Homeಮುಖಪುಟಅತ್ಯಾಚಾರ ಆರೋಪದಲ್ಲಿ ಬಂಧಿತ ಆಪ್ ಶಾಸಕ ಪೊಲೀಸರ ಮೇಲೆ ಗುಂಡು ಹಾರಿಸಿ ಕಸ್ಟಡಿಯಿಂದ ಪರಾರಿ: ವರದಿ

ಅತ್ಯಾಚಾರ ಆರೋಪದಲ್ಲಿ ಬಂಧಿತ ಆಪ್ ಶಾಸಕ ಪೊಲೀಸರ ಮೇಲೆ ಗುಂಡು ಹಾರಿಸಿ ಕಸ್ಟಡಿಯಿಂದ ಪರಾರಿ: ವರದಿ

- Advertisement -
- Advertisement -

ಅತ್ಯಾಚಾರ ಮತ್ತು ವಂಚನೆ ಆರೋಪದ ಮೇಲೆ ಬಂಧಿಸಲ್ಪಟ್ಟ ಪಂಜಾಬ್‌ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಹರ್ಮೀತ್ ಸಿಂಗ್ ಧಿಲ್ಲೋನ್ ಪಠಾಣಮಾಜ್ರಾ ಮಂಗಳವಾರ (ಸೆ.2) ಕರ್ನಾಲ್‌ನಲ್ಲಿ ಅಧಿಕಾರಿಗಳ ಮೇಲೆ ಗುಂಡು ಹಾರಿಸಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಸನೂರ್ ಕ್ಷೇತ್ರದ ಶಾಸಕರಾಗಿರುವ ಪಠಾಣಮಾಜ್ರಾ ಅವರನ್ನು ಸ್ಥಳೀಯ ಠಾಣೆಗೆ ಕರೆದೊಯ್ಯುತ್ತಿದ್ದಾಗ, ಶಾಸಕ ಮತ್ತು ಅವರ ಸಹಾಯಕರು ಗುಂಡು ಹಾರಿಸಿದ್ದರಿಂದ ಒಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಇದರಿಂದ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ವೇಳೆ ಪಠಾಣ್‌ಮಾಜ್ರಾ ಸ್ಕಾರ್ಪಿಯೋ ಎಸ್‌ಯುವಿಯಲ್ಲಿ ಪರಾರಿಯಾಗಿದ್ದಾರೆ. ಅದಕ್ಕೂ ಮುನ್ನ ಮತ್ತೊಬ್ಬರು ಪೊಲೀಸ್ ಅಧಿಕಾರಿಯ ಮೇಲೆ ವಾಹನ ಹತ್ತಿಸಿದ್ದಾರೆ. ತಪ್ಪಿಸಿಕೊಳ್ಳಲು ಬಳಸಲಾದ ಫಾರ್ಚೂನರ್ ಒಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಾರಿಯಾದ ಶಾಸಕನನ್ನು ಪತ್ತೆಹಚ್ಚಲು ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ವರದಿಗಳು ಹೇಳಿವೆ.

ಪಠಾಣಮಾಜ್ರಾ ವಿರುದ್ಧ ಜಿರಾಕ್‌ಪುರದ ಮಹಿಳೆಯೊಬ್ಬರು ನೀಡಿದ್ದ ದೂರು ಆಧರಿಸಿ ಎಫ್‌ಐಆರ್‌ ದಾಖಲಿಸಿದ್ದ ಪೊಲೀಸರು, ಬಳಿಕ ಅವರನ್ನು ಬಂಧಿಸಿದ್ದರು. ಶಾಸಕ ತನ್ನೊಂದಿಗೆ ಸಂಬಂಧ ಬೆಳೆಸುವ ಮೊದಲು ವಿಚ್ಛೇದಿತ ಎಂದು ಸುಳ್ಳು ಹೇಳಿದ್ದರು ಎಂದು ಮಹಿಳೆ ಆರೋಪಿಸಿದ್ದರು. 2021ರಲ್ಲಿ ವಿವಾಹಿತರಾಗಿರುವಾಗಲೇ ಪಠಾಣಮಾಜ್ರಾ ತನ್ನನ್ನು ಮದುವೆಯಾಗಿದ್ದಾರೆ. ಆ ಬಳಿಕ ಲೈಂಗಿಕವಾಗಿ ಶೋಷಣೆ ಮಾಡಿದ್ದಾರೆ. ಅಶ್ಲೀಲ ವಸ್ತುಗಳನ್ನು ಕಳುಹಿಸಿದ್ದಾರೆ ಮತ್ತು ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪಠಾಣಮಾಜ್ರಾ ವಿರುದ್ಧದ ಎಫ್‌ಐಆರ್‌ನಲ್ಲಿ ಅತ್ಯಾಚಾರ, ವಂಚನೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪಗಳಿವೆ.

ಈ ಪ್ರಕರಣವು ರಾಜಕೀಯ ಪ್ರೇರಿತವಾಗಿದೆ ಎಂದು ಪಠಾಣಮಾಜ್ರಾ ಹೇಳಿದ್ದಾರೆ. ಎಫ್‌ಐಆರ್ ದಾಖಲಾದ ನಂತರ ಫೇಸ್‌ಬುಕ್‌ ನೇರ ಪ್ರಸಾರದಲ್ಲಿ ಮಾತನಾಡಿದ ಅವರು, ಎಎಪಿಯ ದೆಹಲಿ ನಾಯಕತ್ವವು ‘ಪಂಜಾಬ್ ಅನ್ನು ಅಕ್ರಮವಾಗಿ ಆಳುತ್ತಿದೆ’. ಅದರ ವಿರುದ್ದ ಧ್ವನಿ ಎತ್ತಿದ್ದಕ್ಕಾಗಿ ನನ್ನನ್ನು ಗುರಿಯಾಗಿಸಲಾಗಿದೆ ಎಂದಿದ್ದಾರೆ.

“ಅವರು ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಬಹುದು, ನಾನು ಜೈಲು ಪಾಲಾಗಬಹುದು. ಆದರೆ, ನನ್ನ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ” ಎಂದು ಪಠಾಣಮಾಜ್ರಾ ಹೇಳಿದ್ದಾರೆ.

ಪಟಿಯಾಲದಲ್ಲಿ ಪ್ರವಾಹ ನಿರ್ವಹಣೆ ಕುರಿತು ಶಾಸಕ ಪಠಾಣಮಾಜ್ರಾ ಇತ್ತೀಚೆಗೆ ತಮ್ಮದೇ ಸರ್ಕಾರದೊಂದಿಗೆ ಜಟಾಪಟಿ ನಡೆಸಿದ್ದರು. ಟ್ಯಾಂಗ್ರಿಯಂತಹ ನದಿಗಳನ್ನು ಹೂಳೆತ್ತುವಂತೆ ಪದೇ ಪದೇ ಮಾಡಿದ ಮನವಿಗಳನ್ನು ಹಿರಿಯ ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ. ಇದರಿಂದ ಹಳ್ಳಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ ಎಂದಿದ್ದರು.

ಸರ್ಕಾರವನ್ನು ಟೀಕಿಸಿದ ಬಳಿಕ ತನ್ನ ಭದ್ರತೆಯನ್ನು ಹಿಂತೆಗೆದುಕೊಳ್ಳಲಾಗಿದೆ ಮತ್ತು ಪ್ರತೀಕಾರವಾಗಿ ಸ್ಥಳೀಯ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ ಎಂದು ಪಠಾಣಮಾಜ್ರಾ ಹೇಳಿಕೊಂಡಿದ್ದರು.

ಶೀಘ್ರದಲ್ಲೇ ಮತಗಳ್ಳತನ ಕುರಿತ ‘ಹೈಡ್ರೋಜನ್ ಬಾಂಬ್’ ಬರಲಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...