Homeಅಂತರಾಷ್ಟ್ರೀಯಶೇ.50ರಷ್ಟು ಸುಂಕ ಹೇರಿದ ಅಮೆರಿಕ: ಭಾರತದ 48 ಬಿಲಿಯನ್ ಡಾಲರ್ ರಫ್ತಿಗೆ ಹೊಡೆತ ಬೀಳುವ ಸಾಧ್ಯತೆ;...

ಶೇ.50ರಷ್ಟು ಸುಂಕ ಹೇರಿದ ಅಮೆರಿಕ: ಭಾರತದ 48 ಬಿಲಿಯನ್ ಡಾಲರ್ ರಫ್ತಿಗೆ ಹೊಡೆತ ಬೀಳುವ ಸಾಧ್ಯತೆ; ವರದಿ

- Advertisement -
- Advertisement -

ಭಾರತ ರಫ್ತು ಮಾಡುವ ಉತ್ಪನ್ನಗಳ ಮೇಲೆ ಅಮೆರಿಕ ವಿಧಿಸಿರುವ ಶೇಕಡ 50ರಷ್ಟು ಸುಂಕ ಬುಧವಾರ (ಆ.27) ಜಾರಿಯಾಗಲಿದೆ. ಇದರಿಂದ ಭಾರತದ ವಿದೇಶಿ ವ್ಯಾಪಾರದ ಮೇಲೆ ತೀವ್ರವಾದ ಹೊಡೆತ ಬೀಳುವ ಸಾಧ್ಯತೆಯಿದೆ.

ಅಮೆರಿಕದ ಹೆಚ್ಚುವರಿ ಸುಂಕ ಹೇರಿಕೆಯು ಅಮೆರಿಕಕ್ಕೆ ಭಾರತದ ಒಟ್ಟಾರೆ ರಫ್ತಿನ ಅರ್ಧ ಭಾಗದ ಮೇಲೆ ಪರಿಣಾಮ ಬೀರಲಿದೆ. ಸುಂಕ ಹೆಚ್ಚಳವು ಅಮೆರಿಕ-ಭಾರತ ನಡುವೆ ವ್ಯಾಪಾರ ಸಂಬಂಧ ಹದೆಗೆಟ್ಟಿರುವುದನ್ನು ಎತ್ತಿ ತೋರಿಸುತ್ತದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರಂಭದಲ್ಲಿ ಭಾರತೀಯ ಸರಕುಗಳ ಮೇಲೆ ಶೇ.25ರಷ್ಟು ಸುಂಕ ಘೋಷಿಸಿದ್ದರು. ಆದರೆ, ಈ ತಿಂಗಳ ಆರಂಭದಲ್ಲಿ ಅವರು ಭಾರತವು ರಷ್ಯಾದಿಂದ ತೈಲ ಖರೀದಿಸಿದ್ದಕ್ಕೆ ಹೆಚ್ಚುವರಿಯಾಗಿ ಶೇ.25 ರಷ್ಟು ಸುಂಕವನ್ನು ವಿಧಿಸುವ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ್ದಾರೆ. ಇದರಿಂದಾಗಿ ಅಮೆರಿಕವು ತನ್ನ ಮಿತ್ರ ರಾಷ್ಟ್ರದ ಮೇಲೆ ವಿಧಿಸಿದ ಒಟ್ಟು ಸುಂಕ ಶೇ.50ಕ್ಕೆ ತಲುಪಿದೆ.

ಭಾರತ ಸರ್ಕಾರವು ಅಮೆರಿಕದ ಸುಂಕ ಹೇರಿಕೆ 48.2 ಬಿಲಿಯನ್ ಡಾಲರ್ ಮೌಲ್ಯದ ರಫ್ತಿನ ಮೇಲೆ ಪರಿಣಾಮ ಬೀರಲಿದೆ ಎಂದು ಅಂದಾಜಿಸಿದೆ. ಹೊಸ ಸುಂಕ ಹೇರಿಕೆ ಅಮೆರಿಕಕ್ಕೆ ರಫ್ತು ಮಾಡುವ ಸರಕುಗಳಿಂದ ಭಾರತಕ್ಕೆ ಯಾವುದೇ ವಾಣಿಜ್ಯಿಕ ಲಾಭ ಸಿಗದಂತೆ ಮಾಡಲಿದೆ. ಉದ್ಯೋಗ ನಷ್ಟಕ್ಕೆ ಕಾರಣವಾಗಲಿದೆ ಮತ್ತು ಆರ್ಥಿಕ ಬೆಳವಣಿಗೆಯನ್ನು ನಿಧಾನಗೊಳಿಸಲಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಇತ್ತೀಚಿನ ವರ್ಷಗಳಲ್ಲಿ ಭಾರತ-ಅಮೆರಿಕ ನಡುವಿನ ವ್ಯಾಪಾರ ಸಂಬಂಧಗಳು ವಿಸ್ತರಿಸಿವೆ. ಆದರೆ, ಮಾರುಕಟ್ಟೆ ಪ್ರವೇಶ ಮತ್ತು ದೇಶೀಯ ರಾಜಕೀಯ ಒತ್ತಡಗಳ ಮೇಲಿನ ವಿವಾದಗಳಿಗೆ ಅದು ಗುರಿಯಾಗುತ್ತಿವೆ. ಭಾರತವು ಪ್ರಮುಖ ಜಾಗತಿಕ ಆರ್ಥಿಕತೆಗಳಲ್ಲಿ ವೇಗವಾಗಿ ಬೆಳೆಯುತ್ತಿರುವ ದೇಶಗಳಲ್ಲಿ ಒಂದಾಗಿದೆ. ಹೆಚ್ಚುವರಿ ಸುಂಕ ಇದನ್ನು ನಿಧಾನಗೊಳಿಸಬಹುದು.

ಅಮೆರಿಕದ ಸುಂಕ ಪರಿಣಾಮ ಬೀರುವ ವಲಯಗಳು

ನವದೆಹಲಿ ಮೂಲದ ಚಿಂತಕರ ಚಾವಡಿ ಗ್ಲೋಬಲ್ ಟ್ರೇಡ್ ರಿಸರ್ಚ್ ಇನಿಶಿಯೇಟಿವ್‌ನ ಅಂದಾಜಿನ ಪ್ರಕಾರ, ಜವಳಿ, ರತ್ನಗಳು ಮತ್ತು ಆಭರಣಗಳು, ಚರ್ಮದ ಸರಕುಗಳು, ಆಹಾರ ಮತ್ತು ವಾಹನಗಳಂತಹ ಕಾರ್ಮಿಕ-ತೀವ್ರ ವಲಯಗಳ ಮೇಲೆ ಅಮೆರಿಕದ ಸುಂಕ ಹೇರಿಕೆ ಹೆಚ್ಚು ಪರಿಣಾಮ ಬೀರಲಿದೆ.

“ಹೊಸ ಸುಂಕ ಪದ್ಧತಿಯು ಒಂದು ಕಾರ್ಯತಂತ್ರದ ಆಘಾತವಾಗಿದ್ದು, ಅಮೆರಿಕದಲ್ಲಿ ದೀರ್ಘಕಾಲದಿಂದ ಸ್ಥಾಪಿತವಾಗಿರುವ ಭಾರತದ ಉಪಸ್ಥಿತಿಯನ್ನು ಅಳಿಸಿಹಾಕುವ ಬೆದರಿಕೆ ಒಡ್ಡಿದೆ. ರಫ್ತು ಆಧಾರಿತ ಕೇಂದ್ರಗಳಲ್ಲಿ ನಿರುದ್ಯೋಗವನ್ನು ಉಂಟುಮಾಡಲಿದೆ ಮತ್ತು ಕೈಗಾರಿಕಾ ಮೌಲ್ಯ ಸರಪಳಿಯಲ್ಲಿ ಭಾರತದ ಪಾತ್ರವನ್ನು ದುರ್ಬಲಗೊಳಿಸುತ್ತದೆ” ಎಂದು ಚಿಂತಕರ ಚಾವಡಿಯ ಸಂಸ್ಥಾಪಕ ಮತ್ತು ಮಾಜಿ ಭಾರತೀಯ ವ್ಯಾಪಾರ ಅಧಿಕಾರಿ ಅಜಯ್ ಶ್ರೀವಾಸ್ತವ ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ಅಮೆರಿಕವು ಔಷಧಗಳು ಮತ್ತು ಎಲೆಕ್ಟ್ರಾನಿಕ್ ಸರಕುಗಳಂತಹ ಕೆಲವು ವಲಯಗಳಿಗೆ ಹೆಚ್ಚುವರಿ ಸುಂಕದಿಂದ ವಿನಾಯಿತಿ ನೀಡಿದೆ. ಈ ವಲಯಗಳಲ್ಲಿ ಭಾರತಕ್ಕೆ ಅದರ ಮಾನ್ಯತೆ ಗಮನಾರ್ಹವಾಗಿರುವುದರಿಂದ ಸ್ವಲ್ಪ ಪರಿಹಾರ ಸಿಕ್ಕಿದೆ ಎಂದು ವರದಿ ತಿಳಿಸಿದೆ.

ನಷ್ಟದ ಭೀತಿಯಲ್ಲಿ ರಫ್ತುದಾರರು

“ದೇಶೀಯ ಬೇಡಿಕೆ ಬಲಗೊಂಡು ಇತರ ವಿದೇಶಿ ಮಾರುಕಟ್ಟೆಗಳು ಹೆಚ್ಚಿನ ಭಾರತೀಯ ವಸ್ತುಗಳನ್ನು ಖರೀದಿಸದಿದ್ದೆ ನಮ್ಮ ಉದ್ಯಮವು ಸದ್ಯದಲ್ಲಿಯೇ ಗಣನೀಯ ಹೊಡೆತವನ್ನು ಅನುಭವಿಸಲಿದೆ ಎಂದು ಉತ್ತರ ಭಾರತದ ಆಗ್ರಾ ನಗರದ ಚರ್ಮದ ಪಾದರಕ್ಷೆ ರಫ್ತುದಾರ ಪೂರಣ್ ದಾವರ್ ಹೇಳುತ್ತಾರೆ.

“ಇದು ಸಂಪೂರ್ಣ ಆಘಾತ” ಎಂಬುವುದಾಗಿ ಇತ್ತೀಚಿನ ವರ್ಷಗಳಲ್ಲಿ ಅಮೆರಿಕದೊಂದಿಗೆ ವ್ಯವಹಾರ ವೃದ್ದಿಸಿಕೊಂಡಿರುವ ದಾವರ್ ಹೇಳಿದ್ದಾರೆ. ದಾವರ್ ಅವರ ಗ್ರಾಹಕರಲ್ಲಿ ಪ್ರಮುಖ ಫ್ಯಾಷನ್ ಚಿಲ್ಲರೆ ವ್ಯಾಪಾರ ಸಂಸ್ಥೆ ‘ಝಾರಾ’ ಕೂಡ ಒಂದು.

ರಫ್ತು ಉತ್ತೇಜನಾ ಸಂಸ್ಥೆಯಾದ ಚರ್ಮ ರಫ್ತು ಮಂಡಳಿಯ ಪ್ರಾದೇಶಿಕ ಅಧ್ಯಕ್ಷರೂ ಆಗಿರುವ ದಾವರ್, ಹೆಚ್ಚಿನ ಸುಂಕಗಳು ತನ್ನದೇ ಆದ ಗ್ರಾಹಕರಿಗೆ ಹಾನಿ ಮಾಡುತ್ತದೆ ಎಂಬುದನ್ನು ಅಮೆರಿಕ ಅರ್ಥಮಾಡಿಕೊಳ್ಳಬೇಕು ಎಂಬುವುದಾಗಿ ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ರಫ್ತುದಾರರನ್ನು ಪ್ರತಿನಿಧಿಸುವ ಗುಂಪುಗಳು ಹೊಸ ಆಮದು ಸುಂಕಗಳು ಅಮೆರಿಕದ ಮಾರುಕಟ್ಟೆಯ ಮೇಲೆ ಹೆಚ್ಚು ಅವಲಂಬಿತವಾಗಿರುವ ಭಾರತದ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಹಾನಿ ಮಾಡಬಹುದು ಎಂದು ಎಚ್ಚರಿಸಿದ್ದಾರೆ.

“ಇದು ಒಂದು ಕ್ಲಿಷ್ಟಕರ ಪರಿಸ್ಥಿತಿ. ಕೆಲವು ಉತ್ಪನ್ನ ಮಾರ್ಗಗಳು ರಾತ್ರೋರಾತ್ರಿ ಕಾರ್ಯಸಾಧ್ಯವಾಗುವುದಿಲ್ಲ” ಎಂದು ಭಾರತೀಯ ರಫ್ತು ಸಂಸ್ಥೆಗಳ ಒಕ್ಕೂಟದ ಮಹಾನಿರ್ದೇಶಕ ಅಜಯ್ ಸಹಾಯ್ ಹೇಳಿದ್ದಾರೆ.

ಅಮೆರಿಕದ ಒತ್ತಡಕ್ಕೆ ಮಣಿಯುವುದಿಲ್ಲ ಎಂದ ಮೋದಿ

ಭಾರತದ ಕೃಷಿ ಮತ್ತು ಡೈರಿ ಕ್ಷೇತ್ರಗಳಿಗೆ ಹೆಚ್ಚಿನ ಪ್ರವೇಶಕ್ಕಾಗಿ ಅಮೆರಿಕ ಆಡಳಿತವು ಒತ್ತಾಯಿಸುತ್ತಿರುವುದರಿಂದ ಹೆಚ್ಚಿನ ಸುಂಕಗಳು ಹೇರಿವೆ.

ಭಾರತ ಮತ್ತು ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದಕ್ಕಾಗಿ ಐದು ಸುತ್ತಿನ ಮಾತುಕತೆಗಳನ್ನು ನಡೆಸಿವೆ, ಆದರೆ ಇನ್ನೂ ಒಪ್ಪಂದಕ್ಕೆ ಬಂದಿಲ್ಲ.

ಇದಕ್ಕೆ ಮುಖ್ಯ ಕಾರಣ, ಈ ವಲಯಗಳನ್ನು ಅಗ್ಗದ ಅಮೆರಿಕನ್ ಆಮದುಗಳಿಗೆ ತೆರೆಯುವುದನ್ನು ಭಾರತ ವಿರೋಧಿಸಿದ್ದು, ಜೀವನೋಪಾಯಕ್ಕಾಗಿ ಇವುಗಳನ್ನು ಅವಲಂಬಿಸಿರುವ ಲಕ್ಷಾಂತರ ಭಾರತೀಯರ ಉದ್ಯೋಗಗಳಿಗೆ ಅಪಾಯವಿದೆ ಎಂಬ ಕಳವಳವನ್ನು ವ್ಯಕ್ತಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ.

“ನನಗೆ ರೈತರು, ಸಣ್ಣ ವ್ಯವಹಾರಗಳು ಮತ್ತು ಹೈನುಗಾರಿಕೆಯ ಹಿತಾಸಕ್ತಿಗಳು ಅತ್ಯಂತ ಮುಖ್ಯ. ನನ್ನ ಸರ್ಕಾರವು ಅವರಿಗೆ ಯಾವುದೇ ಪರಿಣಾಮ ಬೀರದಂತೆ ನೋಡಿಕೊಳ್ಳುತ್ತದೆ” ಎಂದು ಮೋದಿ ಈ ವಾರ ತಮ್ಮ ತವರು ರಾಜ್ಯ ಗುಜರಾತ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಹೇಳಿದ್ದಾರೆ. “ಜಗತ್ತು ‘ಆರ್ಥಿಕ ಸ್ವಾರ್ಥದ ರಾಜಕೀಯ’ಕ್ಕೆ ಸಾಕ್ಷಿಯಾಗುತ್ತಿದೆ” ಎಂದಿದ್ದಾರೆ.

ಈ ವಾರ ಆರನೇ ಸುತ್ತಿನ ವ್ಯಾಪಾರ ಮಾತುಕತೆಗಾಗಿ ನವದೆಹಲಿಗೆ ಭೇಟಿ ನೀಡುವ ಯೋಜನೆಯನ್ನು ಅಮೆರಿಕದ ನಿಯೋಗ ರದ್ದುಗೊಳಿಸಿದೆ.

ಸುಂಕಗಳಿಂದಾಗುವ ಹೊಡೆತವನ್ನು ತಗ್ಗಿಸಲು ಭಾರತ ಸ್ಥಳೀಯ ಸುಧಾರಣೆಗಳನ್ನು ಯೋಜಿಸುತ್ತಿದೆ.

ಸ್ಥಳೀಯ ಬಳಕೆಯನ್ನು ಹೆಚ್ಚಿಸಲು ಮತ್ತು ಆರ್ಥಿಕತೆಯನ್ನು ನಿರೋಧಿಸಲು ಸರ್ಕಾರ ಸುಧಾರಣೆಗಳ ಮೇಲೆ ಕೆಲಸ ಮಾಡಲು ಪ್ರಾರಂಭಿಸಿದೆ.

ಅಕ್ಟೋಬರ್‌ನಲ್ಲಿ ಬರುವ ಪ್ರಮುಖ ಹಿಂದೂ ಹಬ್ಬ ದೀಪಾವಳಿಗೂ ಮುನ್ನ ವಿಮೆ, ಕಾರುಗಳು ಮತ್ತು ಉಪಕರಣಗಳ ವೆಚ್ಚವನ್ನು ಕಡಿಮೆ ಮಾಡಲು ಸರಕು ಮತ್ತು ಸೇವಾ ತೆರಿಗೆ ಅಥವಾ ಬಳಕೆ ತೆರಿಗೆಯನ್ನು ಬದಲಾಯಿಸಲು ಅದು ಮುಂದಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ತೆರಿಗೆ ಕಡಿತಗೊಳಿಸುವ ಬಗ್ಗೆ ನಿರ್ಧರಿಸಲು ಸರ್ಕಾರಿ ಮಂಡಳಿ ಮುಂದಿನ ತಿಂಗಳ ಆರಂಭದಲ್ಲಿ ಸಭೆ ಸೇರಲಿದೆ. ರಫ್ತುದಾರರಿಗೆ ಅನುಕೂಲಕರ ಬ್ಯಾಂಕ್ ಸಾಲ ದರಗಳನ್ನು ಒಳಗೊಂಡಿರುವ ಆರ್ಥಿಕ ಪ್ರೋತ್ಸಾಹಕಗಳ ಕುರಿತು ವ್ಯಾಪಾರ ಸಚಿವಾಲಯ ಮತ್ತು ಹಣಕಾಸು ಸಚಿವಾಲಯ ಚರ್ಚಿಸುತ್ತಿವೆ ಎಂದು ವರದಿ ಉಲ್ಲೇಖಿಸಿದೆ.

ವ್ಯಾಪಾರ ಸಚಿವಾಲಯವು ಇತರ ಪ್ರದೇಶಗಳಿಗೆ, ವಿಶೇಷವಾಗಿ ಲ್ಯಾಟಿನ್ ಅಮೆರಿಕ, ಆಫ್ರಿಕಾ ಮತ್ತು ಆಗ್ನೇಯ ಏಷ್ಯಾಕ್ಕೆ ರಫ್ತುಗಳನ್ನು ವಿಸ್ತರಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಭಾರತವು ಅಮೆರಿಕದ ಮಾರುಕಟ್ಟೆಯ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಶ್ರಮಿಸುತ್ತಿರುವುದರಿಂದ ಯುರೋಪಿಯನ್ ಒಕ್ಕೂಟದೊಂದಿಗೆ ನಡೆಯುತ್ತಿರುವ ವ್ಯಾಪಾರ ಮಾತುಕತೆಗಳು ಹೊಸ ಆಯಾಮವನ್ನು ಪಡೆಯಬಹುದು ಎಂದು ವರದಿ ಅಭಿಪ್ರಾಯಪಟ್ಟಿದೆ.

Courtesy : newindianexpress.com

ಭಾರತದ ಮೇಲೆ ಶೇ.50ರಷ್ಟು ಸುಂಕ ವಿಧಿಸಲು ಅಮೆರಿಕ ಅಧಿಸೂಚನೆ: ಆಗಸ್ಟ್ 27ರಿಂದ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...