Homeಮುಖಪುಟಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

- Advertisement -
- Advertisement -

ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ಖುಲಾಸೆಗೊಂಡಿರುವ ವ್ಯಕ್ತಿಗಳಲ್ಲಿ ಒಬ್ಬರಾದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ಅವರ ಸಮಾಧಿ ಮುಂದೆ ಸಂಬಂಧಿಕರು ಬಾಂಬೆ ಹೈಕೋರ್ಟ್ ಆದೇಶವನ್ನು ಓದಿರುವ ಅಪರೂಪದ ಘಟನೆ ಭಾನುವಾರ (ಆ.31) ನಾಗ್ಪುರದ ಜರಿಪಟ್ಕಾ ಕಬ್ರಸ್ತಾನದಲ್ಲಿ ನಡೆದಿದೆ.

2006ರ ಮುಂಬೈ ರೈಲು ಸ್ಪೋಟ ಪ್ರಕರಣದ ಎಲ್ಲಾ ಆರೋಪಿಗಳನ್ನು 2025ರ ಜುಲೈ 21ರಂದು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಈ ಪ್ರಕರಣದಲ್ಲಿ ಬಂಧಿತರಾಗಿದ್ದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ನಾಲ್ಕು ವರ್ಷಗಳ ಮುಂಚೆ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

2006ರ ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ, ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ (ಮೋಕಾ) ಸ್ಥಾಪನೆಗೊಂಡಿದ್ದ ವಿಶೇಷ ನ್ಯಾಯಾಲಯವು 12 ಮುಸ್ಲಿಂ ಪುರುಷರನ್ನು ದೋಷಿಗಳೆಂದು 2015ರಲ್ಲಿ ಘೋಷಿಸಿತ್ತು. ಕಮಲ್ ಅಹ್ಮದ್ ಸೇರಿದಂತೆ ಐವರಿಗೆ ಮರಣದಂಡನೆ ಘೋಷಣೆ ಮಾಡಿತ್ತು.

ಆದರೆ, ಜುಲೈ 21, 2025ರಂದು ಪ್ರಕರಣದ ಎಲ್ಲಾ ಅಪರಾಧಿಗಳನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ‘ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಕೋರ್ಟ್ ಹೇಳಿದೆ. ಮೋಕಾ ನ್ಯಾಯಾಲಯದ ಮರಣದಂಡನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವಾಗಲೇ ಕಮಲ್ ಅಹ್ಮದ್ ಜೈಲಿನಲ್ಲಿ ಕೊನೆಯುಸಿರೆಳೆದಿದ್ದರು.

‘ಇನ್ನೋಸೆನ್ಸ್ ನೆಟ್‌ವರ್ಕ್‌’ನ ಪ್ರಧಾನ ಕಾರ್ಯದರ್ಶಿ ಡಾ. ಅಬ್ದುಲ್ ವಾಹಿದ್ ಶೇಖ್ ಮತ್ತು ಜಮಿಯತ್-ಎ-ಉಲಮಾ ನಾಗ್ಪುರದ ಅಧ್ಯಕ್ಷ ಖಾರಿ ಸಬೀರ್ ನೇತೃತ್ವದಲ್ಲಿ, ದೆಹಲಿಯ ಕಮಲ್ ಅಹ್ಮದ್ ಅವರ ಕಿರಿಯ ಸಹೋದರ ಜಮಾಲ್ ಅಹ್ಮದ್ ಅನ್ಸಾರಿ, ಕುಟುಂಬ ಸದಸ್ಯರು, ಹೋರಾಟಗಾರರು ಮತ್ತು ಸಮುದಾಯದ ಮುಖಂಡರ ನಿಯೋಗ ಭಾನುವಾರ ಕಮಲ್ ಅಹ್ಮದ್ ಅವರ ಸಮಾಧಿಗೆ ಭೇಟಿ ನೀಡಿದೆ.

ಸಮಾಧಿಯ ಪಕ್ಕದಲ್ಲಿ ನಿಂತು, ಜುಲೈ 21, 2025ರಂದು ಬಾಂಬೆ ಹೈಕೋರ್ಟ್ ಕಮಲ್ ಅಹ್ಮದ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ತೀರ್ಪನ್ನು ಗಟ್ಟಿಯಾಗಿ ಓದಿದ್ದಾರೆ. ಈ ಮೂಲಕ ‘ನಾನು ನಿರಪರಾಧಿ’ ಎಂದು ಕಮಲ್ ಅಹ್ಮದ್ ಯಾವಾಗಳೂ ಹೇಳುತ್ತಿದ್ದ ಮಾತನ್ನು ಸಾರ್ವಜನಿಕವಾಗಿ ದೃಢೀಕರಿಸಲಾಗಿದೆ ಎಂದು maktoobmedia.com ವರದಿ ಹೇಳಿದೆ.

ಬಿಹಾರದ ಮಧುಬನಿಯ ಬಡ ದಿನಗೂಲಿ ಕಾರ್ಮಿಕ ಕಮಲ್ ಅಹ್ಮದ್, ಒಂದು ಸಣ್ಣ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು, ತರಕಾರಿಗಳನ್ನು ಮಾರುತ್ತಿದ್ದರು ಮತ್ತು ತಮ್ಮ ಪತ್ನಿ ಮತ್ತು ಐವರು ಮಕ್ಕಳನ್ನು ಸಾಕಲು ಹೆಣಗಾಡುತ್ತಿದ್ದರು. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ಅವರನ್ನು ಬಂಧಿಸಿ, ‘ಭಯೋತ್ಪಾದಕ’ ಎಂದು ಹಣೆಪಟ್ಟಿ ಕಟ್ಟಿ, ಸ್ಫೋಟ ಪ್ರಕರಣದಲ್ಲಿ ಅವರ ಮೇಲೆ ಆರೋಪ ಹೊರಿಸಿದಾಗ ಅವರ ಜೀವನ ಛಿದ್ರವಾಯಿತು. 16 ವರ್ಷಗಳ ಕಾಲ, ಅವರು ಜೈಲಿನಲ್ಲಿದ್ದರು. ಅವರ ಕುಟುಂಬ ಸುಖಾಸುಮ್ಮನೆ ಕಳಂಕ ಹೊತ್ತುಕೊಂಡಿತ್ತು. ಅವರ ನೋವನ್ನು ಕೇಳುವವರೇ ಇರಲಿಲ್ಲ ಎಂದು maktoobmedia.com ವಿವರಿಸಿದೆ.

2021ರಲ್ಲಿ, ಕೋವಿಡ್-19 ಉತ್ತುಂಗದಲ್ಲಿದ್ದಾಗ, ಕಮಲ್ ಅಹ್ಮದ್ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಕಸ್ಟಡಿಯಲ್ಲಿ ನಿಧನರಾದರು. ಅವರ ಮರಣದ ನಾಲ್ಕು ವರ್ಷಗಳ ನಂತರ ಅವರು ನಿರಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ.

“ಕಮಲ್ ಅಹ್ಮದ್ ಅವರ ಸುಂದರ ಜೀವನವನ್ನು ಕಿತ್ತುಕೊಳ್ಳಲಾಯಿತು. ಅವರ ಮಕ್ಕಳು ತಂದೆ ಇಲ್ಲದೆ ಬೆಳೆದರು. ಅವರ ಪತ್ನಿ ಅಸಹನೀಯ ಕಳಂಕದ ಹೊರೆಯನ್ನು ಹೊತ್ತುಕೊಂಡರು. ಕುಟುಂಬ ಅವಮಾನ ಎದುರಿಸಿತು. ನ್ಯಾಯಾಲಯದ ತೀರ್ಪು ಕಾನೂನು ಕ್ರಮಗಳಿಂದ ಮುಕ್ತಗೊಳಿಸಬಹುದು. ಆದರೆ, ಅವರು ಕಳೆದುಕೊಂಡ ಜೀವನದ ಅಮೂಲ್ಯ ಸಮಯವನ್ನು ಹಿಂದಿರುಗಿಸಲು ಮತ್ತು ಅವರ ಕುಟುಂಬ ಅನುಭವಿಸಿದ ನೋವಿಗೆ ಪರಿಹಾರ ಕೊಡಲು ಸಾಧ್ಯವೇ?” ಎಂದು ಡಾ. ಅಬ್ದುಲ್ ವಾಹಿದ್ ಶೇಖ್ ಪ್ರಶ್ನಿಸಿದ್ದಾರೆ.

ಒಂಬತ್ತು ವರ್ಷಗಳ ಕಾಲ ಜೈಲಿನಲ್ಲಿ ಕಳೆದ ನಂತರ, ದಶಕದ ಹಿಂದೆ ವಿಚಾರಣಾ ನ್ಯಾಯಾಲಯವು ಶೇಖ್ ಅವರನ್ನು ಖುಲಾಸೆಗೊಳಿಸಿತ್ತು. ಅಂದಿನಿಂದ, ಜೈಲು ಹಕ್ಕುಗಳ ಕಾರ್ಯಕರ್ತರಾಗಿರುವ ಶೇಖ್, ತಮ್ಮ ಸಂಘಟನೆಯಾದ ‘ಇನ್ನೋಸೆನ್ಸ್ ನೆಟ್‌ವರ್ಕ್ ಆಫ್ ಇಂಡಿಯಾ’ ಮೂಲಕ ಸುಳ್ಳು ಪ್ರಕರಣದಲ್ಲಿ ಸಿಲುಕಿದ ವ್ಯಕ್ತಿಗಳ ಬಿಡುಗಡೆಗಾಗಿ ಕೆಲಸ ಮಾಡುತ್ತಿದೆ.

ಕಮಲ್ ಅಹ್ಮದ್ ಅವರ ಸಮಾಧಿ ಮುಂದೆ ಭಾನುವಾರ ಪ್ರಾರ್ಥನೆ, ಭಾಷಣ ನಡೆಯಿತು. ನಮ್ಮ ವ್ಯವಸ್ಥೆಯು ದುರ್ಬಲ ವರ್ಗದ ಜನರ ಮೇಲೆ ಪದೇ ಪದೇ ದಬ್ಬಾಳಿಕೆ ನಡೆಸುತ್ತಿದೆ. ಬಡವರನ್ನು ಅಪರಾಧಿಗಳೆಂದು ಪರಿಗಣಿಸುತ್ತಿದೆ. ಭಾರತದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ಕಾನೂನನ್ನು ಅಸ್ತ್ರವಾಗಿ ಬಳಸಲಾಗುತ್ತಿದೆ ಎಂದು ಭಾಗವಹಿಸಿದ್ದವರು ಹೇಳಿದರು ಎಂದು maktoobmedia.com ವರದಿ ಮಾಡಿದೆ.

‘ಶಿಕ್ಷಣ ನಿಧಿ’ ಬಿಡುಗಡೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ: ಸಂಸದ ಸಸಿಕಾಂತ್ ಸೆಂಥಿಲ್ ಆಸ್ಪತ್ರೆಗೆ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...