Homeಅಂತರಾಷ್ಟ್ರೀಯಉಕ್ರೇನ್‌ನಲ್ಲಿ ನಡೆಯುತ್ತಿರುವುದು 'ಮೋದಿ ಯುದ್ಧ': ಅಮೆರಿಕ ವಾಗ್ದಾಳಿ

ಉಕ್ರೇನ್‌ನಲ್ಲಿ ನಡೆಯುತ್ತಿರುವುದು ‘ಮೋದಿ ಯುದ್ಧ’: ಅಮೆರಿಕ ವಾಗ್ದಾಳಿ

- Advertisement -
- Advertisement -

ಉಕ್ರೇನ್ ಜೊತೆ ರಷ್ಯಾ ನಡೆಸುತ್ತಿರುವ ಯುದ್ಧವನ್ನು ಭಾರತದ ಪ್ರಧಾನಿ ನರೇಂದ್ರ ‘ಮೋದಿಯ ಯುದ್ಧ’ ಎಂದು ಅಮೆರಿಕದ ಶ್ವೇತಭವನದ ಅಧಿಕಾರಿಯೊಬ್ಬರು ಬಣ್ಣಿಸಿದ್ದು, ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುವಂತೆ ಭಾರತವನ್ನು ಒತ್ತಾಯಿಸಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಭಾರತದಿಂದ ರಫ್ತಾಗುವ ಸರಕುಗಳ ಮೇಲೆ ಅಮೆರಿಕ ವಿಧಿಸಿರುವ ಶೇಕಡ 50ರಷ್ಟು ಸುಂಕ ಬುಧವಾರದಿಂದ (ಆ.27) ಜಾರಿಗೆ ಬಂದಿದೆ. ಈ ಬೆನ್ನಲ್ಲೇ ಅಮೆರಿಕದ ವ್ಯಾಪಾರ ಸಲಹೆಗಾರ ಪೀಟರ್ ನವರೊ ಅವರು ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ರಷ್ಯಾದಿಂದ ತೈಲ ಖರೀದಿಸುವ ಮೂಲಕ ಉಕ್ರೇನ್ ಮೇಲಿನ ದಾಳಿಗೆ ಭಾರತ ಸಹಕಾರ ನೀಡುತ್ತಿದೆ ಎಂದು ಆರೋಪಿಸಿರುವ ಅಮೆರಿಕ, ಭಾರತದಿಂದ ರಫ್ತಾಗುವ ಸರಕುಗಳ ಮೇಲೆ ಶೇ.25ರಷ್ಟು ಸುಂಕ ಮತ್ತು ರಷ್ಯಾದಿಂದ ತೈಲ ಖರೀದಿಸಿದ್ದಕ್ಕೆ ಶೇ.25 ದಂಡ ಸೇರಿ ಶೇ.50ರಷ್ಟು ಸುಂಕ ವಿಧಿಸಿದೆ. ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಮೋದಿಯವರ ಗೆಳೆಯ ಟ್ರಂಪ್ ಭಾರತದ ಮೇಲೆ ವಿಶ್ವದಲ್ಲೇ ಅತೀ ಹೆಚ್ಚು ಸುಂಕ ವಿಧಿಸಿದ್ದಾರೆ.

ಅತೀ ಹೆಚ್ಚು ಸುಂಕ ಹೇರಿರುವುದನ್ನು ಅನ್ಯಾಯ ಎಂದು ಕರೆದಿರುವ ಭಾರತ, ರಷ್ಯಾದಿಂದ ತೈಲ ಖರೀದಿಸುವುದನ್ನು ಕಡಿಮೆ ಮಾಡುವುದಿಲ್ಲ ಎಂದಿದೆ. ತನ್ನ 1.4 ಶತಕೋಟಿ ಜನರ ಹಿತಾಸಕ್ತಿಗಳನ್ನು ಕಾಪಾಡಲು ತೈಲ ಸಂಬಂಧ ‘ಉತ್ತಮ ಒಪ್ಪಂದ’ ಮಾಡಿಕೊಳ್ಳಲು ಬಯಸುವುದಾಗಿ ಹೇಳಿದೆ.

ಫೆಬ್ರವರಿ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಪ್ರಾರಂಭಿಸುವ ಮೊದಲು ಭಾರತದ ಒಟ್ಟು ಕಚ್ಚಾ ತೈಲದ ಶೇ. 2ಕ್ಕಿಂತ ಕಡಿಮೆ ಪ್ರಮಾಣವನ್ನು ರಷ್ಯಾ ಪೂರೈಸುತ್ತಿತ್ತು. ಈಗ ರಷ್ಯಾದಿಂದ ತೈಲ ಆಮದಿನ ಪ್ರಮಾಣ ಶೇ. 35 ರಿಂದ40ರಷ್ಟು ಏರಿಕೆಯಾಗಿದೆ. ಈ ಮೂಲಕ ರಷ್ಯಾ ಭಾರತದ ಕಚ್ಚಾ ತೈಲು ಅತಿದೊಡ್ಡ ಮೂಲ ಎನಿಸಿಕೊಂಡಿದೆ ಎಂದು ಬಿಬಿಸಿ ವರದಿ ವಿವರಿಸಿದೆ.

ರಷ್ಯಾ ತೈಲದ ಅತಿದೊಡ್ಡ ಆಮದುದಾರ ರಾಷ್ಟ್ರವಾದ ಚೀನಾ ಅಥವಾ ರಷ್ಯಾದೊಂದಿಗೆ ಇನ್ನೂ ದೊಡ್ಡ ಪ್ರಮಾಣದ ವ್ಯಾಪಾರವನ್ನು ನಡೆಸುತ್ತಿರುವ ಯುರೋಪಿಯನ್ ಒಕ್ಕೂಟದ ಮೇಲೆ ಅಮೆರಿಕ ನಮ್ಮ ಮೇಲೆ ವಿಧಿಸಿದಂತೆ ಹೆಚ್ಚುವರಿ ಸುಂಕಗಳನ್ನು ವಿಧಿಸಿಲ್ಲ ಎಂದು ಭಾರತ ಗಮನಸೆಳೆದಿದೆ.

ಬ್ಲೂಮ್‌ಬರ್ಗ್ ಟಿವಿಗೆ ನೀಡಿದ ಸಂದರ್ಶನದಲ್ಲಿ ನವರೊ ಅವರು ಅಮೆರಿಕದ ಸುಂಕ ನಿಲುವನ್ನು ಪುನರುಚ್ಚರಿಸಿದ್ದಾರೆ.

“ಭಾರತ ಮಾಡುತ್ತಿರುವ ಕೆಲಸಗಳಿಂದ ಅಮೆರಿಕದಲ್ಲಿ ಎಲ್ಲರೂ ನಷ್ಟ ಅನುಭವಿಸುತ್ತಿದ್ದಾರೆ. ಗ್ರಾಹಕರು, ವ್ಯವಹಾರಗಳು ಮತ್ತು ಎಲ್ಲವೂ ನಷ್ಟ ಅನುಭವಿಸುತ್ತಿವೆ. ಭಾರತದ ಹೆಚ್ಚಿನ ಸುಂಕದಿಂದ ನಮ್ಮ ಉದ್ಯೋಗ, ಕಾರ್ಖಾನೆಗಳು, ಆದಾಯ ಮತ್ತು ಹೆಚ್ಚಿನ ವೇತನದ ಮೇಲೆ ಪರಿಣಾಮ ಬೀರುವುದರಿಂದ ಕಾರ್ಮಿಕರು ನಷ್ಟ ಅನುಭವಿಸುತ್ತಾರೆ. ನಮ್ಮ ತೆರಿಗೆದಾರರೂ ನಷ್ಟ ಅನುಭವಿಸುತ್ತಿದ್ದಾರೆ. ‘ನಾವು ಮೋದಿಯವರ ಯುದ್ಧಕ್ಕೆ ಹಣಕಾಸು ಒದಗಿಸುತ್ತಿದ್ದೇವೆ’ ಎಂದು ನವರೊ ಕಿಡಿಕಾರಿದ್ದಾರೆ.

ಉಕ್ರೇನ್‌ ಜೊತೆ ನಡೆಯುತ್ತಿರುವುದು ‘ಪುಟಿನ್ ಯುದ್ಧ’ ಎಂದು ನೀವು ಹೇಳುತ್ತೀರಾ ಎಂದು ಕೇಳಿದಾಗ, “ನಾನು ಮೋದಿ ಯುದ್ಧ’ ಎಂದು ಹೇಳಲು ಬಯಸುತ್ತೇನೆ. ಏಕೆಂದರೆ, ಉಕ್ರೇನ್‌ನ ಶಾಂತಿಯ ಹಾದಿ ಭಾಗಶಃ ನವದೆಹಲಿಯ ಮೂಲಕವೇ ಹಾದು ಹೋಗುತ್ತದೆ” ಎಂದು ನವರೋ ಹೇಳಿದ್ದಾರೆ.

“ನನಗೆ ಬೇಸರ ತರಿಸುವ ಸಂಗತಿಯೆಂದರೆ, ಭಾರತೀಯರು ಈ ವಿಷಯದಲ್ಲಿ ತುಂಬಾ ದುರಹಂಕಾರಿಗಳು. ನಮಗೆ ಹೆಚ್ಚಿನ ಸುಂಕ ಇಲ್ಲ, ನಮ್ಮದು ಸಾರ್ವಭೌಮತ್ವ, ನಾವು ಯಾರಿಂದ ಬೇಕಾದರು ತೈಲ ಖರೀದಿಸಿಬಹುದು, ನಮ್ಮದು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ಎಂಬ ಭಾವನೆ ಅವರಲ್ಲಿ ಇದೆ. ಹಾಗೆಯೇ ವರ್ತಿಸುತ್ತಿರಲಿ” ಎಂದು ನವರೋ ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕದ ಶೇ.50ರಷ್ಟು ಸುಂಕ ಹೇರಿಕೆ ಭಾರತದಲ್ಲಿ ಬಟ್ಟೆಯಿಂದ ಹಿಡಿದು ವಜ್ರದವರೆಗೆ ರಫ್ತು ವಲಯದಲ್ಲಿ ಕೆಲಸ ಮಾಡುತ್ತಿರುವ ಲಕ್ಷಾಂತರ ಜನರ ಜೀವನೋಪಾಯದ ಮೇಲೆ ಪ್ರಭಾವ ಬೀರಲಿದೆ ಎಂದು ವರದಿಗಳು ಹೇಳಿವೆ.

ಸುಂಕದ ವಿಚಾರದಲ್ಲಿ ಅಮೆರಿಕ-ಭಾರತ ನಡುವಿನ ವ್ಯಾಪಾರ ಸಂಬಂಧ ಹಳಸಿದೆ. ಪರಿಣಾಮ ಈ ವಾರದ ಆರಂಭದಲ್ಲಿ ಪ್ರಾರಂಭವಾಗಬೇಕಿದ್ದ ಉಭಯ ರಾಷ್ಟ್ರಗಳ ನಡುವಿನ ವ್ಯಾಪಾರ ಮಾತುಕತೆಗಳು ರದ್ದುಗೊಂಡಿವೆ. ಆದರೆ, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಅಮೆರಿಕದ ಪ್ರಮುಖ ಕಾರ್ಯತಂತ್ರದ ಪಾಲುದಾರನಾಗಿ ಉಳಿದಿರುವ ಭಾರತಕ್ಕೆ ಇನ್ನೂ ಒಂದು ಮಾರ್ಗದ ನಿರೀಕ್ಷೆಯಿದೆ ಎಂದು ವರದಿಗಳು ಹೇಳಿವೆ.

ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಅಮೆರಿಕದ ಮತ್ತೊಬ್ಬ ಅಧಿಕಾರಿಯಾದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಅವರ ಹೇಳಿಕೆಗಳು ಆ ದಿಕ್ಕಿನತ್ತ ಬೆರಳು ತೋರಿಸುತ್ತವೆ ಎಂದು ವಿಶ್ಲೇಷಕರು ಹೇಳುತ್ತಾರೆ.

“ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ, ಅಮೆರಿಕ ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಿದೆ. ನಾವು ಒಟ್ಟಿಗೆ ಸೇರಲಿದ್ದೇವೆ ಎಂದು ಭಾವಿಸುತ್ತೇನೆ” ಎಂದು ಬೆಸೆಂಟ್ ಅವರು ಬುಧವಾರ ಫಾಕ್ಸ್ ಬಿಸಿನೆಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಸುಂಕಗಳ ಪರಿಣಾಮವನ್ನು ತಗ್ಗಿಸಲು ತೆರಿಗೆಗಳನ್ನು ಕಡಿತಗೊಳಿಸುವುದಾಗಿ ಮೋದಿ ಭರವಸೆ ನೀಡಿದ್ದರು. ಬುಧವಾರ ಬಿಡುಗಡೆಯಾದ ಜುಲೈ ತಿಂಗಳ ಮಾಸಿಕ ಪರಿಶೀಲನಾ ವರದಿಯಲ್ಲಿ, ಭಾರತದ ಹಣಕಾಸು ಸಚಿವಾಲಯವು ಪ್ರಸ್ತುತ ನಡೆಯುತ್ತಿರುವ ಭಾರತ-ಯುಎಸ್ ವ್ಯಾಪಾರ ಮಾತುಕತೆಗಳು ಈ ನಿಟ್ಟಿನಲ್ಲಿ ‘ನಿರ್ಣಾಯಕ’ ಎಂದು ಬಿಬಿಸಿ ವರದಿ ಹೇಳಿದೆ.

ಅಮೆರಿಕದ ಹೆಚ್ಚುವರಿ ಸುಂಕ ಹೇರಿಕೆಯು ಅಮೆರಿಕಕ್ಕೆ ಭಾರತದ ಒಟ್ಟಾರೆ ರಫ್ತಿನ ಅರ್ಧ ಭಾಗದ ಮೇಲೆ ಪರಿಣಾಮ ಬೀರಲಿದೆ. ಸುಂಕ ಹೆಚ್ಚಳವು ಅಮೆರಿಕ-ಭಾರತ ನಡುವೆ ವ್ಯಾಪಾರ ಸಂಬಂಧ ಹದೆಗೆಟ್ಟಿರುವುದನ್ನು ಎತ್ತಿ ತೋರಿಸುತ್ತದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಬುಧವಾರ ವರದಿ ಮಾಡಿದೆ.

ಭಾರತ ಸರ್ಕಾರವು ಅಮೆರಿಕದ ಸುಂಕ ಹೇರಿಕೆ 48.2 ಬಿಲಿಯನ್ ಡಾಲರ್ ಮೌಲ್ಯದ ರಫ್ತಿನ ಮೇಲೆ ಪರಿಣಾಮ ಬೀರಲಿದೆ ಎಂದು ಅಂದಾಜಿಸಿದೆ. ಹೊಸ ಸುಂಕ ಹೇರಿಕೆ ಅಮೆರಿಕಕ್ಕೆ ರಫ್ತು ಮಾಡುವ ಸರಕುಗಳಿಂದ ಭಾರತಕ್ಕೆ ಯಾವುದೇ ವಾಣಿಜ್ಯಿಕ ಲಾಭ ಸಿಗದಂತೆ ಮಾಡಲಿದೆ. ಉದ್ಯೋಗ ನಷ್ಟಕ್ಕೆ ಕಾರಣವಾಗಲಿದೆ ಮತ್ತು ಆರ್ಥಿಕ ಬೆಳವಣಿಗೆಯನ್ನು ನಿಧಾನಗೊಳಿಸಲಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾಗಿ ವರದಿ ವಿವರಿಸಿದೆ.

ಶೇ.50ರಷ್ಟು ಸುಂಕ ಹೇರಿದ ಅಮೆರಿಕ: ಭಾರತದ 48 ಬಿಲಿಯನ್ ಡಾಲರ್ ರಫ್ತಿಗೆ ಹೊಡೆತ ಬೀಳುವ ಸಾಧ್ಯತೆ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...