Homeಮುಖಪುಟಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

- Advertisement -
- Advertisement -

ಸ್ಥಳೀಯ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಮೀಸಲಾತಿ ಮೇಲಿನ ಶೇಕಡ 50 ಮಿತಿಯನ್ನು ತೆಗೆದುಹಾಕಲು ತೆಲಂಗಾಣ ಸರ್ಕಾರ ಭಾನುವಾರ (ಆ.31) ಎರಡು ಮಸೂದೆಗಳನ್ನು ಅಂಗೀಕರಿಸಿದೆ. ಈ ಕ್ರಮವು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿಗೆ ದಾರಿ ಮಾಡಿಕೊಟ್ಟಿದೆ ಎಂದು ವರದಿಗಳು ಹೇಳಿವೆ.

ವಿರೋಧ ಪಕ್ಷಗಳಾದ ಬಿಆರ್‌ಎಸ್‌ ಮತ್ತು ಬಿಜೆಪಿಯ ಗದ್ದಲದ ನಡುವೆಯೇ, ‘ತೆಲಂಗಾಣ ಪುರಸಭೆಗಳ ಮೂರನೇ ತಿದ್ದುಪಡಿ ಮಸೂದೆ, 2025’ ಮತ್ತು ‘ತೆಲಂಗಾಣ ಪಂಚಾಯತ್ ರಾಜ್ ಮೂರನೇ ತಿದ್ದುಪಡಿ ಮಸೂದೆ, 2025’ ಅನ್ನು ವಿಧಾನಸಭೆ ಅಂಗೀಕರಿಸಿದೆ.

ಇದು 1992ರಲ್ಲಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮೀಸಲಾತಿ ಮೇಲಿನ ಶೇಕಡ 50 ಮಿತಿಯನ್ನು ತೆಗೆದು ಹಾಕಲಿದೆ. ತೆಲಂಗಾಣದಲ್ಲಿ ಪರಿಶಿಷ್ಟ ಜಾತಿಗಳು (ಎಸ್‌ಸಿ) ಪರಿಶಿಷ್ಟ ಪಂಗಡಗಳು (ಎಸ್‌ಟಿ) ಮತ್ತು ಹಿಂದುಳಿದ ವರ್ಗಗಳ (ಬಿಸಿ) ಒಟ್ಟು ಮೀಸಲಾತಿಯನ್ನು ಶೇ. 67ಕ್ಕೆ ಏರಿಸಲಿದೆ.

ಶಿಕ್ಷಣ, ಸರ್ಕಾರಿ ಉದ್ಯೋಗಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಹೆಚ್ಚಿಸುವ ಕುರಿತು ಮಾರ್ಚ್‌ನಲ್ಲಿ ಅಂಗೀಕರಿಸಲಾದ ಇತರ ಎರಡು ಮಸೂದೆಗಳು ರಾಷ್ಟ್ರಪತಿಯ ಒಪ್ಪಿಗೆಗಾಗಿ ಕಾಯುತ್ತಿರುವ ಸಮಯದಲ್ಲಿ ಭಾನುವಾರದ ಎರಡು ಮಸೂದೆಗಳನ್ನು ಅಂಗೀಕರಿಸಲಾಗಿದೆ.

ಸೆಪ್ಟೆಂಬರ್ 30ರ ಮೊದಲು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕೆಂದು ತೆಲಂಗಾಣ ಹೈಕೋರ್ಟ್ ನಿರ್ದೇಶನ ನೀಡಿದೆ. ಹಾಗಾಗಿ, ಹಿಂದುಳಿದ ವರ್ಗಗಳಿಗೆ ಶೇ. 42ರಷ್ಟು ಮೀಸಲಾತಿ ಕಲ್ಪಿಸಿದ ನಂತರವೇ ಚುನಾವಣೆಗೆ ಹೋಗಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಮೀಸಲಾತಿಯನ್ನು ‘ಕಡಿತಗೊಳಿಸಿ’ ಒಟ್ಟು ಮೀಸಲಾತಿಯನ್ನು ಶೇ. 50ರ ಮಿತಿಯೊಳಗೆ ತಂದಿದ್ದಕ್ಕಾಗಿ ಹಿಂದಿನ ಬಿಆರ್‌ಎಸ್‌ ಸರ್ಕಾರವನ್ನು ರೆಡ್ಡಿ ಟೀಕಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ರಾಷ್ಟ್ರಪತಿಗಳ ಮುಂದೆ ಬಾಕಿ ಇರುವ ಇತರ ಎರಡು ಹಿಂದುಳಿದ ವರ್ಗಗಳ ಮೀಸಲಾತಿ ಮಸೂದೆಗಳನ್ನು ಕೇಂದ್ರ ಸರ್ಕಾರ ಅನುಮೋದಿಸಬೇಕೆಂದು ಒತ್ತಾಯಿಸಿ ಆಗಸ್ಟ್‌ನಲ್ಲಿ ನವದೆಹಲಿಯಲ್ಲಿ ರಾಜ್ಯ ಸರ್ಕಾರ ನಡೆಸಿದ ಧರಣಿ ಪ್ರತಿಭಟನೆಯನ್ನು ಬೆಂಬಲಿಸದ ವಿರೋಧ ಪಕ್ಷವನ್ನು ಅವರು ಟೀಕಿಸಿದ್ದಾರೆ.

ಮತ್ತೊಂದೆಡೆ, ಹಿಂದುಳಿದ ವರ್ಗಗಳ ಮೀಸಲಾತಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಪ್ರಾಮಾಣಿಕವಾಗಿಲ್ಲ ಎಂದು ಬಿಆರ್‌ಎಸ್‌ನ ಗಂಗುಲ ಕಮಲಾಕರ್ ಆರೋಪಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಹೇಳಿದೆ.

ಮಾರ್ಚ್‌ನಲ್ಲಿ ಅಂಗೀಕರಿಸಲಾದ ಎರಡು ಮಸೂದೆಗಳಿಗೆ ರಾಷ್ಟ್ರಪತಿಗಳ ಅನುಮೋದನೆ ನೀಡುವಂತೆ ಒತ್ತಾಯಿಸಲು ರಾಜ್ಯ ಸರ್ಕಾರವು ನವದೆಹಲಿಗೆ ಸರ್ವಪಕ್ಷ ನಿಯೋಗವನ್ನು ಏಕೆ ಕರೆದೊಯ್ಯಲಿಲ್ಲ ಎಂದು ಕಮಲಾಕರ್ ಕೇಳಿದ್ದಾರೆ.

ಫೆಬ್ರವರಿಯಲ್ಲಿ ತೆಲಂಗಾಣ ಸರ್ಕಾರ ಪ್ರಕಟಿಸಿದ ಜಾತಿ ಸಮೀಕ್ಷೆಯ ಪ್ರಕಾರ, ರಾಜ್ಯದ ಜನಸಂಖ್ಯೆಯಲ್ಲಿ ಹಿಂದುಳಿದ ವರ್ಗಗಳು ಶೇ. 56.3ರಷ್ಟಿದ್ದಾರೆ. ಇದರಲ್ಲಿ ಮುಸ್ಲಿಂ ಜಾತಿ ಗುಂಪುಗಳು ಸೇರಿವೆ. ಹಿಂದುಳಿದ ವರ್ಗಗಳ ಒಟ್ಟು ಜನಸಂಖ್ಯೆ ಸುಮಾರು 1.9 ಕೋಟಿ ಎಂದು ಹೇಳಲಾಗ್ತಿದೆ.

ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ನಡೆಸಿದ ಮನೆ-ಮನೆ ಸಮೀಕ್ಷೆಯ ಪ್ರಕಾರ, ಪರಿಶಿಷ್ಟ ಜಾತಿಗಳ ಜನಸಂಖ್ಯೆ ಶೇ. 17.4 ಅಥವಾ 61.8 ಲಕ್ಷದಷ್ಟಿದ್ದರೆ, ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಶೇ. 10.4 ಅಥವಾ 37 ಲಕ್ಷದಷ್ಟಿದ್ದಾರೆ. ಇತರ ಜಾತಿಗಳ ಜನಸಂಖ್ಯೆ ಶೇ. 15.7 ರಷ್ಟಿವೆ.

ಒಟ್ಟು ಜನಸಂಖ್ಯೆಯಲ್ಲಿ ಮುಸ್ಲಿಮರು ಸುಮಾರು 12.5% ​​ಅಥವಾ 44.5 ಲಕ್ಷ ಇದ್ದಾರೆ. ಇದರಲ್ಲಿ ಹಿಂದುಳಿದ ವರ್ಗಗಳ ಮುಸ್ಲಿಮರು 10% ಅಥವಾ 35.7 ಲಕ್ಷ ಜನರಿದ್ದರೆ, ಇತರ ವರ್ಗಗಳ ಮುಸ್ಲಿಮರು 2.4% ಅಥವಾ 8.8 ಲಕ್ಷ ಜನರಿದ್ದಾರೆ.

ಫೆಬ್ರವರಿ 2024ರಲ್ಲಿ, ಜಾತಿ ಸಮೀಕ್ಷೆಯ ಕುರಿತು ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿತ್ತು.  ನಂತರ ರಾಜ್ಯ ಯೋಜನಾ ಇಲಾಖೆಯು ಅದನ್ನು ಕೈಗೆತ್ತಿಕೊಂಡಿತ್ತು.

2023ರ ವಿಧಾನಸಭಾ ಚುನಾವಣೆಗೆ ಮುನ್ನ ತೆಲಂಗಾಣದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳಲ್ಲಿ ಜಾತಿ ಸಮೀಕ್ಷೆಯೂ ಒಂದಾಗಿತ್ತು. ಬಿಆರ್‌ಎಸ್‌ ಸೋಲಿಸುವ ಮೂಲಕ ಪಕ್ಷ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ.

ಜಾತಿ ಸಮೀಕ್ಷೆಯ ವರದಿ ಬಿಡುಗಡೆಯೊಂದಿಗೆ, ಬಿಹಾರ ಮತ್ತು ಆಂಧ್ರ ಪ್ರದೇಶದ ನಂತರ ತೆಲಂಗಾಣ ಇಂತಹ ಸಮೀಕ್ಷೆಯನ್ನು ನಡೆಸಿದ ಮೂರನೇ ರಾಜ್ಯ ಎನಿಸಿಕೊಂಡಿದೆ.

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...