Homeಮುಖಪುಟಕಾಶಿ, ಮಥುರಾ ಅಭಿಯಾನ: ಭಾಗವತ್ ಹೇಳಿಕೆಗೆ ಸಿಪಿಐ(ಎಂ) ಖಂಡನೆ

ಕಾಶಿ, ಮಥುರಾ ಅಭಿಯಾನ: ಭಾಗವತ್ ಹೇಳಿಕೆಗೆ ಸಿಪಿಐ(ಎಂ) ಖಂಡನೆ

- Advertisement -
- Advertisement -

ಕಾಶಿ-ಮಥುರಾ ಅಭಿಯಾನಗಳನ್ನು ಮತ್ತೆ ಪ್ರಚೋದಿಸಲು ಪ್ರಯತ್ನಿಸಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಭಾಷಣವನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ತೀವ್ರವಾಗಿ ಖಂಡಿಸಿದೆ. ಭಾಗವತ್ ಅವರ ಹೇಳಿಕೆಗಳು ‘ಭಾರತದ ಸಂವಿಧಾನದ ಬಗ್ಗೆ ಆರ್‌ಎಸ್‌ಎಸ್‌ನ ನಿರ್ಲಕ್ಷ್ಯವನ್ನು ಪ್ರತಿಬಿಂಬಿಸುತ್ತವೆ ಮತ್ತು ನೆಲದ ಕಾನೂನನ್ನು ಉಲ್ಲಂಘಿಸುತ್ತವೆ’ ಎಂದು ಹೇಳಿದೆ.

ಗುರುವಾರ (ಆ.28) ದೆಹಲಿಯ ವಿಜ್ಞಾನ ಭವನದಲ್ಲಿ ಆರ್‌ಎಸ್‌ಎಸ್‌ನ ಶತಮಾನೋತ್ಸವದ ಅಂಗವಾಗಿ ನಡೆದ ಮೂರು ದಿನಗಳ ಉಪನ್ಯಾಸ ಸರಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, “ನಮ್ಮ ಸ್ವಯಂಸೇವಕರು ಕಾಶಿ, ಮಥುರಾ ಚಳುವಳಿಗಳಿಗೆ ಸೇರಲು ಸ್ವತಂತ್ರರು. ಮುಸ್ಲಿಮರು ‘ಸಹೋದರತ್ವ’ ಕ್ಕಾಗಿ ಈ ಮೂರನ್ನು ತ್ಯಜಿಸಬೇಕು” ಎಂದು ಹೇಳಿಕೆ ಕೊಟ್ಟಿದ್ದರು.

“ಆರ್‌ಎಸ್‌ಎಸ್ ದೇವಾಲಯ ಚಳುವಳಿಗಳಿಗೆ ಸೇರುವುದಿಲ್ಲ; ಆರ್‌ಎಸ್‌ಎಸ್ ಕೈ ಜೋಡಿಸಿದ ಏಕೈಕ ಚಳುವಳಿಯೆಂದರೆ ಅದು, ರಾಮ ಮಂದಿರ ಚಳುವಳಿ. ನಾವು ಅದನ್ನು ಕೊನೆಯವರೆಗೂ ಮುನ್ನಡೆಸಿದ್ದೇವೆ. ಸಂಘ ಇನ್ನು ಮುಂದೆ ಯಾವುದೇ (ದೇವಾಲಯ) ಚಳುವಳಿಗಳಿಗೆ ಸೇರುವುದಿಲ್ಲ. ಹಿಂದೂಗಳ ಭಾವನೆಯಲ್ಲಿ ಎರಡು ಜನ್ಮಸ್ಥಳಗಳಾಗಿ ಮತ್ತು ಒಂದು ವಾಸಸ್ಥಳವಾಗಿ ಕಾಶಿ-ಮಥುರಾ ಮತ್ತು ಅಯೋಧ್ಯೆ ಹೆಚ್ಚಿನ ಮಹತ್ವವನ್ನು ಹೊಂದಿವೆ. ಆದ್ದರಿಂದ, ಹಿಂದೂ ಸಮಾಜವು ಈ ಸ್ಥಳಗಳಿಗಾಗಿ ಆಗ್ರಹಿಸುತ್ತದೆ” ಎಂದು ಭಾಗವತ್ ಹೇಳಿದ್ದರು.

“ಆರ್‌ಎಸ್‌ಎಸ್ ಈ ಚಳುವಳಿಗಳ ಭಾಗವಾಗುವುದಿಲ್ಲ, ಆದರೆ ಸ್ವಯಂಸೇವಕರು ಸೇರಲು ಸ್ವತಂತ್ರರು” ಎಂದು ತಿಳಿಸಿದ್ದರು.

ಹಿಂದೂಗಳು ಎಲ್ಲಾ ಸ್ಥಳಗಳಲ್ಲಿ ದೇವಾಲಯಗಳನ್ನು ಹುಡುಕಬಾರದು. ಆದರೆ, ಮುಸ್ಲಿಮರು ಸಹೋದರತ್ವಕ್ಕಾಗಿ ಈ ಮೂರನ್ನು ತ್ಯಜಿಸಬೇಕು ಎಂದು ಎಂದಿದ್ದರು.

“ನಾವು ಎಲ್ಲಾ ಸ್ಥಳಗಳಲ್ಲಿ ಶಿವಲಿಂಗ ಅಥವಾ ಮಂದಿರವನ್ನು ಹುಡುಕಬಾರದು. ನಾನು ಹಿಂದೂ ಸಂಘಟನೆಯ ಮುಖ್ಯಸ್ಥನಾಗಿ ಈ ಘೋಷಣೆ ಮಾಡುತ್ತಿದ್ದರೆ, ಇನ್ನೊಂದು ಕಡೆಯವರು ಈ ಮೂರನ್ನು ಕೈಬಿಡಬೇಕು. ಇದು ಸಹೋದರತ್ವಕ್ಕೆ ಒಂದು ದೊಡ್ಡ ಹೆಜ್ಜೆಯಾಗಲಿದೆ” ಎಂದು ಭಾಗವತ್ ಹೇಳಿದ್ದರು.

ಆರೆಸ್ಸೆಸ್ ಭಾಗಿಯಾಗಿದ್ದ ಬಾಬರಿ ಮಸೀದಿ ಧ್ವಂಸ ಕೃತ್ಯದ ನಂತರ, 1947 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಯಾವುದೇ ಧಾರ್ಮಿಕ ಸ್ಥಳವನ್ನು ಬದಲಾಯಿಸುವುದನ್ನು ನಿಷೇಧಿಸುವ ಕಾನೂನನ್ನು ಸಂಸತ್ತು ಅಂಗೀಕರಿಸಿತು ಎಂದು ಸಿಪಿಐ(ಎಂ) ಎತ್ತಿ ತೋರಿಸಿದೆ.

ಬಾಬರಿ ಧ್ವಂಸದ ನಂತರ, ವಿವಿಧ ಹಿಂದುತ್ವ ಶಕ್ತಿಗಳು ನಿರಂತರವಾಗಿ “ಅಯೋಧ್ಯಾ ತೋ ಸಿರ್ಫ್ ಜಾನ್‌ ಕಿ ಹೈ, ಕಾಶಿ-ಮಥುರಾ ಬಾಕಿ ಹೈ” ಎಂಬ ಘೋಷಣೆಯನ್ನು ಕೂಗುತ್ತಿವೆ. ಇದರ ಅರ್ಥ “ಅಯೋಧ್ಯಾ ಕೇವಲ ಟ್ರೇಲರ್, ಕಾಶಿ ಮತ್ತು ಮಥುರಾ ಇನ್ನೂ ಉಳಿದಿವೆ” ಎಂದಾಗಿದೆ. ಇದು ವಾರಣಾಸಿಯ ಜ್ಞಾನವಾಪಿ ಮಸೀದಿ ಮತ್ತು ಮಥುರಾದ ಶಾಹಿ ಈದ್ಗಾ ಮಸೀದಿಯನ್ನು ಉಲ್ಲೇಖಿಸಿದ ಘೋಷಣೆಯಾಗಿದೆ.

“ಇಂತಹ ಬೇಡಿಕೆಗಳು ಕೋಮು ಭಾವನೆಗಳನ್ನು ಕೆರಳಿಸುವ, ಸಾರ್ವಜನಿಕ ಗಮನವನ್ನು ಬೇರೆಡೆಗೆ ಸೆಳೆಯುವ ಮತ್ತು ಧಾರ್ಮಿಕ ಆಧಾರದ ಮೇಲೆ ಸಮಾಜವನ್ನು ಧ್ರುವೀಕರಿಸುವ ಗುರಿಯನ್ನು ಹೊಂದಿವೆ” ಎಂದು ಸಿಪಿಐ(ಎಂ) ಪಾಲಿಟ್ ಬ್ಯೂರೋ ಪ್ರಕಟಣೆಯಲ್ಲಿ ಹೇಳಿದೆ.

“ಮುಂಬರುವ ಚುನಾವಣೆಗಳಿಗೆ ಮುಂಚಿತವಾಗಿ ಜನಾಕ್ರೋಶದಿಂದ ಬಿಜೆಪಿ ಸರ್ಕಾರವನ್ನು ರಕ್ಷಿಸಲು ಆರ್‌ಎಸ್‌ಎಸ್ ಮುಖ್ಯಸ್ಥರು ವಿಭಜನಕಾರಿ ವಿಷಯಗಳನ್ನು ಮುನ್ನೆಲೆ ತರುತ್ತಿದ್ದಾರೆ. ಆರ್‌ಎಸ್‌ಎಸ್ ಮತ್ತು ಅದರ ಅಂಗಸಂಸ್ಥೆಗಳು ಕೋಮು ವಿಭಜನೆಯನ್ನು ಪ್ರಚೋದಿಸುತ್ತಿವೆ” ಎಂದು ಸಿಪಿಐ(ಎಂ) ಕಿಡಿಕಾರಿದೆ.

“ಅಮೆರಿಕದ ಹೆಚ್ಚುವರಿ ಸುಂಕ ಹೇರಿಕೆ, ದುರ್ಬಲಗೊಳ್ಳುತ್ತಿರುವ ಆರ್ಥಿಕತೆ, ರೈತರು ಮತ್ತು ಕಾರ್ಮಿಕರ ಮೇಲೆ ಹೆಚ್ಚುತ್ತಿರುವ ದಾಳಿಗಳು ಮತ್ತು ಚುನಾವಣಾ ದುರುಪಯೋಗಗಳಿಂದ ಜನರು ಬಿಜೆಪಿ ನೇತೃತ್ವದ ಸರ್ಕಾರದ ಬಗ್ಗೆ ಹೆಚ್ಚು ಹೆಚ್ಚು ಭ್ರಮನಿರಸನಗೊಳ್ಳುತ್ತಿದ್ದಾರೆ. ಅದರ ವೈಫಲ್ಯಗಳನ್ನು ಹೆಚ್ಚು ಸ್ಪಷ್ಟವಾಗಿ ನೋಡುತ್ತಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಆರೆಸ್ಸೆಸ್‌ನ ವಿಭಜಕ ನೀತಿಗಳ ವಿರುದ್ಧ ‘ಜಾಗರೂಕರಾಗಿರಿ’. ಭಾರತದ ಏಕತೆ ಮತ್ತು ಸಮಗ್ರತೆಯು ಅತ್ಯಂತ ಮಹತ್ವದ್ದಾಗಿದೆ. ಅದನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸಬೇಕು” ಎಂದು ಸಿಪಿಐ(ಎಂ) ದೇಶದ ಜನರಿಗೆ ಒತ್ತಿ ಹೇಳಿದೆ.

ಇದನ್ನು ಸಾಧಿಸಲು, ‘ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸುವ ಮೂಲಕ ವಿಶಾಲವಾದ ಪ್ರತಿರೋಧವನ್ನು ನಿರ್ಮಿಸುವುದು ತುರ್ತಾಗಿ ಅಗತ್ಯವಾಗಿದೆ’ ಎಂದಿದೆ.

‘ಭಾರತೀಯ ಮಹಿಳೆಯರ ಮೇಲೆ ಹೊರೆಯಾಕಬೇಡಿ..’; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...