Homeಮುಖಪುಟನ್ಯಾಯಮೂರ್ತಿ ಮುರಳೀಧರ್ ಅವರನ್ನು ವರ್ಗಾಯಿಸಲು 'ಕೊಲಿಜಿಯಂ ಮೇಲೆ ಸರ್ಕಾರ ಒತ್ತಡ' ಹೇರಿತ್ತು: ನ್ಯಾ. ಲೋಕೂರ್ ಆರೋಪ

ನ್ಯಾಯಮೂರ್ತಿ ಮುರಳೀಧರ್ ಅವರನ್ನು ವರ್ಗಾಯಿಸಲು ‘ಕೊಲಿಜಿಯಂ ಮೇಲೆ ಸರ್ಕಾರ ಒತ್ತಡ’ ಹೇರಿತ್ತು: ನ್ಯಾ. ಲೋಕೂರ್ ಆರೋಪ

- Advertisement -
- Advertisement -

ದೆಹಲಿ ಹೈಕೋರ್ಟ್‌ನಿಂದ ನ್ಯಾಯಮೂರ್ತಿ ಎಸ್. ಮುರಳೀಧರ್ ಅವರನ್ನು ವರ್ಗಾವಣೆ ಮಾಡುವಂತೆ ಕೇಂದ್ರ ಸರ್ಕಾರವು ಕೊಲಿಜಿಯಂ ಮೇಲೆ ಪದೇ ಪದೇ ಒತ್ತಡ ಹೇರುತ್ತಿತ್ತು. ಆದರೆ, ವರ್ಗಾವಣೆಯನ್ನು ವಿರೋಧಿಸಿದ ಪ್ರಮುಖ ನ್ಯಾಯಾಧೀಶರು ನಿವೃತ್ತರಾಗುವವರೆಗೂ ಅದು ಸಾಧ್ಯವಾಗಿರಲಿಲ್ಲ ಎಂದು ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮದನ್ ಬಿ. ಲೋಕೂರ್ ಆರೋಪಿಸಿದ್ದಾರೆ.

“ತಾನು ಸುಪ್ರೀಂ ಕೋರ್ಟ್‌ನಲ್ಲಿದ್ದಾಗ ನ್ಯಾ. ಎಸ್. ಮುರಳೀಧರ್ ಅವರನ್ನು ವರ್ಗಾವಣೆ ಮಾಡುವಂತೆ ಕೇಂದ್ರ ಸರ್ಕಾರ ಒತ್ತಾಯಿಸಿತ್ತು. ಆದರೆ, ನಾನು ವಿರೋಧಿಸಿದ್ದರಿಂದ ಅದು ಕಾರ್ಯಸಾಧ್ಯ ಆಗಲಿಲ್ಲ ಎಂದು ನ್ಯಾ. ಮರಳೀಧರ್ ಸಂಗ್ರಹದ ಇತ್ತೀಚೆಗೆ ಪ್ರಕಟಗೊಂಡ “[ಇನ್]ಕಂಪ್ಲೀಟ್ ಜಸ್ಟೀಸ್? ಸುಪ್ರೀಂ ಕೋರ್ಟ್ ಅಟ್ 75” ಎಂಬ ಪುಸ್ತಕದಲ್ಲಿ ಬರೆದ ಪ್ರಬಂಧದಲ್ಲಿ ನ್ಯಾ.ಲೋಕೂರ್ ನೆನಪಿಸಿಕೊಂಡಿದ್ದಾರೆ ಎಂದು livelaw.in ವರದಿ ಮಾಡಿದೆ.

“ಡಿಸೆಂಬರ್ 2018ರಲ್ಲಿ ತಾನು ನಿವೃತ್ತಿ ಹೊಂದಿದ ನಂತರ ಮುರಳೀಧರ್ ಅವರ ವರ್ಗಾವಣೆ ಬೇಡಿಕೆ ಮತ್ತೆ ಮುನ್ನಲೆಗೆ ಬಂದಿತ್ತು. ಆ ಕೊಲಿಜಿಯಂನಲ್ಲಿದ್ದ ನ್ಯಾ. ಎ.ಕೆ ಸಿಕ್ರಿ ಅವರು ಅದನ್ನು ವಿರೋಧಿಸಿದ್ದರು. ನ್ಯಾ. ಸಿಕ್ರಿ ಮಾರ್ಚ್ 2019ರಲ್ಲಿ ನಿವೃತ್ತರಾದ ನಂತರ, ಮುರಳೀಧರ್ ಅವರ ವರ್ಗಾವಣೆ ವಿಷಯ ಮತ್ತೆ ಚರ್ಚೆಗೆ ಬಂತು.  ಅಂತಿಮವಾಗಿ, ಫೆಬ್ರವರಿ 2020ರಲ್ಲಿ ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ‘ನಿರಂಕುಶವಾಗಿ’ ವರ್ಗಾಯಿಸಲಾಯಿತು ಎಂದು ನ್ಯಾಯಮೂರ್ತಿ ಲೋಕೂರ್ ತಮ್ಮ ಪ್ರಬಂಧದಲ್ಲಿ ಬರೆದಿಕೊಂಡಿದ್ದಾರೆ ಎಂದು ವರದಿ ವಿವರಿಸಿದೆ.

“ಸುಪ್ರೀಂ ಕೋರ್ಟ್ ಕೊಲಿಜಿಯಂನ ಕಾರ್ಯನಿರ್ವಹಣೆಯ ಪಾರದರ್ಶಕತೆಯ ಬಗ್ಗೆ ಹೇಳಲೇಬೇಕಾದ ವಿಷಯವಿದೆ. ಒಂದು ಸಂದರ್ಭದಲ್ಲಿ, ಕಾರ್ಯಾಂಗವು ಸಿಜೆಐ ಅವರಿಗೆ ವರ್ಗಾವಣೆ ಮಾಡಲು ಸಲಹೆ ನೀಡಿದೆ ಎಂಬ ಸ್ಪಷ್ಟವಾದ ಅನಿಸಿಕೆ ನನಗೆ ಬಂತು. ಅದು ನ್ಯಾ. ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ವರ್ಗಾವಣೆ ಮಾಡಿದ ವಿಷಯದಲ್ಲಿ. ಏನೋ ಒಂದು ವಿಷಯ ಖಂಡಿತವಾಗಿಯೂ ವರ್ಗಾವಣೆಗೆ ಆಧಾರವಾಗುವುದಿಲ್ಲ. ಹಾಗಾಗಿ, ನಾನು ವರ್ಗಾವಣೆ ಪ್ರಸ್ತಾವನೆಗೆ ನನ್ನ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದೆ. ಸಿಜೆಐ ನನ್ನ ಅಭಿಪ್ರಾಯವನ್ನು ಸುಲಭವಾಗಿ ಒಪ್ಪಿಕೊಂಡಿದ್ದರು. ನಾನು ಸುಪ್ರೀಂ ಕೋರ್ಟ್‌ನಿಂದ ನಿವೃತ್ತಿಯಾದ ನಂತರ, ವರ್ಗಾವಣೆ ವಿಷಯ ಮತ್ತೆ ಮುನ್ನಲೆಗೆ ಬಂದಿತ್ತು. ಆದರೆ, ಸುಪ್ರೀಂ ಕೋರ್ಟ್ ಕೊಲಿಜಿಯಂಗೆ ಹೊಸದಾಗಿ ಸೇರ್ಪಡೆಯಾದ ನ್ಯಾ. ಸಿಕ್ರಿ ಕೂಡ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದರು. ಅವರು ಕೂಡ ಪ್ರಸ್ತಾವಿತ ವರ್ಗಾವಣೆಯನ್ನು ವಿರೋಧಿಸಿದ್ದರು. ಸಿಕ್ರಿ ಅವರ ನಿವೃತ್ತಿಯ ನಂತರ, ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ನಿರಂಕುಶವಾಗಿ ವರ್ಗಾಯಿಸಲಾಯಿತು” ಎಂದು ಲೋಕೂರ್ ಬರೆದಿದುಕೊಂಡಿದ್ದಾರೆ.

ಸ್ವತಂತ್ರ ಮತ್ತು ತೀಕ್ಷ್ಣ ತೀರ್ಪುಗಳಿಗೆ ಹೆಸರುವಾಸಿಯಾಗಿದ್ದ ನ್ಯಾಯಮೂರ್ತಿ ಮುರಳೀಧರ್ ಅವರನ್ನು ಅಂತಿಮವಾಗಿ ಫೆಬ್ರವರಿ 2020ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು. ಈ ನಿರ್ಧಾರವು ಆ ಸಮಯದಲ್ಲಿ ಸಾಕಷ್ಟು ವಿವಾದವನ್ನು ಹುಟ್ಟುಹಾಕಿತ್ತು. ಏಕೆಂದರೆ, 2020ರ ದೆಹಲಿ ಗಲಭೆಯ ಸಮಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಹೊತ್ತಿರುವ ರಾಜಕಾರಣಿಗಳ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲು ವಿಫಲವಾದ ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಕೆಲವೇ ಗಂಟೆಗಳ ನಂತರ ಮುರಳೀಧರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು ಎಂದು livelaw.in ವಿವರಿಸಿದೆ. 

ದೆಹಲಿ ಗಲಭೆ ವಿಷಯದಲ್ಲಿ ನ್ಯಾಯಮೂರ್ತಿ ಮುರಳೀಧರ್ ಅವರು ನೀಡಿದ್ದ ದಿಟ್ಟ ಆದೇಶಗಳಿಂದಾಗಿ ಅವರು ಪರಿಣಾಮಗಳನ್ನು ಎದುರಿಸಿರಬಹುದು ಎಂದು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಓಕಾ ಇತ್ತೀಚಿಗೆ ಹೇಳಿದ್ದರು ಎಂದು ವರದಿ ಹೇಳಿದೆ.

Courtesy :livelaw.in

ಅನುಕೂಲಕರ ಆದೇಶ ಪಡೆಯಲು ನ್ಯಾಯಾಧೀಶರನ್ನು ಸಂಪರ್ಕಿಸಿದ ಆರೋಪ: ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...