Homeಮುಖಪುಟ'ಪಾಕಿಸ್ತಾನದೊಂದಿಗಿನ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆಗಳ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ...

‘ಪಾಕಿಸ್ತಾನದೊಂದಿಗಿನ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆಗಳ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು’: ರಾಹುಲ್ ಗಾಂಧಿ

- Advertisement -
- Advertisement -

“ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ದೇಶನ ನೀಡಿದ ಐದು ಗಂಟೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ  ಪಾಕಿಸ್ತಾನದೊಂದಿಗಿನ ಮಿಲಿಟರಿ ಸಂಘರ್ಷವನ್ನು ನಿಲ್ಲಿಸಲು ಒಪ್ಪಿಕೊಂಡರು” ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬುಧವಾರ (ಆ.27) ಹೇಳಿದ್ದಾರೆ.

ಬಿಹಾರದ ಮುಝಪ್ಪರ್‌ಪುರ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಿದರು. ‘ವೋಟರ್ ಅಧಿಕಾರ್’ ಯಾತ್ರೆಯ ಭಾಗವಾಗಿ ನಡೆದ ರ‍್ಯಾಲಿಯಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳಾದ ಡಿಎಂಕೆಯ ಎಂ.ಕೆ ಸ್ಟಾಲಿನ್ ಮತ್ತು ಆರ್‌ಜೆಡಿಯ ತೇಜಸ್ವಿ ಯಾದವ್ ಸೇರಿದಂತೆ ಇತರರು ಭಾಗವಹಿಸಿದ್ದರು.

“ಟ್ರಂಪ್ ಇವತ್ತು ಏನು ಹೇಳಿದ್ದಾರೆ ನಿಮಗೆ ಗೊತ್ತಾ? ಭಾರತ-ಪಾಕಿಸ್ತಾನದ ನಡುವಿನ ಸಂಘರ್ಷ ತಾರಕಕ್ಕೇರಿದ್ದಾಗ, ಅವರು ಮೋದಿಯವರಿಗೆ ಕರೆ ಮಾಡಿ 24 ಗಂಟೆಗಳ ಒಳಗೆ ಯುದ್ದ ನಿಲ್ಲಿಸುವಂತೆ ಸ್ಪಷ್ಟವಾಗಿ ಹೇಳಿದ್ದರು ಮತ್ತು ಮೋದಿ ತಕ್ಷಣವೇ ಅದನ್ನು ಪಾಲಿಸಿದ್ದರು ಎಂದಿದ್ದಾರೆ. ಸಂಘರ್ಷ ನಿಲ್ಲಿಸಲು ಮೋದಿಯವರಿಗೆ ಟ್ರಂಪ್ 24 ಗಂಟೆಗಳ ಕಾಲಾವಕಾಶ ನೀಡಿದ್ದರು. ಆದರೆ, ಮೋದಿ ಅದನ್ನು 5 ಗಂಟೆಗಳಲ್ಲಿ ಪಾಲಿಸಿದರು” ಎಂದಿದ್ದಾರೆ.

ಟ್ರಂಪ್ ಶ್ವೇತಭವನದಲ್ಲಿ ನಡೆದ ಕ್ಯಾಬಿನೆಟ್ ಸಭೆಯನ್ನು ಉದ್ದೇಶಿಸಿ ಮಾತನಾಡಿ ವಿಡಿಯೋ ಉಲ್ಲೇಖಿಸಿ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ದ ನಿಲ್ಲಿಸಿದ್ದು ನಾನೇ ಎಂದು ಟ್ರಂಪ್ ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಇದನ್ನು ಕೇಂದ್ರ ಸರ್ಕಾರ ಅಲ್ಲಗಳೆದಿದೆ.

ಅಮೆರಿಕದ ಯಾವುದೇ ಮಧ್ಯಸ್ಥಿಕೆ ಇಲ್ಲದೆ ಭಾರತ ಮತ್ತು ಪಾಕಿಸ್ತಾನ ಸೇನೆಗಳ ನಡುವೆ ನೇರ ಮಾತುಕತೆ ನಡೆದ ನಂತರ ಮೇ ತಿಂಗಳಲ್ಲಿ ಸೇನಾ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ.

“ಟ್ರಂಪ್ ಹೇಳಿದ್ದನ್ನು ಮಾಧ್ಯಮಗಳು ನಿಮಗೆ ತೋರಿಸುವುದಿಲ್ಲ. ಏಕೆಂದರೆ, ಅವರು ಮೋದಿ ಮತ್ತು ಅವರ ಸ್ನೇಹಪರ ವ್ಯವಹಾರ ಉದ್ಯಮಿಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ ಹೊರತು, ನನ್ನಂತಹ ಜನರು, ಸ್ಟಾಲಿನ್ ಅಥವಾ ತೇಜಸ್ವಿಯವರ ಬಗ್ಗೆ ಅಲ್ಲ” ಎಂದು ರಾಹುಲ್ ಗಾಂಧಿ ಮಾಧ್ಯಮಗಳ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

“ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ‘ಗುಜರಾತ್ ಮಾದರಿ’ ಎಂದು ಹೇಳುತ್ತಿದ್ದರು. ಮತಗಳ್ಳತನವನ್ನೇ ಅವರು ಗುಜರಾತ್ ಮಾದರಿ ಎಂದಿರುವುದು. ಗುಜರಾತ್‌ನಿಂದಲೇ ಬಿಜೆಪಿ ಮತಗಳನ್ನು ಕದಿಯಲು ಶುರು ಮಾಡಿದೆ. ಮೋದಿ-ಅಮಿತ್‌ ಶಾ ಚುನಾವಣಾ ಆಯೋಗದ ಸಹಾಯದಿಂದ ಮತಗಳನ್ನು ಕದಿಯುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಬಿಹಾರದ ಮತದಾರರ ಪಟ್ಟಿಯಿಂದ ‘ಸಾವನ್ನಪ್ಪಿದವರು, ಸ್ಥಳಾಂತರಗೊಂಡವರು ಮತ್ತು ಒಂದಕ್ಕಿಂತ ಹೆಚ್ಚು ಬಾರಿ ನೋಂದಣಿಗೊಂಡವರು’ ಎಂದು ಕಾರಣಗಳನ್ನು ನೀಡಿ 65 ಲಕ್ಷ ಹೆಸರುಗಳನ್ನು ಕೈಬಿಟ್ಟಿದ್ದಕ್ಕೆ ರಾಹುಲ್ ಗಾಂಧಿ ವಿರೋಧ ವ್ಯಕ್ತಪಡಿಸಿದ್ದಾರೆ.

“ಬಿಹಾರದಲ್ಲಿ ಸಾವಿರಾರು ಜನರು ತಮ್ಮ ಹೆಸರುಗಳನ್ನು ತಪ್ಪಾಗಿ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ನಮಗೆ ದೂರು ನೀಡಿದ್ದಾರೆ. ಎಷ್ಟರ ಮಟ್ಟಿಗೆ ಎಂದರೆ ಅನೇಕ ಜೀವಂತ ಜನರನ್ನು ಸತ್ತಂತೆ ತೋರಿಸಲಾಗಿದೆ (ಕರಡು ಪಟ್ಟಿಯಲ್ಲಿ)” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಚುನಾವಣಾ ಆಯೋಗವು ಶ್ರೀಮಂತರಲ್ಲದ ದಲಿತರು, ಒಬಿಸಿಗಳು, ಅತ್ಯಂತ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಹೆಸರುಗಳನ್ನು ಅಳಿಸುತ್ತಿದೆ. ಕೇಂದ್ರದಲ್ಲಿ ಆಳ್ವಿಕೆ ನಡೆಸುತ್ತಿರುವ ಬಿಜೆಪಿ ಸಾಮಾನ್ಯ ಜನರ ಧ್ವನಿಯನ್ನು ಕೇಳಲು ಇಷ್ಟಪಡುವುದಿಲ್ಲ. ಈ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತ್ತು ಆಪಾದಿತ ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ 15 ದಿನಗಳ ‘ವೋಟರ್ ಅಧಿಕಾರ್’ ಯಾತ್ರೆ ಕೈಗೊಂಡಿದ್ದಾರೆ. ಯಾತ್ರೆ ಇನ್ನೂ ಮೂರು ದಿನಗಳ ಕಾಲ ಮುಂದುವರಿಯಲಿದೆ.

ಗಾಝಾದಲ್ಲಿ ಪತ್ರಕರ್ತರ ಹತ್ಯೆ ‘ಆಘಾತಕಾರಿ’ ಎಂದ ಭಾರತ: ನಾಗರಿಕರ ನರಮೇಧಕ್ಕೆ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...