Homeಮುಖಪುಟಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

- Advertisement -
- Advertisement -

ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ಖುಲಾಸೆಗೊಂಡಿರುವ ವ್ಯಕ್ತಿಗಳಲ್ಲಿ ಒಬ್ಬರಾದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ಅವರ ಸಮಾಧಿ ಮುಂದೆ ಸಂಬಂಧಿಕರು ಬಾಂಬೆ ಹೈಕೋರ್ಟ್ ಆದೇಶವನ್ನು ಓದಿರುವ ಅಪರೂಪದ ಘಟನೆ ಭಾನುವಾರ (ಆ.31) ನಾಗ್ಪುರದ ಜರಿಪಟ್ಕಾ ಕಬ್ರಸ್ತಾನದಲ್ಲಿ ನಡೆದಿದೆ.

2006ರ ಮುಂಬೈ ರೈಲು ಸ್ಪೋಟ ಪ್ರಕರಣದ ಎಲ್ಲಾ ಆರೋಪಿಗಳನ್ನು 2025ರ ಜುಲೈ 21ರಂದು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಈ ಪ್ರಕರಣದಲ್ಲಿ ಬಂಧಿತರಾಗಿದ್ದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ನಾಲ್ಕು ವರ್ಷಗಳ ಮುಂಚೆ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

2006ರ ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ, ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ (ಮೋಕಾ) ಸ್ಥಾಪನೆಗೊಂಡಿದ್ದ ವಿಶೇಷ ನ್ಯಾಯಾಲಯವು 12 ಮುಸ್ಲಿಂ ಪುರುಷರನ್ನು ದೋಷಿಗಳೆಂದು 2015ರಲ್ಲಿ ಘೋಷಿಸಿತ್ತು. ಕಮಲ್ ಅಹ್ಮದ್ ಸೇರಿದಂತೆ ಐವರಿಗೆ ಮರಣದಂಡನೆ ಘೋಷಣೆ ಮಾಡಿತ್ತು.

ಆದರೆ, ಜುಲೈ 21, 2025ರಂದು ಪ್ರಕರಣದ ಎಲ್ಲಾ ಅಪರಾಧಿಗಳನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ‘ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಕೋರ್ಟ್ ಹೇಳಿದೆ. ಮೋಕಾ ನ್ಯಾಯಾಲಯದ ಮರಣದಂಡನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವಾಗಲೇ ಕಮಲ್ ಅಹ್ಮದ್ ಜೈಲಿನಲ್ಲಿ ಕೊನೆಯುಸಿರೆಳೆದಿದ್ದರು.

‘ಇನ್ನೋಸೆನ್ಸ್ ನೆಟ್‌ವರ್ಕ್‌’ನ ಪ್ರಧಾನ ಕಾರ್ಯದರ್ಶಿ ಡಾ. ಅಬ್ದುಲ್ ವಾಹಿದ್ ಶೇಖ್ ಮತ್ತು ಜಮಿಯತ್-ಎ-ಉಲಮಾ ನಾಗ್ಪುರದ ಅಧ್ಯಕ್ಷ ಖಾರಿ ಸಬೀರ್ ನೇತೃತ್ವದಲ್ಲಿ, ದೆಹಲಿಯ ಕಮಲ್ ಅಹ್ಮದ್ ಅವರ ಕಿರಿಯ ಸಹೋದರ ಜಮಾಲ್ ಅಹ್ಮದ್ ಅನ್ಸಾರಿ, ಕುಟುಂಬ ಸದಸ್ಯರು, ಹೋರಾಟಗಾರರು ಮತ್ತು ಸಮುದಾಯದ ಮುಖಂಡರ ನಿಯೋಗ ಭಾನುವಾರ ಕಮಲ್ ಅಹ್ಮದ್ ಅವರ ಸಮಾಧಿಗೆ ಭೇಟಿ ನೀಡಿದೆ.

ಸಮಾಧಿಯ ಪಕ್ಕದಲ್ಲಿ ನಿಂತು, ಜುಲೈ 21, 2025ರಂದು ಬಾಂಬೆ ಹೈಕೋರ್ಟ್ ಕಮಲ್ ಅಹ್ಮದ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ತೀರ್ಪನ್ನು ಗಟ್ಟಿಯಾಗಿ ಓದಿದ್ದಾರೆ. ಈ ಮೂಲಕ ‘ನಾನು ನಿರಪರಾಧಿ’ ಎಂದು ಕಮಲ್ ಅಹ್ಮದ್ ಯಾವಾಗಳೂ ಹೇಳುತ್ತಿದ್ದ ಮಾತನ್ನು ಸಾರ್ವಜನಿಕವಾಗಿ ದೃಢೀಕರಿಸಲಾಗಿದೆ ಎಂದು maktoobmedia.com ವರದಿ ಹೇಳಿದೆ.

ಬಿಹಾರದ ಮಧುಬನಿಯ ಬಡ ದಿನಗೂಲಿ ಕಾರ್ಮಿಕ ಕಮಲ್ ಅಹ್ಮದ್, ಒಂದು ಸಣ್ಣ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು, ತರಕಾರಿಗಳನ್ನು ಮಾರುತ್ತಿದ್ದರು ಮತ್ತು ತಮ್ಮ ಪತ್ನಿ ಮತ್ತು ಐವರು ಮಕ್ಕಳನ್ನು ಸಾಕಲು ಹೆಣಗಾಡುತ್ತಿದ್ದರು. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ಅವರನ್ನು ಬಂಧಿಸಿ, ‘ಭಯೋತ್ಪಾದಕ’ ಎಂದು ಹಣೆಪಟ್ಟಿ ಕಟ್ಟಿ, ಸ್ಫೋಟ ಪ್ರಕರಣದಲ್ಲಿ ಅವರ ಮೇಲೆ ಆರೋಪ ಹೊರಿಸಿದಾಗ ಅವರ ಜೀವನ ಛಿದ್ರವಾಯಿತು. 16 ವರ್ಷಗಳ ಕಾಲ, ಅವರು ಜೈಲಿನಲ್ಲಿದ್ದರು. ಅವರ ಕುಟುಂಬ ಸುಖಾಸುಮ್ಮನೆ ಕಳಂಕ ಹೊತ್ತುಕೊಂಡಿತ್ತು. ಅವರ ನೋವನ್ನು ಕೇಳುವವರೇ ಇರಲಿಲ್ಲ ಎಂದು maktoobmedia.com ವಿವರಿಸಿದೆ.

2021ರಲ್ಲಿ, ಕೋವಿಡ್-19 ಉತ್ತುಂಗದಲ್ಲಿದ್ದಾಗ, ಕಮಲ್ ಅಹ್ಮದ್ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಕಸ್ಟಡಿಯಲ್ಲಿ ನಿಧನರಾದರು. ಅವರ ಮರಣದ ನಾಲ್ಕು ವರ್ಷಗಳ ನಂತರ ಅವರು ನಿರಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ.

“ಕಮಲ್ ಅಹ್ಮದ್ ಅವರ ಸುಂದರ ಜೀವನವನ್ನು ಕಿತ್ತುಕೊಳ್ಳಲಾಯಿತು. ಅವರ ಮಕ್ಕಳು ತಂದೆ ಇಲ್ಲದೆ ಬೆಳೆದರು. ಅವರ ಪತ್ನಿ ಅಸಹನೀಯ ಕಳಂಕದ ಹೊರೆಯನ್ನು ಹೊತ್ತುಕೊಂಡರು. ಕುಟುಂಬ ಅವಮಾನ ಎದುರಿಸಿತು. ನ್ಯಾಯಾಲಯದ ತೀರ್ಪು ಕಾನೂನು ಕ್ರಮಗಳಿಂದ ಮುಕ್ತಗೊಳಿಸಬಹುದು. ಆದರೆ, ಅವರು ಕಳೆದುಕೊಂಡ ಜೀವನದ ಅಮೂಲ್ಯ ಸಮಯವನ್ನು ಹಿಂದಿರುಗಿಸಲು ಮತ್ತು ಅವರ ಕುಟುಂಬ ಅನುಭವಿಸಿದ ನೋವಿಗೆ ಪರಿಹಾರ ಕೊಡಲು ಸಾಧ್ಯವೇ?” ಎಂದು ಡಾ. ಅಬ್ದುಲ್ ವಾಹಿದ್ ಶೇಖ್ ಪ್ರಶ್ನಿಸಿದ್ದಾರೆ.

ಒಂಬತ್ತು ವರ್ಷಗಳ ಕಾಲ ಜೈಲಿನಲ್ಲಿ ಕಳೆದ ನಂತರ, ದಶಕದ ಹಿಂದೆ ವಿಚಾರಣಾ ನ್ಯಾಯಾಲಯವು ಶೇಖ್ ಅವರನ್ನು ಖುಲಾಸೆಗೊಳಿಸಿತ್ತು. ಅಂದಿನಿಂದ, ಜೈಲು ಹಕ್ಕುಗಳ ಕಾರ್ಯಕರ್ತರಾಗಿರುವ ಶೇಖ್, ತಮ್ಮ ಸಂಘಟನೆಯಾದ ‘ಇನ್ನೋಸೆನ್ಸ್ ನೆಟ್‌ವರ್ಕ್ ಆಫ್ ಇಂಡಿಯಾ’ ಮೂಲಕ ಸುಳ್ಳು ಪ್ರಕರಣದಲ್ಲಿ ಸಿಲುಕಿದ ವ್ಯಕ್ತಿಗಳ ಬಿಡುಗಡೆಗಾಗಿ ಕೆಲಸ ಮಾಡುತ್ತಿದೆ.

ಕಮಲ್ ಅಹ್ಮದ್ ಅವರ ಸಮಾಧಿ ಮುಂದೆ ಭಾನುವಾರ ಪ್ರಾರ್ಥನೆ, ಭಾಷಣ ನಡೆಯಿತು. ನಮ್ಮ ವ್ಯವಸ್ಥೆಯು ದುರ್ಬಲ ವರ್ಗದ ಜನರ ಮೇಲೆ ಪದೇ ಪದೇ ದಬ್ಬಾಳಿಕೆ ನಡೆಸುತ್ತಿದೆ. ಬಡವರನ್ನು ಅಪರಾಧಿಗಳೆಂದು ಪರಿಗಣಿಸುತ್ತಿದೆ. ಭಾರತದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ಕಾನೂನನ್ನು ಅಸ್ತ್ರವಾಗಿ ಬಳಸಲಾಗುತ್ತಿದೆ ಎಂದು ಭಾಗವಹಿಸಿದ್ದವರು ಹೇಳಿದರು ಎಂದು maktoobmedia.com ವರದಿ ಮಾಡಿದೆ.

‘ಶಿಕ್ಷಣ ನಿಧಿ’ ಬಿಡುಗಡೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ: ಸಂಸದ ಸಸಿಕಾಂತ್ ಸೆಂಥಿಲ್ ಆಸ್ಪತ್ರೆಗೆ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...