Homeಮುಖಪುಟಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

- Advertisement -
- Advertisement -

ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ಖುಲಾಸೆಗೊಂಡಿರುವ ವ್ಯಕ್ತಿಗಳಲ್ಲಿ ಒಬ್ಬರಾದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ಅವರ ಸಮಾಧಿ ಮುಂದೆ ಸಂಬಂಧಿಕರು ಬಾಂಬೆ ಹೈಕೋರ್ಟ್ ಆದೇಶವನ್ನು ಓದಿರುವ ಅಪರೂಪದ ಘಟನೆ ಭಾನುವಾರ (ಆ.31) ನಾಗ್ಪುರದ ಜರಿಪಟ್ಕಾ ಕಬ್ರಸ್ತಾನದಲ್ಲಿ ನಡೆದಿದೆ.

2006ರ ಮುಂಬೈ ರೈಲು ಸ್ಪೋಟ ಪ್ರಕರಣದ ಎಲ್ಲಾ ಆರೋಪಿಗಳನ್ನು 2025ರ ಜುಲೈ 21ರಂದು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಈ ಪ್ರಕರಣದಲ್ಲಿ ಬಂಧಿತರಾಗಿದ್ದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ನಾಲ್ಕು ವರ್ಷಗಳ ಮುಂಚೆ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

2006ರ ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ, ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ (ಮೋಕಾ) ಸ್ಥಾಪನೆಗೊಂಡಿದ್ದ ವಿಶೇಷ ನ್ಯಾಯಾಲಯವು 12 ಮುಸ್ಲಿಂ ಪುರುಷರನ್ನು ದೋಷಿಗಳೆಂದು 2015ರಲ್ಲಿ ಘೋಷಿಸಿತ್ತು. ಕಮಲ್ ಅಹ್ಮದ್ ಸೇರಿದಂತೆ ಐವರಿಗೆ ಮರಣದಂಡನೆ ಘೋಷಣೆ ಮಾಡಿತ್ತು.

ಆದರೆ, ಜುಲೈ 21, 2025ರಂದು ಪ್ರಕರಣದ ಎಲ್ಲಾ ಅಪರಾಧಿಗಳನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ‘ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಕೋರ್ಟ್ ಹೇಳಿದೆ. ಮೋಕಾ ನ್ಯಾಯಾಲಯದ ಮರಣದಂಡನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವಾಗಲೇ ಕಮಲ್ ಅಹ್ಮದ್ ಜೈಲಿನಲ್ಲಿ ಕೊನೆಯುಸಿರೆಳೆದಿದ್ದರು.

‘ಇನ್ನೋಸೆನ್ಸ್ ನೆಟ್‌ವರ್ಕ್‌’ನ ಪ್ರಧಾನ ಕಾರ್ಯದರ್ಶಿ ಡಾ. ಅಬ್ದುಲ್ ವಾಹಿದ್ ಶೇಖ್ ಮತ್ತು ಜಮಿಯತ್-ಎ-ಉಲಮಾ ನಾಗ್ಪುರದ ಅಧ್ಯಕ್ಷ ಖಾರಿ ಸಬೀರ್ ನೇತೃತ್ವದಲ್ಲಿ, ದೆಹಲಿಯ ಕಮಲ್ ಅಹ್ಮದ್ ಅವರ ಕಿರಿಯ ಸಹೋದರ ಜಮಾಲ್ ಅಹ್ಮದ್ ಅನ್ಸಾರಿ, ಕುಟುಂಬ ಸದಸ್ಯರು, ಹೋರಾಟಗಾರರು ಮತ್ತು ಸಮುದಾಯದ ಮುಖಂಡರ ನಿಯೋಗ ಭಾನುವಾರ ಕಮಲ್ ಅಹ್ಮದ್ ಅವರ ಸಮಾಧಿಗೆ ಭೇಟಿ ನೀಡಿದೆ.

ಸಮಾಧಿಯ ಪಕ್ಕದಲ್ಲಿ ನಿಂತು, ಜುಲೈ 21, 2025ರಂದು ಬಾಂಬೆ ಹೈಕೋರ್ಟ್ ಕಮಲ್ ಅಹ್ಮದ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ತೀರ್ಪನ್ನು ಗಟ್ಟಿಯಾಗಿ ಓದಿದ್ದಾರೆ. ಈ ಮೂಲಕ ‘ನಾನು ನಿರಪರಾಧಿ’ ಎಂದು ಕಮಲ್ ಅಹ್ಮದ್ ಯಾವಾಗಳೂ ಹೇಳುತ್ತಿದ್ದ ಮಾತನ್ನು ಸಾರ್ವಜನಿಕವಾಗಿ ದೃಢೀಕರಿಸಲಾಗಿದೆ ಎಂದು maktoobmedia.com ವರದಿ ಹೇಳಿದೆ.

ಬಿಹಾರದ ಮಧುಬನಿಯ ಬಡ ದಿನಗೂಲಿ ಕಾರ್ಮಿಕ ಕಮಲ್ ಅಹ್ಮದ್, ಒಂದು ಸಣ್ಣ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು, ತರಕಾರಿಗಳನ್ನು ಮಾರುತ್ತಿದ್ದರು ಮತ್ತು ತಮ್ಮ ಪತ್ನಿ ಮತ್ತು ಐವರು ಮಕ್ಕಳನ್ನು ಸಾಕಲು ಹೆಣಗಾಡುತ್ತಿದ್ದರು. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ಅವರನ್ನು ಬಂಧಿಸಿ, ‘ಭಯೋತ್ಪಾದಕ’ ಎಂದು ಹಣೆಪಟ್ಟಿ ಕಟ್ಟಿ, ಸ್ಫೋಟ ಪ್ರಕರಣದಲ್ಲಿ ಅವರ ಮೇಲೆ ಆರೋಪ ಹೊರಿಸಿದಾಗ ಅವರ ಜೀವನ ಛಿದ್ರವಾಯಿತು. 16 ವರ್ಷಗಳ ಕಾಲ, ಅವರು ಜೈಲಿನಲ್ಲಿದ್ದರು. ಅವರ ಕುಟುಂಬ ಸುಖಾಸುಮ್ಮನೆ ಕಳಂಕ ಹೊತ್ತುಕೊಂಡಿತ್ತು. ಅವರ ನೋವನ್ನು ಕೇಳುವವರೇ ಇರಲಿಲ್ಲ ಎಂದು maktoobmedia.com ವಿವರಿಸಿದೆ.

2021ರಲ್ಲಿ, ಕೋವಿಡ್-19 ಉತ್ತುಂಗದಲ್ಲಿದ್ದಾಗ, ಕಮಲ್ ಅಹ್ಮದ್ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಕಸ್ಟಡಿಯಲ್ಲಿ ನಿಧನರಾದರು. ಅವರ ಮರಣದ ನಾಲ್ಕು ವರ್ಷಗಳ ನಂತರ ಅವರು ನಿರಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ.

“ಕಮಲ್ ಅಹ್ಮದ್ ಅವರ ಸುಂದರ ಜೀವನವನ್ನು ಕಿತ್ತುಕೊಳ್ಳಲಾಯಿತು. ಅವರ ಮಕ್ಕಳು ತಂದೆ ಇಲ್ಲದೆ ಬೆಳೆದರು. ಅವರ ಪತ್ನಿ ಅಸಹನೀಯ ಕಳಂಕದ ಹೊರೆಯನ್ನು ಹೊತ್ತುಕೊಂಡರು. ಕುಟುಂಬ ಅವಮಾನ ಎದುರಿಸಿತು. ನ್ಯಾಯಾಲಯದ ತೀರ್ಪು ಕಾನೂನು ಕ್ರಮಗಳಿಂದ ಮುಕ್ತಗೊಳಿಸಬಹುದು. ಆದರೆ, ಅವರು ಕಳೆದುಕೊಂಡ ಜೀವನದ ಅಮೂಲ್ಯ ಸಮಯವನ್ನು ಹಿಂದಿರುಗಿಸಲು ಮತ್ತು ಅವರ ಕುಟುಂಬ ಅನುಭವಿಸಿದ ನೋವಿಗೆ ಪರಿಹಾರ ಕೊಡಲು ಸಾಧ್ಯವೇ?” ಎಂದು ಡಾ. ಅಬ್ದುಲ್ ವಾಹಿದ್ ಶೇಖ್ ಪ್ರಶ್ನಿಸಿದ್ದಾರೆ.

ಒಂಬತ್ತು ವರ್ಷಗಳ ಕಾಲ ಜೈಲಿನಲ್ಲಿ ಕಳೆದ ನಂತರ, ದಶಕದ ಹಿಂದೆ ವಿಚಾರಣಾ ನ್ಯಾಯಾಲಯವು ಶೇಖ್ ಅವರನ್ನು ಖುಲಾಸೆಗೊಳಿಸಿತ್ತು. ಅಂದಿನಿಂದ, ಜೈಲು ಹಕ್ಕುಗಳ ಕಾರ್ಯಕರ್ತರಾಗಿರುವ ಶೇಖ್, ತಮ್ಮ ಸಂಘಟನೆಯಾದ ‘ಇನ್ನೋಸೆನ್ಸ್ ನೆಟ್‌ವರ್ಕ್ ಆಫ್ ಇಂಡಿಯಾ’ ಮೂಲಕ ಸುಳ್ಳು ಪ್ರಕರಣದಲ್ಲಿ ಸಿಲುಕಿದ ವ್ಯಕ್ತಿಗಳ ಬಿಡುಗಡೆಗಾಗಿ ಕೆಲಸ ಮಾಡುತ್ತಿದೆ.

ಕಮಲ್ ಅಹ್ಮದ್ ಅವರ ಸಮಾಧಿ ಮುಂದೆ ಭಾನುವಾರ ಪ್ರಾರ್ಥನೆ, ಭಾಷಣ ನಡೆಯಿತು. ನಮ್ಮ ವ್ಯವಸ್ಥೆಯು ದುರ್ಬಲ ವರ್ಗದ ಜನರ ಮೇಲೆ ಪದೇ ಪದೇ ದಬ್ಬಾಳಿಕೆ ನಡೆಸುತ್ತಿದೆ. ಬಡವರನ್ನು ಅಪರಾಧಿಗಳೆಂದು ಪರಿಗಣಿಸುತ್ತಿದೆ. ಭಾರತದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ಕಾನೂನನ್ನು ಅಸ್ತ್ರವಾಗಿ ಬಳಸಲಾಗುತ್ತಿದೆ ಎಂದು ಭಾಗವಹಿಸಿದ್ದವರು ಹೇಳಿದರು ಎಂದು maktoobmedia.com ವರದಿ ಮಾಡಿದೆ.

‘ಶಿಕ್ಷಣ ನಿಧಿ’ ಬಿಡುಗಡೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ: ಸಂಸದ ಸಸಿಕಾಂತ್ ಸೆಂಥಿಲ್ ಆಸ್ಪತ್ರೆಗೆ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...