಿ ನಕ್ಸಲರನ್ನು ವಿಶೇಷ ಪೊಲೀಸ್ ಅಧಿಕಾರಿಗಳಾಗಿ ಬಳಸುವುದು ಅಸಾಂವಿಧಾನಿಕ ಎಂದು ಘೋಷಿಸಿತ್ತು. ಛತ್ತೀಸ್‌ಗಢ ಸರ್ಕಾರದಿಂದ ಬೆಂಬಲಿತವಾದ ವಿವಾದಾತ್ಮಕ ನಕ್ಸಲ್ ವಿರೋಧಿ ಪಡೆಯಾದ ಸಲ್ವಾ ಜುಡುಂ ಅನ್ನು ವಿಸರ್ಜಿಸುವಂತೆ ಆದೇಶಿಸಿತ್ತು.

ನರಮೇಧಕ್ಕೆ ಪ್ರತಿಕ್ರಿಯೆ: ಜೆಎನ್‌ಯುನಲ್ಲಿ ಗಾಜಾ ಪರ ದನಿ, ಇಸ್ರೇಲ್ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...