Homeಮುಖಪುಟಅನುಕೂಲಕರ ಆದೇಶ ಪಡೆಯಲು ನ್ಯಾಯಾಧೀಶರನ್ನು ಸಂಪರ್ಕಿಸಿದ ಆರೋಪ: ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

ಅನುಕೂಲಕರ ಆದೇಶ ಪಡೆಯಲು ನ್ಯಾಯಾಧೀಶರನ್ನು ಸಂಪರ್ಕಿಸಿದ ಆರೋಪ: ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ದಿವಾಳಿತನ ಪ್ರಕರಣದಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು ಉನ್ನತ ನ್ಯಾಯಾಂಗದ ಸದಸ್ಯರೊಬ್ಬರು ಚೆನ್ನೈನಲ್ಲಿರುವ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯ (ಎನ್‌ಸಿಎಲ್‌ಎಟಿ) ನ್ಯಾಯಮೂರ್ತಿ ಶರದ್ ಕುಮಾರ್ ಶರ್ಮಾ ಅವರನ್ನು ಸಂಪರ್ಕಿಸಿದ್ದಾರೆ ಎಂಬ ಆರೋಪದ ಕುರಿತು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ ಎಂದು ಬಾರ್ & ಬೆಂಚ್ ಬುಧವಾರ (ಆ.27) ವರದಿ ಮಾಡಿದೆ.

ತನಿಖೆಯನ್ನು ಸುಪ್ರೀಂ ಕೋರ್ಟ್‌ನ ಪ್ರಧಾನ ಕಾರ್ಯದರ್ಶಿ ನಡೆಸಲಿದ್ದು, ಆ ಕರೆಯನ್ನು ನಿಜವಾಗಿಯೂ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮಾಡಿದ್ದಾರೆಯೇ. ಮಾಡಿದ್ದರೆ, ಕರೆ ಮಾಡಿದವರು ಯಾರು ಎಂದು ಪರಿಶೀಲನೆ ನಡೆಸಲಿದ್ದಾರೆ ಎಂದು ವರದಿ ಹೇಳಿದೆ.

ಈ ದೇಶದ ಉನ್ನತ ನ್ಯಾಯಾಂಗದ ಅತ್ಯಂತ ಗೌರವಾನ್ವಿತ ಸದಸ್ಯರಲ್ಲಿ ಒಬ್ಬರು” ನಮ್ಮ ತೀರ್ಪಿನ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ನ್ಯಾ. ಶರ್ಮಾ ಅವರು ಈ ತಿಂಗಳ ಆರಂಭದಲ್ಲಿ ಪ್ರಕರಣದಿಂದ ಹಿಂದೆ ಸರಿದಿದ್ದರು.

“ನಮ್ಮಲ್ಲಿ ಒಬ್ಬರಾದ (ನ್ಯಾಯಾಂಗ) ಸದಸ್ಯರನ್ನು, ಈ ದೇಶದ ಉನ್ನತ ನ್ಯಾಯಾಂಗದ ಅತ್ಯಂತ ಗೌರವಾನ್ವಿತ ಸದಸ್ಯರಲ್ಲಿ ಒಬ್ಬರು, ನಿರ್ದಿಷ್ಟ ಪಕ್ಷದ ಪರವಾಗಿ ಆದೇಶ ನೀಡಲು ಕೋರಿ ಸಂಪರ್ಕಿಸಿರುವುದು ತಿಳಿದು ನ್ಯಾಯಮಂಡಳಿಗೆ ಬೇಸರವಾಗಿದೆ” ಎಂದು ಆಗಸ್ಟ್ 13ರಂದು ನ್ಯಾ. ಶರ್ಮಾ ಹೇಳಿದ್ದರು. ಆದ್ದರಿಂದ, ನಾನು ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುತ್ತೇನೆ ಎಂದಿದ್ದರು.

ನ್ಯಾ. ಶರ್ಮಾ ಅವರು ವಿಚಾರಣೆಯಿಂದ ಹಿಂದೆ ಸರಿದ ಪ್ರಕರಣ ಹೈದರಾಬಾದ್ ಮೂಲದ ರಿಯಲ್ ಎಸ್ಟೇಟ್ ಕಂಪನಿಯಾದ ಕೆಎಲ್‌ಎಸ್‌ಆರ್ ಇನ್ಫ್ರಾಟೆಕ್ ಲಿಮಿಟೆಡ್ ವಿರುದ್ಧದ ದಿವಾಳಿತನ ಪ್ರಕ್ರಿಯೆಗೆ ಸಂಬಂಧಿಸಿದೆ.

ಕಂಪನಿಯು 2023ರಲ್ಲಿ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ(ಎನ್‌ಸಿಎಲ್‌ಟಿ) ಹೈದರಾಬಾದ್ ಪೀಠದ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿತ್ತು. ಹೈದರಾಬಾದ್ ಪೀಠದ ಆದೇಶ ಸಾಲದಾತ ಎಎಸ್ ಮೆಟ್ ಕಾರ್ಪ್ ಪ್ರೈವೇಟ್ ಲಿಮಿಟೆಡ್‌ ಕಂಪನಿಯು ಕೆಎಲ್‌ಎಸ್‌ಆರ್ ಇನ್ಫ್ರಾಟೆಕ್ ಲಿಮಿಟೆಡ್ ವಿರುದ್ದ ಕಾರ್ಪೊರೇಟ್ ದಿವಾಳಿತನ ಪರಿಹಾರ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅವಕಾಶ ನೀಡಿತ್ತು.

ಈ ಅರ್ಜಿಯನ್ನು ಚೆನ್ನೈನಲ್ಲಿರುವ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯಲ್ಲಿ (ಎನ್‌ಸಿಎಲ್‌ಎಟಿ) ಇಬ್ಬರು ಸದಸ್ಯರ ಕೋರಂ ಮುಂದೆ ಪಟ್ಟಿ ಮಾಡಲಾಗಿತ್ತು. ಈ ನಡುವೆ ನ್ಯಾ. ಶರ್ಮಾ ಅವರು ವಿಚಾರಣೆಯಿಂದ ಹಿಂದೆ ಸರಿದ ಕಾರಣ, ಹೊಸ ಕೋರಂ ಸ್ಥಾಪನೆಗಾಗಿ ಪ್ರಕರಣವನ್ನು ನ್ಯಾಯಮಂಡಳಿಯ ಅಧ್ಯಕ್ಷರ ಮುಂದೆ ಇಡುವ ಸಾಧ್ಯತೆ ಇದೆ.

ತೀರ್ಪಿನ ಮೇಲೆ ಪ್ರಭಾವ ಬೀರುವ ಪ್ರಯತ್ನಗಳನ್ನು ಉಲ್ಲೇಖಿಸಿ ನ್ಯಾ. ಶರ್ಮಾ ಅವರು ಇತರ ಪ್ರಕರಣಗಳ ವಿಚಾರಣೆಯಿಂದಲೂ ಕೂಡ ಹಿಂದೆ ಸರಿದಿದ್ದಾರೆ ಎಂದು ವರದಿಗಳು ಹೇಳಿವೆ.

ಜೂನ್ 11ರಂದು, ಶ್ರೀ ರಾಮಲಿಂಗ ಮಿಲ್ಸ್ ಮತ್ತು ಸಂಬಂಧಿತ ಕಂಪನಿಗಳಿಗೆ ಸಂಬಂಧಿಸಿದ ಮೇಲ್ಮನವಿಗಳನ್ನು ವಿಚಾರಣೆ ನಡೆಸುತ್ತಿದ್ದಾಗ, ಪ್ರತಿವಾದಿಯೊಬ್ಬರು ತಮ್ಮ ಪರವಾಗಿ ತೀರ್ಪು ಪಡೆಯಲು ಪ್ರಯತ್ನಿಸಿದ್ದಾರೆ ಎಂದು ನ್ಯಾ. ಶರ್ಮಾ ಹೇಳಿಕೊಂಡಿದ್ದರು ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ನವೆಂಬರ್ 2024ರಲ್ಲಿ, ಜೆಪ್ಪಿಯಾರ್ ಸಿಮೆಂಟ್ಸ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಶರ್ಮಾ ಅವರು, ಪ್ರಕರಣದ ಆದೇಶವನ್ನು ಕಾಯ್ದಿರಿಸುವಂತೆ ಕೋರಿ ನನ್ನನ್ನು ಸಂಪರ್ಕಿಸಲಾಗಿದೆ ಎಂದು ಹೇಳಿದ್ದರು ಮತ್ತು ಪ್ರಕರಣದಿಂದ ಹಿಂದೆ ಸರಿದಿದ್ದರು.

ನ್ಯಾಯಮೂರ್ತಿಗಳಾದ ಅಲೋಕ್ ಆರಾಧೆ, ವಿಪುಲ್ ಪಂಚೋಲಿ ಸುಪ್ರೀಂ ಕೋರ್ಟ್‌ ಪದೋನ್ನತಿಗೆ ಕೇಂದ್ರ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...