Homeಮುಖಪುಟಬಿಹಾರ ಎಸ್‌ಐಆರ್ | ಕಾಂಗ್ರೆಸ್ 89 ಲಕ್ಷ ದೂರುಗಳನ್ನು ಚು. ಆಯೋಗಕ್ಕೆ ಸಲ್ಲಿಸಿದೆ, ಅವೆಲ್ಲವನ್ನೂ ತಿರಸ್ಕರಿಸಲಾಗಿದೆ:...

ಬಿಹಾರ ಎಸ್‌ಐಆರ್ | ಕಾಂಗ್ರೆಸ್ 89 ಲಕ್ಷ ದೂರುಗಳನ್ನು ಚು. ಆಯೋಗಕ್ಕೆ ಸಲ್ಲಿಸಿದೆ, ಅವೆಲ್ಲವನ್ನೂ ತಿರಸ್ಕರಿಸಲಾಗಿದೆ: ಪವನ್ ಖೇರಾ

- Advertisement -
- Advertisement -

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂಬಂಧ ‘ಶೂನ್ಯ ದೂರುಗಳು’ ಬಂದಿವೆ ಎಂಬ ಚುನಾವಣಾ ಆಯೋಗದ ಹೇಳಿಕೆಗೆ ವಿರುದ್ಧವಾಗಿ, 89 ಲಕ್ಷ ದೂರುಗಳನ್ನು ಸಲ್ಲಿಸಿದ್ದೇವೆ. ಅದಕ್ಕೆ ಪುರಾವೆಯಾಗಿ ಸೀಲ್ ಹಾಕಿರುವ ರಶೀದಿಗಳು ನಮ್ಮ ಬಳಿ ಇವೆ ಎಂದು ಕಾಂಗ್ರೆಸ್ ಭಾನುವಾರ (ಆ.31) ಹೇಳಿದೆ.

ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಎಲ್ಲಾ ಹೆಸರುಗಳನ್ನು ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಪಕ್ಷ ಆಗ್ರಹಿಸಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಪಕ್ಷದ ಬಿಹಾರ ರಾಜ್ಯ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಿಹಾರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ರಾಮ್ ಮತ್ತು ಅಖಿಲೇಶ್ ಪ್ರಸಾದ್, ಶಕೀಲ್ ಅಹ್ಮದ್ ಸೇರಿದಂತೆ ಇತರ ಹಿರಿಯ ಕಾಂಗ್ರೆಸ್ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

“ಯಾವುದೇ ರಾಜಕೀಯ ಪಕ್ಷಗಳಿಂದ ಯಾವುದೇ ದೂರುಗಳು ಬರುತ್ತಿಲ್ಲ ಎಂಬ ಸುದ್ದಿಯನ್ನು ಚುನಾವಣಾ ಆಯೋಗ ತನ್ನ ಮೂಲಗಳ ಮೂಲಕ ಹರಡುತ್ತಲೇ ಇದೆ. ಸತ್ಯ ಏನೆಂದರೆ, ಕಾಂಗ್ರೆಸ್ ಎಸ್‌ಐಆರ್‌ನಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ 89 ಲಕ್ಷ ದೂರುಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ” ಎಂದು ಖೇರಾ ಹೇಳಿದ್ದಾರೆ.

ಮತದಾರರ ಪಟ್ಟಿಯಲ್ಲಿ ಯಾವುದೇ ಅಕ್ರಮ ಮತದಾರರನ್ನು ಕಾಂಗ್ರೆಸ್ ಬಯಸುವುದಿಲ್ಲ. ಆದರೆ, ಯಾವುದೇ  ಹಕ್ಕುದಾರ ಮತದಾರರನ್ನು ಪಟ್ಟಿಯಿಂದ ಕೈಬಿಡಲೂ ಅನುಮತಿಸುವುದಿಲ್ಲ. ಉದ್ದೇಶಪೂರ್ವಕವಾಗಿಯೂ ಆಗಿರಬಹುದು ಅಥವಾ ಅಜಾಗರೂಕತೆಯಿಂದಲೂ ಆಗಿರಬಹುದು ಎಂದು ಪವನ್ ಖೇರಾ ಗುಡುಗಿದ್ದಾರೆ.

“ದೂರುಗಳಿಗೆ ಚುನಾವಣಾ ಆಯೋಗದ ಸ್ಪಷ್ಟ ಪ್ರತಿರೋಧದ ಹೊರತಾಗಿಯೂ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಜಿಲ್ಲಾ ಚುನಾವಣಾ ಅಧಿಕಾರಿಗಳಿಂದ ಸಹಿ ಮತ್ತು ಸೀಲ್ ಇರುವ ರಶೀದಿಗಳನ್ನು ಪಡೆದುಕೊಂಡಿದ್ದಾರೆ. ಬೂತ್ ಮಟ್ಟದ ಏಜೆಂಟ್‌ಗಳಿಂದ ದೂರುಗಳು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು ಚುನಾವಣಾ ಆಯೋಗ ನಿರಾಕರಿಸಿದೆ. ದೂರುಗಳು ವೈಯಕ್ತಿಕ ದೂರುದಾರರಿಂದ ಆಗಿರಬೇಕು ಮತ್ತು ರಾಜಕೀಯ ಪಕ್ಷಗಳಿಂದ ಅಲ್ಲ ಎಂದು ಹೇಳಿದೆ” ಎಂದು ಖೇರಾ ತಿಳಿಸಿದ್ದಾರೆ.

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲು ಚುನಾವಣಾ ಆಯೋಗವು ನಾಲ್ಕು ಕಾರಣಗಳನ್ನು ಉಲ್ಲೇಖಿಸಿದೆ. ವಲಸೆಯ ನೆಪದಲ್ಲಿ 25 ಲಕ್ಷ, ಸಾವನಪ್ಪಿದ್ದಾರೆ ಎಂದು 22 ಲಕ್ಷ ಮತ್ತು ವಿಳಾಸಗಳಲ್ಲಿ ಕಂಡುಬಂದಿಲ್ಲ ಎಂದು 9.7 ಲಕ್ಷ ಮತದಾರ ಹೆಸರುಗಳನ್ನು ಕೈ ಬಿಡಲಾಗಿದೆ.  ಒಂದಕ್ಕಿಂತ ಹೆಚ್ಚು ಬಾರಿ ನೋಂದಾಯಿಸಲಾಗಿದೆ ಎಂದು ಏಳು ಲಕ್ಷ ಹೆಸರುಗಳನ್ನು ಕೈ ಬಿಟ್ಟಿದ್ದಾರೆ ಎಂದು ಖೇರಾ ವಿವರಿಸಿದ್ದಾರೆ.

ಒಬ್ಬರು ಮತದಾರರಿಗೆ ಎರಡು ಎಪಿಕ್ (ಮತದಾರರ ಫೋಟೋ ಗುರುತಿನ ಚೀಟಿ) ಸಂಖ್ಯೆಗಳನ್ನು ನೀಡಲಾದ ಪ್ರಕರಣಗಳು ಸಾಕಷ್ಟಿವೆ ಎಂದು ಖೇರಾ ಆರೋಪಿಸಿದ್ದಾರೆ.

ಎಸ್‌ಐಆರ್‌ನಲ್ಲಿ ಕೆಲವು ಕುತೂಹಲಕಾರಿ ಮಾದರಿಗಳನ್ನು ಗಮನಿಸಲಾಗಿದೆ. 20,638 ಬೂತ್‌ಗಳಲ್ಲಿ 100ಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಡಲಾಗಿದೆ. 1,988 ಬೂತ್‌ಗಳಲ್ಲಿ 200ಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಡಲಾಗಿದೆ. 7,613 ಬೂತ್‌ಗಳಲ್ಲಿ, ಅಳಿಸಲಾದ ಹೆಸರುಗಳಲ್ಲಿ 70% ಮಹಿಳಾ ಮತದಾರರಾಗಿದ್ದು, 635 ಬೂತ್‌ಗಳಲ್ಲಿ, ವಲಸೆ ವರ್ಗದ ಅಡಿಯಲ್ಲಿ ಅಳಿಸಲಾದ ಮತದಾರರಲ್ಲಿ 75% ಕ್ಕಿಂತ ಹೆಚ್ಚು ಮಹಿಳೆಯರು ಎಂದು ಖೇರಾ ಹೇಳಿದ್ದಾರೆ.

ಸಾಮಾನ್ಯವಾಗಿ ಪುರುಷರು ಕೆಲಸಕ್ಕಾಗಿ ವಲಸೆ ಹೋಗುತ್ತಿದ್ದರಿಂದ ಇದು ವಿಚಿತ್ರವಾಗಿ ಕಾಣಿಸಿದೆ. ಮಹಿಳೆಯರ ಹೆಸರನ್ನು ನಿರ್ದಿಷ್ಟವಾಗಿ ಕೈಬಿಡಲಾಗಿದೆ ಎಂದು ಪವನ್ ಖೇರಾ ಆರೋಪಿಸಿದ್ದಾರೆ.

7,931 ಬೂತ್‌ಗಳಲ್ಲಿ, ಶೇ. 75 ರಷ್ಟು ಮತದಾರರನ್ನು ಕೈಬಿಡಲಾಗಿದೆ. ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಎಸ್‌ಐಆರ್‌ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲ್ಪಟ್ಟ ಅನೇಕ ಮತದಾರರು ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಆದ್ದರಿಂದ ಈ ವರ್ಗದಲ್ಲಿ ಗಂಭೀರ ವ್ಯತ್ಯಾಸಗಳಿವೆ ಎಂದು ಖೇರಾ ಹೇಳಿದ್ದಾರೆ.

ಈ ವ್ಯತ್ಯಾಸಗಳನ್ನು ಗಮನದಲ್ಲಿಟ್ಟುಕೊಂಡು, ಕೈಬಿಡಲಾದ ಎಲ್ಲಾ ಹೆಸರುಗಳನ್ನು ಚುನಾವಣಾ ಆಯೋಗವು ಮತ್ತೊಮ್ಮೆ ಪರಿಶೀಲಿಸಬೇಕು. ಆಯೋಗವು ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುವ ಮೂಲಕ ಅಂತಹ ಪ್ರತಿಯೊಬ್ಬ ಮತದಾರರ ಸ್ಥಿತಿಯನ್ನು ದೃಢೀಕರಿಸಬೇಕು ಎಂದು ಖೇರಾ ಒತ್ತಾಯಿಸಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...