Homeಮುಖಪುಟಅಂತರ ಧರ್ಮೀಯ ಭೂ ವರ್ಗಾವಣೆಗೆ ಎಸ್‌ಒಪಿ: ಅಸ್ಸಾಂ ಸರ್ಕಾರದ ಕ್ರಮಕ್ಕೆ ವಿರೋಧ

ಅಂತರ ಧರ್ಮೀಯ ಭೂ ವರ್ಗಾವಣೆಗೆ ಎಸ್‌ಒಪಿ: ಅಸ್ಸಾಂ ಸರ್ಕಾರದ ಕ್ರಮಕ್ಕೆ ವಿರೋಧ

- Advertisement -
- Advertisement -

ವಿವಿಧ ಧರ್ಮಗಳಿಗೆ ಸೇರಿದ ಜನರ ನಡುವಿನ ಎಲ್ಲಾ ಭೂ ವರ್ಗಾವಣೆಗಳ ಪೊಲೀಸ್ ಪರಿಶೀಲನೆಯನ್ನು ಕಡ್ಡಾಯಗೊಳಿಸುವ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು (SOPs) ಅಸ್ಸಾಂ ಸಚಿವ ಸಂಪುಟ ಬುಧವಾರ (ಆ.27) ಅನುಮೋದಿಸಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ.

ಸರ್ಕಾರದ ಈ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಹಲವರು ಇದು ‘ಅಸಂವಿಧಾನಿಕ’ ನಡೆ ಎಂದು ಆಕ್ರೋಶ ವ್ಯಕ್ತಪಡಿಸದ್ದಾರೆ.

“ಇಂದು ರಾಜ್ಯ ಸಚಿವ ಸಂಪುಟವು ಅಂತರ-ಧರ್ಮೀಯ ಭೂ ವರ್ಗಾವಣೆಯ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು ಅನುಮೋದಿಸಿದೆ. ಅಸ್ಸಾಂನಂತಹ ಸೂಕ್ಷ್ಮ ರಾಜ್ಯದಲ್ಲಿ, ಎರಡು ಧಾರ್ಮಿಕ ಗುಂಪುಗಳ ನಡುವಿನ ಭೂ ವರ್ಗಾವಣೆಯನ್ನು ಬಹಳ ಎಚ್ಚರಿಕೆಯಿಂದ ನಿರ್ವಹಿಸಬೇಕಾಗಿದೆ. ಅಂತಹ ಎಲ್ಲಾ ವರ್ಗಾವಣೆ ಪ್ರಸ್ತಾಪಗಳು ಈಗ ರಾಜ್ಯ ಸರ್ಕಾರಕ್ಕೆ ಬರುತ್ತಿವೆ. ನಮ್ಮ ವಿಶೇಷ ವಿಭಾಗ (ಪೊಲೀಸ್) ಮೂಲಕ ಪ್ರತಿಯೊಂದನ್ನು ಪರಿಶೀಲಿಸಲಾಗುವುದು” ಎಂದು ಸಿಎಂ ಹಿಮಂತ ಬಿಸ್ವಾ ಶರ್ಮಾ ಬುಧವಾರ ಹೇಳಿದ್ದಾರೆ.

ಭೂಮಿ ಖರೀದಿಗೆ ಮೀಸಲಾದ ಹಣದ ಮೂಲ, ಖರೀದಿದಾರರ ತೆರಿಗೆ ರಿಟರ್ನ್ಸ್‌ನಲ್ಲಿ ಉಲ್ಲೇಖಿಸಲಾಗಿದೆಯೇ, ಖರೀದಿಯು ನಿರ್ದಿಷ್ಟ ಪ್ರದೇಶದ ಸಾಮಾಜಿಕ ರಚನೆಯ ಮೇಲೆ ಪರಿಣಾಮ ಬೀರುತ್ತದೆಯೇ, ಸ್ಥಳೀಯ ನಿವಾಸಿಗಳಿಂದ ಮಾರಾಟಕ್ಕೆ ವಿರೋಧವಿದೆಯೇ (ಮತ್ತು ಅಂತಹ ಕಳವಳಗಳನ್ನು ಪರಿಹರಿಸಲಾಗಿದೆಯೇ ಅಥವಾ ಇಲ್ಲವೇ), ಮತ್ತು ಮಾರಾಟವು ಕೆಲವು ಸಂದರ್ಭಗಳಲ್ಲಿ ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುತ್ತದೆಯೇ ಎಂಬುದನ್ನು ಪೊಲೀಸ್ ವಿಭಾಗ ಪರಿಶೀಲಿಸುತ್ತದೆ ಎಂದು ಸಿಎಂ ತಿಳಿಸಿದ್ದಾರೆ.

“ಎಲ್ಲಾ ಸಮಸ್ಯೆಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಲಾಗುವುದು ಮತ್ತು ನಂತರ ನಾವು ಜಿಲ್ಲಾಧಿಕಾರಿಗಳಿಗೆ (ಜಿಲ್ಲೆಗಳ) ಭೂಮಿ ವರ್ಗಾವಣೆಗೆ ಅವಕಾಶ ನೀಡಬೇಕೆ ಅಥವಾ ಬೇಡವೇ ಎಂಬುದರ ಕುರಿತು ತಿಳಿಸುತ್ತೇವೆ ಮತ್ತು ಅದರ ಪ್ರಕಾರ ಜಿಲ್ಲಾಧಿಕಾರಿಗಳು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ” ಎಂದು ಶರ್ಮಾ ಹೇಳಿದ್ದಾರೆ.

ಶಿಕ್ಷಣ ಅಥವಾ ಆರೋಗ್ಯ ಸಂಸ್ಥೆಗಳನ್ನು ಸ್ಥಾಪಿಸಲು ರಾಜ್ಯದಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸುವ ಅಸ್ಸಾಂನ ಹೊರಗಿನ ಸರ್ಕಾರೇತರ ಸಂಸ್ಥೆಗಳಿಗೂ ಇದೇ ವಿಧಾನವನ್ನು ಅನ್ವಯಿಸಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ.

“ಅಂತಹ ಎಲ್ಲಾ ಪ್ರಸ್ತಾಪಗಳನ್ನು ರಾಷ್ಟ್ರೀಯ ಭದ್ರತಾ ದೃಷ್ಟಿಕೋನದಿಂದ ಪರಿಶೀಲಿಸಲಾಗುವುದು ಮತ್ತು ನಂತರವೇ ಭೂ ಮಾರಾಟಕ್ಕೆ ಅನುಮತಿ ನೀಡಲಾಗುವುದು. ಆದಾಗ್ಯೂ, ತಮ್ಮ ಕೊಡುಗೆಗಳಿಗೆ ಹೆಸರುವಾಸಿಯಾದ ಸ್ಥಳೀಯ ಎನ್‌ಜಿಒಗಳಿಗೆ, ಅಂತಹ ಯಾವುದೇ ಕಾರ್ಯವಿಧಾನವನ್ನು ಅನುಸರಿಸುವ ಅಗತ್ಯವಿಲ್ಲ” ಎಂದು ಶರ್ಮಾ ತಿಳಿಸಿದ್ದಾರೆ.

ಕೇರಳದ ಹಲವಾರು ಎನ್‌ಜಿಒಗಳು ಶ್ರೀಭೂಮಿ ಮತ್ತು ಬಾರ್ಪೇಟಾದಂತಹ ಜಿಲ್ಲೆಗಳಲ್ಲಿ ಭೂಮಿಯನ್ನು ಖರೀದಿಸಿವೆ ಅಥವಾ ಬರಾಕ್ ಕಣಿವೆಯ ಜಿಲ್ಲೆಗಳಲ್ಲಿ (ಕ್ಯಾಚರ್, ಹೈಲಕಂಡಿ ಮತ್ತು ಶ್ರೀಭೂಮಿ) ಹಾಗೆ ಮಾಡಲು ಪ್ರಯತ್ನಿಸುತ್ತಿವೆ ಎಂದು ಸಿಎಂ ಶರ್ಮಾ ವಿವರಿಸಿದ್ದು, ಆ ಎನ್‌ಜಿಒಗಳ ಹೆಸರು ಹೇಳಿಲ್ಲ.

“ಕೇರಳದ ಹಲವಾರು ಸರ್ಕಾರೇತರ ಸಂಸ್ಥೆಗಳು ಒಂದು ನಿರ್ದಿಷ್ಟ ಧರ್ಮದೊಂದಿಗೆ ಸಂಬಂಧ ಹೊಂದಿದ್ದು, ಈಗಾಗಲೇ ದೊಡ್ಡ ಜಮೀನುಗಳನ್ನು ಖರೀದಿಸಿವೆ ಅಥವಾ ಹಾಗೆ ಮಾಡಲು ಪ್ರಯತ್ನಿಸುತ್ತಿವೆ. ಅಂತಹ ಖರೀದಿಗಳನ್ನು ತಡೆಯಲು ನಾವು ಪ್ರಯತ್ನಿಸುತ್ತಿದ್ದೇವೆ” ಎಂದು ಸಿಎಂ ಹೇಳಿದ್ದಾರೆ.

ಸರ್ಕಾರದ ಈ ಕ್ರಮವನ್ನು ಹಲವರು ಸಂವಿಧಾನದ ಸ್ಪಷ್ಟ ಉಲ್ಲಂಘನೆ ಎಂದಿದ್ದಾರೆ.

ಸರ್ಕಾರದ ಕ್ರಮ ‘ಅಸಂವಿಧಾನಿಕ’ ಎಂದಿರುವ ಅಸ್ಸಾಂನ ಕಾಂಗ್ರೆಸ್ ವಕ್ತಾರ ಅಮನ್ ವಾದುದ್, ಅಂತರ ಧರ್ಮೀಯ ಭೂ ಮಾರಾಟವು ಸಾಮಾಜಿಕ ರಚನೆ ಮತ್ತು ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ತೋರಿಸಲು ಯಾವುದೇ ಪ್ರಾಯೋಗಿಕ ದತ್ತಾಂಶವಿದೆಯೇ ಎಂದು ಸಿಎಂ ಅನ್ನು ಪ್ರಶ್ನಿಸಿದ್ದಾರೆ.

ಕಾಶಿ, ಮಥುರಾ ಅಭಿಯಾನ: ಭಾಗವತ್ ಹೇಳಿಕೆಗೆ ಸಿಪಿಐ(ಎಂ) ಖಂಡನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...