Homeಮುಖಪುಟಬುಲ್ಡೋಝರ್ ಅ'ನ್ಯಾಯ'ದ ವಿರುದ್ದದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿ ಹಿಡಿದಿದೆ: ಸಿಜೆಐ ಗವಾಯಿ

ಬುಲ್ಡೋಝರ್ ಅ’ನ್ಯಾಯ’ದ ವಿರುದ್ದದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿ ಹಿಡಿದಿದೆ: ಸಿಜೆಐ ಗವಾಯಿ

- Advertisement -
- Advertisement -

ಕಾನೂನುಬದ್ಧ ಕಾರ್ಯವಿಧಾನವನ್ನು ಅನುಸರಿಸದೆ ಆರೋಪಿಗಳ ಮನೆಗಳನ್ನು ಕೆಡವುದರ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿಹಿಡಿದಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ. ಆರ್ ಗವಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

ಸಿಜೆಐ ಗವಾಯಿ ಅವರು ಆರೋಪಿಗಳ ಮನೆಗಳನ್ನು ಕೆಡವುವ ‘ಬುಲ್ದೋಝರ್ ಅನ್ಯಾಯ’ದ ವಿರುದ್ದ ಮಾರ್ಗಸೂಚಿಗಳನ್ನು ರೂಪಿಸಿ ಕಳೆದ ವರ್ಷ ಮಹತ್ವದ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಪೀಠದ ಭಾಗವಾಗಿದ್ದರು.

ಶನಿವಾರ (ಆ.23) ಪಣಜಿಯಲ್ಲಿ ಗೋವಾ ಹೈಕೋರ್ಟ್ ಬಾರ್ ಅಸೋಸಿಯೇಷನ್ ​​ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಸಿಜೆಐ, ಒಳ ಮೀಸಲಾತಿ ತೀರ್ಪು ನೀಡುವಾಗ ಕೆನೆಪದರವನ್ನು ಉಲ್ಲೇಖಿಸಿದ ಹಿಂದಿನ ಕಾರಣವನ್ನು ವಿವರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಭಾಷಣಕಾರರು ತಮ್ಮ ಐತಿಹಾಸಿಕ ತೀರ್ಪುಗಳನ್ನು ಉಲ್ಲೇಖಿಸಿದ ಬಗ್ಗೆ ಪ್ರತಿಕ್ರಿಯಿಸಿದ ಸಿಜೆಐ “ಕಾನೂನಿನ ಕಾರ್ಯವಿಧಾನಗಳನ್ನು ಅನುಸರಿಸದೆ ಮನೆಗಳನ್ನು ಕೆಡವುತ್ತಿದ್ದಾಗ ನಾಗರಿಕರ ಹಕ್ಕುಗಳನ್ನು ರಕ್ಷಿಸಲು ಸಂವಿಧಾನದ ರಕ್ಷಕನಾಗಿ ನಾವು ಏನಾದರೂ ಮಾಡಲು ಸಾಧ್ಯವಾಯಿತು ಎಂದು ನನಗೆ ನಿಜವಾಗಿಯೂ ಸಂತೋಷವಾಗಿದೆ” ಎಂದಿದ್ದಾರೆ.

ಕಾನೂನಿನಡಿಯಲ್ಲಿ ವಿಚಾರಣೆಗೆ ಒಳಗಾಗದ ಮತ್ತು ಕೆಲವು ಆರೋಪಗಳು ಹೊರಿಸಲ್ಪಟ್ಟ ಜನರ ಕಟ್ಟಡಗಳು ಅಥವಾ ಮನೆಗಳನ್ನು ಕಾನೂನಿನ ಸರಿಯಾದ ಕಾರ್ಯವಿಧಾನವನ್ನು ಅನುಸರಿಸದೆ ಕೆಡವಲಾಗುತ್ತಿತ್ತು ಎಂದು ಹೇಳಿದ್ದಾರೆ.

ಮನೆಗಳು ಕೇವಲ ಆರೋಪಿತ ವ್ಯಕ್ತಿಗೆ ಸೇರಿದ್ದಲ್ಲ. ಮನೆಗಳನ್ನು ಹಠಾತ್ ಕೆಡವುದರಿಂದ ಅದರಲ್ಲಿ ವಾಸಿಸುವ ಆರೋಪಿಯ ಕುಟುಂಬ ಸದಸ್ಯರೂ ತಮ್ಮದಲ್ಲದ ತಪ್ಪಿಗೆ ತೊಂದರೆ ಅನುಭವಿಸಬೇಕಾಗಿತ್ತು. ಒಬ್ಬ ವ್ಯಕ್ತಿ ಶಿಕ್ಷೆಗೊಳಗಾದರೂ, ಅವನು ಇನ್ನೂ ಕಾನೂನಿನ ಆಳ್ವಿಕೆಗೆ ಅರ್ಹನಾಗಿರುತ್ತಾನೆ ಎಂದು ಸಿಜೆಐ ತಿಳಿಸಿದ್ದಾರೆ.

“ದೇಶದಲ್ಲಿ ಕಾನೂನಿನ ನಿಯಮವು ಅತ್ಯುನ್ನತವಾಗಿದೆ. ನಾವು ಮಾರ್ಗಸೂಚಿಗಳನ್ನು ರೂಪಿಸಲು ಸಾಧ್ಯವಾಯಿತು ಎಂದು ನನಗೆ ಸಂತೋಷವಿದೆ. ಈ ಮೂಲಕ ಕಾರ್ಯಾಂಗ ನ್ಯಾಯಾಧೀಶರಾಗದಂತೆ ತಡೆದಿದ್ದೇವೆ” ಎಂದಿದ್ದಾರೆ.

ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗದ ಅಧಿಕಾರಗಳ ಪ್ರತ್ಯೇಕತೆಯನ್ನು ಭಾರತೀಯ ಸಂವಿಧಾನವು ಸ್ಪಷ್ಟವಾಗಿ ವಿವರಿಸಿದೆ ಎಂದ ಸಿಜೆಐ, ಕಾರ್ಯಾಂಗಕ್ಕೆ ನ್ಯಾಯಾಧೀಶರಾಗಲು ಅವಕಾಶ ನೀಡಿದರೆ, ನಾವು ಅಧಿಕಾರ ವಿಭಜನೆಯ ಪರಿಕಲ್ಪನೆಯನ್ನೇ ಹಾಳು ಮಾಡಿದಂತೆ ಎಂದು ಹೇಳಿದ್ದಾರೆ.

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಸಿಜೆಐ ಗವಾಯಿ, ತಮ್ಮದೇ ಸಮುದಾಯಕ್ಕೆ ಸೇರಿದ ಜನರಿಂದ ಈ ತೀರ್ಪಿಗಾಗಿ ವ್ಯಾಪಕ ಟೀಕೆಗೆ ಒಳಗಾಗಬೇಕಾಯಿತು ಎಂದಿದ್ದಾರೆ.

“ನಾನು ಅರ್ಥಮಾಡಿಕೊಂಡ ಕಾನೂನಿನ ಪ್ರಕಾರ ಮತ್ತು ನನ್ನ ಸ್ವಂತ ಆತ್ಮಸಾಕ್ಷಿಯ ಪ್ರಕಾರ ತೀರ್ಪು ಬರೆಯಬೇಕೇ ಹೊರತು, ಜನರ ಬೇಡಿಕೆಗಳು ಅಥವಾ ಆಸೆಯಂತಲ್ಲ ಎಂದು ನಾನು ಯಾವಾಗಲೂ ನಂಬಿದ್ದೇನೆ” ಎಂದು ತಿಳಿಸಿದ್ದಾರೆ.

“ಮೀಸಲಾತಿ ವರ್ಗದಿಂದ ಬಂದ ಮೊದಲ ತಲೆಮಾರಿನ ವ್ಯಕ್ತಿಯೊಬ್ಬರು ಐಎಎಸ್ ಅಧಿಕಾರಿಯಾದಾಗ, ಅದರ ಪ್ರಯೋಜನವು ನಂತರದ ಪೀಳಿಗೆಗೆ ವಿಸ್ತರಿಸುತ್ತದೆ ಮತ್ತು ಎರಡನೇ ಮತ್ತು ಮೂರನೇ ತಲೆಮಾರಿನವರೂ ಕೂಡ ಅದೇ ವರ್ಗದ ಮೂಲಕ ಐಎಎಸ್‌ಗೆ ಪ್ರವೇಶಿಸುತ್ತಾರೆ” ಎಂದು ಹೇಳಿದ್ದಾರೆ.

“ಮುಂಬೈ ಅಥವಾ ದೆಹಲಿಯ ಶಾಲೆಯಲ್ಲಿ ಉತ್ತಮ ಶಿಕ್ಷಣ ಪಡೆಯುವ ವ್ಯಕ್ತಿಯ ಮಗ ಅಥವಾ ಮಗಳನ್ನು ಜಿಲ್ಲಾ ಪರಿಷತ್ ಅಥವಾ ಗ್ರಾಮ ಪಂಚಾಯತ್ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಹಳ್ಳಿಯಲ್ಲಿ ಮೇಸ್ತ್ರಿ ಅಥವಾ ಕೃಷಿ ಕಾರ್ಮಿಕರ ಮಗ ಅಥವಾ ಮಗಳಿಗೆ ಸಮನಾಗಿ ಪರಿಗಣಿಸಬಹುದೇ ಎಂಬುದು ನಾನು ನನ್ನನ್ನು ಕೇಳಿಕೊಂಡ ಪ್ರಶ್ನೆ” ಎಂದಿದ್ದಾರೆ.

“ಸಂವಿಧಾನದ 14ನೇ ವಿಧಿಯು ಅಸಮಾನರ ನಡುವೆ ಸಮಾನತೆಯನ್ನು ಅರ್ಥೈಸುವುದಿಲ್ಲ. ಅಸಮಾನರನ್ನು ಅಸಮಾನವಾಗಿ ನಡೆಸಿಕೊಳ್ಳುವುದರಿಂದ ಅವರು ಸಮಾನರಾಗುತ್ತಾರೆ ಎಂದು ಪರಿಗಣಿಸಲಾಗಿದೆ. ಆದ್ದರಿಂದ, ಹಳ್ಳಿಯಲ್ಲಿ ವಾಸಿಸುವ ಕಾರ್ಮಿಕನ ಮಗುವನ್ನು ಮತ್ತು ಮುಂಬೈನಲ್ಲಿ ವಾಸಿಸುವ ಮುಖ್ಯ ಕಾರ್ಯದರ್ಶಿಯ ಮಗುವನ್ನು ಅತ್ಯುತ್ತಮ ಶಾಲೆಯಲ್ಲಿ ಓದಿಸುವುದು ಸಮಾನತೆಯ ಅತ್ಯುತ್ತಮ ಪರಿಕಲ್ಪನೆ ಎಂಬುದು ನನ್ನ ಅಭಿಪ್ರಾಯ” ಎಂದು ಸಿಜೆಐ ಹೇಳಿದ್ದಾರೆ.

ಪ್ರೊ. ಅಲಿ ಖಾನ್ ವಿರುದ್ಧದ ಆರೋಪಪಟ್ಟಿ ಪರಿಗಣಿಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...