Homeಅಂತರಾಷ್ಟ್ರೀಯಯೆಮನ್ | ಇಸ್ರೇಲ್ ದಾಳಿಯಲ್ಲಿ ಹೌತಿ ಸರ್ಕಾರದ ಪ್ರಧಾನಿ, ಹಲವು ಸಚಿವರು ಸಾವು: ವರದಿ

ಯೆಮನ್ | ಇಸ್ರೇಲ್ ದಾಳಿಯಲ್ಲಿ ಹೌತಿ ಸರ್ಕಾರದ ಪ್ರಧಾನಿ, ಹಲವು ಸಚಿವರು ಸಾವು: ವರದಿ

- Advertisement -
- Advertisement -

ಯೆಮನ್‌ ರಾಜಧಾನಿ ಸನಾ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಹೌತಿ ಸರ್ಕಾರದ ಪ್ರಧಾನಿ ಅಹ್ಮದ್ ಗಲೇಬ್ ನಾಸರ್ ಅಲ್-ರಹಾವಿ ಮತ್ತು ಹಲವು ಸಚಿವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಕಳೆದ ಗುರುವಾರ (ಆ.28) ಇಸ್ರೇಲ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಪ್ರಧಾನಿ ರಹಾವಿ, ಸಚಿವರು ಮತ್ತು ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂಬುವುದನ್ನು ಹೌತಿ ದೃಢಪಡಿಸಿದೆ ಎಂದು ಬಿಬಿಸಿ ಭಾನುವಾರ(31) ವರದಿ ಮಾಡಿದೆ.

ಸನಾ ಪ್ರದೇಶದಲ್ಲಿ ಸಭೆಯೊಂದರ ಮೇಲೆ ಇಸ್ರೇಲಿ ಫೈಟರ್ ಜೆಟ್‌ಗಳು ದಾಳಿ ನಡೆಸಿದ್ದು, ಹೌತಿ ಆಡಳಿತದ ಪ್ರಧಾನಿ ರಹಾವಿ ಮತ್ತು ಇತರ ಹಿರಿಯ ಹೌತಿ ಅಧಿಕಾರಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್‌ನ ಐಡಿಎಫ್ ಕೂಡ ಹೇಳಿದೆ.

ವರದಿಗಳ ಪ್ರಕಾರ, ವಿನಾಶಕಾರಿ ಅಂತರ್ಯುದ್ಧ ನಡೆದು ಯೆಮನ್‌ ರಾಜಧಾನಿ ಸನಾದಿಂದ ಅಧಿಕೃತ ಸರ್ಕಾರದ ಆಡಳಿತವನ್ನು ಕಿತ್ತು ಹಾಕಿದ ಬಳಿಕ, 2014 ರಿಂದ ಹೌತಿಗಳು ವಾಯುವ್ಯ ಯೆಮೆನ್‌ನ ಹೆಚ್ಚಿನ ಭಾಗವನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಂಡಿದ್ದಾರೆ.

ತಮ್ಮ ಪ್ರಧಾನಿ ರಹಾವಿ ಮತ್ತು ಸಚಿವರು ಇಸ್ರೇಲ್ ದಾಳಿಯಲ್ಲಿ ಹತ್ಯೆಯಾಗಿದ್ದಾರೆ ಎಂದು ಹೌತಿ ಹೇಳಿಕೊಂಡಿದೆ. ಮೃತ ಸಚಿವರ ಹೆಸರು ತಿಳಿಸಿಲ್ಲ.

ಸೌದಿ ಅರೇಬಿಯಾದ ಸುದ್ದಿ ತಾಣ ಅಲ್-ಹದತ್ ವರದಿ ಮಾಡಿರುವ ಪ್ರಕಾರ, ಹೌತಿಗಳ ವಿದೇಶಾಂಗ ಸಚಿವರು, ನ್ಯಾಯ, ಯುವಜನ ಮತ್ತು ಕ್ರೀಡೆ, ಸಾಮಾಜಿಕ ವ್ಯವಹಾರಗಳು ಮತ್ತು ಕಾರ್ಮಿಕ ಸಚಿವರು ಕೊಲ್ಲಲ್ಪಟ್ಟಿದ್ದಾರೆ.

ಇಸ್ರೇಲ್ ದಾಳಿಯಲ್ಲಿ ಹಲವಾರು ಇತರ ಸಚಿವರು ಕೂಡ ಸಾಧಾರಣ ಮತ್ತು ಗಂಭೀರ ಗಾಯಗಳಿಗೆ ಒಳಗಾಗಿದ್ದಾರೆ ಎಂದು ಹೌತಿಗಳ ಅಧ್ಯಕ್ಷ ಮಹ್ದಿ ಅಲ್-ಮಶಾತ್ ಅವರ ಕಚೇರಿಯನ್ನು ಉಲ್ಲೇಖಿಸಿ ಬಿಬಿಸಿ ವರದಿ ಮಾಡಿದೆ.

ಪ್ರಧಾನಿ ಹತ್ಯೆಯಾಗಿರುವ ಹಿನ್ನೆಲೆ ಉಪ ಪ್ರಧಾನಿ ಮುಹಮ್ಮದ್ ಅಹ್ಮದ್ ಮಿಫ್ತಾ ಅವರು ಪ್ರಧಾನಿ ಸ್ಥಾನ ಅಲಂಕರಿಸಲಿದ್ದಾರೆ ಎಂದು ಹೌತಿ ಹೇಳಿದೆ.

ರಹಾವಿ ಆಗಸ್ಟ್ 2024ರಿಂದ ಹೌತಿ ಆಡಳಿತದ ಪ್ರಧಾನಿಯಾಗಿದ್ದರು. ಅದಕ್ಕೂ ಮುನ್ನ ಮಿಲಿಟರಿ ಕಾರ್ಯಾಚರಣೆಗಳನ್ನು ಯೋಜಿಸುವ ಉನ್ನತ ನಿರ್ಧಾರ ತೆಗೆದುಕೊಳ್ಳುವ ತಂಡದ ಭಾಗವಾಗುವ ಬದಲು ಹೌತಿ ಚಳವಳಿಯ ಪ್ರಮುಖ ವ್ಯಕ್ತಿಯಾಗಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರು ಎಂದು ವರದಿಗಳು ಹೇಳಿವೆ.

ಗುರುವಾರದ ದಾಳಿಯಲ್ಲಿ ಹೌತಿ ಚಳುವಳಿಯ ಅಂತಿಮ ನಾಯಕ ಅಬ್ದುಲ್-ಮಲಿಕ್ ಅಲ್-ಹೌತಿ, ಹಾಗೆಯೇ ಗುಂಪಿನ ರಕ್ಷಣಾ ಸಚಿವರು ಮತ್ತು ಸಿಬ್ಬಂದಿ ಮುಖ್ಯಸ್ಥರು ಸಾವನ್ನಪ್ಪಿದ್ದಾರೆಯೇ ಎಂಬುವುದರ ಬಗ್ಗೆ ಖಚಿತ ಮಾಹಿತಿ ದೊರೆತಿಲ್ಲ.

ಹೌತಿ ಸಭೆಯ ಬಗ್ಗೆ ಗುಪ್ತಚರ ಮಾಹಿತಿ ಪಡೆದ ‘ಕೆಲವೇ ಗಂಟೆಗಳಲ್ಲಿ’ ದಾಳಿ ನಡೆಸಲಾಗಿದೆ ಎಂದು ಐಡಿಎಫ್ ಶನಿವಾರ ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದೆ. ಕಾರ್ಯಾಚರಣೆಯ ಸಂಪೂರ್ಣ ಪರಿಣಾಮವನ್ನು ಇನ್ನೂ ನಿರ್ಣಯಿಸಲಾಗುತ್ತಿದೆ ಎಂದು ಅದು ಹೇಳಿದೆ.

ಗಾಝಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಪ್ರಾರಂಭವಾದಾಗಿನಿಂದ, ಹೌತಿಗಳು ನಿಯಮಿತವಾಗಿ ಇಸ್ರೇಲ್ ಮೇಲೆ ಕ್ಷಿಪಣಿಗಳನ್ನು ಉಡಾಯಿಸುತ್ತಿದ್ದಾರೆ ಮತ್ತು ಕೆಂಪು ಸಮುದ್ರ ಮತ್ತು ಅಡೆನ್ ಕೊಲ್ಲಿಯಲ್ಲಿ ವಾಣಿಜ್ಯ ಹಡಗುಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ಹೌತಿಗಳು ಪ್ಯಾಲೆಸ್ತೀನಿಯರನ್ನು ಬೆಂಬಲಿಸುವುದಾಗಿ ಹೇಳಿಕೊಂಡಿದ್ದಾರೆ.

ಇದಕ್ಕೆ ಪ್ರತಿಯಾಗಿ, ಇಸ್ರೇಲ್ ಯೆಮನ್‌ನ ಹೌತಿ ಹಿಡಿತದಲ್ಲಿರುವ ಪ್ರದೇಶಗಳ ಮೇಲೆ ವಾಯುದಾಳಿಗಳನ್ನು ನಡೆಸುತ್ತಿದೆ.

ಉಕ್ರೇನ್‌ನಲ್ಲಿ ನಡೆಯುತ್ತಿರುವುದು ‘ಮೋದಿ ಯುದ್ಧ’: ಅಮೆರಿಕ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....