Homeಮುಖಪುಟಕಾಶಿ, ಮಥುರಾ ಅಭಿಯಾನ: ಭಾಗವತ್ ಹೇಳಿಕೆಗೆ ಸಿಪಿಐ(ಎಂ) ಖಂಡನೆ

ಕಾಶಿ, ಮಥುರಾ ಅಭಿಯಾನ: ಭಾಗವತ್ ಹೇಳಿಕೆಗೆ ಸಿಪಿಐ(ಎಂ) ಖಂಡನೆ

- Advertisement -
- Advertisement -

ಕಾಶಿ-ಮಥುರಾ ಅಭಿಯಾನಗಳನ್ನು ಮತ್ತೆ ಪ್ರಚೋದಿಸಲು ಪ್ರಯತ್ನಿಸಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಭಾಷಣವನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ತೀವ್ರವಾಗಿ ಖಂಡಿಸಿದೆ. ಭಾಗವತ್ ಅವರ ಹೇಳಿಕೆಗಳು ‘ಭಾರತದ ಸಂವಿಧಾನದ ಬಗ್ಗೆ ಆರ್‌ಎಸ್‌ಎಸ್‌ನ ನಿರ್ಲಕ್ಷ್ಯವನ್ನು ಪ್ರತಿಬಿಂಬಿಸುತ್ತವೆ ಮತ್ತು ನೆಲದ ಕಾನೂನನ್ನು ಉಲ್ಲಂಘಿಸುತ್ತವೆ’ ಎಂದು ಹೇಳಿದೆ.

ಗುರುವಾರ (ಆ.28) ದೆಹಲಿಯ ವಿಜ್ಞಾನ ಭವನದಲ್ಲಿ ಆರ್‌ಎಸ್‌ಎಸ್‌ನ ಶತಮಾನೋತ್ಸವದ ಅಂಗವಾಗಿ ನಡೆದ ಮೂರು ದಿನಗಳ ಉಪನ್ಯಾಸ ಸರಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, “ನಮ್ಮ ಸ್ವಯಂಸೇವಕರು ಕಾಶಿ, ಮಥುರಾ ಚಳುವಳಿಗಳಿಗೆ ಸೇರಲು ಸ್ವತಂತ್ರರು. ಮುಸ್ಲಿಮರು ‘ಸಹೋದರತ್ವ’ ಕ್ಕಾಗಿ ಈ ಮೂರನ್ನು ತ್ಯಜಿಸಬೇಕು” ಎಂದು ಹೇಳಿಕೆ ಕೊಟ್ಟಿದ್ದರು.

“ಆರ್‌ಎಸ್‌ಎಸ್ ದೇವಾಲಯ ಚಳುವಳಿಗಳಿಗೆ ಸೇರುವುದಿಲ್ಲ; ಆರ್‌ಎಸ್‌ಎಸ್ ಕೈ ಜೋಡಿಸಿದ ಏಕೈಕ ಚಳುವಳಿಯೆಂದರೆ ಅದು, ರಾಮ ಮಂದಿರ ಚಳುವಳಿ. ನಾವು ಅದನ್ನು ಕೊನೆಯವರೆಗೂ ಮುನ್ನಡೆಸಿದ್ದೇವೆ. ಸಂಘ ಇನ್ನು ಮುಂದೆ ಯಾವುದೇ (ದೇವಾಲಯ) ಚಳುವಳಿಗಳಿಗೆ ಸೇರುವುದಿಲ್ಲ. ಹಿಂದೂಗಳ ಭಾವನೆಯಲ್ಲಿ ಎರಡು ಜನ್ಮಸ್ಥಳಗಳಾಗಿ ಮತ್ತು ಒಂದು ವಾಸಸ್ಥಳವಾಗಿ ಕಾಶಿ-ಮಥುರಾ ಮತ್ತು ಅಯೋಧ್ಯೆ ಹೆಚ್ಚಿನ ಮಹತ್ವವನ್ನು ಹೊಂದಿವೆ. ಆದ್ದರಿಂದ, ಹಿಂದೂ ಸಮಾಜವು ಈ ಸ್ಥಳಗಳಿಗಾಗಿ ಆಗ್ರಹಿಸುತ್ತದೆ” ಎಂದು ಭಾಗವತ್ ಹೇಳಿದ್ದರು.

“ಆರ್‌ಎಸ್‌ಎಸ್ ಈ ಚಳುವಳಿಗಳ ಭಾಗವಾಗುವುದಿಲ್ಲ, ಆದರೆ ಸ್ವಯಂಸೇವಕರು ಸೇರಲು ಸ್ವತಂತ್ರರು” ಎಂದು ತಿಳಿಸಿದ್ದರು.

ಹಿಂದೂಗಳು ಎಲ್ಲಾ ಸ್ಥಳಗಳಲ್ಲಿ ದೇವಾಲಯಗಳನ್ನು ಹುಡುಕಬಾರದು. ಆದರೆ, ಮುಸ್ಲಿಮರು ಸಹೋದರತ್ವಕ್ಕಾಗಿ ಈ ಮೂರನ್ನು ತ್ಯಜಿಸಬೇಕು ಎಂದು ಎಂದಿದ್ದರು.

“ನಾವು ಎಲ್ಲಾ ಸ್ಥಳಗಳಲ್ಲಿ ಶಿವಲಿಂಗ ಅಥವಾ ಮಂದಿರವನ್ನು ಹುಡುಕಬಾರದು. ನಾನು ಹಿಂದೂ ಸಂಘಟನೆಯ ಮುಖ್ಯಸ್ಥನಾಗಿ ಈ ಘೋಷಣೆ ಮಾಡುತ್ತಿದ್ದರೆ, ಇನ್ನೊಂದು ಕಡೆಯವರು ಈ ಮೂರನ್ನು ಕೈಬಿಡಬೇಕು. ಇದು ಸಹೋದರತ್ವಕ್ಕೆ ಒಂದು ದೊಡ್ಡ ಹೆಜ್ಜೆಯಾಗಲಿದೆ” ಎಂದು ಭಾಗವತ್ ಹೇಳಿದ್ದರು.

ಆರೆಸ್ಸೆಸ್ ಭಾಗಿಯಾಗಿದ್ದ ಬಾಬರಿ ಮಸೀದಿ ಧ್ವಂಸ ಕೃತ್ಯದ ನಂತರ, 1947 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಯಾವುದೇ ಧಾರ್ಮಿಕ ಸ್ಥಳವನ್ನು ಬದಲಾಯಿಸುವುದನ್ನು ನಿಷೇಧಿಸುವ ಕಾನೂನನ್ನು ಸಂಸತ್ತು ಅಂಗೀಕರಿಸಿತು ಎಂದು ಸಿಪಿಐ(ಎಂ) ಎತ್ತಿ ತೋರಿಸಿದೆ.

ಬಾಬರಿ ಧ್ವಂಸದ ನಂತರ, ವಿವಿಧ ಹಿಂದುತ್ವ ಶಕ್ತಿಗಳು ನಿರಂತರವಾಗಿ “ಅಯೋಧ್ಯಾ ತೋ ಸಿರ್ಫ್ ಜಾನ್‌ ಕಿ ಹೈ, ಕಾಶಿ-ಮಥುರಾ ಬಾಕಿ ಹೈ” ಎಂಬ ಘೋಷಣೆಯನ್ನು ಕೂಗುತ್ತಿವೆ. ಇದರ ಅರ್ಥ “ಅಯೋಧ್ಯಾ ಕೇವಲ ಟ್ರೇಲರ್, ಕಾಶಿ ಮತ್ತು ಮಥುರಾ ಇನ್ನೂ ಉಳಿದಿವೆ” ಎಂದಾಗಿದೆ. ಇದು ವಾರಣಾಸಿಯ ಜ್ಞಾನವಾಪಿ ಮಸೀದಿ ಮತ್ತು ಮಥುರಾದ ಶಾಹಿ ಈದ್ಗಾ ಮಸೀದಿಯನ್ನು ಉಲ್ಲೇಖಿಸಿದ ಘೋಷಣೆಯಾಗಿದೆ.

“ಇಂತಹ ಬೇಡಿಕೆಗಳು ಕೋಮು ಭಾವನೆಗಳನ್ನು ಕೆರಳಿಸುವ, ಸಾರ್ವಜನಿಕ ಗಮನವನ್ನು ಬೇರೆಡೆಗೆ ಸೆಳೆಯುವ ಮತ್ತು ಧಾರ್ಮಿಕ ಆಧಾರದ ಮೇಲೆ ಸಮಾಜವನ್ನು ಧ್ರುವೀಕರಿಸುವ ಗುರಿಯನ್ನು ಹೊಂದಿವೆ” ಎಂದು ಸಿಪಿಐ(ಎಂ) ಪಾಲಿಟ್ ಬ್ಯೂರೋ ಪ್ರಕಟಣೆಯಲ್ಲಿ ಹೇಳಿದೆ.

“ಮುಂಬರುವ ಚುನಾವಣೆಗಳಿಗೆ ಮುಂಚಿತವಾಗಿ ಜನಾಕ್ರೋಶದಿಂದ ಬಿಜೆಪಿ ಸರ್ಕಾರವನ್ನು ರಕ್ಷಿಸಲು ಆರ್‌ಎಸ್‌ಎಸ್ ಮುಖ್ಯಸ್ಥರು ವಿಭಜನಕಾರಿ ವಿಷಯಗಳನ್ನು ಮುನ್ನೆಲೆ ತರುತ್ತಿದ್ದಾರೆ. ಆರ್‌ಎಸ್‌ಎಸ್ ಮತ್ತು ಅದರ ಅಂಗಸಂಸ್ಥೆಗಳು ಕೋಮು ವಿಭಜನೆಯನ್ನು ಪ್ರಚೋದಿಸುತ್ತಿವೆ” ಎಂದು ಸಿಪಿಐ(ಎಂ) ಕಿಡಿಕಾರಿದೆ.

“ಅಮೆರಿಕದ ಹೆಚ್ಚುವರಿ ಸುಂಕ ಹೇರಿಕೆ, ದುರ್ಬಲಗೊಳ್ಳುತ್ತಿರುವ ಆರ್ಥಿಕತೆ, ರೈತರು ಮತ್ತು ಕಾರ್ಮಿಕರ ಮೇಲೆ ಹೆಚ್ಚುತ್ತಿರುವ ದಾಳಿಗಳು ಮತ್ತು ಚುನಾವಣಾ ದುರುಪಯೋಗಗಳಿಂದ ಜನರು ಬಿಜೆಪಿ ನೇತೃತ್ವದ ಸರ್ಕಾರದ ಬಗ್ಗೆ ಹೆಚ್ಚು ಹೆಚ್ಚು ಭ್ರಮನಿರಸನಗೊಳ್ಳುತ್ತಿದ್ದಾರೆ. ಅದರ ವೈಫಲ್ಯಗಳನ್ನು ಹೆಚ್ಚು ಸ್ಪಷ್ಟವಾಗಿ ನೋಡುತ್ತಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಆರೆಸ್ಸೆಸ್‌ನ ವಿಭಜಕ ನೀತಿಗಳ ವಿರುದ್ಧ ‘ಜಾಗರೂಕರಾಗಿರಿ’. ಭಾರತದ ಏಕತೆ ಮತ್ತು ಸಮಗ್ರತೆಯು ಅತ್ಯಂತ ಮಹತ್ವದ್ದಾಗಿದೆ. ಅದನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸಬೇಕು” ಎಂದು ಸಿಪಿಐ(ಎಂ) ದೇಶದ ಜನರಿಗೆ ಒತ್ತಿ ಹೇಳಿದೆ.

ಇದನ್ನು ಸಾಧಿಸಲು, ‘ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸುವ ಮೂಲಕ ವಿಶಾಲವಾದ ಪ್ರತಿರೋಧವನ್ನು ನಿರ್ಮಿಸುವುದು ತುರ್ತಾಗಿ ಅಗತ್ಯವಾಗಿದೆ’ ಎಂದಿದೆ.

‘ಭಾರತೀಯ ಮಹಿಳೆಯರ ಮೇಲೆ ಹೊರೆಯಾಕಬೇಡಿ..’; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...