Homeಕರ್ನಾಟಕಶಾಸಕರ ಭವನದಲ್ಲಿ ನಡೆದ ಸಭೆ: ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿಗಾಗಿ ಸಾಹಿತಿಗಳು, ಚಿಂತಕರಿಂದ ಆಗ್ರಹ

ಶಾಸಕರ ಭವನದಲ್ಲಿ ನಡೆದ ಸಭೆ: ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿಗಾಗಿ ಸಾಹಿತಿಗಳು, ಚಿಂತಕರಿಂದ ಆಗ್ರಹ

- Advertisement -
- Advertisement -

ಬೆಂಗಳೂರು: ಅಸ್ಪೃಶ್ಯ ಅಲೆಮಾರಿ ಸಮುದಾಯಗಳಿಗೆ ಜಸ್ಟೀಸ್ ನಾಗಮೋಹನ್‌ ದಾಸ್ ಆಯೋಗದ ವರದಿಯ ಅನ್ವಯ ಶೇ. 1ರಷ್ಟು ಪ್ರತ್ಯೇಕ ಮೀಸಲಾತಿಯನ್ನು ಕಲ್ಪಿಸುವಂತೆ ಸಾಹಿತಿಗಳು, ಚಿಂತಕರು, ಹೋರಾಟಗಾರರು, ಕಲಾವಿದರು ಹಾಗೂ ಸಮಾನ ಮನಸ್ಕರು ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮಂಗಳವಾರ ಬೆಂಗಳೂರಿನ ಶಾಸಕರ ಭವನದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.

ಕಳೆದ 30 ವರ್ಷಗಳಿಂದ ಒಳಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಈ ಸಮುದಾಯಗಳ ಹಕ್ಕೊತ್ತಾಯವನ್ನು ಪರಿಗಣಿಸಿ ಸರ್ಕಾರವು ನಾಗಮೋಹನ್‌ ದಾಸ್ ಆಯೋಗವನ್ನು ರಚಿಸಿ ಸಮೀಕ್ಷೆ ನಡೆಸಿತ್ತು. ವರದಿಯಲ್ಲಿ, ಅತ್ಯಂತ ಹಿಂದುಳಿದ 59 ಅಲೆಮಾರಿ ಸಮುದಾಯಗಳನ್ನು ‘A’ ಗುಂಪಿನಲ್ಲಿ ವರ್ಗೀಕರಿಸಿ, ಅವರಿಗೆ ಶೇ. 1ರಷ್ಟು ಮೀಸಲಾತಿ ನೀಡಬೇಕೆಂದು ಶಿಫಾರಸ್ಸು ಮಾಡಲಾಗಿತ್ತು. ಆದರೆ, ಸರ್ಕಾರ ಈ ಶಿಫಾರಸ್ಸನ್ನು ಬದಿಗೊತ್ತಿ, ಅಲೆಮಾರಿ ಸಮುದಾಯಗಳನ್ನು ಸ್ಪೃಶ್ಯ ಸಮುದಾಯಗಳೊಂದಿಗೆ ಸೇರಿಸುವ ಮೂಲಕ ಸಾಮಾಜಿಕ ನ್ಯಾಯದಿಂದ ವಂಚಿಸಿದೆ ಎಂದು ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಲಾಯಿತು.

ಸಭೆಯ ಪ್ರಮುಖ ನಿರ್ಣಯಗಳು:

  • ಪ್ರತ್ಯೇಕ ಮೀಸಲಾತಿ ಜಾರಿ: ಜಸ್ಟೀಸ್‌ ನಾಗಮೋಹನ್‌ ದಾಸ್‌ ಆಯೋಗದ ವರದಿಯಂತೆ ಅಸ್ಪೃಶ್ಯ ಅಲೆಮಾರಿ ಸಮುದಾಯಗಳಿಗೆ ಶೇ. 1ರಷ್ಟು ಪ್ರತ್ಯೇಕ ಮೀಸಲಾತಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಇದಕ್ಕಾಗಿ ತೆಲಂಗಾಣ ಮಾದರಿಯಲ್ಲಿ ಮೀಸಲಾತಿ ಬಿಂದುವನ್ನು ಜಾರಿಗೊಳಿಸಬೇಕು ಎಂದು ಸರ್ವಾನುಮತದಿಂದ ನಿರ್ಧರಿಸಲಾಯಿತು.
  • ಅಭಿವೃದ್ಧಿ ಕಾರ್ಯಕ್ರಮಗಳು: ಶೇ. 1ರಷ್ಟು ಮೀಸಲಾತಿಯ ಜೊತೆಗೆ, ಈ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯವಿರುವ ಕಾರ್ಯಕ್ರಮಗಳನ್ನು ಕೂಡ ಜಾರಿಗೊಳಿಸಬೇಕು ಎಂದು ಒತ್ತಾಯಿಸಲಾಯಿತು.
  • ನಿಗಮದ ವ್ಯಾಪ್ತಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮವನ್ನು ಅಲೆಮಾರಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ವರ್ಗಕ್ಕೆ ಸೇರಿದ 49 ಸಮುದಾಯಗಳಿಗೆ ಮಾತ್ರ ಸೀಮಿತಗೊಳಿಸಿ ಆದೇಶ ಹೊರಡಿಸಬೇಕು. ಇತರ ಸಮುದಾಯಗಳನ್ನು ನಿಗಮದ ವ್ಯಾಪ್ತಿಯಿಂದ ಹೊರಗಿಡಬೇಕು ಎಂದು ಆಗ್ರಹಿಸಲಾಯಿತು.

ಒಳಮೀಸಲಾತಿ ಹೋರಾಟದ ಹಿರಿಯ ಹೋರಾಟಗಾರರಾದ ಎಸ್. ಮಾರೆಪ್ಪ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಪ್ರೊ. ರಹಮತ್‌ ತರೀಕೆರೆ, ರಾಜಪ್ಪ ದಳವಾಯಿ, ಪ್ರೊ. ನಿರಂಜನರಾಧ್ಯ, ಶಿವಸುಂದರ್‌, ಡಾ. ವಾಸು ಎಚ್‌. ವಿ, ಬಸವರಾಜ್‌ ಕೌತಾಳ್‌, ಅಂಬಣ್ಣ ಅರೋಲಿಕರ್‌, ಪ್ರೊ. ಎ. ಎಸ್‌. ಪ್ರಭಾಕರ್‌, ಡಾ. ಕೆ. ಷರೀಫಾ, ಬಹುಜನ ವೆಂಕಟೇಶ್‌, ದಾಸನೂರು ಕೂಸಣ್ಣ, ವಿನಯ್‌ ಶ್ರೀನಿವಾಸ್‌, ಮೈತ್ರೇಯಿ, ಡಾ. ಹುಲಿಕುಂಟೆ ಮೂರ್ತಿ, ಜಿ.ಬಿ ಪಾಟೀಲ್‌, ಪ್ರೊ. ಬಿ.ಸಿ. ಬಸವರಾಜ್‌, ಡಾ. ಟಿ. ಗೋವಿಂದರಾಜ್‌, ಪ್ರೊ. ಟಿ. ಯಲ್ಲಪ್ಪ, ದಯಾನಂದ, ಕೆಸ್ತಾರ ವಿ ಮೌರ್ಯ, ಡಿ. ಟಿ ವೆಂಕಟೇಶ್‌, ಶ್ರೀಪಾದ್‌ ಭಟ್‌, ಲೇಖಾ ಅಡವಿ, ನಾರಾಯಣ್ ಕ್ಯಾಸಂಬಳ್ಳಿ, ಪ್ರೊ. ನಾರಾಯಣಸ್ವಾಮಿ, ಕೆ.ವಿ ಭಟ್‌, ಕೆ. ಪಿ ಲಕ್ಷ್ಮಣ್‌, ವಿ.ಎಲ್‌ ನರಸಿಂಹಮೂರ್ತಿ, ಹೆಚ್.ಕೆ ಶ್ವೇತಾರಾಣಿ, ಮುತ್ತುರಾಜು, ವಿಕಾಸ್‌ ಆರ್‌ ಮೌರ್ಯ, ಚಂದ್ರು ತರಹುಣಿಸೆ, ಅಶ್ವಿನಿ ಬೋದ್‌, ಭರತ್‌ ಡಿಂಗ್ರಿ, ಕೋಡಿಹಳ್ಳಿ ಚಂದ್ರು, ವೇಣುಗೋಪಾಲ್‌ ಮೌರ್ಯ, ಮಹೇಶ್‌, ಸರೋವರ್‌ ಬೆಂಕೀಕೆರೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಕುದುರೆಮುಖದ ಜಾಗವನ್ನು ಅರಣ್ಯ ಇಲಾಖೆಗೆ ಕೊಡುವುದಕ್ಕೆ ವಿರೋಧ: ಪರಿಸರ ಹೋರಾಟಗಾರ ಕಲ್ಕುಳಿ ವಿಠಲ್ ಹೆಗಡೆಯವರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...