Homeಅಂತರಾಷ್ಟ್ರೀಯಸುಡಾನ್‌ನಲ್ಲಿ ಭಾರೀ ಭೂಕುಸಿತ: ಒಂದು ಹಳ್ಳಿಯೇ ಸಂಪೂರ್ಣ ನಾಶ, 1000ಕ್ಕೂ ಹೆಚ್ಚು ಜನರು ಸಾವು

ಸುಡಾನ್‌ನಲ್ಲಿ ಭಾರೀ ಭೂಕುಸಿತ: ಒಂದು ಹಳ್ಳಿಯೇ ಸಂಪೂರ್ಣ ನಾಶ, 1000ಕ್ಕೂ ಹೆಚ್ಚು ಜನರು ಸಾವು

- Advertisement -
- Advertisement -

ಸುಡಾನ್‌ನ ಪಶ್ಚಿಮ ಪ್ರದೇಶದ ಡಾರ್ಫರ್‌ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಒಂದು ಹಳ್ಳಿ ಸಂಪೂರ್ಣ ನಾಶವಾಗಿದ್ದು, ಸುಮಾರು 1,000 ಜನರು ಸಾವನ್ನಪ್ಪಿದ್ದಾರೆ ಎಂದು ಆ ಪ್ರದೇಶವನ್ನು ನಿಯಂತ್ರಿಸುವ ಬಂಡಾಯ ಗುಂಪು ಸೋಮವಾರ (ಸೆ.1) ತಡರಾತ್ರಿ ಮಾಹಿತಿ ನೀಡಿದೆ.

ಆಗಸ್ಟ್ ಅಂತ್ಯದಲ್ಲಿ ಕೆಲವು ದಿನಗಳ ಕಾಲ ಸುರಿದ ಭಾರೀ ಮಳೆಯ ನಂತರ ಸೆಂಟ್ರಲ್ ಡಾರ್ಫರ್‌ನ ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮದಲ್ಲಿ ಭಾನುವಾರ ಈ ದುರಂತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಮೂವ್‌ಮೆಂಟ್-ಆರ್ಮಿ ಹೇಳಿಕೆಯಲ್ಲಿ ತಿಳಿಸಿದೆ.

ಆರಂಭಿಕ ಮಾಹಿತಿಯ ಪ್ರಕಾರ, ಎಲ್ಲಾ ಹಳ್ಳಿ ನಿವಾಸಿಗಳು ಸಾವನ್ನಪ್ಪಿದ್ದಾರೆ, ಅಂದಾಜು ಒಂದು ಸಾವಿರಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದಾರೆ. ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ” ಎಂದು ಹೇಳಿಕೆಯಲ್ಲಿ ವಿವರಿಸಲಾಗಿದೆ.

ಗ್ರಾಮವು ‘ಸಂಪೂರ್ಣವಾಗಿ ನೆಲಸಮವಾಗಿದೆ’ ಎಂದು ಗುಂಪು ಹೇಳಿದೆ, ಅವಶೇಗಳ ಅಡಿಯಿಂದ ಶವಗಳನ್ನು ಮೇಲೆತ್ತಲು ಸಹಾಯ ಮಾಡುವಂತೆ ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ನೆರವು ಗುಂಪುಗಳಿಗೆ ಮನವಿ ಮಾಡಿದೆ.

ಮರ್ರಾ ಪರ್ವತಗಳ ಸುದ್ದಿವಾಹಿನಿ ಹಂಚಿಕೊಂಡ ದೃಶ್ಯಗಳಲ್ಲಿ ಪರ್ವತ ಶ್ರೇಣಿಗಳ ನಡುವಿನ ಸಮತಟ್ಟಾದ ಪ್ರದೇಶವೊಂದು ಕಂಡುಬಂದಿದ್ದು, ಆ ಪ್ರದೇಶದಲ್ಲಿ ಜನರ ಗುಂಪೊಂದು ಹುಡುಕಾಟ ನಡೆಸುತ್ತಿರುವುದನ್ನು ನೋಡಬಹುದು.

ಏಪ್ರಿಲ್ 2023ರಲ್ಲಿ ರಾಜಧಾನಿ ಖಾರ್ಟೌಮ್ ಮತ್ತು ದೇಶದ ಇತರೆಡೆಗಳಲ್ಲಿ ದೇಶದ ಮಿಲಿಟರಿ ಮತ್ತು ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆಗಳ (ಆರ್‌ಎಸ್‌ಎಫ್‌) ನಡುವಿನ ಉದ್ವಿಗ್ನತೆ ಬಹಿರಂಗ ಹೋರಾಟವಾಗಿ ಬದಲಾಗಿದೆ. ಇದರಿಂದ ಸುಡಾನ್ ಅನ್ನು ವಿನಾಶಕಾರಿ ಅಂತರ್ಯುದ್ಧ ಆವರಿಸಿದೆ. ಈ ನಡುವೆಯೇ ಈ ದುರಂತ ಸಂಭವಿಸಿದೆ.

ಸುಡಾನ್ ಸೇನೆ ಮತ್ತು ಆರ್‌ಎಸ್‌ಎಫ್ ನಡುವಿನ ಹೋರಾಟ ಮತ್ತು ಕಠಿಣ ನಿರ್ಬಂಧಗಳಿಂದಾಗಿ, ಮರ್ರಾ ಪರ್ವತಗಳು ಸೇರಿದಂತೆ ಡಾರ್ಫರ್ ಪ್ರದೇಶದ ಹೆಚ್ಚಿನ ಭಾಗಳಿಗೆ ವಿಶ್ವಸಂಸ್ಥೆ ಮತ್ತು ನೆರವು ಗುಂಪುಗಳಿಗೆ ಪ್ರವೇಶಿಸಲು ಅಸಾಧ್ಯವಾಗಿದೆ.

ಮರ್ರಾ ಪರ್ವತ ಪ್ರದೇಶದಲ್ಲಿ ಕೇಂದ್ರೀಕೃತವಾಗಿರುವ ಸುಡಾನ್ ಲಿಬರೇಶನ್ ಮೂವ್‌ಮೆಂಟ್-ಆರ್ಮಿ, ಡಾರ್ಫರ್ ಮತ್ತು ಕೊರ್ಡೊಫಾನ್ ಪ್ರದೇಶಗಳಲ್ಲಿ ಸಕ್ರಿಯವಾಗಿರುವ ಬಹು ಬಂಡಾಯ ಗುಂಪುಗಳಲ್ಲಿ ಒಂದಾಗಿದೆ.

ಮರ್ರಾ ಪರ್ವತಗಳು ಎಲ್-ಫಶರ್‌ನ ನೈಋತ್ಯಕ್ಕೆ 160 ಕಿಲೋಮೀಟರ್ (100 ಮೈಲುಗಳು) ವಿಸ್ತರಿಸಿರುವ ಒರಟಾದ ಜ್ವಾಲಾಮುಖಿ ಸರಪಳಿಯಾಗಿದ್ದು, ಇದು ಮಿಲಿಟರಿ ಮತ್ತು ಆರ್‌ಎಸ್‌ಎಫ್ ನಡುವಿನ ಹೋರಾಟದ ಕೇಂದ್ರಬಿಂದುವಾಗಿದೆ. ಈ ಪ್ರದೇಶವು ಎಲ್-ಫಶರ್ ಮತ್ತು ಸುತ್ತಮುತ್ತಲಿನ ಹೋರಾಟದಿಂದ ಪಲಾಯನ ಮಾಡುವ ಸ್ಥಳಾಂತರಗೊಂಡ ಕುಟುಂಬಗಳಿಗೆ ಕೇಂದ್ರವಾಗಿ ಮಾರ್ಪಟ್ಟಿದೆ.

ಮಿಲಿಟರಿ ಮತ್ತು ಆರ್‌ಎಸ್‌ಎಫ್ ನಡುವಿನ ಸಂಘರ್ಷವು 40,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ, 14 ಮಿಲಿಯನ್‌ಗಿಂತಲೂ ಹೆಚ್ಚು ಜನರು ತಮ್ಮ ಮನೆಗಳನ್ನು ಬಿಟ್ಟು ಪಲಾಯನ ಮಾಡಿದ್ದಾರೆ. ದೇಶದ ಕೆಲವು ಭಾಗಗಳಲ್ಲಿ ಬರಗಾಲ ಆವರಿಸಿ ಜನರು ಜೀವ ಉಳಿಸಿಕೊಳ್ಳಲು ಹುಲ್ಲು ತಿನ್ನುವ ಪರಿಸ್ಥಿತಿ ನಿರ್ಮಿಸಿದೆ.

ವಿಶ್ವಸಂಸ್ಥೆ ಮತ್ತು ಮಾನವ ಹಕ್ಕುಗಳ ಗುಂಪುಗಳ ಪ್ರಕಾರ, ಜನಾಂಗೀಯ ಪ್ರೇರಿತ ಹತ್ಯೆ ಮತ್ತು ಅತ್ಯಾಚಾರ ಸೇರಿದಂತೆ ಘೋರ ದೌರ್ಜನ್ಯಗಳಿಂದ ಈ ಸಂಘರ್ಷ ಗುರುತಿಸಲ್ಪಟ್ಟಿದೆ. ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯವು ಆಪಾದಿತ ಯುದ್ಧ ಅಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳ ತನಿಖೆ ನಡೆಸುತ್ತಿದೆ.

ತಾರಾಸಿನ್ ಗ್ರಾಮವು ಮಧ್ಯ ಮರ್ರಾ ಪರ್ವತಗಳಲ್ಲಿದೆ. ಇದು ಜ್ವಾಲಾಮುಖಿ ಪ್ರದೇಶವಾಗಿದ್ದು, ಅದರ ಶಿಖರ 3,000 ಮೀಟರ್‌ಗಳಿಗಿಂತ ಹೆಚ್ಚು ಎತ್ತರವಿದೆ. ವಿಶ್ವ ಪರಂಪರೆಯ ತಾಣವಾಗಿರುವ ಈ ಪರ್ವತ ಸರಪಳಿಯು ಸುತ್ತಮುತ್ತಲಿನ ಪ್ರದೇಶಗಳಿಗಿಂತ ಕಡಿಮೆ ತಾಪಮಾನ ಮತ್ತು ಹೆಚ್ಚಿನ ಮಳೆಗೆ ಹೆಸರುವಾಸಿಯಾಗಿದೆ. ಇದು ರಾಜಧಾನಿ ಖಾರ್ಟೌಮ್‌ನಿಂದ ಪಶ್ಚಿಮಕ್ಕೆ 900 ಕಿಲೋಮೀಟರ್‌ಗಳಿಗಿಂತ (560 ಮೈಲುಗಳು) ಹೆಚ್ಚು ದೂರದಲ್ಲಿದೆ.

ಭಾನುವಾರದ ಭೂಕುಸಿತವು ಸುಡಾನ್‌ನ ಇತ್ತೀಚಿನ ಇತಿಹಾಸದಲ್ಲಿ ಅತ್ಯಂತ ಮಾರಕ ನೈಸರ್ಗಿಕ ವಿಕೋಪಗಳಲ್ಲಿ ಒಂದಾಗಿದೆ. ಜುಲೈನಿಂದ ಅಕ್ಟೋಬರ್‌ವರೆಗೆ ಮಳೆಯಾಗುವುದರಿಂದ ಪ್ರತಿ ವರ್ಷ ನೂರಾರು ಜನರು ಇಲ್ಲಿ ಸಾಯುತ್ತಾರೆ.

ಪೂರ್ವ ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 800 ಮಂದಿ ಸಾವು, 2500 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....