Homeಕರ್ನಾಟಕವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳುತ್ತೇನೆ ಎಂದ ಡಿ.ಕೆ ಶಿವಕುಮಾರ್

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳುತ್ತೇನೆ ಎಂದ ಡಿ.ಕೆ ಶಿವಕುಮಾರ್

- Advertisement -
- Advertisement -

ವಿಧಾನಸಭೆಯ ಮಳೆಗಾಲದ ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ‘ಕ್ಷಮೆ ಕೇಳಲು ಸಿದ್ದ’ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ (ಆ.26) ಹೇಳಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಿಮಗೆ ಕ್ಷಮೆ ಬೇಕಾ?..ಓಕೆ…ಎಲ್ಲಾ ಕಾಂಗ್ರೆಸಿಗರಿಗೆ, ಇಂಡಿಯಾ ಒಕ್ಕೂಟದ ವಿವಿಧ ಪಕ್ಷಗಳ ಗೆಳೆಯರಿಗೆ ಬೇಜಾರಾಗಿದ್ರೆ, ನಾನು ತಪ್ಪು ಮಾಡಿದ್ದೇನೆ ಎಂದನಿಸಿದ್ದರೆ ‘ನಾನು ಕ್ಷಮೆ ಕೇಳಲು ಮತ್ತು ಅವರ ಸಲಹೆಗಳನ್ನು ಸ್ವೀಕರಿಸಲು ಸಿದ್ದ” ಎಂದಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿಯವರು ಮಾತನಾಡಿದಂತಹ ಸಂದರ್ಭದಲ್ಲಿ, ಅವರ ಪಕ್ಷ, ಸಿದ್ದಾಂತ ಎಲ್ಲದರ ಬಗ್ಗೆ ನನಗೆ ಅರಿವಿದೆ ಎಂದು ಕಾಲೆಳೆದಿದ್ದೆ. ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆಯಲ್ಲಿ, ವಿಧಾನಸಭೆಯಲ್ಲೇ ನಾನು ನನ್ನ ಆಚಾರ-ವಿಚಾರಗಳನ್ನು ಮಾತನಾಡಿದ್ದೇನೆ” ಎಂದು ತಿಳಿಸಿದ್ದಾರೆ.

1980ರಿಂದ ಸತತವಾಗಿ ವಿದ್ಯಾರ್ಥಿ ನಾಯಕನಾಗಿ ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡು, ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿಕೊಂಡು ಬಂದವನು. ನಾನೇನು ಹೊಸದಾಗಿ ಪಕ್ಷಕ್ಕೆ ಸೇರಿದವನಲ್ಲ. ಯಾರಿಂದ ಪಾಠ ಕೂಡ ನನಗೆ ಅವಶ್ಯಕತೆಯಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಬಿಜೆಪಿಯ ಆರ್. ಅಶೋಕ್ ಮಾತನಾಡಿದಂತಹ ಸಂದರ್ಭದಲ್ಲಿ “ನಿನ್ನ ಇತಿಹಾಸ ಗೊತ್ತಿದೆಯಪ್ಪ, ನೀನು ಯಾವಾಗಿಂದ ಬಂದೇ ಗೊತ್ತಿದೆ” ಎಂದು ಪರಮೇಶ್ವರ್ ಅವರ ಪಕ್ಕದಲ್ಲಿ ಕುಳಿತು ಮಾತನಾಡದ್ದೆ. ಆ ಸಂದರ್ಭದಲ್ಲಿ  ಭೂಮಿಗೆ ಹೇಗೆ ಪ್ರಾರ್ಥನೆ ಮಾಡ್ತಾರೆ ಎಂದು ನಾನು ತಿಳಿದುಕೊಂಡ ಎರಡು ಲೇನ್ ಹೇಳಿದ್ದೆ. ಅದನ್ನು ಕಟ್ ಮಾಡಿ, ಪೇಸ್ಟ್ ಮಾಡಿ, ಎಲ್ಲೆಲ್ಲಿಗೋ ಲಿಂಕ್ ಮಾಡಿ ನ್ಯಾಷನಲ್ ನ್ಯೂಸ್, ಇಂಟರ್‌ನ್ಯಾಷನಲ್ ನ್ಯೂಸ್, ಎಲ್ಲಾ ಭಾಷೆಗಳಲ್ಲಿ ಸುದ್ದಿ ಮಾಡಿಬಿಟ್ರು ಎಂದಿದ್ದಾರೆ.

ನಾನು ಮೊನ್ನೆ ಬಿಹಾರಕ್ಕೆ ಹೋದಾಗ ಕೆಲವರು ನನ್ನ ಹೇಳಿಕೆ ಬಗ್ಗೆ ಕೇಳಿದ್ರು. ಒಬ್ಬರು ನಮ್ಮ ಪಕ್ಷದ ಹಿರಿಯ ನಾಯಕ, ನನ್ನ ಗೆಳೆಯ ಬಹಳ ದೊಡ್ಡ ದೊಡ್ಡ ಸಲಹೆಗಳನ್ನೆಲ್ಲಾ ನೀಡಿದ್ದಾರೆ. ಅದು ಬಹಳ ಸಂತೋಷದ ವಿಷಯ. ನಾನು ಯಾರಿಗಿಂತಲೂ ದೊಡ್ಡವನಲ್ಲ. ಅವರಿಗಿಂತ ದೊಡ್ಡವನಲ್ಲ. ಇರಲಿ, ಆ ಬಗ್ಗೆ ಸಂತೋಷವಿದೆ ಎಂದು ಡಿಕೆಶಿ ಹೇಳಿದ್ದಾರೆ.

ನನ್ನ ಹೇಳಿಕೆ ಬಗ್ಗೆ ಮಾಧ್ಯಮಗಳಲ್ಲಿ ಮಾತನಾಡುತ್ತಿದ್ದಾರೆ. ಮಾಧ್ಯಮಗಳಲ್ಲಿ ಹೇಳಿಕೆ ಕೊಡುವ ಅವಶ್ಯಕತೆ ಇಲ್ಲ. ನೀವು ಕಾಂಗ್ರೆಸ್ ಕಚೇರಿಗೆ ಬನ್ನಿ, ಸಭೆ ಮಾಡಿ ಚರ್ಚೆ ಮಾಡೋಣ. ಮಾಧ್ಯಮ ಹೇಳಿಕೆಗಳಿಂದ ನಿಮಗೆ ಸಮಾಧಾನ ಆಗಬಹುದು, ಯಾವುದೇ ಲಾಭ ಆಗುವುದಿಲ್ಲ. ಹಲವರು ಸಲಹೆ ಕೊಟ್ಟಿದ್ದಾರೆ. ಖಂಡಿತ ನಾನು ನಿಮ್ಮ ಸಲಹೆಗಳಿಗಿಂದ ದೊಡ್ಡವನಲ್ಲ ಎಂದು ಕುಟುಕಿದ್ದಾರೆ.

ನಾನು ಎಲ್ಲರ ಕಷ್ಟ ಕಾಲದಲ್ಲಿ ಅವರ ಜೊತೆ ನಿಂತವನು. ಈಗಲೂ ನಾನು ಅವರ ಜೊತೆ ನಿಲ್ಲುತ್ತೇನೆ. ನಾನು ಏನೇ ಆಗಿಬರಹುದು, ಏನೋ ಆಗಬಹುದು. ಯಾವುದೇ ಹುದ್ದೆಯಲ್ಲಿರಬಹುದು. ಅದು ಮುಖ್ಯ ಅಲ್ಲ. ನಾನೊಬ್ಬ ನಿಷ್ಠಾವಂತ ಕಾಂಗ್ರೆಸಿಗನಾಗಿ ಯಾರ ಮನಸ್ಸಿಗೂ ನೋಯಿಸುವ ಅಗತ್ಯವಿಲ್ಲ. ನನ್ನ ಜೀವನ ನಿಮ್ಮಗಳ ಬದುಕಿಗೆ ಒಂದು ಅಡಿಪಾಯ ಹಾಕಬೇಕು, ನಿಮ್ಮ ಜೀವನಕ್ಕೆ ಮೆಟ್ಟಿಲಾಗಬೇಕು. ಅದಲ್ಲದೆ, ನಾನು ಯಾರ ಭಾವನೆಗೂ ನೋವುಂಟು ಮಾಡಲು ಬಯಸುವುದಿಲ್ಲ. ನಾನು ಹುಟ್ಟು ಕಾಂಗ್ರೆಸಿಗ, ನಾನು ಕಾಂಗ್ರೆಸಿಗನಾಗಿಯೇ ಸಾಯುತ್ತೇನೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 6635 ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...