Homeಮುಖಪುಟಕಾಶಿ, ಮಥುರಾ ಅಭಿಯಾನ: ಭಾಗವತ್ ಹೇಳಿಕೆಗೆ ಸಿಪಿಐ(ಎಂ) ಖಂಡನೆ

ಕಾಶಿ, ಮಥುರಾ ಅಭಿಯಾನ: ಭಾಗವತ್ ಹೇಳಿಕೆಗೆ ಸಿಪಿಐ(ಎಂ) ಖಂಡನೆ

- Advertisement -
- Advertisement -

ಕಾಶಿ-ಮಥುರಾ ಅಭಿಯಾನಗಳನ್ನು ಮತ್ತೆ ಪ್ರಚೋದಿಸಲು ಪ್ರಯತ್ನಿಸಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಭಾಷಣವನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ತೀವ್ರವಾಗಿ ಖಂಡಿಸಿದೆ. ಭಾಗವತ್ ಅವರ ಹೇಳಿಕೆಗಳು ‘ಭಾರತದ ಸಂವಿಧಾನದ ಬಗ್ಗೆ ಆರ್‌ಎಸ್‌ಎಸ್‌ನ ನಿರ್ಲಕ್ಷ್ಯವನ್ನು ಪ್ರತಿಬಿಂಬಿಸುತ್ತವೆ ಮತ್ತು ನೆಲದ ಕಾನೂನನ್ನು ಉಲ್ಲಂಘಿಸುತ್ತವೆ’ ಎಂದು ಹೇಳಿದೆ.

ಗುರುವಾರ (ಆ.28) ದೆಹಲಿಯ ವಿಜ್ಞಾನ ಭವನದಲ್ಲಿ ಆರ್‌ಎಸ್‌ಎಸ್‌ನ ಶತಮಾನೋತ್ಸವದ ಅಂಗವಾಗಿ ನಡೆದ ಮೂರು ದಿನಗಳ ಉಪನ್ಯಾಸ ಸರಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, “ನಮ್ಮ ಸ್ವಯಂಸೇವಕರು ಕಾಶಿ, ಮಥುರಾ ಚಳುವಳಿಗಳಿಗೆ ಸೇರಲು ಸ್ವತಂತ್ರರು. ಮುಸ್ಲಿಮರು ‘ಸಹೋದರತ್ವ’ ಕ್ಕಾಗಿ ಈ ಮೂರನ್ನು ತ್ಯಜಿಸಬೇಕು” ಎಂದು ಹೇಳಿಕೆ ಕೊಟ್ಟಿದ್ದರು.

“ಆರ್‌ಎಸ್‌ಎಸ್ ದೇವಾಲಯ ಚಳುವಳಿಗಳಿಗೆ ಸೇರುವುದಿಲ್ಲ; ಆರ್‌ಎಸ್‌ಎಸ್ ಕೈ ಜೋಡಿಸಿದ ಏಕೈಕ ಚಳುವಳಿಯೆಂದರೆ ಅದು, ರಾಮ ಮಂದಿರ ಚಳುವಳಿ. ನಾವು ಅದನ್ನು ಕೊನೆಯವರೆಗೂ ಮುನ್ನಡೆಸಿದ್ದೇವೆ. ಸಂಘ ಇನ್ನು ಮುಂದೆ ಯಾವುದೇ (ದೇವಾಲಯ) ಚಳುವಳಿಗಳಿಗೆ ಸೇರುವುದಿಲ್ಲ. ಹಿಂದೂಗಳ ಭಾವನೆಯಲ್ಲಿ ಎರಡು ಜನ್ಮಸ್ಥಳಗಳಾಗಿ ಮತ್ತು ಒಂದು ವಾಸಸ್ಥಳವಾಗಿ ಕಾಶಿ-ಮಥುರಾ ಮತ್ತು ಅಯೋಧ್ಯೆ ಹೆಚ್ಚಿನ ಮಹತ್ವವನ್ನು ಹೊಂದಿವೆ. ಆದ್ದರಿಂದ, ಹಿಂದೂ ಸಮಾಜವು ಈ ಸ್ಥಳಗಳಿಗಾಗಿ ಆಗ್ರಹಿಸುತ್ತದೆ” ಎಂದು ಭಾಗವತ್ ಹೇಳಿದ್ದರು.

“ಆರ್‌ಎಸ್‌ಎಸ್ ಈ ಚಳುವಳಿಗಳ ಭಾಗವಾಗುವುದಿಲ್ಲ, ಆದರೆ ಸ್ವಯಂಸೇವಕರು ಸೇರಲು ಸ್ವತಂತ್ರರು” ಎಂದು ತಿಳಿಸಿದ್ದರು.

ಹಿಂದೂಗಳು ಎಲ್ಲಾ ಸ್ಥಳಗಳಲ್ಲಿ ದೇವಾಲಯಗಳನ್ನು ಹುಡುಕಬಾರದು. ಆದರೆ, ಮುಸ್ಲಿಮರು ಸಹೋದರತ್ವಕ್ಕಾಗಿ ಈ ಮೂರನ್ನು ತ್ಯಜಿಸಬೇಕು ಎಂದು ಎಂದಿದ್ದರು.

“ನಾವು ಎಲ್ಲಾ ಸ್ಥಳಗಳಲ್ಲಿ ಶಿವಲಿಂಗ ಅಥವಾ ಮಂದಿರವನ್ನು ಹುಡುಕಬಾರದು. ನಾನು ಹಿಂದೂ ಸಂಘಟನೆಯ ಮುಖ್ಯಸ್ಥನಾಗಿ ಈ ಘೋಷಣೆ ಮಾಡುತ್ತಿದ್ದರೆ, ಇನ್ನೊಂದು ಕಡೆಯವರು ಈ ಮೂರನ್ನು ಕೈಬಿಡಬೇಕು. ಇದು ಸಹೋದರತ್ವಕ್ಕೆ ಒಂದು ದೊಡ್ಡ ಹೆಜ್ಜೆಯಾಗಲಿದೆ” ಎಂದು ಭಾಗವತ್ ಹೇಳಿದ್ದರು.

ಆರೆಸ್ಸೆಸ್ ಭಾಗಿಯಾಗಿದ್ದ ಬಾಬರಿ ಮಸೀದಿ ಧ್ವಂಸ ಕೃತ್ಯದ ನಂತರ, 1947 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಯಾವುದೇ ಧಾರ್ಮಿಕ ಸ್ಥಳವನ್ನು ಬದಲಾಯಿಸುವುದನ್ನು ನಿಷೇಧಿಸುವ ಕಾನೂನನ್ನು ಸಂಸತ್ತು ಅಂಗೀಕರಿಸಿತು ಎಂದು ಸಿಪಿಐ(ಎಂ) ಎತ್ತಿ ತೋರಿಸಿದೆ.

ಬಾಬರಿ ಧ್ವಂಸದ ನಂತರ, ವಿವಿಧ ಹಿಂದುತ್ವ ಶಕ್ತಿಗಳು ನಿರಂತರವಾಗಿ “ಅಯೋಧ್ಯಾ ತೋ ಸಿರ್ಫ್ ಜಾನ್‌ ಕಿ ಹೈ, ಕಾಶಿ-ಮಥುರಾ ಬಾಕಿ ಹೈ” ಎಂಬ ಘೋಷಣೆಯನ್ನು ಕೂಗುತ್ತಿವೆ. ಇದರ ಅರ್ಥ “ಅಯೋಧ್ಯಾ ಕೇವಲ ಟ್ರೇಲರ್, ಕಾಶಿ ಮತ್ತು ಮಥುರಾ ಇನ್ನೂ ಉಳಿದಿವೆ” ಎಂದಾಗಿದೆ. ಇದು ವಾರಣಾಸಿಯ ಜ್ಞಾನವಾಪಿ ಮಸೀದಿ ಮತ್ತು ಮಥುರಾದ ಶಾಹಿ ಈದ್ಗಾ ಮಸೀದಿಯನ್ನು ಉಲ್ಲೇಖಿಸಿದ ಘೋಷಣೆಯಾಗಿದೆ.

“ಇಂತಹ ಬೇಡಿಕೆಗಳು ಕೋಮು ಭಾವನೆಗಳನ್ನು ಕೆರಳಿಸುವ, ಸಾರ್ವಜನಿಕ ಗಮನವನ್ನು ಬೇರೆಡೆಗೆ ಸೆಳೆಯುವ ಮತ್ತು ಧಾರ್ಮಿಕ ಆಧಾರದ ಮೇಲೆ ಸಮಾಜವನ್ನು ಧ್ರುವೀಕರಿಸುವ ಗುರಿಯನ್ನು ಹೊಂದಿವೆ” ಎಂದು ಸಿಪಿಐ(ಎಂ) ಪಾಲಿಟ್ ಬ್ಯೂರೋ ಪ್ರಕಟಣೆಯಲ್ಲಿ ಹೇಳಿದೆ.

“ಮುಂಬರುವ ಚುನಾವಣೆಗಳಿಗೆ ಮುಂಚಿತವಾಗಿ ಜನಾಕ್ರೋಶದಿಂದ ಬಿಜೆಪಿ ಸರ್ಕಾರವನ್ನು ರಕ್ಷಿಸಲು ಆರ್‌ಎಸ್‌ಎಸ್ ಮುಖ್ಯಸ್ಥರು ವಿಭಜನಕಾರಿ ವಿಷಯಗಳನ್ನು ಮುನ್ನೆಲೆ ತರುತ್ತಿದ್ದಾರೆ. ಆರ್‌ಎಸ್‌ಎಸ್ ಮತ್ತು ಅದರ ಅಂಗಸಂಸ್ಥೆಗಳು ಕೋಮು ವಿಭಜನೆಯನ್ನು ಪ್ರಚೋದಿಸುತ್ತಿವೆ” ಎಂದು ಸಿಪಿಐ(ಎಂ) ಕಿಡಿಕಾರಿದೆ.

“ಅಮೆರಿಕದ ಹೆಚ್ಚುವರಿ ಸುಂಕ ಹೇರಿಕೆ, ದುರ್ಬಲಗೊಳ್ಳುತ್ತಿರುವ ಆರ್ಥಿಕತೆ, ರೈತರು ಮತ್ತು ಕಾರ್ಮಿಕರ ಮೇಲೆ ಹೆಚ್ಚುತ್ತಿರುವ ದಾಳಿಗಳು ಮತ್ತು ಚುನಾವಣಾ ದುರುಪಯೋಗಗಳಿಂದ ಜನರು ಬಿಜೆಪಿ ನೇತೃತ್ವದ ಸರ್ಕಾರದ ಬಗ್ಗೆ ಹೆಚ್ಚು ಹೆಚ್ಚು ಭ್ರಮನಿರಸನಗೊಳ್ಳುತ್ತಿದ್ದಾರೆ. ಅದರ ವೈಫಲ್ಯಗಳನ್ನು ಹೆಚ್ಚು ಸ್ಪಷ್ಟವಾಗಿ ನೋಡುತ್ತಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಆರೆಸ್ಸೆಸ್‌ನ ವಿಭಜಕ ನೀತಿಗಳ ವಿರುದ್ಧ ‘ಜಾಗರೂಕರಾಗಿರಿ’. ಭಾರತದ ಏಕತೆ ಮತ್ತು ಸಮಗ್ರತೆಯು ಅತ್ಯಂತ ಮಹತ್ವದ್ದಾಗಿದೆ. ಅದನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸಬೇಕು” ಎಂದು ಸಿಪಿಐ(ಎಂ) ದೇಶದ ಜನರಿಗೆ ಒತ್ತಿ ಹೇಳಿದೆ.

ಇದನ್ನು ಸಾಧಿಸಲು, ‘ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸುವ ಮೂಲಕ ವಿಶಾಲವಾದ ಪ್ರತಿರೋಧವನ್ನು ನಿರ್ಮಿಸುವುದು ತುರ್ತಾಗಿ ಅಗತ್ಯವಾಗಿದೆ’ ಎಂದಿದೆ.

‘ಭಾರತೀಯ ಮಹಿಳೆಯರ ಮೇಲೆ ಹೊರೆಯಾಕಬೇಡಿ..’; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...