Homeಮುಖಪುಟಅಸ್ಸಾಂ ಸಿಎಂ ಬಗ್ಗೆ ಹೇಳಿಕೆ: ಪತ್ರಕರ್ತ ಅಭಿಸಾರ್ ಶರ್ಮಾಗೆ ಬಂಧನದಿಂದ ರಕ್ಷಣೆ ನೀಡಿದ ಸುಪ್ರೀಂ ಕೋರ್ಟ್

ಅಸ್ಸಾಂ ಸಿಎಂ ಬಗ್ಗೆ ಹೇಳಿಕೆ: ಪತ್ರಕರ್ತ ಅಭಿಸಾರ್ ಶರ್ಮಾಗೆ ಬಂಧನದಿಂದ ರಕ್ಷಣೆ ನೀಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕೋಮು ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದಕ್ಕೆ ದಾಖಲಿಸಲಾದ ಪ್ರಕರಣದಲ್ಲಿ ಪತ್ರಕರ್ತ ಅಭಿಸಾರ್ ಶರ್ಮಾ ಅವರಿಗೆ ನಾಲ್ಕು ವಾರಗಳ ಕಾಲ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ.

ತನ್ನ ವಿರುದ್ಧದ ಎಫ್‌ಐಆರ್ ರದ್ದುಗೊಳಿಸುವಂತೆ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳಾದ ಎಂ.ಎಂ ಸುಂದ್ರೇಶ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು, ಗುವಾಹಟಿ ಹೈಕೋರ್ಟ್‌ಗೆ ಹೋಗುವಂತೆ ನಿರ್ದೇಶನ ನೀಡಿದೆ.

ಆಗಸ್ಟ್ 21ರಂದು ಶರ್ಮಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಕಾಯ್ದೆಯಡಿ ರಾಷ್ಟ್ರೀಯ ಏಕತೆ ಮತ್ತು ಸಾರ್ವಭೌಮತ್ವಕ್ಕೆ ಅಪಾಯವನ್ನುಂಟುಮಾಡುವ ಕೃತ್ಯಗಳು, ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ರಾಷ್ಟ್ರೀಯ ಏಕೀಕರಣಕ್ಕೆ ಪೂರ್ವಾಗ್ರಹ ಪೀಡಿತ ಹೇಳಿಕೆಗಳನ್ನು ನೀಡಿದ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯ ಅಲೋಕ್ ಬರುವಾ ಅವರ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಎಬಿವಿಪಿ ಅಸ್ಸಾಂನ ಆಡಳಿತಾರೂಢ ಬಿಜೆಪಿಯ ಸೈದ್ಧಾಂತಿಕ ಪೋಷಕರಾದ ಆರ್‌ಎಸ್‌ಎಸ್‌ನ ವಿದ್ಯಾರ್ಥಿ ವಿಭಾಗವಾಗಿದೆ.

ಶರ್ಮಾ ಅವರು ಕೇಂದ್ರ ಮತ್ತು ಅಸ್ಸಾಂ ಸರ್ಕಾರವನ್ನು ಅಪಹಾಸ್ಯ ಮಾಡಿ ಅವಹೇಳನ ಮಾಡಿದ್ದಾರೆ. ಇದರಿಂದಾಗಿ ರಾಷ್ಟ್ರೀಯ ಸಾರ್ವಭೌಮತ್ವಕ್ಕೆ ಅಪಾಯ ಎದುರಾಗಿದೆ ಎಂದು ದೂರುದಾರ ಅಲೋಕ್ ಬರುವಾ ಆರೋಪಿಸಿದ್ದಾರೆ. ಶರ್ಮಾ ಅವರು ‘ರಾಮರಾಜ್ಯದ ತತ್ವವನ್ನು ಅಪಹಾಸ್ಯ ಮಾಡಿದ್ದಾರೆ’ ಮತ್ತು ಅಸ್ಸಾಂನ ಮುಖ್ಯಮಂತ್ರಿ ವಿರುದ್ಧ ಕೋಮು ರಾಜಕೀಯದ ಆರೋಪ ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಶರ್ಮಾ ಈ ಪ್ರಕರಣವನ್ನು ‘ಸಂಪೂರ್ಣವಾಗಿ ಆಧಾರರಹಿತ’ ಎಂದಿದ್ದಾರೆ.

ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ, “ಭಿನ್ನಾಭಿಪ್ರಾಯಗಳನ್ನು ಅಡಗಿಸಲು ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಈ ಪ್ರಕರಣದಲ್ಲಿ ಬಿಎನ್‌ಎಸ್‌ ನಿಬಂಧನೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ನಾನು ಮಾಡಿರುವ ಆರೋಪಗಳನ್ನು ಅಸ್ಸಾಂ ಸಿಎಂ ಮಾಡಿರುವ ಭಾಷಣಗಳ ವಿಡಿಯೋ ತುಣುಕುಗಳು ಇತರ ಆಧಾರಗಳು ಪುಷ್ಠೀಕರಿಸುತ್ತವೆ” ಎಂದು ಶರ್ಮಾ ಹೇಳಿದ್ದಾರೆ.

ಬಿಎನ್‌ಎಸ್‌ ಸೆಕ್ಷನ್ 152ರ ಅಡಿ ಪ್ರಕರಣ ದಾಖಲಿಸಿರುವುದನ್ನು ಶರ್ಮಾ ಪ್ರಶ್ನಿಸಿದ್ದು, ಇದು ಐಪಿಸಿಯಲ್ಲಿ ರದ್ದಾದ ‘ದೇಶದ್ರೋಹ ಕಾನೂನಿನ’ ಹೊಸ ರೂಪ ಎಂದಿದ್ದಾರೆ.

ಮೇ 2022ರಲ್ಲಿ, ಸುಪ್ರೀಂ ಕೋರ್ಟ್ ಐಪಿಸಿ ಸೆಕ್ಷನ್ 124ಎ (ಬಿಎನ್‌ಎಸ್‌ ಸೆಕ್ಷನ್ 152) ಅಡಿಯಲ್ಲಿ ‘ದೇಶದ್ರೋಹ ಪ್ರಕರಣಗಳ ವಿಚಾರಣೆಗಳು ಮತ್ತು ಕ್ರಿಮಿನಲ್ ಮೊಕದ್ದಮೆ’ಗಳನ್ನು ಸ್ಥಗಿತಗೊಳಿಸಲು ಆದೇಶಿಸಿತ್ತು.

ಜುಲೈ 2024ರಲ್ಲಿ ಕ್ರಿಮಿನಲ್ ಕಾನೂನು ಐಪಿಸಿಯಿಂದ ಬಿಎನ್‌ಎಸ್ ಎಂದು ಬದಲಾದಾಗ, ಸೆಕ್ಷನ್ 152ರ ರೂಪದಲ್ಲಿ ಸೆಕ್ಷನ್ 124ಎ ಅನ್ನು ಮತ್ತೆ ಪರಿಚಯಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಈಗಾಗಲೇ ವಾದ ಮಂಡನೆಯಾಗಿದೆ.

ನ್ಯಾಯಮೂರ್ತಿ ಮುರಳೀಧರ್ ಅವರನ್ನು ವರ್ಗಾಯಿಸಲು ‘ಕೊಲಿಜಿಯಂ ಮೇಲೆ ಸರ್ಕಾರ ಒತ್ತಡ’ ಹೇರಿತ್ತು: ನ್ಯಾ. ಲೋಕೂರ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...