Homeಮುಖಪುಟಸಿಎಂಗೆ ಸಂಭಾಲ್ ಹಿಂಸಾಚಾರದ ವರದಿ ಸಲ್ಲಿಕೆ: ಹಿಂದೂ ವಲಸೆಯತ್ತ ಆಯೋಗದ ಒತ್ತು, ನಿಜಾಂಶವಿಲ್ಲ ಎಂದ ಜನ

ಸಿಎಂಗೆ ಸಂಭಾಲ್ ಹಿಂಸಾಚಾರದ ವರದಿ ಸಲ್ಲಿಕೆ: ಹಿಂದೂ ವಲಸೆಯತ್ತ ಆಯೋಗದ ಒತ್ತು, ನಿಜಾಂಶವಿಲ್ಲ ಎಂದ ಜನ

- Advertisement -
- Advertisement -

ಸಂಭಾಲ್: 9 ತಿಂಗಳುಗಳ ನಂತರ ಸಂಭಾಲ್ ಹಿಂಸಾಚಾರ ಕುರಿತು ರಚಿಸಿದ್ದ ನ್ಯಾಯಾಂಗ ತನಿಖಾ ಆಯೋಗವು 450 ಪುಟಗಳ ವರದಿಯನ್ನು ಗುರುವಾರ ಮುಖ್ಯಮಂತ್ರಿ ಅವರಿಗೆ ಸಲ್ಲಿಸಿದೆ.

ಉತ್ತರಪ್ರದೇಶದ ಸಂಭಾಲ್‌ನಲ್ಲಿ ಸಂಭವಿಸಿದ ಹಿಂಸಾಚಾರ ಕುರಿತ ನ್ಯಾಯಾಂಗ ತನಿಖಾ ವರದಿ ಸೋರಿಕೆ ಆದ ನಂತರ ವಿವಾದ ಉಂಟಾಗಿ ತೀವ್ರ ಪ್ರತಿಕ್ರಿಯೆಗಳನ್ನು ಹುಟ್ಟು ಹಾಕಿದೆ. ಮುಸ್ಲಿಂ ಸಮುದಾಯದವರು ವರದಿಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿ, ಸರ್ಕಾರ ಈ ದುರಂತವನ್ನು ಸಮುದಾಯದ ನಡುವಣ ದ್ವೇಷವನ್ನು ಹೆಚ್ಚಿಸಲು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಳೆದ ವರ್ಷದ ನವೆಂಬರ್ 24ರಂದು ಸಂಭಾಲ್‌ನ ಐತಿಹಾಸಿಕ ಶಾಹಿ ಜಾಮಾ ಮಸೀದಿ ಬಳಿ ನಡೆದ ಸರಕಾರದ ಸಮೀಕ್ಷೆ ವೇಳೆ ಹಿಂಸಾಚಾರವು ಉದ್ಭವಿಸಿತ್ತು. ಆ ವೇಳೆ ಪೊಲೀಸ್ ಗುಂಡಿನ ದಾಳಿಯಲ್ಲಿ ಐದು ಮುಸ್ಲಿಂ ಯುವಕರು ಮೃತರಾದರು, ಅನೇಕರಿಗೆ ಗಾಯಗಳಾದವು ಮತ್ತು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಈ ಗಲಭೆಯ ನಂತರ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಿವೃತ್ತ ನ್ಯಾಯಾಧೀಶ ದೇವೇಂದ್ರಕುಮಾರ್ ಅರೋರಾ ನೇತೃತ್ವದ ನ್ಯಾಯಾಂಗ ಆಯೋಗವನ್ನು ರಚಿಸಿದರು. ಅವರೊಂದಿಗೆ ನಿವೃತ್ತ ಐಎಎಸ್ ಅಮಿತ್ ಮೋಹನ್ ಮತ್ತು ನಿವೃತ್ತ ಐಪಿಎಸ್ ಅರ್ವಿಂದ್ ಕುಮಾರ್ ಜೈನ್ ಇದ್ದರು.

ಹಿಂಸಾಚಾರದ ವಿಷಯಕ್ಕೆ ಸಂಬಂಧಿಸಿ ಕಾರಣವೇನು ಎಂಬ ಕುರಿತು ಈ ವರದಿ ಒತ್ತು ನೀಡಬೇಕಿತ್ತು. ಆದರೆ ಅದು ಹಿಂದೂ ಜನಸಂಖ್ಯೆಯ ವಲಸೆ ವಿಚಾರಕ್ಕೆ ಹೆಚ್ಚಿನ ಒತ್ತುಕೊಡುತ್ತದೆ. ವರದಿಯ ಪ್ರಕಾರ, ಸಂಭಾಲ್‌ನ ಹಿಂದೂ ಜನಸಂಖ್ಯೆ ಸ್ವಾತಂತ್ರ್ಯದ ಕಾಲದಲ್ಲಿ 45 ಶೇಕಡದಿಂದ ಇಂದಿಗೆ 15 ಶೇಕಡಕ್ಕೆ ಇಳಿದಿದೆ. ಸುಮಾರು 30 ಶೇಕಡ ಇಳಿಕೆ ನಡೆದಿದೆ, ಅದು ಗಲಭೆಗಳು ಮತ್ತು ಬೆದರಿಕೆಗಳ ಕಾರಣದಿಂದ ಸಂಭವಿಸಿದೆ ಎಂಬ ಆರೋಪವಿದೆ.

ಈ ವರದಿಯು ಸಂಭಾಲ್‌ನ ಮುಸ್ಲಿಂ ಸಮುದಾಯದಲ್ಲಿ ಅಸಹಮತಿಯ ಅಲೆ ಎಬ್ಬಿಸಿದೆ. ಶಾಹಿ ಜಾಮಾ ಮಸೀದಿ ಸಮಿತಿಯ ಪರವಾಗಿ ವಕೀಲ ಶಕೀಲ್ ವಾರ್ಸಿ ಅವರು ಮಾತನಾಡುತ್ತಾ, “ಇಂತಹ ವರದಿಯ ಆಧಾರದ ಮೇಲೆ ಯಾರನ್ನೂ ದಂಡಿಸಲಾಗದು. ನಿಜವಾದ ಸತ್ಯವನ್ನು ನ್ಯಾಯಾಲಯವೇ ನಿರ್ಧರಿಸಬೇಕು. ಹಿಂಸಾಚಾರವನ್ನು ಹಿಂದೂ ವಲಸೆಯೊಂದಿಗೆ ತಳಕುಹಾಕುವುದು ಅಡಳಿತಾತ್ಮಕ ರಾಜಕೀಯಕ್ಕೆ ಸೇರಿದ್ದು, ಅರ್ಥವಿಲ್ಲದದ್ದು,” ಎಂದರು.

ಪ್ರಮುಖ ಪತ್ರಕರ್ತ ಶಮ್ಸ್ ಸಿದ್ಧೀಕಿ ಅವರು ಕೂಡ ವರದಿಯ ಮಾಹಿತಿಯನ್ನು ಪ್ರಶ್ನಿಸಿದರು. “ಈ ವರದಿ ಇತಿಹಾಸದ ದಾಖಲೆಯೊಂದಿಗೆ ಹೊಂದಿಕೆಯಾಗುವುದಿಲ್ಲ. ಅವರು 1947ರಲ್ಲಿ ಹಿಂದೂ ಜನಸಂಖ್ಯೆ 45 ಶೇಕಡವೆಂದು ಹೇಳುವುದು ಸುಳ್ಳು, ಏಕೆಂದರೆ ಜನಗಣತಿಯ ಮಾಹಿತಿ ಇದನ್ನು ಸಮರ್ಥಿಸದು. ಇದು ಹಿಂಸಾಚಾರದ ವಿಚಾರಣೆಯ ವರದಿಯೇನಾ, ಅಥವಾ ಜನಗಣತಿಯ ಸಮೀಕ್ಷೆಯಾ? ವರದಿ ನಂಬಲರ್ಹವಲ್ಲ,” ಎಂದು ಹೇಳಿದರು.

ಇನ್ನೊಬ್ಬ ಮುಸ್ಲಿಂ ಹಿರಿಯರು ಸರ್ಕಾರಿ ನಡವಳಿಕೆಯನ್ನು ಆಕ್ರೋಶದಿಂದ ಟೀಕಿಸಿದರು: “ನಾವು ಮಸೀದಿಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಿ ದೇಶಭಕ್ತಿಯನ್ನು ತೋರಿಸಿದ್ದರೂ, ಇನ್ನೂ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಇದು ಅಪಾಯಕರ ಮತ್ತು ಅಸಮಾನತೆಯದ್ದಾಗಿದೆ,” ಎಂದು ಹೇಳಿದರು.

ಈ ವರದಿಯನ್ನು ಮುಸ್ಲಿಂ ಮುಖಂಡರು ತಿರಸ್ಕರಿಸಿದರೆ, ಹಿಂದೂ ಪ್ರತಿನಿಧಿಗಳಿಂದ ವಿಭಿನ್ನ ಪ್ರತಿಕ್ರಿಯೆಗಳು ಬಂದಿವೆ. ಸ್ಥಳೀಯ ಹಿಂದೂ ಪ್ರತಿನಿಧಿ ಗೋಪಾಲ್ ಅವರು, “ಹೌದು, ಕೆಲವರು ವಾಸಸ್ಥಾನ ಬದಲಾಯಿಸುತ್ತಿದ್ದಾರೆ. ಆದರೆ ಅದು ಮುಸ್ಲಿಂ ಭಯದಿಂದಲ್ಲ. ಹೆಚ್ಚಿನ ವ್ಯವಹಾರ ಅವಕಾಶಗಳಿಗಾಗಿ ಇತರ ದೊಡ್ಡ ನಗರಗಳಿಗೆ ಹೋಗುತ್ತಿದ್ದಾರೆ. ಮುಸ್ಲಿಂ ಸಮುದಾಯವನ್ನು ಗುರಿಯಾಗಿಸುವುದು ತಪ್ಪು,” ಎಂದು ಹೇಳಿದರು.

ಆದರೆ ವಿವಾದಾತ್ಮಕ ಹನುಮಾನ್‌ಗಢಿ ಪೀಠದ ಪುಜಾರಿ ರಾಜು ದಾಸ್ ಅವರು ಈ ವರದಿಯನ್ನು ಆಧಾರವನ್ನಾಗಿ ಮಾಡಿಕೊಂಡು ಕಿಡಿಕಾರಿದರು. “ಇದು ಸ್ಪಷ್ಟವಾಗಿಸುತ್ತದೆ — ಹಿಂದೂಗಳು ಬಲವಂತವಾಗಿ ವಲಸೆ ಹೋಗುತ್ತಿದ್ದಾರೆ. ಇವತ್ತಿಗೆ ಕೇವಲ 15 ಶೇಕಡ ಮಾತ್ರ ಉಳಿದಿದ್ದಾರೆ. ಎಲ್ಲೆಲ್ಲಿ ಮುಸ್ಲಿಂ ಸಂಖ್ಯಾಬಲ ಹೆಚ್ಚಿದೆಯೋ ಅಲ್ಲಿ ಗಲಭೆ ಮತ್ತು ಭಯ ವಾತಾವರಣ ಇರುತ್ತದೆ,” ಎಂದು ಆರೋಪಿಸಿದರು.

ಅವರ ಈ ಹೇಳಿಕೆಗಳು ಮುಸ್ಲಿಂ ಸಮುದಾಯವನ್ನು ಆಕ್ರೋಶಕ್ಕೆ ದೂಡಿವೆ. ಸಂಭಾಲ್‌ನ ಒಬ್ಬ ಮುಸ್ಲಿಂ ಅಂಗಡಿ ಮಾಲೀಕರು ಪ್ರತಿಕ್ರಿಯಿಸಿ, “ಹಿಂದೂಗಳು ಉದ್ಯೋಗಕ್ಕಾಗಿ ಹೋಗುತ್ತಿದ್ದರೆ ಅದಕ್ಕೆ ನಾವು ಹೊಣೆ ಹೇಗೆ? ನಾವು ಎಪ್ಪತ್ತು ವರ್ಷಗಳಿಂದ ಜೊತೆಯಾಗಿ ಬದುಕುತ್ತಿದ್ದೇವೆ. ಇಂತಹ ಹೇಳಿಕೆಗಳು ಕೇವಲ ದ್ವೇಷವನ್ನೇ ಹೆಚ್ಚಿಸುತ್ತವೆ” ಎಂದು ಹೇಳಿದರು.

ಪರಿಶೀಲಕರು ಆಕ್ಷೇಪಿಸಿದ್ದು, ನವೆಂಬರ್ 2024ರ ಹಿಂಸಾಚಾರದಲ್ಲಿ ಸತ್ತವರ ಕುಟುಂಬಗಳು ಇಂದಿಗೂ ನ್ಯಾಯಕ್ಕಾಗಿ ಕಾಯುತ್ತಿರುವಾಗ, ಸರ್ಕಾರ ಈ ವರದಿಯನ್ನು ಮುನ್ನೆಡೆಸಿಕೊಂಡು ಸಂಭಾಲ್‌ ಅನ್ನು ಹಿಂದೂಗಳಿಗೆ ಅಪಾಯಕಾರಿಯಾದ ಪ್ರದೇಶವೆಂಬಂತೆ ಬಿಂಬಿಸಲು ಯತ್ನಿಸುತ್ತಿದೆ ಎಂದಿದ್ದಾರೆ.

ವಿರೋಧಿ ಪತ್ರಕರ್ತ ಶಮ್ಸ್ ಸಿದ್ಧೀಕಿ ಅವರು, “ಈ ಸೋರಿಕೆ ಆದ ವರದಿ ಚುನಾವಣೆಗಳ ಮುನ್ನ ನಿರ್ದಿಷ್ಟ ವಾದವನ್ನು ಬೆಂಬಲಿಸಲು ರೂಪುಗೊಂಡದಂತೆ ತೋರುತ್ತದೆ. ಸಂಪೂರ್ಣ ವರದಿ ಅಧಿಕೃತವಾಗಿ ಬಿಡುಗಡೆಯಾಗದವರೆಗೆ ಇಂತಹ ಲೀಕ್‌ಗಳ ಆಧಾರದ ಮೇಲೆ ನಂಬುವುದು ಅಪಾಯಕರ” ಎಂದು ಹೇಳಿದರು.

ಮುಸ್ಲಿಂ ನಾಯಕರೊಬ್ಬರು, ಸರ್ಕಾರವು ಸಂಪೂರ್ಣ ವರದಿಯನ್ನು ಪ್ರಕಟಿಸಬೇಕು ಹಾಗೂ ನಿಜವಾಗಿಯೂ ಹೊಣೆಗಾರರಾಗಿರುವವರಿಗೆ ಶಿಕ್ಷೆ ನೀಡಬೇಕು. ಸಂಪೂರ್ಣ ಸಮುದಾಯವನ್ನು ಗುರಿಯಾಗಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಮರ್ಯಾದೆಗೇಡು ಹತ್ಯೆ: ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಪತ್ನಿ ಸಂಬಂಧಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...