Homeಕರ್ನಾಟಕಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆ ಮತ್ತು ನಾಪತ್ತೆ ಪ್ರಕರಣಗಳು: ನ್ಯಾಯಕ್ಕಾಗಿ ಮಹಿಳಾ ಆಯೋಗಕ್ಕೆ 'ಕೊಂದವರು ಯಾರು' ಆಂದೋಲನದಿಂದ...

ಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆ ಮತ್ತು ನಾಪತ್ತೆ ಪ್ರಕರಣಗಳು: ನ್ಯಾಯಕ್ಕಾಗಿ ಮಹಿಳಾ ಆಯೋಗಕ್ಕೆ ‘ಕೊಂದವರು ಯಾರು’ ಆಂದೋಲನದಿಂದ ಹಕ್ಕೊತ್ತಾಯ

- Advertisement -
- Advertisement -

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಸಮಗ್ರ ತನಿಖೆಗಾಗಿ “ಕೊಂದವರು ಯಾರು” (“Who Killed Women in Dharmasthala”) ಜನಾಂದೋಲನವು ರಾಜ್ಯ ಮಹಿಳಾ ಆಯೋಗಕ್ಕೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದೆ.

ಪ್ರಮುಖ ಬೇಡಿಕೆಗಳು: ಈ ಪತ್ರದಲ್ಲಿ ಆಂದೋಲನವು ಕೆಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ:

  • ಮಹಿಳೆಯರ ನಾಪತ್ತೆ ಮತ್ತು ಕೊಲೆ ಪ್ರಕರಣಗಳ ತನಿಖೆಗೆ ರಚಿಸಲಾದ ವಿಶೇಷ ತನಿಖಾ ತಂಡ (S.I.T) ಈ ಪ್ರಕರಣಗಳನ್ನು ತನಿಖೆಯ ಕೇಂದ್ರವನ್ನಾಗಿ ಇಟ್ಟುಕೊಳ್ಳಬೇಕು.
  • ತನಿಖೆಯು ಯಾವುದೇ ಅಡ್ಡಿ ಆತಂಕಗಳಿಲ್ಲದೆ ತಾರ್ಕಿಕ ಅಂತ್ಯ ಮುಟ್ಟುವವರೆಗೂ ಮುಂದುವರೆಯಬೇಕು. ಈ ಪ್ರಕ್ರಿಯೆಗೆ ಸರ್ಕಾರ ಅಥವಾ ಯಾವುದೇ ಪ್ರಭಾವಿ ಶಕ್ತಿಗಳಿಂದ ಯಾವುದೇ ರೀತಿಯಲ್ಲಿ ಅಡ್ಡಿಪಡಿಸುವ ಪ್ರಯತ್ನಗಳು ನಡೆಯಬಾರದು.
  • ತನಿಖೆಗೆ ಅಡ್ಡಿಪಡಿಸುತ್ತಿರುವ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಕೆಲವು ಮಾಧ್ಯಮಗಳಿಗೆ ಪರಿಸ್ಥಿತಿಯ ಗಂಭೀರತೆಯನ್ನು ಮನವರಿಕೆ ಮಾಡಿಕೊಡಬೇಕು.
  • ಮಹಿಳೆಯರ ಘನತೆ ಮತ್ತು ಸುರಕ್ಷತೆಯು ತನಿಖೆಯ ಪ್ರಮುಖ ಅಂಶವಾಗಿರಬೇಕು, ರಾಜಕೀಯ ಅಥವಾ ಧಾರ್ಮಿಕ ವಿಚಾರಗಳಲ್ಲ.

ಘಟನೆಗಳ ಉಲ್ಲೇಖ ಧರ್ಮಸ್ಥಳದಂತಹ ಪವಿತ್ರ ಸ್ಥಳದ ಸುತ್ತಮುತ್ತಲ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಲವಾರು ಅತ್ಯಾಚಾರ, ಕೊಲೆ ಮತ್ತು ಅಪಹರಣಗಳ ಘಟನೆಗಳು ವರದಿಯಾಗಿವೆ. ಅವುಗಳಲ್ಲಿ ಕೆಲವು ಪ್ರಮುಖ ಪ್ರಕರಣಗಳನ್ನು ಆಂದೋಲನ ಉಲ್ಲೇಖಿಸಿದೆ:

  • 2012: ಸೌಜನ್ಯ ಅಪಹರಣ ಮತ್ತು ಕೊಲೆ.
  • 2012: ಸೌಜನ್ಯ ಪ್ರಕರಣಕ್ಕೆ 20 ದಿನಗಳ ಮೊದಲು ಆನೆ ಮಾವುತ ನಾರಾಯಣರೊಂದಿಗೆ ಅವರ ತಂಗಿ ಯಮುನಾ ಕೊಲೆ.
  • 1986: ಪದ್ಮಲತಾ ಅಪಹರಣ, ಅತ್ಯಾಚಾರ ಮತ್ತು ಹತ್ಯೆ.
  • 1979: ಟೀಚರ್‌ ವೇದವಲ್ಲಿ ಮೇಲಿನ ದಾಳಿ, ಅತ್ಯಾಚಾರ ಮತ್ತು ಸುಟ್ಟು ಕೊಲೆ.

ಈ ಪ್ರಕರಣಗಳ ಜೊತೆಗೆ ಇನ್ನೂ ಹಲವು ಮಹಿಳೆಯರು ನಾಪತ್ತೆಯಾಗಿರುವುದು ಅಥವಾ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿರುವ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಆಂದೋಲನ ಹೇಳಿದೆ. ಈ ಘಟನೆಗಳನ್ನು ಸರ್ಕಾರ ಮತ್ತು ಸಮಾಜ ಗಂಭೀರವಾಗಿ ಪರಿಗಣಿಸದಿರುವುದು ಆಘಾತಕಾರಿ ಎಂದು ಆಂದೋಲನ ತಿಳಿಸಿದೆ.

ಹಾಲಿ ನಡೆಯುತ್ತಿರುವ ಎಸ್‌ಐಟಿ ತನಿಖೆಯ ಮೇಲೆ ಪ್ರಭಾವ ಬೀರುವಷ್ಟರ ಮಟ್ಟಿಗೆ ಕೆಲವು ಮಾಧ್ಯಮಗಳಲ್ಲಿ ʼಮೀಡಿಯಾ ಟ್ರಯಲ್‌ʼ ನಡೆಯುತ್ತಿದೆ ಮತ್ತು ರಾಜಕೀಯ ಪಕ್ಷಗಳು ಪ್ರತಿಭಟನೆಗಳನ್ನು ಆಯೋಜಿಸುತ್ತಿವೆ. ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ತನಿಖೆ ಮಹಿಳೆಯರ ಘನತೆಸುರಕ್ಷತೆಯನ್ನು ಕೇಂದ್ರೀಕರಿಸಬೇಕು; ರಾಜಕೀಯಧಾರ್ಮಿಕ ವಿಚಾರಗಳನ್ನಲ್ಲಎಂದು ಕೊಂದವರು ಯಾರು ಆಂದೋಲನವು ಆಗ್ರಹಿಸಿದೆ.

ಈ ಹಿನ್ನೆಲೆಯಲ್ಲಿ, ಸಾಕ್ಷಿಗಳ ರಕ್ಷಣೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಪೂರ್ವ ನಿರ್ಧರಿತ ಹೇಳಿಕೆಗಳನ್ನು ನೀಡುತ್ತಿರುವ ರಾಜಕೀಯ ನಾಯಕರನ್ನು ನಿಯಂತ್ರಿಸಬೇಕು ಎಂದು ಆಂದೋಲನವು ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಮಾಡಿದೆ.

ಮಹಿಳಾ ಆಯೋಗದ ಸಕಾರಾತ್ಮಕ ಪ್ರತಿಕ್ರಿಯೆ ನಿರೀಕ್ಷೆ: ಈ ಗಂಭೀರ ಪ್ರಕರಣಗಳ ವಿಚಾರಣೆಗಾಗಿ ಎಸ್‌ಐಟಿ ರಚನೆಯಲ್ಲಿ ಮಹಿಳಾ ಆಯೋಗದ ಸಕಾರಾತ್ಮಕ ಪಾತ್ರವನ್ನು ಆಂದೋಲನ ಶ್ಲಾಘಿಸಿದೆ. ಪ್ರಸ್ತುತ ಮಹಿಳಾ ಆಯೋಗದ ಅಧ್ಯಕ್ಷರಾಗಿರುವ ಡಾ. ನಾಗಲಕ್ಷ್ಮಿ ಚೌಧರಿಯವರು ಈ ಪ್ರಕರಣದಲ್ಲೂ ನ್ಯಾಯದ ಪರವಾಗಿ ದನಿಯೆತ್ತುತ್ತಾರೆ ಎಂದು ಆಂದೋಲನದ ಪ್ರತಿನಿಧಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಹೋರಾಟವು ಕೇವಲ ಆಯೋಗದ ಜವಾಬ್ದಾರಿಯಲ್ಲ, ಬದಲಾಗಿ ದೌರ್ಜನ್ಯಕ್ಕೆ ತುತ್ತಾದ ಮಹಿಳೆಯರಿಗೆ ನ್ಯಾಯವನ್ನು ಒದಗಿಸುವ ಚಾರಿತ್ರಿಕ ಜವಾಬ್ದಾರಿಯೂ ಹೌದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆಂದೋಲನದಲ್ಲಿ ಭಾಗವಹಿಸಿದವರು: ಈ ಆಂದೋಲನದಲ್ಲಿ “ನಾವೆದ್ದು ನಿಲ್ಲದಿದ್ದರೆ” ಸಂಘಟನೆಯ ಮಮತಾ ಯಜಮಾನ್, ಮಧುಭೂಷಣ್, ಜನವಾದಿ ಮಹಿಳಾ ಸಂಘಟನೆಯ ಲಕ್ಷ್ಮಿ ಕೆ.ಎಸ್, ಮಾನಸ ಬಳಗದ ಚಂಪಾವತಿ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಗೌರಿ, ದಲಿತ ಮಹಿಳಾ ಸಂಘಟನೆಯ ನಾಗಮಣಿ, ಮಹಿಳಾ ಮುನ್ನಡೆ ಮತ್ತು ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ, ಸಾಧನಾ ಮಹಿಳಾ ಗುಂಪಿನ ವಿನುತಾ, ಚಂದ್ರಶಿ, ಗೀತಾ, ಆಯೆಷಾ, ಹಸಿರು ದಳದ ಮೀನಾಕ್ಷಿ ಮತ್ತು ಶಶಿಕಲಾ ಸೇರಿದಂತೆ ಅನೇಕ ಮಹಿಳಾ ಹಕ್ಕುಗಳ ಹೋರಾಟಗಾರರು ಭಾಗವಹಿಸಿದ್ದರು.

ಪೊಲೀಸ್ ಮಹಾನಿರ್ದೇಶಕರ ಭೇಟಿ ಈ ಆಂದೋಲನದ ಪ್ರತಿನಿಧಿಗಳಾದ ಮಧುಭೂಷಣ್, ಮನು ಚೌಧರಿ, ವಿನಯ್ ಶ್ರೀನಿವಾಸ್, ಮೀನಾಕ್ಷಿ ಮತ್ತು ಪದ್ಮಾವತಿ ಅವರು ಆಗಸ್ಟ್ 28ರಂದು ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿ, ಸಾಕ್ಷಿಗಳ ಮೇಲೆ ಮಾಧ್ಯಮ ಟ್ರಯಲ್ ನಡೆಯುತ್ತಿರುವ ಬಗ್ಗೆ ಗಮನ ಸೆಳೆದರು ಮತ್ತು ಅದನ್ನು ತಡೆಗಟ್ಟುವಂತೆ ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...