Homeಮುಖಪುಟಅಲ್ಪಸಂಖ್ಯಾತ ಶಾಲೆಗಳು ಮತ್ತು ಆರ್‌ಟಿಇ: 2014ರ ತೀರ್ಪಿನ ಕುರಿತು ವಿಸ್ತೃತ ಪೀಠದ ಪರಿಶೀಲನೆ ಕೋರಿದ ಸುಪ್ರೀಂ...

ಅಲ್ಪಸಂಖ್ಯಾತ ಶಾಲೆಗಳು ಮತ್ತು ಆರ್‌ಟಿಇ: 2014ರ ತೀರ್ಪಿನ ಕುರಿತು ವಿಸ್ತೃತ ಪೀಠದ ಪರಿಶೀಲನೆ ಕೋರಿದ ಸುಪ್ರೀಂ ಕೋರ್ಟ್ 

- Advertisement -
- Advertisement -

ಅಲ್ಪಸಂಖ್ಯಾತ ಶಾಲೆಗಳನ್ನು ಆರ್‌ಟಿಇ ಕಾಯ್ದೆಯ ವ್ಯಾಪ್ತಿಯಿಂದ ಹೊರಗಿಟ್ಟಿದ್ದ 2014ರ ತೀರ್ಪಿನ ನಿಖರತೆಯನ್ನು ಅನುಮಾನಿಸಿರುವ ಸುಪ್ರೀಂ ಕೋರ್ಟ್, ಈ ವಿಷಯವನ್ನು ಸೋಮವಾರ (ಸೆ.1) ವಿಸ್ಕೃತ ಪೀಠಕ್ಕೆ ಉಲ್ಲೇಖಿಸಿದೆ.

ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗದ ಅಧ್ಯಯನ ವರದಿ ಸೇರಿದಂತೆ ವಿವಿಧ ದಾಖಲೆಗಳನ್ನು ಉಲ್ಲೇಖಿಸಿದ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಮನಮೋಹನ್ ಅವರನ್ನು ಒಳಗೊಂಡ ಪೀಠ,  ಈ ಹೊರಗಿಡುವಿಕೆಯು ದುರುಪಯೋಗಕ್ಕೆ ಫಲವತ್ತಾದ ನೆಲವನ್ನು ಸೃಷ್ಟಿಸಿದೆ ಎಂದು ಹೇಳಿ ಬೇಸರ ವ್ಯಕ್ತಪಡಿಸಿದೆ ಎಂದು ವರದಿಗಳು ಹೇಳಿವೆ.

‘ಪ್ರಮತಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ಸುಪ್ರಾ) ನಿರ್ಧಾರವು ಸಾರ್ವತ್ರಿಕ ಪ್ರಾಥಮಿಕ ಶಿಕ್ಷಣದ ಅಡಿಪಾಯವನ್ನೇ ಗೊತ್ತಾಗದಂತೆ ಅಪಾಯಕ್ಕೆ ಸಿಲುಕಿಸಿರಬಹುದು ಎಂಬುದನ್ನು ನಾವು ಅತ್ಯಂತ ವಿನಮ್ರತೆಯಿಂದ ಶೀಘ್ರವಾಗಿ ಪರಿಶೀಲಿಸಲು ಬಯಸುತ್ತೇವೆ. ಆರ್‌ಟಿಇ ಕಾಯ್ದೆಯಿಂದ ಅಲ್ಪಸಂಖ್ಯಾತ ಸಂಸ್ಥೆಗಳಿಗೆ ವಿನಾಯಿತಿ ನೀಡುವುದರಿಂದ ಸಾಮಾನ್ಯ ಶಾಲಾ ದೃಷ್ಟಿಕೋನವು ಛಿದ್ರಗೊಳ್ಳುತ್ತದೆ ಮತ್ತು 21ಎ ವಿಧಿಯಿಂದ ಕಲ್ಪಿಸಲಾದ ಒಳಗೊಳ್ಳುವಿಕೆ ಮತ್ತು ಸಾರ್ವತ್ರಿಕತೆಯ ಕಲ್ಪನೆಯು ದುರ್ಬಲಗೊಳ್ಳುತ್ತದೆ” ಎಂದು ಪೀಠ ಹೇಳಿದೆ.

ಸಂವಿಧಾನದ ವಿಧಿ 21ಎ ಶಿಕ್ಷಣದ ಹಕ್ಕಿನ ಬಗ್ಗೆ ವಿವರಿಸುತ್ತದೆ. ಸರ್ಕಾರ ಆರರಿಂದ ಹದಿನಾಲ್ಕು ವರ್ಷ ವಯಸ್ಸಿನ ಎಲ್ಲಾ ಮಕ್ಕಳಿಗೆ ಕಾನೂನಿನ ಪ್ರಕಾರ ನಿರ್ಧರಿಸಬಹುದಾದ ರೀತಿಯಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಒದಗಿಸಬೇಕು ಎಂದು ಹೇಳುತ್ತದೆ. ಆರ್‌ಟಿಇ ಕಾಯ್ದೆಯು ಮಕ್ಕಳಿಗೆ ಮೂಲಭೂತ ಸೌಕರ್ಯ, ತರಬೇತಿ ಪಡೆದ ಶಿಕ್ಷಕರು, ಪುಸ್ತಕಗಳು, ಸಮವಸ್ತ್ರಗಳು ಮತ್ತು ಮಧ್ಯಾಹ್ನದ ಊಟದಂತಹ ವಿವಿಧ ಹಕ್ಕುಗಳನ್ನು ಖಾತ್ರಿಪಡಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಕೆಲವು ಅಲ್ಪಸಂಖ್ಯಾತ ಶಾಲೆಗಳು ಆರ್‌ಟಿಇ ಕಾಯ್ದೆಯಿಂದ ಆದೇಶಿಸಲಾದ ಕೆಲವು ಸೌಲಭ್ಯಗಳನ್ನು ಒದಗಿಸುತ್ತಿರಬಹುದು. ಆದರೆ, ಇನ್ನೂ ಕೆಲವು ಶಾಲೆಗಳು ತಮ್ಮ ವಿದ್ಯಾರ್ಥಿಗಳಿಗೆ ಅಂತಹ ಕಡ್ಡಾಯ ಸೌಲಭ್ಯಗಳನ್ನು ಪಡೆಯದೆ ಬಿಡಬಹುದು. ಈ ವಿದ್ಯಾರ್ಥಿಗಳಲ್ಲಿ ಅನೇಕರಿಗೆ, ಅಂತಹ ಪ್ರಯೋಜನಗಳು ಕೇವಲ ಸೌಲಭ್ಯಗಳಲ್ಲ, ಅದು ಸಮಾನತೆ ಮತ್ತು ಮನ್ನಣೆಯ ದೃಢೀಕರಣಗಳಾಗಿವೆ” ಎಂದು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ.

ಭೌತಿಕ ನಿಬಂಧನೆಗಳ ಹೊರತಾಗಿ, ಆರ್‌ಟಿಇ ಕಾಯ್ದೆಯು ಅಧಿಸೂಚಿತ ಶೈಕ್ಷಣಿಕ ಪ್ರಾಧಿಕಾರಗಳ ಮೂಲಕ ಸಾಮಾನ್ಯ ಪಠ್ಯಕ್ರಮದ ಮಾನದಂಡಗಳನ್ನು ಖಾತ್ರಿಪಡಿಸುತ್ತದೆ. ಇದು ಪ್ರತಿ ಮಗುವಿಗೆ ಸಾಂವಿಧಾನಿಕ ಮೌಲ್ಯಗಳ ಆಧಾರದ ಮೇಲೆ ಗುಣಮಟ್ಟದ ಶಿಕ್ಷಣವನ್ನು ಖಾತರಿಪಡಿಸುತ್ತದೆ ಎಂದು ಪೀಠ ಹೇಳಿದೆ.

“ಆದಾಗ್ಯೂ, ಅಲ್ಪಸಂಖ್ಯಾತ ಸಂಸ್ಥೆಗಳು ಅಂತಹ ಏಕರೂಪದ ಮಾರ್ಗಸೂಚಿಗಳಿಲ್ಲದೆ ಕಾರ್ಯನಿರ್ವಹಿಸುತ್ತವೆ. ಮಕ್ಕಳು ಮತ್ತು ಅವರ ಪೋಷಕರಿಗೆ ಏನು ಮತ್ತು ಹೇಗೆ ಕಲಿಸಲಾಗುತ್ತದೆ ಎಂಬುದರ ಬಗ್ಗೆ ಅನಿಶ್ಚಿತತೆ ಉಂಟಾಗುತ್ತದೆ ಮತ್ತು ಸಾರ್ವತ್ರಿಕ ಕಲಿಕೆಯ ರಾಷ್ಟ್ರೀಯ ಚೌಕಟ್ಟಿನಿಂದ ಹೆಚ್ಚಾಗಿ ಸಂಪರ್ಕ ಕಡಿತಗೊಳ್ಳುತ್ತದೆ” ಎಂದು ಪೀಠ ಅಭಿಪ್ರಾಯಪಟ್ಟಿದೆ.

ಜಾತಿ, ವರ್ಗ, ಧರ್ಮ ಮತ್ತು ಸಮುದಾಯವನ್ನು ಲೆಕ್ಕಿಸದೆ ಮಕ್ಕಳನ್ನು ಒಗ್ಗೂಡಿಸುವ ಬದಲು, ಪರಿಸ್ಥಿತಿಯು ಹಂಚಿಕೆಯ ಕಲಿಕಾ ಸ್ಥಳಗಳ ಪರಿವರ್ತಕ ಸಾಮರ್ಥ್ಯವನ್ನು ‘ವಿಭಜಿಸುತ್ತದೆ ಮತ್ತು ದುರ್ಬಲಗೊಳಿಸುತ್ತದೆ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಸಮಾನ ಮತ್ತು ಒಗ್ಗಟ್ಟಿನ ಸಮಾಜವನ್ನು ನಿರ್ಮಿಸುವುದು ಗುರಿಯಾಗಿದ್ದರೆ, ಅಂತಹ ವಿನಾಯಿತಿಗಳು ನಮ್ಮನ್ನು ವಿರುದ್ಧ ದಿಕ್ಕಿನಲ್ಲಿ ಸಾಗಿಸುತ್ತವೆ. ಸಾಂಸ್ಕೃತಿಕ ಮತ್ತು ಧಾರ್ಮಿಕ ಸ್ವಾತಂತ್ರ್ಯಗಳನ್ನು ರಕ್ಷಿಸುವ ಪ್ರಯತ್ನವಾಗಿ ಪ್ರಾರಂಭವಾದದ್ದು ಅಜಾಗರೂಕತೆಯಿಂದ ನಿಯಂತ್ರಕ ಲೋಪದೋಷವನ್ನು ಸೃಷ್ಟಿಸಿದೆ. ಇದು ಆರ್‌ಟಿಇ ಕಾಯ್ದೆಯಿಂದ ನಿಗದಿಪಡಿಸಲಾದ ಆಡಳಿತವನ್ನು ಬೈಪಾಸ್ ಮಾಡಲು ಅಲ್ಪಸಂಖ್ಯಾತ ಸ್ಥಾನಮಾನವನ್ನು ಬಯಸುವ ಸಂಸ್ಥೆಗಳಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಹೇಳಿದ ಸುಪ್ರೀಂ ಕೋರ್ಟ್, ವಿಸ್ಕೃತ ಪೀಠದ ಪರಿಗಣನೆಗೆ ನಾಲ್ಕು ಪ್ರಶ್ನೆಗಳನ್ನು ರೂಪಿಸಿದೆ.

ಮೊದಲನೆಯದಾಗಿ, ಸಂವಿಧಾನದ 30ನೇ ವಿಧಿಯ ಷರತ್ತು (1) ರ ಅಡಿಯಲ್ಲಿ ಬರುವ ಅನುದಾನಿತ ಅಥವಾ ಅನುದಾನರಹಿತ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಸಂಪೂರ್ಣ ಆರ್‌ಟಿಇ ಕಾಯ್ದೆಯ ವ್ಯಾಪ್ತಿಯಿಂದ ವಿನಾಯಿತಿ ನೀಡುವ ಪ್ರಮತಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ತೀರ್ಪು ಮರುಪರಿಶೀಲನೆಯ ಅಗತ್ಯವಿದೆಯೇ ಎಂಬುದು.

ಸಂವಿಧಾನದ 30ನೇ ವಿಧಿಯು ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮತ್ತು ನಿರ್ವಹಿಸುವ ಹಕ್ಕನ್ನು ವಿವರಿಸುತ್ತದೆ.

ಎರಡನೆಯ ಪ್ರಶ್ನೆಯೆಂದರೆ, ಆರ್‌ಟಿಇ ಕಾಯ್ದೆಯು ಸಂವಿಧಾನದ 30(1) ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಧಾರ್ಮಿಕ ಅಥವಾ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ಉಲ್ಲಂಘಿಸುತ್ತದೆಯೇ? ಆರ್‌ಟಿಇ ಕಾಯ್ದೆಯ ಸೆಕ್ಷನ್ 12(1)(ಸಿ) ಸಂವಿಧಾನದ 30ನೇ ವಿಧಿಯಿಂದ ರಕ್ಷಿಸಲ್ಪಟ್ಟ ಅಲ್ಪಸಂಖ್ಯಾತರ ಹಕ್ಕುಗಳ ಮೇಲೆ ಅತಿಕ್ರಮಣ ಮಾಡುವ ದುಷ್ಪರಿಣಾಮದಿಂದ ಬಳಲುತ್ತಿದೆಯೇ? ಅಂತಹ ಅತಿಕ್ರಮಣ ತಡೆಯಲು, ಸೆಕ್ಷನ್ 12(1)(ಸಿ) ಅನ್ನು ದುರ್ಬಲ ವರ್ಗಗಳು ಮತ್ತು ಅನನುಕೂಲಕರ ಗುಂಪುಗಳಿಗೆ ಸೇರಿದ ನಿರ್ದಿಷ್ಟ ಅಲ್ಪಸಂಖ್ಯಾತ ಸಮುದಾಯದ ಮಕ್ಕಳನ್ನು ಸೇರಿಸಲು ಬದಲಾಯಿಸಬೇಕಿತ್ತೇ? ಎಂಬುವುದಾಗಿದೆ.

ಆರ್‌ಟಿಇ ಕಾಯ್ದೆಯ ಸೆಕ್ಷನ್ 12(1)(ಸಿ) ಕೆಲವು ಷರತ್ತುಗಳಿಗೆ ಒಳಪಟ್ಟು, ಒಂದು ಶಾಲೆಯು ‘ಅಲ್ಪಸಂಖ್ಯಾತ ವರ್ಗದ ಕನಿಷ್ಠ ಇಪ್ಪತ್ತೈದು ಪ್ರತಿಶತದಷ್ಟು ದುರ್ಬಲ ವರ್ಗ ಮತ್ತು ಅನಾನುಕೂಲಕರ ಗುಂಪಿಗೆ ಸೇರಿದ ಮಕ್ಕಳನ್ನು I ತರಗತಿಯಲ್ಲಿ ಸೇರಿಸಿಕೊಳ್ಳಬೇಕು ಮತ್ತು ಅದು ಪೂರ್ಣಗೊಳ್ಳುವವರೆಗೆ ಉಚಿತ ಮತ್ತು ಕಡ್ಡಾಯ ಪ್ರಾಥಮಿಕ ಶಿಕ್ಷಣವನ್ನು ನೀಡಬೇಕು’ ಎಂದು ನಿರ್ದೇಶಿಸುತ್ತದೆ.

“ಆರ್‌ಟಿಇ ಕಾಯ್ದೆ ಅನುದಾನಿತ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ ಎಂದು ಪ್ರಮತಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನಲ್ಲಿ ಮಾಡಿದ ಘೋಷಣೆಯ ಸಂದರ್ಭದಲ್ಲಿ ಸಂವಿಧಾನದ 29(2) ನೇ ವಿಧಿಯನ್ನು ಪರಿಗಣಿಸದಿರುವುದರಿಂದ ಏನು ಪರಿಣಾಮ ಬೀರುತ್ತದೆ?” ಎಂಬ ಮತ್ತೊಂದು ಪ್ರಶ್ನೆ ಕೇಳಲಾಗಿದೆ.

“ಯಾವುದೇ ನಾಗರಿಕನಿಗೆ ರಾಜ್ಯವು ನಿರ್ವಹಿಸುವ ಯಾವುದೇ ಶಿಕ್ಷಣ ಸಂಸ್ಥೆಗೆ ಅಥವಾ ರಾಜ್ಯ ನಿಧಿಯಿಂದ ನೆರವು ಪಡೆಯುವ ಯಾವುದೇ ಶಿಕ್ಷಣ ಸಂಸ್ಥೆಗೆ ಧರ್ಮ, ಜನಾಂಗ, ಜಾತಿ, ಭಾಷೆ ಅಥವಾ ಅವುಗಳಲ್ಲಿ ಯಾವುದಾದರೂ ಆಧಾರದ ಮೇಲೆ ಪ್ರವೇಶ ನಿರಾಕರಿಸಬಾರದು” ಎಂದು 29 (2) ನೇ ವಿಧಿ ಹೇಳುತ್ತದೆ.

ನಾಲ್ಕನೇ ಪ್ರಶ್ನೆಯೆಂದರೆ, ಪ್ರಮತಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನಲ್ಲಿ ಆರ್‌ಟಿಇ ಕಾಯ್ದೆಯ ಸೆಕ್ಷನ್ 12(1)(ಸಿ) ಹೊರತುಪಡಿಸಿ ಇತರ ನಿಬಂಧನೆಗಳ ಸಂವಿಧಾನಬಾಹಿರತೆಯ ಬಗ್ಗೆ ಯಾವುದೇ ಚರ್ಚೆ ನಡೆಯದಿದ್ದರೆ, ಕಾಯ್ದೆಯ ಸಂಪೂರ್ಣ ಭಾಗವನ್ನು ಸಂವಿಧಾನದ 30ನೇ ವಿಧಿಯಿಂದ ರಕ್ಷಿಸಲ್ಪಟ್ಟ ಅಲ್ಪಸಂಖ್ಯಾತರ ಹಕ್ಕುಗಳ ಅತಿಕ್ರಮಣ ಎಂದು ಘೋಷಿಸಬೇಕೇ?

ಧಾರ್ಮಿಕ ಅಥವಾ ಭಾಷಾವಾರು ಅಲ್ಪಸಂಖ್ಯಾತರು ಸ್ಥಾಪಿಸಿದ ಮತ್ತು ನಿರ್ವಹಿಸುವ ಶಾಲೆಗಳನ್ನು ಹೊರತುಪಡಿಸಿ ಎಲ್ಲಾ ಶಾಲೆಗಳು ಆರ್‌ಟಿಇ ಕಾಯ್ದೆಯ ನಿಬಂಧನೆಗಳನ್ನು ಪಾಲಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಭಾರತ ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ನಮಗೆ ಇರುವ ಅಧಿಕಾರವನ್ನು ನಾವು ಬಳಸಿಕೊಳ್ಳುತ್ತೇವೆ ಮತ್ತು ಐದು ವರ್ಷಗಳಿಗಿಂತ ಕಡಿಮೆ ಸೇವೆಯನ್ನು ಹೊಂದಿರುವ ಶಿಕ್ಷಕರು, ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ)ಯಲ್ಲಿ ಅರ್ಹತೆ ಪಡೆಯದೆ ನಿವೃತ್ತಿ ವಯಸ್ಸು ತಲುಪುವವರೆಗೆ ಸೇವೆಯಲ್ಲಿ ಮುಂದುವರಿಯಬಹುದು ಎಂದು ನಿರ್ದೇಶಿಸುತ್ತೇವೆ” ಎಂದು ಪೀಠ ಹೇಳಿದೆ.

“ಆರ್‌ಟಿಇ ಕಾಯ್ದೆ ಜಾರಿಗೆ ಬರುವ ಮೊದಲು ನೇಮಕಗೊಂಡ ಮತ್ತು ನಿವೃತ್ತಿ ಹೊಂದಲು 5 ವರ್ಷಗಳಿಗಿಂತ ಹೆಚ್ಚು ಸಮಯ ಹೊಂದಿರುವ ಸೇವಾ ನಿರತ ಶಿಕ್ಷಕರು ಸೇವೆಯಲ್ಲಿ ಮುಂದುವರಿಯುವ ದಿನಾಂಕದಿಂದ 2 ವರ್ಷಗಳ ಒಳಗೆ ಟಿಇಟಿಯಲ್ಲಿ ಅರ್ಹತೆ ಪಡೆಯುವ ಬಾಧ್ಯತೆಯಡಿಯಲ್ಲಿರುತ್ತಾರೆ” ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...