Homeಮುಖಪುಟಸಿಎಂಗೆ ಸಂಭಾಲ್ ಹಿಂಸಾಚಾರದ ವರದಿ ಸಲ್ಲಿಕೆ: ಹಿಂದೂ ವಲಸೆಯತ್ತ ಆಯೋಗದ ಒತ್ತು, ನಿಜಾಂಶವಿಲ್ಲ ಎಂದ ಜನ

ಸಿಎಂಗೆ ಸಂಭಾಲ್ ಹಿಂಸಾಚಾರದ ವರದಿ ಸಲ್ಲಿಕೆ: ಹಿಂದೂ ವಲಸೆಯತ್ತ ಆಯೋಗದ ಒತ್ತು, ನಿಜಾಂಶವಿಲ್ಲ ಎಂದ ಜನ

- Advertisement -
- Advertisement -

ಸಂಭಾಲ್: 9 ತಿಂಗಳುಗಳ ನಂತರ ಸಂಭಾಲ್ ಹಿಂಸಾಚಾರ ಕುರಿತು ರಚಿಸಿದ್ದ ನ್ಯಾಯಾಂಗ ತನಿಖಾ ಆಯೋಗವು 450 ಪುಟಗಳ ವರದಿಯನ್ನು ಗುರುವಾರ ಮುಖ್ಯಮಂತ್ರಿ ಅವರಿಗೆ ಸಲ್ಲಿಸಿದೆ.

ಉತ್ತರಪ್ರದೇಶದ ಸಂಭಾಲ್‌ನಲ್ಲಿ ಸಂಭವಿಸಿದ ಹಿಂಸಾಚಾರ ಕುರಿತ ನ್ಯಾಯಾಂಗ ತನಿಖಾ ವರದಿ ಸೋರಿಕೆ ಆದ ನಂತರ ವಿವಾದ ಉಂಟಾಗಿ ತೀವ್ರ ಪ್ರತಿಕ್ರಿಯೆಗಳನ್ನು ಹುಟ್ಟು ಹಾಕಿದೆ. ಮುಸ್ಲಿಂ ಸಮುದಾಯದವರು ವರದಿಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿ, ಸರ್ಕಾರ ಈ ದುರಂತವನ್ನು ಸಮುದಾಯದ ನಡುವಣ ದ್ವೇಷವನ್ನು ಹೆಚ್ಚಿಸಲು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಳೆದ ವರ್ಷದ ನವೆಂಬರ್ 24ರಂದು ಸಂಭಾಲ್‌ನ ಐತಿಹಾಸಿಕ ಶಾಹಿ ಜಾಮಾ ಮಸೀದಿ ಬಳಿ ನಡೆದ ಸರಕಾರದ ಸಮೀಕ್ಷೆ ವೇಳೆ ಹಿಂಸಾಚಾರವು ಉದ್ಭವಿಸಿತ್ತು. ಆ ವೇಳೆ ಪೊಲೀಸ್ ಗುಂಡಿನ ದಾಳಿಯಲ್ಲಿ ಐದು ಮುಸ್ಲಿಂ ಯುವಕರು ಮೃತರಾದರು, ಅನೇಕರಿಗೆ ಗಾಯಗಳಾದವು ಮತ್ತು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಈ ಗಲಭೆಯ ನಂತರ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಿವೃತ್ತ ನ್ಯಾಯಾಧೀಶ ದೇವೇಂದ್ರಕುಮಾರ್ ಅರೋರಾ ನೇತೃತ್ವದ ನ್ಯಾಯಾಂಗ ಆಯೋಗವನ್ನು ರಚಿಸಿದರು. ಅವರೊಂದಿಗೆ ನಿವೃತ್ತ ಐಎಎಸ್ ಅಮಿತ್ ಮೋಹನ್ ಮತ್ತು ನಿವೃತ್ತ ಐಪಿಎಸ್ ಅರ್ವಿಂದ್ ಕುಮಾರ್ ಜೈನ್ ಇದ್ದರು.

ಹಿಂಸಾಚಾರದ ವಿಷಯಕ್ಕೆ ಸಂಬಂಧಿಸಿ ಕಾರಣವೇನು ಎಂಬ ಕುರಿತು ಈ ವರದಿ ಒತ್ತು ನೀಡಬೇಕಿತ್ತು. ಆದರೆ ಅದು ಹಿಂದೂ ಜನಸಂಖ್ಯೆಯ ವಲಸೆ ವಿಚಾರಕ್ಕೆ ಹೆಚ್ಚಿನ ಒತ್ತುಕೊಡುತ್ತದೆ. ವರದಿಯ ಪ್ರಕಾರ, ಸಂಭಾಲ್‌ನ ಹಿಂದೂ ಜನಸಂಖ್ಯೆ ಸ್ವಾತಂತ್ರ್ಯದ ಕಾಲದಲ್ಲಿ 45 ಶೇಕಡದಿಂದ ಇಂದಿಗೆ 15 ಶೇಕಡಕ್ಕೆ ಇಳಿದಿದೆ. ಸುಮಾರು 30 ಶೇಕಡ ಇಳಿಕೆ ನಡೆದಿದೆ, ಅದು ಗಲಭೆಗಳು ಮತ್ತು ಬೆದರಿಕೆಗಳ ಕಾರಣದಿಂದ ಸಂಭವಿಸಿದೆ ಎಂಬ ಆರೋಪವಿದೆ.

ಈ ವರದಿಯು ಸಂಭಾಲ್‌ನ ಮುಸ್ಲಿಂ ಸಮುದಾಯದಲ್ಲಿ ಅಸಹಮತಿಯ ಅಲೆ ಎಬ್ಬಿಸಿದೆ. ಶಾಹಿ ಜಾಮಾ ಮಸೀದಿ ಸಮಿತಿಯ ಪರವಾಗಿ ವಕೀಲ ಶಕೀಲ್ ವಾರ್ಸಿ ಅವರು ಮಾತನಾಡುತ್ತಾ, “ಇಂತಹ ವರದಿಯ ಆಧಾರದ ಮೇಲೆ ಯಾರನ್ನೂ ದಂಡಿಸಲಾಗದು. ನಿಜವಾದ ಸತ್ಯವನ್ನು ನ್ಯಾಯಾಲಯವೇ ನಿರ್ಧರಿಸಬೇಕು. ಹಿಂಸಾಚಾರವನ್ನು ಹಿಂದೂ ವಲಸೆಯೊಂದಿಗೆ ತಳಕುಹಾಕುವುದು ಅಡಳಿತಾತ್ಮಕ ರಾಜಕೀಯಕ್ಕೆ ಸೇರಿದ್ದು, ಅರ್ಥವಿಲ್ಲದದ್ದು,” ಎಂದರು.

ಪ್ರಮುಖ ಪತ್ರಕರ್ತ ಶಮ್ಸ್ ಸಿದ್ಧೀಕಿ ಅವರು ಕೂಡ ವರದಿಯ ಮಾಹಿತಿಯನ್ನು ಪ್ರಶ್ನಿಸಿದರು. “ಈ ವರದಿ ಇತಿಹಾಸದ ದಾಖಲೆಯೊಂದಿಗೆ ಹೊಂದಿಕೆಯಾಗುವುದಿಲ್ಲ. ಅವರು 1947ರಲ್ಲಿ ಹಿಂದೂ ಜನಸಂಖ್ಯೆ 45 ಶೇಕಡವೆಂದು ಹೇಳುವುದು ಸುಳ್ಳು, ಏಕೆಂದರೆ ಜನಗಣತಿಯ ಮಾಹಿತಿ ಇದನ್ನು ಸಮರ್ಥಿಸದು. ಇದು ಹಿಂಸಾಚಾರದ ವಿಚಾರಣೆಯ ವರದಿಯೇನಾ, ಅಥವಾ ಜನಗಣತಿಯ ಸಮೀಕ್ಷೆಯಾ? ವರದಿ ನಂಬಲರ್ಹವಲ್ಲ,” ಎಂದು ಹೇಳಿದರು.

ಇನ್ನೊಬ್ಬ ಮುಸ್ಲಿಂ ಹಿರಿಯರು ಸರ್ಕಾರಿ ನಡವಳಿಕೆಯನ್ನು ಆಕ್ರೋಶದಿಂದ ಟೀಕಿಸಿದರು: “ನಾವು ಮಸೀದಿಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಿ ದೇಶಭಕ್ತಿಯನ್ನು ತೋರಿಸಿದ್ದರೂ, ಇನ್ನೂ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಇದು ಅಪಾಯಕರ ಮತ್ತು ಅಸಮಾನತೆಯದ್ದಾಗಿದೆ,” ಎಂದು ಹೇಳಿದರು.

ಈ ವರದಿಯನ್ನು ಮುಸ್ಲಿಂ ಮುಖಂಡರು ತಿರಸ್ಕರಿಸಿದರೆ, ಹಿಂದೂ ಪ್ರತಿನಿಧಿಗಳಿಂದ ವಿಭಿನ್ನ ಪ್ರತಿಕ್ರಿಯೆಗಳು ಬಂದಿವೆ. ಸ್ಥಳೀಯ ಹಿಂದೂ ಪ್ರತಿನಿಧಿ ಗೋಪಾಲ್ ಅವರು, “ಹೌದು, ಕೆಲವರು ವಾಸಸ್ಥಾನ ಬದಲಾಯಿಸುತ್ತಿದ್ದಾರೆ. ಆದರೆ ಅದು ಮುಸ್ಲಿಂ ಭಯದಿಂದಲ್ಲ. ಹೆಚ್ಚಿನ ವ್ಯವಹಾರ ಅವಕಾಶಗಳಿಗಾಗಿ ಇತರ ದೊಡ್ಡ ನಗರಗಳಿಗೆ ಹೋಗುತ್ತಿದ್ದಾರೆ. ಮುಸ್ಲಿಂ ಸಮುದಾಯವನ್ನು ಗುರಿಯಾಗಿಸುವುದು ತಪ್ಪು,” ಎಂದು ಹೇಳಿದರು.

ಆದರೆ ವಿವಾದಾತ್ಮಕ ಹನುಮಾನ್‌ಗಢಿ ಪೀಠದ ಪುಜಾರಿ ರಾಜು ದಾಸ್ ಅವರು ಈ ವರದಿಯನ್ನು ಆಧಾರವನ್ನಾಗಿ ಮಾಡಿಕೊಂಡು ಕಿಡಿಕಾರಿದರು. “ಇದು ಸ್ಪಷ್ಟವಾಗಿಸುತ್ತದೆ — ಹಿಂದೂಗಳು ಬಲವಂತವಾಗಿ ವಲಸೆ ಹೋಗುತ್ತಿದ್ದಾರೆ. ಇವತ್ತಿಗೆ ಕೇವಲ 15 ಶೇಕಡ ಮಾತ್ರ ಉಳಿದಿದ್ದಾರೆ. ಎಲ್ಲೆಲ್ಲಿ ಮುಸ್ಲಿಂ ಸಂಖ್ಯಾಬಲ ಹೆಚ್ಚಿದೆಯೋ ಅಲ್ಲಿ ಗಲಭೆ ಮತ್ತು ಭಯ ವಾತಾವರಣ ಇರುತ್ತದೆ,” ಎಂದು ಆರೋಪಿಸಿದರು.

ಅವರ ಈ ಹೇಳಿಕೆಗಳು ಮುಸ್ಲಿಂ ಸಮುದಾಯವನ್ನು ಆಕ್ರೋಶಕ್ಕೆ ದೂಡಿವೆ. ಸಂಭಾಲ್‌ನ ಒಬ್ಬ ಮುಸ್ಲಿಂ ಅಂಗಡಿ ಮಾಲೀಕರು ಪ್ರತಿಕ್ರಿಯಿಸಿ, “ಹಿಂದೂಗಳು ಉದ್ಯೋಗಕ್ಕಾಗಿ ಹೋಗುತ್ತಿದ್ದರೆ ಅದಕ್ಕೆ ನಾವು ಹೊಣೆ ಹೇಗೆ? ನಾವು ಎಪ್ಪತ್ತು ವರ್ಷಗಳಿಂದ ಜೊತೆಯಾಗಿ ಬದುಕುತ್ತಿದ್ದೇವೆ. ಇಂತಹ ಹೇಳಿಕೆಗಳು ಕೇವಲ ದ್ವೇಷವನ್ನೇ ಹೆಚ್ಚಿಸುತ್ತವೆ” ಎಂದು ಹೇಳಿದರು.

ಪರಿಶೀಲಕರು ಆಕ್ಷೇಪಿಸಿದ್ದು, ನವೆಂಬರ್ 2024ರ ಹಿಂಸಾಚಾರದಲ್ಲಿ ಸತ್ತವರ ಕುಟುಂಬಗಳು ಇಂದಿಗೂ ನ್ಯಾಯಕ್ಕಾಗಿ ಕಾಯುತ್ತಿರುವಾಗ, ಸರ್ಕಾರ ಈ ವರದಿಯನ್ನು ಮುನ್ನೆಡೆಸಿಕೊಂಡು ಸಂಭಾಲ್‌ ಅನ್ನು ಹಿಂದೂಗಳಿಗೆ ಅಪಾಯಕಾರಿಯಾದ ಪ್ರದೇಶವೆಂಬಂತೆ ಬಿಂಬಿಸಲು ಯತ್ನಿಸುತ್ತಿದೆ ಎಂದಿದ್ದಾರೆ.

ವಿರೋಧಿ ಪತ್ರಕರ್ತ ಶಮ್ಸ್ ಸಿದ್ಧೀಕಿ ಅವರು, “ಈ ಸೋರಿಕೆ ಆದ ವರದಿ ಚುನಾವಣೆಗಳ ಮುನ್ನ ನಿರ್ದಿಷ್ಟ ವಾದವನ್ನು ಬೆಂಬಲಿಸಲು ರೂಪುಗೊಂಡದಂತೆ ತೋರುತ್ತದೆ. ಸಂಪೂರ್ಣ ವರದಿ ಅಧಿಕೃತವಾಗಿ ಬಿಡುಗಡೆಯಾಗದವರೆಗೆ ಇಂತಹ ಲೀಕ್‌ಗಳ ಆಧಾರದ ಮೇಲೆ ನಂಬುವುದು ಅಪಾಯಕರ” ಎಂದು ಹೇಳಿದರು.

ಮುಸ್ಲಿಂ ನಾಯಕರೊಬ್ಬರು, ಸರ್ಕಾರವು ಸಂಪೂರ್ಣ ವರದಿಯನ್ನು ಪ್ರಕಟಿಸಬೇಕು ಹಾಗೂ ನಿಜವಾಗಿಯೂ ಹೊಣೆಗಾರರಾಗಿರುವವರಿಗೆ ಶಿಕ್ಷೆ ನೀಡಬೇಕು. ಸಂಪೂರ್ಣ ಸಮುದಾಯವನ್ನು ಗುರಿಯಾಗಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಮರ್ಯಾದೆಗೇಡು ಹತ್ಯೆ: ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಪತ್ನಿ ಸಂಬಂಧಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....