Homeಮುಖಪುಟನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ಸಾರ್ವಜನಿಕ ಹೇಳಿಕೆಗಳ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ಸಾರ್ವಜನಿಕ ಹೇಳಿಕೆಗಳ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ನವದೆಹಲಿ: ಯೆಮನ್‌ನಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕ ಹೇಳಿಕೆಗಳು ಮತ್ತು ಮಾಧ್ಯಮ ವರದಿಗಳನ್ನು ನಿರ್ಬಂಧಿಸುವಂತೆ ಕೋರಿ ಧರ್ಮಪ್ರಚಾರಕ ಡಾ. ಕೆ.ಎ. ಪಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆಯ ವೇಳೆ, ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ಕೇಂದ್ರ ಸರ್ಕಾರವು ಈ ಪ್ರಕರಣದ ಕುರಿತು ನಿಯಮಿತವಾಗಿ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದು, ನಿಮಿಷಾ ಪ್ರಿಯಾ ಅವರ ಶಿಕ್ಷೆಯ ಅಂತಿಮ ಇತ್ಯರ್ಥವಾಗುವವರೆಗೆ ಮಾಧ್ಯಮ ವರದಿಗಳ ಬಗ್ಗೆ ಎಚ್ಚರಿಕೆ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ, ನಿಮಿಷಾ ಪ್ರಿಯಾಳನ್ನು ರಕ್ಷಿಸಲು ರಚನೆಯಾದ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ (ಮಾಜಿ ನ್ಯಾಯಾಧೀಶರು, ಸಂಸದರು, ಶಾಸಕರು ಇತ್ಯಾದಿಗಳನ್ನು ಒಳಗೊಂಡಿದೆ) ಕೂಡ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದರಿಂದ ದೂರವಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿತು. ಈ ಹಿನ್ನೆಲೆಯಲ್ಲಿ, ಡಾ. ಪಾಲ್ ಅವರ ಅರ್ಜಿಯನ್ನು ವಜಾ ಮಾಡಲಾಯಿತು.

ರಕ್ತದ ಹಣದ ಕುರಿತ ವಿವಾದ

ಡಾ. ಪಾಲ್ ಅವರು, ಪ್ರಿಯಾಳನ್ನು ಬಿಡುಗಡೆ ಮಾಡಲು ಸರ್ಕಾರಕ್ಕೆ ಸಹಾಯ ಮಾಡುತ್ತಿದ್ದು, ಸಂತ್ರಸ್ತನ ಕುಟುಂಬದೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ಸಂತ್ರಸ್ತನ ಕುಟುಂಬವು ಮೂರು ಷರತ್ತುಗಳಿಗೆ ಒಳಪಟ್ಟು ಪ್ರಿಯಾಳನ್ನು ಕ್ಷಮಿಸಲು ಸಿದ್ಧವಾಗಿದೆ. ಇದರಲ್ಲಿ ಎರಡು ಷರತ್ತುಗಳನ್ನು ಅವರು ಈಗಾಗಲೇ ಪೂರೈಸಿದ್ದಾರೆ ಎಂದು ಹೇಳಿಕೊಂಡರು. ರಕ್ತದ ಹಣ ಸಂಗ್ರಹಿಸಿ ಅವರಿಗೆ ಪಾವತಿಸಲಾಗಿದೆ ಎಂಬ ಮಾಧ್ಯಮ ವರದಿಗಳಿಂದ ಸಂತ್ರಸ್ತನ ಕುಟುಂಬ ಅಸಮಾಧಾನಗೊಂಡಿದೆ ಎಂದೂ ಅವರು ಸ್ಪಷ್ಟಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ ಪರ ವಕೀಲ ರಾಗೆಂತ್ ಬಸಂತ್, ಸಂತ್ರಸ್ತನ ಕುಟುಂಬವು ಪ್ರಿಯಾಳನ್ನು ಕ್ಷಮಿಸುವುದು ಮೊದಲ ಹಂತ. ಅದರ ನಂತರವಷ್ಟೇ ರಕ್ತದ ಹಣದ ಪ್ರಶ್ನೆ ಬರುತ್ತದೆ ಎಂದು ವಾದಿಸಿದರು.

ಪಕ್ಷಗಳ ವಾದಗಳನ್ನು ಆಲಿಸಿದ ಪೀಠವು, ಯೆಮನ್ ಮೇಲೆ ನಮಗೆ ಅಧಿಕಾರ ಇಲ್ಲ. ಹಾಗಿದ್ದ ಮೇಲೆ ಈ ಅರ್ಜಿಯನ್ನು ನಾವು ಏಕೆ ಪರಿಗಣಿಸಬೇಕು ಎಂದು ಪ್ರಶ್ನಿಸಿತು. ಕೇಂದ್ರದ ಭರವಸೆಯ ಹಿನ್ನೆಲೆಯಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವ ಆದೇಶ ನೀಡಲು ನ್ಯಾಯಾಲಯ ನಿರಾಕರಿಸಿತು, ಮತ್ತು ಅಂತಿಮವಾಗಿ ಅರ್ಜಿಯನ್ನು ವಜಾಗೊಳಿಸಲಾಯಿತು.

ಪ್ರಕರಣದ ಹಿನ್ನೆಲೆ

ಕೇರಳ ಮೂಲದ 36 ವರ್ಷದ ನರ್ಸ್ ನಿಮಿಷಾ ಪ್ರಿಯಾ, ಯೆಮನ್ ಪ್ರಜೆ ತಲಾಲ್ ಅಬ್ಡೋ ಮಹ್ದಿ ಹತ್ಯೆ ಪ್ರಕರಣದಲ್ಲಿ 2017 ರಿಂದ ಮರಣ ದಂಡನೆ ಎದುರಿಸುತ್ತಿದ್ದಾರೆ. ತನ್ನ ಪಾಸ್‌ಪೋರ್ಟ್ ಪಡೆಯಲು ತಲಾಲ್‌ನಿಗೆ ಕೆಟಮೈನ್‌ನಿಂದ ನಿದ್ರೆ ಮಾಡಲು ಪ್ರಯತ್ನಿಸಿದ್ದರು. ತಲಾಲ್ ಆಕೆಯ ಪಾಸ್‌ಪೋರ್ಟ್ ವಶಪಡಿಸಿಕೊಂಡಿದ್ದಲ್ಲದೆ, ಆಕೆಯೇ ತನ್ನ ಪತ್ನಿ ಎಂದು ನಕಲಿ ದಾಖಲೆ ಸೃಷ್ಟಿಸಿದ್ದ ಎಂದು ಆರೋಪಿಸಲಾಗಿದೆ. ಮಿತಿ ಮೀರಿದ ನಿದ್ರಾಜನಕದ ಡೋಸ್‌ನಿಂದ ತಲಾಲ್ ಸಾವನ್ನಪ್ಪಿದ್ದಾನೆ.

2018ರಲ್ಲಿ ಆಕೆಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಯಿತು, 2020ರಲ್ಲಿ ಪುನರ್ ವಿಚಾರಣೆ ನಡೆಸಿದರೂ ಅದೇ ಶಿಕ್ಷೆ ದೃಢವಾಯಿತು, ಮತ್ತು 2023ರಲ್ಲಿ ಯೆಮನ್‌ನ ಸುಪ್ರೀಂ ಜುಡಿಶಿಯಲ್ ಕೌನ್ಸಿಲ್‌ನಲ್ಲಿ ಮೇಲ್ಮನವಿ ತಿರಸ್ಕೃತಗೊಂಡಿತು. ನಂತರ ಯೆಮನ್ ಅಧ್ಯಕ್ಷರು ಮರಣ ದಂಡನೆಯನ್ನು ಅನುಮೋದಿಸಿದರು.

ಶರಿಯತ್ ಕಾನೂನಿನ ಪ್ರಕಾರ, ರಕ್ತದ ಹಣಕ್ಕೆ ಪ್ರತಿಯಾಗಿ ಸಂತ್ರಸ್ತನ ಕುಟುಂಬವು ಅಪರಾಧಿಯನ್ನು ಕ್ಷಮಿಸಿದರೆ ಮರಣ ದಂಡನೆಯನ್ನು ರದ್ದುಗೊಳಿಸಬಹುದು. ನಿಮಿಷಾ ಪ್ರಿಯಾ ಅವರ ಸಂಬಂಧಿಕರು ಮತ್ತು ಬೆಂಬಲಿಗರು ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ ಅನ್ನು ರಚಿಸಿದ್ದು, ರಕ್ತದ ಹಣ ಸಂಗ್ರಹಿಸಿ ಕ್ಷಮೆಗಾಗಿ ಪ್ರಯತ್ನಿಸುತ್ತಿದ್ದಾರೆ.

ಜುಲೈ 18ರಂದು, ಸುಪ್ರೀಂ ಕೋರ್ಟ್ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ಗೆ ಯೆಮನ್‌ಗೆ ತೆರಳಿ ತಲಾಲ್‌ನ ಕುಟುಂಬವನ್ನು ಭೇಟಿಯಾಗಲು ಸರ್ಕಾರದ ಅನುಮತಿ ಪಡೆಯಲು ಅನುಮತಿಸಿತು. ಇದರಲ್ಲಿ ಕೇರಳದ ಸುನ್ನಿ ಇಸ್ಲಾಮಿಕ್ ನಾಯಕ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಪ್ರತಿನಿಧಿಯೂ ಸೇರಿದ್ದಾರೆ. ಮುಸ್ಲಿಯಾರ್ ಅವರ ಹಿಂದಿನ ಮಧ್ಯಸ್ಥಿಕೆಯಿಂದಾಗಿ ಪ್ರಿಯಾಳ ಮರಣದಂಡನೆ ಜುಲೈ 16ರಿಂದ ಮುಂದೂಡಲ್ಪಟ್ಟಿತ್ತು ಎಂದು ಸಂಸ್ಥೆಯು ಹೇಳಿಕೊಂಡಿದೆ.

ಪ್ರಿಯಾಳ ಮರಣದಂಡನೆಯ ಒಂದು ದಿನ ಮುಂಚಿತವಾಗಿ, ಖಾಸಗಿ ಮಧ್ಯಸ್ಥಿಕೆಗಳಿಂದಾಗಿ ಶಿಕ್ಷೆಯನ್ನು ಮುಂದೂಡಲಾಗಿದೆ ಎಂಬ ವರದಿಗಳು ಬಂದವು. ಆದರೆ, ಸಂತ್ರಸ್ತ ತಲಾಲ್ ಅಬ್ಡೋ ಮಹ್ದಿ ಅವರ ಕುಟುಂಬ, ಪ್ರಿಯಾಳನ್ನು ಕ್ಷಮಿಸುವುದಿಲ್ಲ ಎಂದು ಹೇಳಿಕೆ ನೀಡಿ, ಈ ತಾತ್ಕಾಲಿಕ ನಿರಾಳತೆ ಹೆಚ್ಚು ಕಾಲ ಇರಲಿಲ್ಲ.

ಪ್ರಕರಣದ ಶೀರ್ಷಿಕೆ: ಡಾ. ಕೆ. ಎ. ಪಾಲ್ ಅಲಿಯಾಸ್ ಕಿಲಾರಿ ಆನಂದ್ ಪಾಲ್ v. ಯೂನಿಯನ್ ಆಫ್ ಇಂಡಿಯಾ, ಡಬ್ಲ್ಯೂ.ಪಿ.(ಸಿ) ನಂ. 803/2025.

ತ್ರಿಪುರಾ ಬುಡಕಟ್ಟು ಪ್ರದೇಶಗಳಲ್ಲಿ ಗ್ರಾಮ ಸಮಿತಿಗಳ ಚುನಾವಣೆ ವಿಳಂಬ; ಸುಪ್ರೀಂನಿಂದ ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...