Homeಮುಖಪುಟಪ್ರವಾಹಕ್ಕೆ ನಲುಗಿದ ಪಂಜಾಬ್: ಇದುವರೆಗೆ 37 ಮಂದಿ ಸಾವು, ಸಂಕಷ್ಟದಲ್ಲಿ 23 ಜಿಲ್ಲೆಗಳ ಜನತೆ

ಪ್ರವಾಹಕ್ಕೆ ನಲುಗಿದ ಪಂಜಾಬ್: ಇದುವರೆಗೆ 37 ಮಂದಿ ಸಾವು, ಸಂಕಷ್ಟದಲ್ಲಿ 23 ಜಿಲ್ಲೆಗಳ ಜನತೆ

- Advertisement -
- Advertisement -

ಪಂಜಾಬ್‌ನಲ್ಲಿ ಭಾರೀ ಪ್ರವಾಹದಿಂದ ಇದುವರೆಗೆ 37 ಜನರು ಪ್ರಾಣ ಕಳೆದುಕೊಂಡಿದ್ದು, 23 ಜಿಲ್ಲೆಗಳಲ್ಲಿ ಜನ ಜೀವನ ಸಂಪೂರ್ಣ ಸಂಕಷ್ಟಕ್ಕೆ ಸಿಲುಕಿದೆ. ವರದಿಗಳ ಪ್ರಕಾರ, 1988ರ ನಂತರ ರಾಜ್ಯ ಎದುರಿಸಿದ ಅತ್ಯಂತ ಭೀಕರ ಪ್ರವಾಹ ಇದಾಗಿದೆ. ನಿರಂತರ ಸುರಿಯುತ್ತಿರುವ ಮಳೆ ಪರಿಸ್ಥಿತಿಯನ್ನು ಇನ್ನಷ್ಟು ಹದೆಗೆಡಿಸಿದೆ.

ಹಿಮಾಚಲ ಪ್ರದೇಶ ಮತ್ತು ಜಮ್ಮು ಕಾಶ್ಮೀರದ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಸಟ್ಲೆಜ್, ಬಿಯಾಸ್ ಮತ್ತು ರಾವಿ ನದಿಗಳು ಮತ್ತು ಕಾಲೋಚಿತ ಹೊಳೆಗಳು ಉಕ್ಕಿ ಹರಿದಿವೆ. ಇದರಿಂದ ಭೀಕರ ಪ್ರವಾಹ ಉಂಟಾಗಿದೆ.

ಗುರುದಾಸ್ಪುರ, ಪಠಾಣ್‌ಕೋಟ್‌ ಫಝಿಲ್ಕಾ, ಕಪುರ್ಥಲಾ, ತರಣ್ ತರಣ್, ಫಿರೋಝ್‌ಪುರ, ಹೋಶಿಯಾರ್‌ಪುರ್‌ ಮತ್ತು ಅಮೃತಸರ ಜಿಲ್ಲೆಗಳಲ್ಲಿ ಹಲವು ಗ್ರಾಮಗಳು ಮುಳುಗಡೆಯಾಗಿವೆ.

ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಸುರಕ್ಷತೆ ದೃಷ್ಠಿಯಿಂದ ಸರ್ಕಾರಿ, ಅನುದಾನಿತ, ಮತ್ತು ಖಾಸಗಿ ಶಾಲಾ- ಕಾಲೇಜುಗಳು, ವಿಶ್ವವಿದ್ಯಾಲಯಗಳು ಮತ್ತು ಪಾಲಿಟೆಕ್ನಿಕ್ ಸಂಸ್ಥೆಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸೆಪ್ಟೆಂಬರ್ 7 ರವರೆಗೆ ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಪಂಜಾಬ್ ಸಚಿವ ಸಂಪುಟದ ಸಚಿವರು, ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರೊಂದಿಗೆ ತರಣ್ ತರಣ್ ಜಿಲ್ಲೆಯಲ್ಲಿ ಬಿಯಾಸ್ ನದಿ ತೀರದ ಹಳ್ಳಿಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ಪರಿಹಾರ ಕಾರ್ಯಗಳ ಕುರಿತು ಸ್ಥಳೀಯ ಜನರೊಂದಿಗೆ ಸಂಪುಟ ಸಚಿವರು ಮತ್ತು ಎಎಪಿ ನಾಯಕರು ಚರ್ಚೆ ನಡೆಸಿದ್ದಾರೆ.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸಚಿವರು ಅಮೃತಸರ, ಗುರುದಾಸ್ಪುರ ಮತ್ತು ಕಪುರ್ಥಲಾ ಜಿಲ್ಲೆಗಳ ಹಳ್ಳಿಗಳಿಗೆ ಭೇಟಿ ನೀಡಿ ಸಂತ್ರಸ್ತ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸಚಿವ ಚೌಹಾಣ್ ಅವರು ರಾಜ್ಯದ ಅಧಿಕಾರಿಗಳೊಂದಿಗೆ ಬೆಳೆ ಹಾನಿಯ ಪ್ರಮಾಣವನ್ನು ಪರಿಶೀಲಿಸಲಿದ್ದಾರೆ ಮತ್ತು ರೈತರಿಗೆ ನೆರವು ನೀಡಲು ಕ್ರಮಗಳನ್ನು ರೂಪಿಸಲಿದ್ದಾರೆ ಎಂದು ವರದಿಗಳು ವಿವರಿಸಿವೆ.

ಪ್ರವಾಹದಿಂದ 1.48 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಭೂಮಿಯ ಬೆಳೆಗಳು ನಾಶವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನಾ ತಂಡಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿವೆ. ಹಳ್ಳಿಗಳಿಗೆ ಆಹಾರ, ಮೇವನ್ನು ಸಾಗಿಸುವ ಮತ್ತು ಮತ್ತಷ್ಟು ಪ್ರವಾಹವನ್ನು ತಡೆಗಟ್ಟಲು ಪ್ರಮುಖ ನೀರಿನ ಕಾಲುವೆಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ನಿರತವಾಗಿವೆ.

ಅಂಗೋಸ್ ಮತ್ತು ಸಿಖ್ ಸಂಘಟನೆಗಳು ಅಕ್ಕಿ, ಬೇಳೆಕಾಳುಗಳು, ಸಾಸಿವೆ ಎಣ್ಣೆ, ಬಿಸ್ಕತ್ತುಗಳು, ಗೋಧಿ ಹಿಟ್ಟು, ಔಷಧಿ ಮತ್ತು ಜಾನುವಾರು ಮೇವು ಸೇರಿದಂತೆ ಒಣ ಪಡಿತರವನ್ನು ಒದಗಿಸುತ್ತಿವೆ.

ಜಿಲ್ಲಾಡಳಿತಗಳು ಸಂತ್ರಸ್ತರಿಗಾಗಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದರೂ, ಅನೇಕ ಗ್ರಾಮಸ್ಥರು ತಮ್ಮ ಮನೆಗಳಲ್ಲಿಯೇ ಉಳಿಯುವ ನಿರ್ಧಾರ ಮಾಡಿಕೊಂಡಿದ್ದಾರೆ. ಜಾನುವಾರು ಆಶ್ರಯಗಳು ಪ್ರವಾಹಕ್ಕೆ ಸಿಲುಕಿರುವ ಪ್ರದೇಶಗಳಲ್ಲಿ ಜನರು ತಮ್ಮ ಮನೆಗಳ ಛಾವಣಿ ಸೇರಿದಂತೆ ಎತ್ತರದ ಪ್ರದೇಶಗಳಿಗೆ ಜಾನುವಾರುಗಳನ್ನು ಸ್ಥಳಾಂತರಿಸಿದ್ದಾರೆ.

ಪಂಜಾಬ್ ಸರ್ಕಾರವು ಹಾನಿಯನ್ನು ನಿರ್ಣಯಿಸಲು ವಿಶೇಷ ‘ಗಿರ್ದಾವರಿ’ (ನಷ್ಟದ ಮೌಲ್ಯಮಾಪನ) ಅನ್ನು ಪ್ರಾರಂಭಿಸಿದೆ ಮತ್ತು ಪ್ರತೀ ಹಾನಿಗೂ ನಷ್ಟ ಪರಿಹಾರ ನೀಡುವುದಾಗಿ ಹೇಳಿದೆ.

“ದೇಶವು ಬಿಕ್ಕಟ್ಟನ್ನು ಎದುರಿಸಿದಾಗಲೆಲ್ಲಾ, ಪಂಜಾಬ್ ದೇಶದ ಜೊತೆ ನಿಂತಿದೆ. ಅದು ಹಸಿರು ಕ್ರಾಂತಿಯ ಸಮಯವಾಗಿರಬಹುದು ಅಥವಾ ಸ್ವಾತಂತ್ರ್ಯ ಹೋರಾಟದ ಸಮಯವಾಗಿರಬಹುದು. ನಾವು ಗರಿಷ್ಠ ತ್ಯಾಗಗಳನ್ನು ಮಾಡಿದ್ದೇವೆ. ಇಂದು, ಪಂಜಾಬ್ ಬಿಕ್ಕಟ್ಟಿನಲ್ಲಿದೆ, ದೇಶವು ನಮ್ಮ ಬೆಂಬಲಕ್ಕೆ ನಿಲ್ಲುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಫಿರೋಜ್‌ಪುರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿದ್ದಾರೆ.

ಉತ್ತರಾಖಂಡ: ಮಳೆಯಿಂದ 5,000 ಕೋಟಿ ರೂ. ನಷ್ಟ, ಕೇದಾರನಾಥ ದುರಂತದ ನಂತರದ ಅತಿ ದೊಡ್ಡ ಆರ್ಥಿಕ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...