Homeಕರ್ನಾಟಕಶಾಸಕರ ಭವನದಲ್ಲಿ ನಡೆದ ಸಭೆ: ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿಗಾಗಿ ಸಾಹಿತಿಗಳು, ಚಿಂತಕರಿಂದ ಆಗ್ರಹ

ಶಾಸಕರ ಭವನದಲ್ಲಿ ನಡೆದ ಸಭೆ: ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿಗಾಗಿ ಸಾಹಿತಿಗಳು, ಚಿಂತಕರಿಂದ ಆಗ್ರಹ

- Advertisement -
- Advertisement -

ಬೆಂಗಳೂರು: ಅಸ್ಪೃಶ್ಯ ಅಲೆಮಾರಿ ಸಮುದಾಯಗಳಿಗೆ ಜಸ್ಟೀಸ್ ನಾಗಮೋಹನ್‌ ದಾಸ್ ಆಯೋಗದ ವರದಿಯ ಅನ್ವಯ ಶೇ. 1ರಷ್ಟು ಪ್ರತ್ಯೇಕ ಮೀಸಲಾತಿಯನ್ನು ಕಲ್ಪಿಸುವಂತೆ ಸಾಹಿತಿಗಳು, ಚಿಂತಕರು, ಹೋರಾಟಗಾರರು, ಕಲಾವಿದರು ಹಾಗೂ ಸಮಾನ ಮನಸ್ಕರು ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮಂಗಳವಾರ ಬೆಂಗಳೂರಿನ ಶಾಸಕರ ಭವನದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.

ಕಳೆದ 30 ವರ್ಷಗಳಿಂದ ಒಳಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಈ ಸಮುದಾಯಗಳ ಹಕ್ಕೊತ್ತಾಯವನ್ನು ಪರಿಗಣಿಸಿ ಸರ್ಕಾರವು ನಾಗಮೋಹನ್‌ ದಾಸ್ ಆಯೋಗವನ್ನು ರಚಿಸಿ ಸಮೀಕ್ಷೆ ನಡೆಸಿತ್ತು. ವರದಿಯಲ್ಲಿ, ಅತ್ಯಂತ ಹಿಂದುಳಿದ 59 ಅಲೆಮಾರಿ ಸಮುದಾಯಗಳನ್ನು ‘A’ ಗುಂಪಿನಲ್ಲಿ ವರ್ಗೀಕರಿಸಿ, ಅವರಿಗೆ ಶೇ. 1ರಷ್ಟು ಮೀಸಲಾತಿ ನೀಡಬೇಕೆಂದು ಶಿಫಾರಸ್ಸು ಮಾಡಲಾಗಿತ್ತು. ಆದರೆ, ಸರ್ಕಾರ ಈ ಶಿಫಾರಸ್ಸನ್ನು ಬದಿಗೊತ್ತಿ, ಅಲೆಮಾರಿ ಸಮುದಾಯಗಳನ್ನು ಸ್ಪೃಶ್ಯ ಸಮುದಾಯಗಳೊಂದಿಗೆ ಸೇರಿಸುವ ಮೂಲಕ ಸಾಮಾಜಿಕ ನ್ಯಾಯದಿಂದ ವಂಚಿಸಿದೆ ಎಂದು ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಲಾಯಿತು.

ಸಭೆಯ ಪ್ರಮುಖ ನಿರ್ಣಯಗಳು:

  • ಪ್ರತ್ಯೇಕ ಮೀಸಲಾತಿ ಜಾರಿ: ಜಸ್ಟೀಸ್‌ ನಾಗಮೋಹನ್‌ ದಾಸ್‌ ಆಯೋಗದ ವರದಿಯಂತೆ ಅಸ್ಪೃಶ್ಯ ಅಲೆಮಾರಿ ಸಮುದಾಯಗಳಿಗೆ ಶೇ. 1ರಷ್ಟು ಪ್ರತ್ಯೇಕ ಮೀಸಲಾತಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಇದಕ್ಕಾಗಿ ತೆಲಂಗಾಣ ಮಾದರಿಯಲ್ಲಿ ಮೀಸಲಾತಿ ಬಿಂದುವನ್ನು ಜಾರಿಗೊಳಿಸಬೇಕು ಎಂದು ಸರ್ವಾನುಮತದಿಂದ ನಿರ್ಧರಿಸಲಾಯಿತು.
  • ಅಭಿವೃದ್ಧಿ ಕಾರ್ಯಕ್ರಮಗಳು: ಶೇ. 1ರಷ್ಟು ಮೀಸಲಾತಿಯ ಜೊತೆಗೆ, ಈ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯವಿರುವ ಕಾರ್ಯಕ್ರಮಗಳನ್ನು ಕೂಡ ಜಾರಿಗೊಳಿಸಬೇಕು ಎಂದು ಒತ್ತಾಯಿಸಲಾಯಿತು.
  • ನಿಗಮದ ವ್ಯಾಪ್ತಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮವನ್ನು ಅಲೆಮಾರಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ವರ್ಗಕ್ಕೆ ಸೇರಿದ 49 ಸಮುದಾಯಗಳಿಗೆ ಮಾತ್ರ ಸೀಮಿತಗೊಳಿಸಿ ಆದೇಶ ಹೊರಡಿಸಬೇಕು. ಇತರ ಸಮುದಾಯಗಳನ್ನು ನಿಗಮದ ವ್ಯಾಪ್ತಿಯಿಂದ ಹೊರಗಿಡಬೇಕು ಎಂದು ಆಗ್ರಹಿಸಲಾಯಿತು.

ಒಳಮೀಸಲಾತಿ ಹೋರಾಟದ ಹಿರಿಯ ಹೋರಾಟಗಾರರಾದ ಎಸ್. ಮಾರೆಪ್ಪ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಪ್ರೊ. ರಹಮತ್‌ ತರೀಕೆರೆ, ರಾಜಪ್ಪ ದಳವಾಯಿ, ಪ್ರೊ. ನಿರಂಜನರಾಧ್ಯ, ಶಿವಸುಂದರ್‌, ಡಾ. ವಾಸು ಎಚ್‌. ವಿ, ಬಸವರಾಜ್‌ ಕೌತಾಳ್‌, ಅಂಬಣ್ಣ ಅರೋಲಿಕರ್‌, ಪ್ರೊ. ಎ. ಎಸ್‌. ಪ್ರಭಾಕರ್‌, ಡಾ. ಕೆ. ಷರೀಫಾ, ಬಹುಜನ ವೆಂಕಟೇಶ್‌, ದಾಸನೂರು ಕೂಸಣ್ಣ, ವಿನಯ್‌ ಶ್ರೀನಿವಾಸ್‌, ಮೈತ್ರೇಯಿ, ಡಾ. ಹುಲಿಕುಂಟೆ ಮೂರ್ತಿ, ಜಿ.ಬಿ ಪಾಟೀಲ್‌, ಪ್ರೊ. ಬಿ.ಸಿ. ಬಸವರಾಜ್‌, ಡಾ. ಟಿ. ಗೋವಿಂದರಾಜ್‌, ಪ್ರೊ. ಟಿ. ಯಲ್ಲಪ್ಪ, ದಯಾನಂದ, ಕೆಸ್ತಾರ ವಿ ಮೌರ್ಯ, ಡಿ. ಟಿ ವೆಂಕಟೇಶ್‌, ಶ್ರೀಪಾದ್‌ ಭಟ್‌, ಲೇಖಾ ಅಡವಿ, ನಾರಾಯಣ್ ಕ್ಯಾಸಂಬಳ್ಳಿ, ಪ್ರೊ. ನಾರಾಯಣಸ್ವಾಮಿ, ಕೆ.ವಿ ಭಟ್‌, ಕೆ. ಪಿ ಲಕ್ಷ್ಮಣ್‌, ವಿ.ಎಲ್‌ ನರಸಿಂಹಮೂರ್ತಿ, ಹೆಚ್.ಕೆ ಶ್ವೇತಾರಾಣಿ, ಮುತ್ತುರಾಜು, ವಿಕಾಸ್‌ ಆರ್‌ ಮೌರ್ಯ, ಚಂದ್ರು ತರಹುಣಿಸೆ, ಅಶ್ವಿನಿ ಬೋದ್‌, ಭರತ್‌ ಡಿಂಗ್ರಿ, ಕೋಡಿಹಳ್ಳಿ ಚಂದ್ರು, ವೇಣುಗೋಪಾಲ್‌ ಮೌರ್ಯ, ಮಹೇಶ್‌, ಸರೋವರ್‌ ಬೆಂಕೀಕೆರೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಕುದುರೆಮುಖದ ಜಾಗವನ್ನು ಅರಣ್ಯ ಇಲಾಖೆಗೆ ಕೊಡುವುದಕ್ಕೆ ವಿರೋಧ: ಪರಿಸರ ಹೋರಾಟಗಾರ ಕಲ್ಕುಳಿ ವಿಠಲ್ ಹೆಗಡೆಯವರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...