Homeಮುಖಪುಟಬುಲ್ಡೋಝರ್ ಅ'ನ್ಯಾಯ'ದ ವಿರುದ್ದದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿ ಹಿಡಿದಿದೆ: ಸಿಜೆಐ ಗವಾಯಿ

ಬುಲ್ಡೋಝರ್ ಅ’ನ್ಯಾಯ’ದ ವಿರುದ್ದದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿ ಹಿಡಿದಿದೆ: ಸಿಜೆಐ ಗವಾಯಿ

- Advertisement -
- Advertisement -

ಕಾನೂನುಬದ್ಧ ಕಾರ್ಯವಿಧಾನವನ್ನು ಅನುಸರಿಸದೆ ಆರೋಪಿಗಳ ಮನೆಗಳನ್ನು ಕೆಡವುದರ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿಹಿಡಿದಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ. ಆರ್ ಗವಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

ಸಿಜೆಐ ಗವಾಯಿ ಅವರು ಆರೋಪಿಗಳ ಮನೆಗಳನ್ನು ಕೆಡವುವ ‘ಬುಲ್ದೋಝರ್ ಅನ್ಯಾಯ’ದ ವಿರುದ್ದ ಮಾರ್ಗಸೂಚಿಗಳನ್ನು ರೂಪಿಸಿ ಕಳೆದ ವರ್ಷ ಮಹತ್ವದ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಪೀಠದ ಭಾಗವಾಗಿದ್ದರು.

ಶನಿವಾರ (ಆ.23) ಪಣಜಿಯಲ್ಲಿ ಗೋವಾ ಹೈಕೋರ್ಟ್ ಬಾರ್ ಅಸೋಸಿಯೇಷನ್ ​​ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಸಿಜೆಐ, ಒಳ ಮೀಸಲಾತಿ ತೀರ್ಪು ನೀಡುವಾಗ ಕೆನೆಪದರವನ್ನು ಉಲ್ಲೇಖಿಸಿದ ಹಿಂದಿನ ಕಾರಣವನ್ನು ವಿವರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಭಾಷಣಕಾರರು ತಮ್ಮ ಐತಿಹಾಸಿಕ ತೀರ್ಪುಗಳನ್ನು ಉಲ್ಲೇಖಿಸಿದ ಬಗ್ಗೆ ಪ್ರತಿಕ್ರಿಯಿಸಿದ ಸಿಜೆಐ “ಕಾನೂನಿನ ಕಾರ್ಯವಿಧಾನಗಳನ್ನು ಅನುಸರಿಸದೆ ಮನೆಗಳನ್ನು ಕೆಡವುತ್ತಿದ್ದಾಗ ನಾಗರಿಕರ ಹಕ್ಕುಗಳನ್ನು ರಕ್ಷಿಸಲು ಸಂವಿಧಾನದ ರಕ್ಷಕನಾಗಿ ನಾವು ಏನಾದರೂ ಮಾಡಲು ಸಾಧ್ಯವಾಯಿತು ಎಂದು ನನಗೆ ನಿಜವಾಗಿಯೂ ಸಂತೋಷವಾಗಿದೆ” ಎಂದಿದ್ದಾರೆ.

ಕಾನೂನಿನಡಿಯಲ್ಲಿ ವಿಚಾರಣೆಗೆ ಒಳಗಾಗದ ಮತ್ತು ಕೆಲವು ಆರೋಪಗಳು ಹೊರಿಸಲ್ಪಟ್ಟ ಜನರ ಕಟ್ಟಡಗಳು ಅಥವಾ ಮನೆಗಳನ್ನು ಕಾನೂನಿನ ಸರಿಯಾದ ಕಾರ್ಯವಿಧಾನವನ್ನು ಅನುಸರಿಸದೆ ಕೆಡವಲಾಗುತ್ತಿತ್ತು ಎಂದು ಹೇಳಿದ್ದಾರೆ.

ಮನೆಗಳು ಕೇವಲ ಆರೋಪಿತ ವ್ಯಕ್ತಿಗೆ ಸೇರಿದ್ದಲ್ಲ. ಮನೆಗಳನ್ನು ಹಠಾತ್ ಕೆಡವುದರಿಂದ ಅದರಲ್ಲಿ ವಾಸಿಸುವ ಆರೋಪಿಯ ಕುಟುಂಬ ಸದಸ್ಯರೂ ತಮ್ಮದಲ್ಲದ ತಪ್ಪಿಗೆ ತೊಂದರೆ ಅನುಭವಿಸಬೇಕಾಗಿತ್ತು. ಒಬ್ಬ ವ್ಯಕ್ತಿ ಶಿಕ್ಷೆಗೊಳಗಾದರೂ, ಅವನು ಇನ್ನೂ ಕಾನೂನಿನ ಆಳ್ವಿಕೆಗೆ ಅರ್ಹನಾಗಿರುತ್ತಾನೆ ಎಂದು ಸಿಜೆಐ ತಿಳಿಸಿದ್ದಾರೆ.

“ದೇಶದಲ್ಲಿ ಕಾನೂನಿನ ನಿಯಮವು ಅತ್ಯುನ್ನತವಾಗಿದೆ. ನಾವು ಮಾರ್ಗಸೂಚಿಗಳನ್ನು ರೂಪಿಸಲು ಸಾಧ್ಯವಾಯಿತು ಎಂದು ನನಗೆ ಸಂತೋಷವಿದೆ. ಈ ಮೂಲಕ ಕಾರ್ಯಾಂಗ ನ್ಯಾಯಾಧೀಶರಾಗದಂತೆ ತಡೆದಿದ್ದೇವೆ” ಎಂದಿದ್ದಾರೆ.

ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗದ ಅಧಿಕಾರಗಳ ಪ್ರತ್ಯೇಕತೆಯನ್ನು ಭಾರತೀಯ ಸಂವಿಧಾನವು ಸ್ಪಷ್ಟವಾಗಿ ವಿವರಿಸಿದೆ ಎಂದ ಸಿಜೆಐ, ಕಾರ್ಯಾಂಗಕ್ಕೆ ನ್ಯಾಯಾಧೀಶರಾಗಲು ಅವಕಾಶ ನೀಡಿದರೆ, ನಾವು ಅಧಿಕಾರ ವಿಭಜನೆಯ ಪರಿಕಲ್ಪನೆಯನ್ನೇ ಹಾಳು ಮಾಡಿದಂತೆ ಎಂದು ಹೇಳಿದ್ದಾರೆ.

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಸಿಜೆಐ ಗವಾಯಿ, ತಮ್ಮದೇ ಸಮುದಾಯಕ್ಕೆ ಸೇರಿದ ಜನರಿಂದ ಈ ತೀರ್ಪಿಗಾಗಿ ವ್ಯಾಪಕ ಟೀಕೆಗೆ ಒಳಗಾಗಬೇಕಾಯಿತು ಎಂದಿದ್ದಾರೆ.

“ನಾನು ಅರ್ಥಮಾಡಿಕೊಂಡ ಕಾನೂನಿನ ಪ್ರಕಾರ ಮತ್ತು ನನ್ನ ಸ್ವಂತ ಆತ್ಮಸಾಕ್ಷಿಯ ಪ್ರಕಾರ ತೀರ್ಪು ಬರೆಯಬೇಕೇ ಹೊರತು, ಜನರ ಬೇಡಿಕೆಗಳು ಅಥವಾ ಆಸೆಯಂತಲ್ಲ ಎಂದು ನಾನು ಯಾವಾಗಲೂ ನಂಬಿದ್ದೇನೆ” ಎಂದು ತಿಳಿಸಿದ್ದಾರೆ.

“ಮೀಸಲಾತಿ ವರ್ಗದಿಂದ ಬಂದ ಮೊದಲ ತಲೆಮಾರಿನ ವ್ಯಕ್ತಿಯೊಬ್ಬರು ಐಎಎಸ್ ಅಧಿಕಾರಿಯಾದಾಗ, ಅದರ ಪ್ರಯೋಜನವು ನಂತರದ ಪೀಳಿಗೆಗೆ ವಿಸ್ತರಿಸುತ್ತದೆ ಮತ್ತು ಎರಡನೇ ಮತ್ತು ಮೂರನೇ ತಲೆಮಾರಿನವರೂ ಕೂಡ ಅದೇ ವರ್ಗದ ಮೂಲಕ ಐಎಎಸ್‌ಗೆ ಪ್ರವೇಶಿಸುತ್ತಾರೆ” ಎಂದು ಹೇಳಿದ್ದಾರೆ.

“ಮುಂಬೈ ಅಥವಾ ದೆಹಲಿಯ ಶಾಲೆಯಲ್ಲಿ ಉತ್ತಮ ಶಿಕ್ಷಣ ಪಡೆಯುವ ವ್ಯಕ್ತಿಯ ಮಗ ಅಥವಾ ಮಗಳನ್ನು ಜಿಲ್ಲಾ ಪರಿಷತ್ ಅಥವಾ ಗ್ರಾಮ ಪಂಚಾಯತ್ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಹಳ್ಳಿಯಲ್ಲಿ ಮೇಸ್ತ್ರಿ ಅಥವಾ ಕೃಷಿ ಕಾರ್ಮಿಕರ ಮಗ ಅಥವಾ ಮಗಳಿಗೆ ಸಮನಾಗಿ ಪರಿಗಣಿಸಬಹುದೇ ಎಂಬುದು ನಾನು ನನ್ನನ್ನು ಕೇಳಿಕೊಂಡ ಪ್ರಶ್ನೆ” ಎಂದಿದ್ದಾರೆ.

“ಸಂವಿಧಾನದ 14ನೇ ವಿಧಿಯು ಅಸಮಾನರ ನಡುವೆ ಸಮಾನತೆಯನ್ನು ಅರ್ಥೈಸುವುದಿಲ್ಲ. ಅಸಮಾನರನ್ನು ಅಸಮಾನವಾಗಿ ನಡೆಸಿಕೊಳ್ಳುವುದರಿಂದ ಅವರು ಸಮಾನರಾಗುತ್ತಾರೆ ಎಂದು ಪರಿಗಣಿಸಲಾಗಿದೆ. ಆದ್ದರಿಂದ, ಹಳ್ಳಿಯಲ್ಲಿ ವಾಸಿಸುವ ಕಾರ್ಮಿಕನ ಮಗುವನ್ನು ಮತ್ತು ಮುಂಬೈನಲ್ಲಿ ವಾಸಿಸುವ ಮುಖ್ಯ ಕಾರ್ಯದರ್ಶಿಯ ಮಗುವನ್ನು ಅತ್ಯುತ್ತಮ ಶಾಲೆಯಲ್ಲಿ ಓದಿಸುವುದು ಸಮಾನತೆಯ ಅತ್ಯುತ್ತಮ ಪರಿಕಲ್ಪನೆ ಎಂಬುದು ನನ್ನ ಅಭಿಪ್ರಾಯ” ಎಂದು ಸಿಜೆಐ ಹೇಳಿದ್ದಾರೆ.

ಪ್ರೊ. ಅಲಿ ಖಾನ್ ವಿರುದ್ಧದ ಆರೋಪಪಟ್ಟಿ ಪರಿಗಣಿಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...