Homeಮುಖಪುಟಕಾಶಿ, ಮಥುರಾ ಅಭಿಯಾನ: ಭಾಗವತ್ ಹೇಳಿಕೆಗೆ ಸಿಪಿಐ(ಎಂ) ಖಂಡನೆ

ಕಾಶಿ, ಮಥುರಾ ಅಭಿಯಾನ: ಭಾಗವತ್ ಹೇಳಿಕೆಗೆ ಸಿಪಿಐ(ಎಂ) ಖಂಡನೆ

- Advertisement -
- Advertisement -

ಕಾಶಿ-ಮಥುರಾ ಅಭಿಯಾನಗಳನ್ನು ಮತ್ತೆ ಪ್ರಚೋದಿಸಲು ಪ್ರಯತ್ನಿಸಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಭಾಷಣವನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ತೀವ್ರವಾಗಿ ಖಂಡಿಸಿದೆ. ಭಾಗವತ್ ಅವರ ಹೇಳಿಕೆಗಳು ‘ಭಾರತದ ಸಂವಿಧಾನದ ಬಗ್ಗೆ ಆರ್‌ಎಸ್‌ಎಸ್‌ನ ನಿರ್ಲಕ್ಷ್ಯವನ್ನು ಪ್ರತಿಬಿಂಬಿಸುತ್ತವೆ ಮತ್ತು ನೆಲದ ಕಾನೂನನ್ನು ಉಲ್ಲಂಘಿಸುತ್ತವೆ’ ಎಂದು ಹೇಳಿದೆ.

ಗುರುವಾರ (ಆ.28) ದೆಹಲಿಯ ವಿಜ್ಞಾನ ಭವನದಲ್ಲಿ ಆರ್‌ಎಸ್‌ಎಸ್‌ನ ಶತಮಾನೋತ್ಸವದ ಅಂಗವಾಗಿ ನಡೆದ ಮೂರು ದಿನಗಳ ಉಪನ್ಯಾಸ ಸರಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, “ನಮ್ಮ ಸ್ವಯಂಸೇವಕರು ಕಾಶಿ, ಮಥುರಾ ಚಳುವಳಿಗಳಿಗೆ ಸೇರಲು ಸ್ವತಂತ್ರರು. ಮುಸ್ಲಿಮರು ‘ಸಹೋದರತ್ವ’ ಕ್ಕಾಗಿ ಈ ಮೂರನ್ನು ತ್ಯಜಿಸಬೇಕು” ಎಂದು ಹೇಳಿಕೆ ಕೊಟ್ಟಿದ್ದರು.

“ಆರ್‌ಎಸ್‌ಎಸ್ ದೇವಾಲಯ ಚಳುವಳಿಗಳಿಗೆ ಸೇರುವುದಿಲ್ಲ; ಆರ್‌ಎಸ್‌ಎಸ್ ಕೈ ಜೋಡಿಸಿದ ಏಕೈಕ ಚಳುವಳಿಯೆಂದರೆ ಅದು, ರಾಮ ಮಂದಿರ ಚಳುವಳಿ. ನಾವು ಅದನ್ನು ಕೊನೆಯವರೆಗೂ ಮುನ್ನಡೆಸಿದ್ದೇವೆ. ಸಂಘ ಇನ್ನು ಮುಂದೆ ಯಾವುದೇ (ದೇವಾಲಯ) ಚಳುವಳಿಗಳಿಗೆ ಸೇರುವುದಿಲ್ಲ. ಹಿಂದೂಗಳ ಭಾವನೆಯಲ್ಲಿ ಎರಡು ಜನ್ಮಸ್ಥಳಗಳಾಗಿ ಮತ್ತು ಒಂದು ವಾಸಸ್ಥಳವಾಗಿ ಕಾಶಿ-ಮಥುರಾ ಮತ್ತು ಅಯೋಧ್ಯೆ ಹೆಚ್ಚಿನ ಮಹತ್ವವನ್ನು ಹೊಂದಿವೆ. ಆದ್ದರಿಂದ, ಹಿಂದೂ ಸಮಾಜವು ಈ ಸ್ಥಳಗಳಿಗಾಗಿ ಆಗ್ರಹಿಸುತ್ತದೆ” ಎಂದು ಭಾಗವತ್ ಹೇಳಿದ್ದರು.

“ಆರ್‌ಎಸ್‌ಎಸ್ ಈ ಚಳುವಳಿಗಳ ಭಾಗವಾಗುವುದಿಲ್ಲ, ಆದರೆ ಸ್ವಯಂಸೇವಕರು ಸೇರಲು ಸ್ವತಂತ್ರರು” ಎಂದು ತಿಳಿಸಿದ್ದರು.

ಹಿಂದೂಗಳು ಎಲ್ಲಾ ಸ್ಥಳಗಳಲ್ಲಿ ದೇವಾಲಯಗಳನ್ನು ಹುಡುಕಬಾರದು. ಆದರೆ, ಮುಸ್ಲಿಮರು ಸಹೋದರತ್ವಕ್ಕಾಗಿ ಈ ಮೂರನ್ನು ತ್ಯಜಿಸಬೇಕು ಎಂದು ಎಂದಿದ್ದರು.

“ನಾವು ಎಲ್ಲಾ ಸ್ಥಳಗಳಲ್ಲಿ ಶಿವಲಿಂಗ ಅಥವಾ ಮಂದಿರವನ್ನು ಹುಡುಕಬಾರದು. ನಾನು ಹಿಂದೂ ಸಂಘಟನೆಯ ಮುಖ್ಯಸ್ಥನಾಗಿ ಈ ಘೋಷಣೆ ಮಾಡುತ್ತಿದ್ದರೆ, ಇನ್ನೊಂದು ಕಡೆಯವರು ಈ ಮೂರನ್ನು ಕೈಬಿಡಬೇಕು. ಇದು ಸಹೋದರತ್ವಕ್ಕೆ ಒಂದು ದೊಡ್ಡ ಹೆಜ್ಜೆಯಾಗಲಿದೆ” ಎಂದು ಭಾಗವತ್ ಹೇಳಿದ್ದರು.

ಆರೆಸ್ಸೆಸ್ ಭಾಗಿಯಾಗಿದ್ದ ಬಾಬರಿ ಮಸೀದಿ ಧ್ವಂಸ ಕೃತ್ಯದ ನಂತರ, 1947 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಯಾವುದೇ ಧಾರ್ಮಿಕ ಸ್ಥಳವನ್ನು ಬದಲಾಯಿಸುವುದನ್ನು ನಿಷೇಧಿಸುವ ಕಾನೂನನ್ನು ಸಂಸತ್ತು ಅಂಗೀಕರಿಸಿತು ಎಂದು ಸಿಪಿಐ(ಎಂ) ಎತ್ತಿ ತೋರಿಸಿದೆ.

ಬಾಬರಿ ಧ್ವಂಸದ ನಂತರ, ವಿವಿಧ ಹಿಂದುತ್ವ ಶಕ್ತಿಗಳು ನಿರಂತರವಾಗಿ “ಅಯೋಧ್ಯಾ ತೋ ಸಿರ್ಫ್ ಜಾನ್‌ ಕಿ ಹೈ, ಕಾಶಿ-ಮಥುರಾ ಬಾಕಿ ಹೈ” ಎಂಬ ಘೋಷಣೆಯನ್ನು ಕೂಗುತ್ತಿವೆ. ಇದರ ಅರ್ಥ “ಅಯೋಧ್ಯಾ ಕೇವಲ ಟ್ರೇಲರ್, ಕಾಶಿ ಮತ್ತು ಮಥುರಾ ಇನ್ನೂ ಉಳಿದಿವೆ” ಎಂದಾಗಿದೆ. ಇದು ವಾರಣಾಸಿಯ ಜ್ಞಾನವಾಪಿ ಮಸೀದಿ ಮತ್ತು ಮಥುರಾದ ಶಾಹಿ ಈದ್ಗಾ ಮಸೀದಿಯನ್ನು ಉಲ್ಲೇಖಿಸಿದ ಘೋಷಣೆಯಾಗಿದೆ.

“ಇಂತಹ ಬೇಡಿಕೆಗಳು ಕೋಮು ಭಾವನೆಗಳನ್ನು ಕೆರಳಿಸುವ, ಸಾರ್ವಜನಿಕ ಗಮನವನ್ನು ಬೇರೆಡೆಗೆ ಸೆಳೆಯುವ ಮತ್ತು ಧಾರ್ಮಿಕ ಆಧಾರದ ಮೇಲೆ ಸಮಾಜವನ್ನು ಧ್ರುವೀಕರಿಸುವ ಗುರಿಯನ್ನು ಹೊಂದಿವೆ” ಎಂದು ಸಿಪಿಐ(ಎಂ) ಪಾಲಿಟ್ ಬ್ಯೂರೋ ಪ್ರಕಟಣೆಯಲ್ಲಿ ಹೇಳಿದೆ.

“ಮುಂಬರುವ ಚುನಾವಣೆಗಳಿಗೆ ಮುಂಚಿತವಾಗಿ ಜನಾಕ್ರೋಶದಿಂದ ಬಿಜೆಪಿ ಸರ್ಕಾರವನ್ನು ರಕ್ಷಿಸಲು ಆರ್‌ಎಸ್‌ಎಸ್ ಮುಖ್ಯಸ್ಥರು ವಿಭಜನಕಾರಿ ವಿಷಯಗಳನ್ನು ಮುನ್ನೆಲೆ ತರುತ್ತಿದ್ದಾರೆ. ಆರ್‌ಎಸ್‌ಎಸ್ ಮತ್ತು ಅದರ ಅಂಗಸಂಸ್ಥೆಗಳು ಕೋಮು ವಿಭಜನೆಯನ್ನು ಪ್ರಚೋದಿಸುತ್ತಿವೆ” ಎಂದು ಸಿಪಿಐ(ಎಂ) ಕಿಡಿಕಾರಿದೆ.

“ಅಮೆರಿಕದ ಹೆಚ್ಚುವರಿ ಸುಂಕ ಹೇರಿಕೆ, ದುರ್ಬಲಗೊಳ್ಳುತ್ತಿರುವ ಆರ್ಥಿಕತೆ, ರೈತರು ಮತ್ತು ಕಾರ್ಮಿಕರ ಮೇಲೆ ಹೆಚ್ಚುತ್ತಿರುವ ದಾಳಿಗಳು ಮತ್ತು ಚುನಾವಣಾ ದುರುಪಯೋಗಗಳಿಂದ ಜನರು ಬಿಜೆಪಿ ನೇತೃತ್ವದ ಸರ್ಕಾರದ ಬಗ್ಗೆ ಹೆಚ್ಚು ಹೆಚ್ಚು ಭ್ರಮನಿರಸನಗೊಳ್ಳುತ್ತಿದ್ದಾರೆ. ಅದರ ವೈಫಲ್ಯಗಳನ್ನು ಹೆಚ್ಚು ಸ್ಪಷ್ಟವಾಗಿ ನೋಡುತ್ತಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಆರೆಸ್ಸೆಸ್‌ನ ವಿಭಜಕ ನೀತಿಗಳ ವಿರುದ್ಧ ‘ಜಾಗರೂಕರಾಗಿರಿ’. ಭಾರತದ ಏಕತೆ ಮತ್ತು ಸಮಗ್ರತೆಯು ಅತ್ಯಂತ ಮಹತ್ವದ್ದಾಗಿದೆ. ಅದನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸಬೇಕು” ಎಂದು ಸಿಪಿಐ(ಎಂ) ದೇಶದ ಜನರಿಗೆ ಒತ್ತಿ ಹೇಳಿದೆ.

ಇದನ್ನು ಸಾಧಿಸಲು, ‘ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸುವ ಮೂಲಕ ವಿಶಾಲವಾದ ಪ್ರತಿರೋಧವನ್ನು ನಿರ್ಮಿಸುವುದು ತುರ್ತಾಗಿ ಅಗತ್ಯವಾಗಿದೆ’ ಎಂದಿದೆ.

‘ಭಾರತೀಯ ಮಹಿಳೆಯರ ಮೇಲೆ ಹೊರೆಯಾಕಬೇಡಿ..’; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...