Homeಮುಖಪುಟಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

- Advertisement -
- Advertisement -

ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ಖುಲಾಸೆಗೊಂಡಿರುವ ವ್ಯಕ್ತಿಗಳಲ್ಲಿ ಒಬ್ಬರಾದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ಅವರ ಸಮಾಧಿ ಮುಂದೆ ಸಂಬಂಧಿಕರು ಬಾಂಬೆ ಹೈಕೋರ್ಟ್ ಆದೇಶವನ್ನು ಓದಿರುವ ಅಪರೂಪದ ಘಟನೆ ಭಾನುವಾರ (ಆ.31) ನಾಗ್ಪುರದ ಜರಿಪಟ್ಕಾ ಕಬ್ರಸ್ತಾನದಲ್ಲಿ ನಡೆದಿದೆ.

2006ರ ಮುಂಬೈ ರೈಲು ಸ್ಪೋಟ ಪ್ರಕರಣದ ಎಲ್ಲಾ ಆರೋಪಿಗಳನ್ನು 2025ರ ಜುಲೈ 21ರಂದು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಈ ಪ್ರಕರಣದಲ್ಲಿ ಬಂಧಿತರಾಗಿದ್ದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ನಾಲ್ಕು ವರ್ಷಗಳ ಮುಂಚೆ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

2006ರ ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ, ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ (ಮೋಕಾ) ಸ್ಥಾಪನೆಗೊಂಡಿದ್ದ ವಿಶೇಷ ನ್ಯಾಯಾಲಯವು 12 ಮುಸ್ಲಿಂ ಪುರುಷರನ್ನು ದೋಷಿಗಳೆಂದು 2015ರಲ್ಲಿ ಘೋಷಿಸಿತ್ತು. ಕಮಲ್ ಅಹ್ಮದ್ ಸೇರಿದಂತೆ ಐವರಿಗೆ ಮರಣದಂಡನೆ ಘೋಷಣೆ ಮಾಡಿತ್ತು.

ಆದರೆ, ಜುಲೈ 21, 2025ರಂದು ಪ್ರಕರಣದ ಎಲ್ಲಾ ಅಪರಾಧಿಗಳನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ‘ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಕೋರ್ಟ್ ಹೇಳಿದೆ. ಮೋಕಾ ನ್ಯಾಯಾಲಯದ ಮರಣದಂಡನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವಾಗಲೇ ಕಮಲ್ ಅಹ್ಮದ್ ಜೈಲಿನಲ್ಲಿ ಕೊನೆಯುಸಿರೆಳೆದಿದ್ದರು.

‘ಇನ್ನೋಸೆನ್ಸ್ ನೆಟ್‌ವರ್ಕ್‌’ನ ಪ್ರಧಾನ ಕಾರ್ಯದರ್ಶಿ ಡಾ. ಅಬ್ದುಲ್ ವಾಹಿದ್ ಶೇಖ್ ಮತ್ತು ಜಮಿಯತ್-ಎ-ಉಲಮಾ ನಾಗ್ಪುರದ ಅಧ್ಯಕ್ಷ ಖಾರಿ ಸಬೀರ್ ನೇತೃತ್ವದಲ್ಲಿ, ದೆಹಲಿಯ ಕಮಲ್ ಅಹ್ಮದ್ ಅವರ ಕಿರಿಯ ಸಹೋದರ ಜಮಾಲ್ ಅಹ್ಮದ್ ಅನ್ಸಾರಿ, ಕುಟುಂಬ ಸದಸ್ಯರು, ಹೋರಾಟಗಾರರು ಮತ್ತು ಸಮುದಾಯದ ಮುಖಂಡರ ನಿಯೋಗ ಭಾನುವಾರ ಕಮಲ್ ಅಹ್ಮದ್ ಅವರ ಸಮಾಧಿಗೆ ಭೇಟಿ ನೀಡಿದೆ.

ಸಮಾಧಿಯ ಪಕ್ಕದಲ್ಲಿ ನಿಂತು, ಜುಲೈ 21, 2025ರಂದು ಬಾಂಬೆ ಹೈಕೋರ್ಟ್ ಕಮಲ್ ಅಹ್ಮದ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ತೀರ್ಪನ್ನು ಗಟ್ಟಿಯಾಗಿ ಓದಿದ್ದಾರೆ. ಈ ಮೂಲಕ ‘ನಾನು ನಿರಪರಾಧಿ’ ಎಂದು ಕಮಲ್ ಅಹ್ಮದ್ ಯಾವಾಗಳೂ ಹೇಳುತ್ತಿದ್ದ ಮಾತನ್ನು ಸಾರ್ವಜನಿಕವಾಗಿ ದೃಢೀಕರಿಸಲಾಗಿದೆ ಎಂದು maktoobmedia.com ವರದಿ ಹೇಳಿದೆ.

ಬಿಹಾರದ ಮಧುಬನಿಯ ಬಡ ದಿನಗೂಲಿ ಕಾರ್ಮಿಕ ಕಮಲ್ ಅಹ್ಮದ್, ಒಂದು ಸಣ್ಣ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು, ತರಕಾರಿಗಳನ್ನು ಮಾರುತ್ತಿದ್ದರು ಮತ್ತು ತಮ್ಮ ಪತ್ನಿ ಮತ್ತು ಐವರು ಮಕ್ಕಳನ್ನು ಸಾಕಲು ಹೆಣಗಾಡುತ್ತಿದ್ದರು. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ಅವರನ್ನು ಬಂಧಿಸಿ, ‘ಭಯೋತ್ಪಾದಕ’ ಎಂದು ಹಣೆಪಟ್ಟಿ ಕಟ್ಟಿ, ಸ್ಫೋಟ ಪ್ರಕರಣದಲ್ಲಿ ಅವರ ಮೇಲೆ ಆರೋಪ ಹೊರಿಸಿದಾಗ ಅವರ ಜೀವನ ಛಿದ್ರವಾಯಿತು. 16 ವರ್ಷಗಳ ಕಾಲ, ಅವರು ಜೈಲಿನಲ್ಲಿದ್ದರು. ಅವರ ಕುಟುಂಬ ಸುಖಾಸುಮ್ಮನೆ ಕಳಂಕ ಹೊತ್ತುಕೊಂಡಿತ್ತು. ಅವರ ನೋವನ್ನು ಕೇಳುವವರೇ ಇರಲಿಲ್ಲ ಎಂದು maktoobmedia.com ವಿವರಿಸಿದೆ.

2021ರಲ್ಲಿ, ಕೋವಿಡ್-19 ಉತ್ತುಂಗದಲ್ಲಿದ್ದಾಗ, ಕಮಲ್ ಅಹ್ಮದ್ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಕಸ್ಟಡಿಯಲ್ಲಿ ನಿಧನರಾದರು. ಅವರ ಮರಣದ ನಾಲ್ಕು ವರ್ಷಗಳ ನಂತರ ಅವರು ನಿರಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ.

“ಕಮಲ್ ಅಹ್ಮದ್ ಅವರ ಸುಂದರ ಜೀವನವನ್ನು ಕಿತ್ತುಕೊಳ್ಳಲಾಯಿತು. ಅವರ ಮಕ್ಕಳು ತಂದೆ ಇಲ್ಲದೆ ಬೆಳೆದರು. ಅವರ ಪತ್ನಿ ಅಸಹನೀಯ ಕಳಂಕದ ಹೊರೆಯನ್ನು ಹೊತ್ತುಕೊಂಡರು. ಕುಟುಂಬ ಅವಮಾನ ಎದುರಿಸಿತು. ನ್ಯಾಯಾಲಯದ ತೀರ್ಪು ಕಾನೂನು ಕ್ರಮಗಳಿಂದ ಮುಕ್ತಗೊಳಿಸಬಹುದು. ಆದರೆ, ಅವರು ಕಳೆದುಕೊಂಡ ಜೀವನದ ಅಮೂಲ್ಯ ಸಮಯವನ್ನು ಹಿಂದಿರುಗಿಸಲು ಮತ್ತು ಅವರ ಕುಟುಂಬ ಅನುಭವಿಸಿದ ನೋವಿಗೆ ಪರಿಹಾರ ಕೊಡಲು ಸಾಧ್ಯವೇ?” ಎಂದು ಡಾ. ಅಬ್ದುಲ್ ವಾಹಿದ್ ಶೇಖ್ ಪ್ರಶ್ನಿಸಿದ್ದಾರೆ.

ಒಂಬತ್ತು ವರ್ಷಗಳ ಕಾಲ ಜೈಲಿನಲ್ಲಿ ಕಳೆದ ನಂತರ, ದಶಕದ ಹಿಂದೆ ವಿಚಾರಣಾ ನ್ಯಾಯಾಲಯವು ಶೇಖ್ ಅವರನ್ನು ಖುಲಾಸೆಗೊಳಿಸಿತ್ತು. ಅಂದಿನಿಂದ, ಜೈಲು ಹಕ್ಕುಗಳ ಕಾರ್ಯಕರ್ತರಾಗಿರುವ ಶೇಖ್, ತಮ್ಮ ಸಂಘಟನೆಯಾದ ‘ಇನ್ನೋಸೆನ್ಸ್ ನೆಟ್‌ವರ್ಕ್ ಆಫ್ ಇಂಡಿಯಾ’ ಮೂಲಕ ಸುಳ್ಳು ಪ್ರಕರಣದಲ್ಲಿ ಸಿಲುಕಿದ ವ್ಯಕ್ತಿಗಳ ಬಿಡುಗಡೆಗಾಗಿ ಕೆಲಸ ಮಾಡುತ್ತಿದೆ.

ಕಮಲ್ ಅಹ್ಮದ್ ಅವರ ಸಮಾಧಿ ಮುಂದೆ ಭಾನುವಾರ ಪ್ರಾರ್ಥನೆ, ಭಾಷಣ ನಡೆಯಿತು. ನಮ್ಮ ವ್ಯವಸ್ಥೆಯು ದುರ್ಬಲ ವರ್ಗದ ಜನರ ಮೇಲೆ ಪದೇ ಪದೇ ದಬ್ಬಾಳಿಕೆ ನಡೆಸುತ್ತಿದೆ. ಬಡವರನ್ನು ಅಪರಾಧಿಗಳೆಂದು ಪರಿಗಣಿಸುತ್ತಿದೆ. ಭಾರತದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ಕಾನೂನನ್ನು ಅಸ್ತ್ರವಾಗಿ ಬಳಸಲಾಗುತ್ತಿದೆ ಎಂದು ಭಾಗವಹಿಸಿದ್ದವರು ಹೇಳಿದರು ಎಂದು maktoobmedia.com ವರದಿ ಮಾಡಿದೆ.

‘ಶಿಕ್ಷಣ ನಿಧಿ’ ಬಿಡುಗಡೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ: ಸಂಸದ ಸಸಿಕಾಂತ್ ಸೆಂಥಿಲ್ ಆಸ್ಪತ್ರೆಗೆ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...