Homeಮುಖಪುಟತಮಿಳುನಾಡು| ಪಕ್ಷದ ಕಚೇರಿಯಲ್ಲಿ ನೆರವೇರಿದ ಅಂತರಜಾತಿ ವಿವಾಹ: ಇಂತಹ ಸಮಾರಂಭಗಳಿಗೆ ರಾಜ್ಯದ ಪಕ್ಷದ ಕಚೇರಿಗಳಲ್ಲಿ ಅವಕಾಶ-ಸಿಪಿಎಂ

ತಮಿಳುನಾಡು| ಪಕ್ಷದ ಕಚೇರಿಯಲ್ಲಿ ನೆರವೇರಿದ ಅಂತರಜಾತಿ ವಿವಾಹ: ಇಂತಹ ಸಮಾರಂಭಗಳಿಗೆ ರಾಜ್ಯದ ಪಕ್ಷದ ಕಚೇರಿಗಳಲ್ಲಿ ಅವಕಾಶ-ಸಿಪಿಎಂ

- Advertisement -
- Advertisement -

ಚೆನ್ನೈ: ಅಂತರಜಾತಿ ವಿವಾಹಗಳಿಗೆ ಕುಟುಂಬಗಳಿಂದ ವಿರೋಧ ಎದುರಾದಲ್ಲಿ ಅಂತಹ ವಿವಾಹಗಳನ್ನು ಸಿಪಿಐ(ಎಂ) ಪಕ್ಷದ ಕಚೇರಿಗಳಲ್ಲಿ ನೆರವೇರಿಸಲು ಅವಕಾಶ ನೀಡಲಾಗುತ್ತದೆ ಎಂದು ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‍ವಾದಿ) ಪಕ್ಷದ (ಸಿಪಿಎಂ) ತಮಿಳುನಾಡು ರಾಜ್ಯ ಘಟಕದ ಕಾರ್ಯದರ್ಶಿ ಪಿ.ಷಣ್ಮುಗಂ ಅವರು ಇತ್ತೀಚೆಗೆ ಪ್ರಕಟಿಸಿದ್ದಾರೆ.

ನಿನ್ನೆ ( ಆ.27) ವಿನಾಯಕ ಚತುರ್ಥಿಯ ದಿನದಂದು ತಿರುತ್ತುರೈಪೂಂಡಿಯ ಸಿಪಿಐ(ಎಂ) ಕಚೇರಿಯಲ್ಲಿ ಒಂದು ಅಂತರಜಾತಿ ವಿವಾಹ ನೆರವೇರಿಸುವ ಮೂಲಕ ಇದಕ್ಕೆ ಚಾಲನೆ ನೀಡಲಾಗಿದೆ.

ವಧು, ಅಮೃತಾ, ತಿರುವಾರೂರು ಜಿಲ್ಲೆಯ ವಾರಂಬಿಯಂ ಪ್ರದೇಶದವರು. ವರ ಸಂಜಯ್‌ಕುಮಾರ್ ಪುದುಕೊಟ್ಟೈ ಜಿಲ್ಲೆಯ ಮಾಥೂರಿನವರು. ಇಬ್ಬರೂ ಏಳು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಕುಟುಂಬಗಳೂ ಆರಂಭದಲ್ಲಿ ಮದುವೆಗೆ ಒಪ್ಪಿದ್ದವು. ತಿರುವಾರೂರು ಜಿಲ್ಲೆಯ ಒಂದು ಪ್ರಮುಖ ಹಿಂದೂ ದೇವಸ್ಥಾನದಲ್ಲಿ ಆಗಸ್ಟ್ 27ರಂದು ವಿವಾಹ ಸಮಾರಂಭ ನಡೆಸಲು ನಿಶ್ಚಯಿಸಲಾಗಿತ್ತು. ಆದರೆ, ಸಂಜಯ್‌ಕುಮಾರ್ ಅವರ ಚಿಕ್ಕಪ್ಪ ಮದುವೆಗೆ ವಿರೋಧ ವ್ಯಕ್ತಪಡಿಸಿ, ಮದುವೆಯನ್ನು ನಿಲ್ಲಿಸುವ ಉದ್ದೇಶದಿಂದ ಸಂಜಯ್‌ಕುಮಾರ್ ಅವರನ್ನು ಅಪಹರಿಸಿದ್ದರು. ಈ ಸಂಬಂಧ ತಿರುತ್ತುರೈಪೂಂಡಿ ಪೊಲೀಸರಿಗೆ ದೂರು ನೀಡಲಾಗಿತ್ತು.

ವಿನಾಯಕ ಚತುರ್ಥಿಯ ದಿನ ಪೊಲೀಸರು ವರ ಸಂಜಯ್‌ಕುಮಾರ್ ಅವರನ್ನು ಪತ್ತೆಹಚ್ಚಿ ರಕ್ಷಿಸಿ ತಿರುತ್ತುರೈಪೂಂಡಿ ಪೊಲೀಸ್ ಠಾಣೆಗೆ ಕರೆತಂದರು. ಅಂದೇ ಸಂಜೆ, ತಿರುತ್ತುರೈಪೂಂಡಿಯಲ್ಲಿರುವ ಸಿಪಿಐ(ಎಂ) ಕಚೇರಿಯಲ್ಲಿ ವಿವಾಹ ನೆರವೇರಿಸಲಾಯಿತು. ಸಿಪಿಐ(ಎಂ)ನ ರಾಜ್ಯ ಸಮಿತಿ ಸದಸ್ಯ ಐ.ವಿ. ನಾಗರಾಜನ್ ಅವರು ತಿರುವಾರೂರು ಜಿಲ್ಲಾ ಕಾರ್ಯದರ್ಶಿ ಟಿ. ಮುರುಗೈಯನ್ ಅವರ ಸಮ್ಮುಖದಲ್ಲಿ ವಿವಾಹ ನೆರವೇರಿಸಿದರು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ನವ ದಂಪತಿಗೆ ರಕ್ಷಣೆ ನೀಡುವಂತೆ ಪಕ್ಷದಿಂದ ತಿರುತ್ತುರೈಪೂಂಡಿ ಪೊಲೀಸರಿಗೆ ಮನವಿ ಸಲ್ಲಿಸಲಾಗಿದೆ.

ಜಾತಿ ಹಿಂಸಾಚಾರಗಳ ವಿರುದ್ಧ ಹೋರಾಟಕ್ಕೆ ಕರೆ

ಚೆನ್ನೈನಲ್ಲಿ ನಡೆದ ಜಾತಿ ಹತ್ಯೆಗಳ ವಿರುದ್ಧದ ಸಭೆಯಲ್ಲಿ ಮಾತನಾಡಿದ ಪಿ. ಷಣ್ಮುಗಂ ಅವರು, ‘ನಾವು ತಿರುನೆಲ್ವೇಲಿಯಲ್ಲಿ ನಮ್ಮ ಕಚೇರಿಯಲ್ಲಿ ಮದುವೆ ನಡೆಸಿದಾಗ ವಧುವಿನ ಸಂಬಂಧಿಕರು ಕಚೇರಿಯನ್ನು ಹಾಳುಗೆಡವಿದರು. ಆದರೂ ನಾವು ಅಂತರಜಾತಿ ವಿವಾಹಗಳನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ. ಪ್ರಗತಿಪರ ಶಕ್ತಿಗಳು ಎಲ್ಲ ಸಮುದಾಯಗಳಲ್ಲಿಯೂ ಇವೆ, ನಾವು ಅವರನ್ನು ಗುರುತಿಸಿ ಸಂಘಟಿಸಬೇಕು. ಆಗ ಮಾತ್ರ ಜಾತಿವಾದಿ ಶಕ್ತಿಗಳ ವಿರುದ್ಧ ಸಂಘಟಿತ ಹೋರಾಟವನ್ನು ರೂಪಿಸಬಹುದು’ ಎಂದರು.

2015ರಲ್ಲಿ ಆಗಿನ ಸಿಪಿಐ(ಎಂ) ಶಾಸಕಾಂಗ ಪಕ್ಷದ ನಾಯಕ ಎ. ಸೌಂದರರಾಜನ್ ಅವರು ಜಾತಿ ಹತ್ಯೆಗಳನ್ನು ತಡೆಯಲು ವಿಶೇಷ ಕಾಯ್ದೆಯನ್ನು ಜಾರಿಗೊಳಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದರು. ಆದರೆ, ಅದು ಸೋಲಪ್ಪಿತು ಎಂದು ನೆನಪಿಸಿಕೊಂಡರು.

‘ಮಧ್ಯಂತರ ಜಾತಿಗಳು ಮತ್ತು ಪರಿಶಿಷ್ಟ ಜಾತಿಗಳ ನಡುವೆ ತಪ್ಪು ತಿಳಿವಳಿಕೆ ಇದೆ. ಇದು ಅನೇಕ ಯುವ ದಂಪತಿಗಳ ಕೊಲೆಗೆ ಕಾರಣವಾಗಿದೆ. ಜಾತಿ ಗೌರವದ ಹೆಸರಿನಲ್ಲಿ ನಡೆಯುವ ಮರ್ಯಾದೆಗೇಡು ಹತ್ಯೆಗಳನ್ನು ತಡೆಯಲು ಕಾನೂನು ಜಾರಿಗೊಳಿಸಬೇಕು’ ಎಂದು ಷಣ್ಮುಗಂ ಒತ್ತಾಯಿಸಿದರು.

ಈ ಸಂಬಂಧ ತಾವು, ಸಿಪಿಐ ರಾಜ್ಯ ಕಾರ್ಯದರ್ಶಿ ಆರ್. ಮುತ್ತರಸನ್ ಮತ್ತು ವಿಸಿಕೆ ನಾಯಕ ಥೋಳ್. ತಿರುಮಾವಳವನ್ ಅವರೊಂದಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿ ಮಾಡಿ ಅಂತಹ ಕಾನೂನನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದೇವೆ ಎಂದು ಹೇಳಿದರು.

‘ನಾವು 30 ನಿಮಿಷಗಳ ಕಾಲ ಮುಖ್ಯಮಂತ್ರಿಯವರಿಗೆ ಪರಿಸ್ಥಿತಿಯನ್ನು ವಿವರಿಸಿದ್ದೇವೆ. ಅವರು ನಮ್ಮ ಬೇಡಿಕೆಗೆ ಒಲವು ತೋರಿಸಿದ್ದಾರೆ ಎಂದು ನಮಗೆ ಅನಿಸಿತು. ಅವರು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಕಾನೂನನ್ನು ಜಾರಿಗೊಳಿಸಬೇಕು’ ಎಂದರು.

ಕೇವಲ ತಿರುನೆಲ್ವೇಲಿ ಜಿಲ್ಲೆಯಲ್ಲಿಯೇ ಒಂದು ವರ್ಷದಲ್ಲಿ 240 ಮರ್ಯಾದೆಗೇಡು ಹತ್ಯೆಗಳು ದಾಖಲಾಗಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣ ಮೀರಿ ಹೋಗಿದೆ ಎಂದು ಷಣ್ಮುಗಂ ಅವರು  ಹೇಳಿದರು.

‘ಈಗ ಕಾಯ್ದೆಗಾಗಿ ಸಾರ್ವಜನಿಕರ ಬೆಂಬಲ ಹೆಚ್ಚುತ್ತಿದೆ ಮತ್ತು ಸರ್ಕಾರ ಈ ಅವಕಾಶವನ್ನು ಬಳಸಿಕೊಳ್ಳಬೇಕು’ ಎಂದು ಅವರು ಹೇಳಿದರು.

ಕೇರಳ| ರಾಜ್ಯ ಬಿಜೆಪಿ ಉಪಾಧ್ಯಕ್ಷ ಕೃಷ್ಣಕುಮಾರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...