Homeಮುಖಪುಟಬಿಜೆಪಿ ನಾಯಕ ಅಣ್ಣಾಮಲೈಯಿಂದ ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ ತಮಿಳುನಾಡು ಸಚಿವರ ಮಗ

ಬಿಜೆಪಿ ನಾಯಕ ಅಣ್ಣಾಮಲೈಯಿಂದ ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ ತಮಿಳುನಾಡು ಸಚಿವರ ಮಗ

- Advertisement -
- Advertisement -

ತಮಿಳುನಾಡಿನ ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಅವರ ಮಗ ಸೂರ್ಯ ರಾಜ ಬಾಲು ಅವರು, 51ನೇ ರಾಜ್ಯ ಶೂಟಿಂಗ್ ಕ್ರೀಡಾಕೂಟದಲ್ಲಿ ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರಿಂದ ಕುತ್ತಿಗೆಗೆ ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ್ದು, ಪದಕವನ್ನು ಕೈಯಲ್ಲಿ ಸ್ವೀಕರಿಸಿದ್ದಾರೆ.

ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಣ್ಣಾಮಲೈ ವಿಜೇತರ ಕತ್ತಿಗೆ ಪದಕ ಹಾಕುತ್ತಿದ್ದರು. ಆದರೆ, ಸೂರ್ಯ ಅವರು ಕತ್ತಿಗೆ ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ್ದಾರೆ. ಈ ಕುರಿತ ವಿಡಿಯೋ ವೈರಲ್ ಆಗಿದೆ.

ಎರಡು ವಾರಗಳ ಹಿಂದೆ ಇದೇ ರೀತಿಯ ಘಟನೆ ತಿರುನಲ್ವೇಲಿಯಲ್ಲಿ ನಡೆದಿತ್ತು. ಅಲ್ಲಿನ ಮನೋನ್ಮಣಿಯಂ ಸುಂದರನಾರ್ ವಿಶ್ವವಿದ್ಯಾಲಯದ 32ನೇ ಘಟಿಕೋತ್ಸವದಲ್ಲಿ ಪಿಎಚ್‌ಡಿ ವಿದ್ಯಾರ್ಥಿನಿ ಜೀನ್ ಜೋಸೆಫ್ ಅವರು ರಾಜ್ಯಪಾಲ ಆರ್.ಎನ್. ರವಿ ಅವರಿಂದ ಪ್ರಮಾಣಪತ್ರ ಸ್ವೀಕರಿಸಲು ನಿರಾಕರಿಸಿದ್ದರು. ಬದಲಾಗಿ ವಿವಿಯ ಉಪಕುಲಪತಿಯಿಂದ ಪ್ರಮಾಣಪತ್ರ ಪಡೆದಿದ್ದರು.

ಈ ಘಟನೆ ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಡಿಎಂಕೆ ನಡುವೆ ರಾಜಕೀಯ ಕಿತ್ತಾಟಕ್ಕೆ ಕಾರಣವಾಗಿತ್ತು.

ಜೀನ್ ಜೋಸೆಫ್ ಅವರು ಡಿಎಂಕೆಯ ನಾಗರಕೋಯಿಲ್‌ ವಿಭಾಗದ ಉಪ ಕಾರ್ಯದರ್ಶಿ ಎಂ. ರಾಜನ್ ಅವರ ಪತ್ನಿಯಾಗಿದ್ದು, ರಾಜ್ಯಪಾಲ ತಮಿಳು ವಿರೋಧಿಯಾದ ಕಾರಣ ಪದವಿ ಸ್ವೀಕರಿಸಲು ನಿರಾಕರಿಸಿದೆ ಎಂದಿದ್ದರು.

ಮಾಧ್ಯಮಗಳೊಂದಿಗೆ ಮಾತನಾಡಿದ್ದ ಜೀನ್ ಜೋಸೆಫ್, “ನನ್ನ ಪದವಿ ಯಾರಿಂದ ಪಡೆದುಕೊಳ್ಳಬೇಕು ಎನ್ನುವುದು ನನ್ನ ಆಯ್ಕೆ. ರಾಜ್ಯಪಾಲರು ತಮಿಳುನಾಡು ಮತ್ತು ತಮಿಳರ ವಿರೋಧಿಯಾಗಿರುವುದರಿಂದ ನಾನು ಅವರಿಂದ ಪದವಿ ಸ್ವೀಕರಿಸಲು ನಿರಾಕರಿಸಿದೆ. ನಾನು ದ್ರಾವಿಡ ಮಾದರಿ ಅನುಸರಿಸುತ್ತೇನೆ. ಇಲ್ಲಿ ಹಲವರಿಗೆ ನನ್ನಂತೆ ಅಭಿಪ್ರಾಯ ಇರಬಹುದು. ಇವರಿಂದ ಪದವಿ ಪಡೆಯುವುದು ಬೇಡ ಎಂದು ಹಲವರು ಅಂದುಕೊಂಡಿರಬಹುದು. ಆದರೆ, ಅವರಿಗೆ ಅವಕಾಶ ಸಿಕ್ಕಿರಲಿಕ್ಕಿಲ್ಲ” ಎಂದಿದ್ದರು.

ಮುಂದುವರಿದು, “ನಮ್ಮ ತಮಿಳುನಾಡಿನಲ್ಲಿ ಬೇರೆ ಯಾರಾದರು ಪದವಿ ಕೊಡಬಹುದಲ್ವಾ? ಅದಕ್ಕೆ ಅರ್ಹರಾದ ಅನೇಕ ಜನರಿದ್ದಾರೆ. ಮುಖ್ಯಮಂತ್ರಿ, ಶಿಕ್ಷಣ ಸಚಿವರು ಸೇರಿದಂತೆ ಹಲವರು ನಮ್ಮ ನಾಡಿನಲ್ಲಿ ಇದ್ದಾರೆ. ಅವರು ಕೊಡಬಹುದಲ್ವಾ? ಎಂದು ಪ್ರಶ್ನಿಸಿದ್ದರು.

ತಮಿಳರ ವಿರೋಧಿ ಆರೋಪ: ರಾಜ್ಯಪಾಲರ ಕೈಯಿಂದ ಪದವಿ ಸ್ವೀಕರಿಸಲು ನಿರಾಕರಿಸಿದ ಪಿಎಚ್‌ಡಿ ವಿದ್ಯಾರ್ಥಿನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....