Homeಮುಖಪುಟಕಾಶಿ, ಮಥುರಾ ಅಭಿಯಾನ: ಭಾಗವತ್ ಹೇಳಿಕೆಗೆ ಸಿಪಿಐ(ಎಂ) ಖಂಡನೆ

ಕಾಶಿ, ಮಥುರಾ ಅಭಿಯಾನ: ಭಾಗವತ್ ಹೇಳಿಕೆಗೆ ಸಿಪಿಐ(ಎಂ) ಖಂಡನೆ

- Advertisement -
- Advertisement -

ಕಾಶಿ-ಮಥುರಾ ಅಭಿಯಾನಗಳನ್ನು ಮತ್ತೆ ಪ್ರಚೋದಿಸಲು ಪ್ರಯತ್ನಿಸಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಭಾಷಣವನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ತೀವ್ರವಾಗಿ ಖಂಡಿಸಿದೆ. ಭಾಗವತ್ ಅವರ ಹೇಳಿಕೆಗಳು ‘ಭಾರತದ ಸಂವಿಧಾನದ ಬಗ್ಗೆ ಆರ್‌ಎಸ್‌ಎಸ್‌ನ ನಿರ್ಲಕ್ಷ್ಯವನ್ನು ಪ್ರತಿಬಿಂಬಿಸುತ್ತವೆ ಮತ್ತು ನೆಲದ ಕಾನೂನನ್ನು ಉಲ್ಲಂಘಿಸುತ್ತವೆ’ ಎಂದು ಹೇಳಿದೆ.

ಗುರುವಾರ (ಆ.28) ದೆಹಲಿಯ ವಿಜ್ಞಾನ ಭವನದಲ್ಲಿ ಆರ್‌ಎಸ್‌ಎಸ್‌ನ ಶತಮಾನೋತ್ಸವದ ಅಂಗವಾಗಿ ನಡೆದ ಮೂರು ದಿನಗಳ ಉಪನ್ಯಾಸ ಸರಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, “ನಮ್ಮ ಸ್ವಯಂಸೇವಕರು ಕಾಶಿ, ಮಥುರಾ ಚಳುವಳಿಗಳಿಗೆ ಸೇರಲು ಸ್ವತಂತ್ರರು. ಮುಸ್ಲಿಮರು ‘ಸಹೋದರತ್ವ’ ಕ್ಕಾಗಿ ಈ ಮೂರನ್ನು ತ್ಯಜಿಸಬೇಕು” ಎಂದು ಹೇಳಿಕೆ ಕೊಟ್ಟಿದ್ದರು.

“ಆರ್‌ಎಸ್‌ಎಸ್ ದೇವಾಲಯ ಚಳುವಳಿಗಳಿಗೆ ಸೇರುವುದಿಲ್ಲ; ಆರ್‌ಎಸ್‌ಎಸ್ ಕೈ ಜೋಡಿಸಿದ ಏಕೈಕ ಚಳುವಳಿಯೆಂದರೆ ಅದು, ರಾಮ ಮಂದಿರ ಚಳುವಳಿ. ನಾವು ಅದನ್ನು ಕೊನೆಯವರೆಗೂ ಮುನ್ನಡೆಸಿದ್ದೇವೆ. ಸಂಘ ಇನ್ನು ಮುಂದೆ ಯಾವುದೇ (ದೇವಾಲಯ) ಚಳುವಳಿಗಳಿಗೆ ಸೇರುವುದಿಲ್ಲ. ಹಿಂದೂಗಳ ಭಾವನೆಯಲ್ಲಿ ಎರಡು ಜನ್ಮಸ್ಥಳಗಳಾಗಿ ಮತ್ತು ಒಂದು ವಾಸಸ್ಥಳವಾಗಿ ಕಾಶಿ-ಮಥುರಾ ಮತ್ತು ಅಯೋಧ್ಯೆ ಹೆಚ್ಚಿನ ಮಹತ್ವವನ್ನು ಹೊಂದಿವೆ. ಆದ್ದರಿಂದ, ಹಿಂದೂ ಸಮಾಜವು ಈ ಸ್ಥಳಗಳಿಗಾಗಿ ಆಗ್ರಹಿಸುತ್ತದೆ” ಎಂದು ಭಾಗವತ್ ಹೇಳಿದ್ದರು.

“ಆರ್‌ಎಸ್‌ಎಸ್ ಈ ಚಳುವಳಿಗಳ ಭಾಗವಾಗುವುದಿಲ್ಲ, ಆದರೆ ಸ್ವಯಂಸೇವಕರು ಸೇರಲು ಸ್ವತಂತ್ರರು” ಎಂದು ತಿಳಿಸಿದ್ದರು.

ಹಿಂದೂಗಳು ಎಲ್ಲಾ ಸ್ಥಳಗಳಲ್ಲಿ ದೇವಾಲಯಗಳನ್ನು ಹುಡುಕಬಾರದು. ಆದರೆ, ಮುಸ್ಲಿಮರು ಸಹೋದರತ್ವಕ್ಕಾಗಿ ಈ ಮೂರನ್ನು ತ್ಯಜಿಸಬೇಕು ಎಂದು ಎಂದಿದ್ದರು.

“ನಾವು ಎಲ್ಲಾ ಸ್ಥಳಗಳಲ್ಲಿ ಶಿವಲಿಂಗ ಅಥವಾ ಮಂದಿರವನ್ನು ಹುಡುಕಬಾರದು. ನಾನು ಹಿಂದೂ ಸಂಘಟನೆಯ ಮುಖ್ಯಸ್ಥನಾಗಿ ಈ ಘೋಷಣೆ ಮಾಡುತ್ತಿದ್ದರೆ, ಇನ್ನೊಂದು ಕಡೆಯವರು ಈ ಮೂರನ್ನು ಕೈಬಿಡಬೇಕು. ಇದು ಸಹೋದರತ್ವಕ್ಕೆ ಒಂದು ದೊಡ್ಡ ಹೆಜ್ಜೆಯಾಗಲಿದೆ” ಎಂದು ಭಾಗವತ್ ಹೇಳಿದ್ದರು.

ಆರೆಸ್ಸೆಸ್ ಭಾಗಿಯಾಗಿದ್ದ ಬಾಬರಿ ಮಸೀದಿ ಧ್ವಂಸ ಕೃತ್ಯದ ನಂತರ, 1947 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಯಾವುದೇ ಧಾರ್ಮಿಕ ಸ್ಥಳವನ್ನು ಬದಲಾಯಿಸುವುದನ್ನು ನಿಷೇಧಿಸುವ ಕಾನೂನನ್ನು ಸಂಸತ್ತು ಅಂಗೀಕರಿಸಿತು ಎಂದು ಸಿಪಿಐ(ಎಂ) ಎತ್ತಿ ತೋರಿಸಿದೆ.

ಬಾಬರಿ ಧ್ವಂಸದ ನಂತರ, ವಿವಿಧ ಹಿಂದುತ್ವ ಶಕ್ತಿಗಳು ನಿರಂತರವಾಗಿ “ಅಯೋಧ್ಯಾ ತೋ ಸಿರ್ಫ್ ಜಾನ್‌ ಕಿ ಹೈ, ಕಾಶಿ-ಮಥುರಾ ಬಾಕಿ ಹೈ” ಎಂಬ ಘೋಷಣೆಯನ್ನು ಕೂಗುತ್ತಿವೆ. ಇದರ ಅರ್ಥ “ಅಯೋಧ್ಯಾ ಕೇವಲ ಟ್ರೇಲರ್, ಕಾಶಿ ಮತ್ತು ಮಥುರಾ ಇನ್ನೂ ಉಳಿದಿವೆ” ಎಂದಾಗಿದೆ. ಇದು ವಾರಣಾಸಿಯ ಜ್ಞಾನವಾಪಿ ಮಸೀದಿ ಮತ್ತು ಮಥುರಾದ ಶಾಹಿ ಈದ್ಗಾ ಮಸೀದಿಯನ್ನು ಉಲ್ಲೇಖಿಸಿದ ಘೋಷಣೆಯಾಗಿದೆ.

“ಇಂತಹ ಬೇಡಿಕೆಗಳು ಕೋಮು ಭಾವನೆಗಳನ್ನು ಕೆರಳಿಸುವ, ಸಾರ್ವಜನಿಕ ಗಮನವನ್ನು ಬೇರೆಡೆಗೆ ಸೆಳೆಯುವ ಮತ್ತು ಧಾರ್ಮಿಕ ಆಧಾರದ ಮೇಲೆ ಸಮಾಜವನ್ನು ಧ್ರುವೀಕರಿಸುವ ಗುರಿಯನ್ನು ಹೊಂದಿವೆ” ಎಂದು ಸಿಪಿಐ(ಎಂ) ಪಾಲಿಟ್ ಬ್ಯೂರೋ ಪ್ರಕಟಣೆಯಲ್ಲಿ ಹೇಳಿದೆ.

“ಮುಂಬರುವ ಚುನಾವಣೆಗಳಿಗೆ ಮುಂಚಿತವಾಗಿ ಜನಾಕ್ರೋಶದಿಂದ ಬಿಜೆಪಿ ಸರ್ಕಾರವನ್ನು ರಕ್ಷಿಸಲು ಆರ್‌ಎಸ್‌ಎಸ್ ಮುಖ್ಯಸ್ಥರು ವಿಭಜನಕಾರಿ ವಿಷಯಗಳನ್ನು ಮುನ್ನೆಲೆ ತರುತ್ತಿದ್ದಾರೆ. ಆರ್‌ಎಸ್‌ಎಸ್ ಮತ್ತು ಅದರ ಅಂಗಸಂಸ್ಥೆಗಳು ಕೋಮು ವಿಭಜನೆಯನ್ನು ಪ್ರಚೋದಿಸುತ್ತಿವೆ” ಎಂದು ಸಿಪಿಐ(ಎಂ) ಕಿಡಿಕಾರಿದೆ.

“ಅಮೆರಿಕದ ಹೆಚ್ಚುವರಿ ಸುಂಕ ಹೇರಿಕೆ, ದುರ್ಬಲಗೊಳ್ಳುತ್ತಿರುವ ಆರ್ಥಿಕತೆ, ರೈತರು ಮತ್ತು ಕಾರ್ಮಿಕರ ಮೇಲೆ ಹೆಚ್ಚುತ್ತಿರುವ ದಾಳಿಗಳು ಮತ್ತು ಚುನಾವಣಾ ದುರುಪಯೋಗಗಳಿಂದ ಜನರು ಬಿಜೆಪಿ ನೇತೃತ್ವದ ಸರ್ಕಾರದ ಬಗ್ಗೆ ಹೆಚ್ಚು ಹೆಚ್ಚು ಭ್ರಮನಿರಸನಗೊಳ್ಳುತ್ತಿದ್ದಾರೆ. ಅದರ ವೈಫಲ್ಯಗಳನ್ನು ಹೆಚ್ಚು ಸ್ಪಷ್ಟವಾಗಿ ನೋಡುತ್ತಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಆರೆಸ್ಸೆಸ್‌ನ ವಿಭಜಕ ನೀತಿಗಳ ವಿರುದ್ಧ ‘ಜಾಗರೂಕರಾಗಿರಿ’. ಭಾರತದ ಏಕತೆ ಮತ್ತು ಸಮಗ್ರತೆಯು ಅತ್ಯಂತ ಮಹತ್ವದ್ದಾಗಿದೆ. ಅದನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸಬೇಕು” ಎಂದು ಸಿಪಿಐ(ಎಂ) ದೇಶದ ಜನರಿಗೆ ಒತ್ತಿ ಹೇಳಿದೆ.

ಇದನ್ನು ಸಾಧಿಸಲು, ‘ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸುವ ಮೂಲಕ ವಿಶಾಲವಾದ ಪ್ರತಿರೋಧವನ್ನು ನಿರ್ಮಿಸುವುದು ತುರ್ತಾಗಿ ಅಗತ್ಯವಾಗಿದೆ’ ಎಂದಿದೆ.

‘ಭಾರತೀಯ ಮಹಿಳೆಯರ ಮೇಲೆ ಹೊರೆಯಾಕಬೇಡಿ..’; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...