Homeಮುಖಪುಟದಾಖಲೆರಹಿತ ವಲಸಿಗರ ಬಂಧನ ಕೇಂದ್ರಗಳನ್ನು ಸ್ಥಾಪಿಸಲು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸೂಚನೆ

ದಾಖಲೆರಹಿತ ವಲಸಿಗರ ಬಂಧನ ಕೇಂದ್ರಗಳನ್ನು ಸ್ಥಾಪಿಸಲು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸೂಚನೆ

- Advertisement -
- Advertisement -

ದಾಖಲೆರಹಿತ ವಲಸಿಗರನ್ನು ಗಡಿಪಾರು ಮಾಡುವವರೆಗೆ ಅವರ ಓಡಾಟವನ್ನು ನಿರ್ಬಂಧಿಸಲು ಬಂಧನ ಕೇಂದ್ರಗಳನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.

ಈ ಸಂಬಂಧ, ವಲಸೆ ಮತ್ತು ವಿದೇಶಿಯರ ಆದೇಶ, 2025ರ ಭಾಗವಾಗಿ ಕೇಂದ್ರ ಗೃಹ ಸಚಿವಾಲಯ ಸೋಮವಾರ (ಸೆ.1) ಅಧಿಸೂಚನೆ ಹೊರಡಿಸಿದೆ.

ವಲಸೆ ಮತ್ತು ವಿದೇಶಿಯರ ಕಾಯ್ದೆ, 2025ರ ಅಡಿ ಅಧಿಸೂಚನೆ ಹೊರಡಿಸಲಾಗಿದೆ. ಈ ಕಾಯ್ದೆಯನ್ನು 2025ರ ಏಪ್ರಿಲ್‌ನಲ್ಲಿ ಸಂಸತ್ತು ಅಂಗೀಕರಿಸಿದೆ. ಇದು 1920ರ ಪಾಸ್‌ಪೋರ್ಟ್ (ಭಾರತಕ್ಕೆ ಪ್ರವೇಶ) ಕಾಯ್ದೆ, 1939ರ ವಿದೇಶಿಯರ ನೋಂದಣಿ ಕಾಯ್ದೆ, 1946 ವಿದೇಶಿಯರ ಕಾಯ್ದೆ ಮತ್ತು ವಲಸೆ ವಾಹಕರ ಹೊಣೆಗಾರಿಕೆ ಕಾಯ್ದೆ, 2000 ಅನ್ನು ಬದಲಾಯಿಸಿದೆ.

ವಿದೇಶಿಗಳನ್ನು ವಿಚಾರಣೆ ನಡೆಸುವ ಮೂಲಕ, ಯಾವುದೇ ವಿಮಾನ ಅಥವಾ ಇತರ ಸಾರಿಗೆ ವಿಧಾನವನ್ನು ಪರಿಶೀಲಿಸುವ ಮೂಲಕ ಮತ್ತು ಯಾವುದೇ ಸ್ಥಳವನ್ನು ಪರಿಶೀಲಿಸುವ ಮೂಲಕ ‘ಕಾಲಕಾಲಕ್ಕೆ’ ಭಾರತದಲ್ಲಿ ಅಕ್ರಮ ವಲಸಿಗರನ್ನು ಪತ್ತೆಹಚ್ಚಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕೇಂದ್ರದ ಆದೇಶದಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಲಾಗಿದೆ.

ದಾಖಲೆರಹಿತ ವಲಸಿಗರು ಕಂಡುಬಂದರೆ ಅವರನ್ನು ಬಂಧನ ಕೇಂದ್ರಗಳಲ್ಲಿ ಇಟ್ಟು ಓಡಾಟಕ್ಕೆ ನಿರ್ಬಂಧ ವಿಧಿಸುವಂತೆ ಮತ್ತು ಅವರನ್ನು ಗಡಿಪಾರು ಮಾಡಲು ಅಧಿಕಾರಿಗಳು ‘ಸೂಕ್ತ ಕ್ರಮಗಳನ್ನು’ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಈ ಅಧಿಸೂಚನೆಯೊಂದಿಗೆ ಕೇಂದ್ರ ಸರ್ಕಾರವು ಯಾವುದೇ ವ್ಯಕ್ತಿಗೆ ಸಮನ್ಸ್‌ ನೀಡುವ ಮತ್ತು ಅವರು ತನ್ನ ಮುಂದೆ ಹಾಜರಾಗಲು ವಿಫಲವಾದರೆ ಬಂಧನ ವಾರಂಟ್ ಹೊರಡಿಸುವ ಅಧಿಕಾರವನ್ನು ವಿದೇಶಿ ನ್ಯಾಯಮಂಡಳಿಗಳಿಗೆ ನೀಡಿದೆ.

ಕೇಂದ್ರದ ಅಧಿಸೂಚನೆ ದೇಶದಾದ್ಯಂತ ಅನ್ವಯವಾಗುತ್ತಿದ್ದರೂ, ವಿದೇಶಿಯರ ನ್ಯಾಯಮಂಡಳಿಗಳು ಪ್ರಸ್ತುತ ಅಸ್ಸಾಂನಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಇತರ ರಾಜ್ಯಗಳಲ್ಲಿ, ದಾಖಲೆರಹಿತ ವಲಸಿಗರನ್ನು ನ್ಯಾಯಾಲಯಗಳ ಮುಂದೆ ಹಾಜರುಪಡಿಸಲಾಗುತ್ತದೆ.

ಅಸ್ಸಾಂನಲ್ಲಿರುವ ವಿದೇಶಿಯರ ನ್ಯಾಯಮಂಡಳಿಗಳು ಅರೆ-ನ್ಯಾಯಾಂಗ ಸಂಸ್ಥೆಗಳಾಗಿದ್ದು, ಅವು ವಂಶಾವಳಿ ಮತ್ತು 1971ರ ಅಂತಿಮ ದಿನಾಂಕದ ಆಧಾರದ ಮೇಲೆ ಪೌರತ್ವದ ವಿಷಯಗಳಲ್ಲಿ ತೀರ್ಪು ನೀಡುತ್ತವೆ. ಅವು ಪ್ರಾಥಮಿಕವಾಗಿ 1971ಕ್ಕಿಂತ ಮೊದಲು ಅಸ್ಸಾಂ ಅಥವಾ ಭಾರತದಲ್ಲಿ ತಮ್ಮ ಕುಟುಂಬದ ವಾಸವನ್ನು ಖಚಿತಪಡಿಸಲು ವ್ಯಕ್ತಿಗಳು ಸಲ್ಲಿಸಿದ ದಾಖಲೆಗಳನ್ನು ಅವಲಂಬಿಸಿವೆ.

ಆದರೆ, ಈ ನ್ಯಾಯಮಂಡಳಿಗಳು ಅನಿಯಂತ್ರಿತತೆ ಮತ್ತು ಪಕ್ಷಪಾತದ ಆರೋಪಗಳನ್ನು ಹೊಂದಿವೆ. ಸಣ್ಣ ಕಾಗುಣಿತ ತಪ್ಪುಗಳು, ದಾಖಲೆಗಳ ಕೊರತೆ ಅಥವಾ ನೆನಪಿನ ಕೊರತೆಗಳ ಆಧಾರದ ಮೇಲೆ ಜನರನ್ನು ವಿದೇಶಿಯರೆಂದು ಘೋಷಿಸುತ್ತಿವೆ ಎನ್ನಲಾಗ್ತಿದೆ.

ದೇಶದ ಯಾವುದೇ ನ್ಯಾಯಾಲಯಕ್ಕೆ ಒಬ್ಬರು ವ್ಯಕ್ತಿಯ ಉಪಸ್ಥಿತಿ ಅಗತ್ಯವಿದ್ದರೆ ಅಥವಾ ಅವರು ದೇಶದಿಂದ ಹೊರಹೋಗುವುದು ವಿದೇಶಿ ಸಂಬಂಧದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದಿದ್ದರೆ ಅಂತವರು ದೇಶ ತೊರೆಯಲು ಅನುಮತಿ ನಿರಾಕರಿಸಬಹುದು ಎಂದು ಸೋಮವಾರ ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆ ಹೇಳಿದೆ.

ಭಾರತವನ್ನು ತೊರೆಯಲು ಅನುಮತಿ ತಡೆ ಹಿಡಿದ ವ್ಯಕ್ತಿಗಳ ಪಟ್ಟಿಯನ್ನು ವಲಸೆ ಬ್ಯೂರೋ ನಿರ್ವಹಿಸುತ್ತದೆ.

ಖಾಸಗಿ ವಲಯದಲ್ಲಿ ವಿದೇಶಿಯರನ್ನು ನೇಮಿಸಿಕೊಳ್ಳುವ ಮಾರ್ಗಸೂಚಿಗಳನ್ನೂ ಕೂಡ ಗೃಹ ಸಚಿವಾಲಯದ ಆದೇಶ ಪಟ್ಟಿ ಮಾಡಿದೆ. ನಾಗರಿಕ ಪ್ರಾಧಿಕಾರದ ಅನುಮತಿಯಿಲ್ಲದೆ, ಯಾವುದೇ ವಿದೇಶಿಯರೂ ಕೂಡ ‘ಖಾಸಗಿ ವಲಯದ ವಿದ್ಯುತ್, ನೀರು ಪೂರೈಕೆಯಲ್ಲಿ ಅಥವಾ ಪೆಟ್ರೋಲಿಯಂ ವಲಯದಲ್ಲಿ ತೊಡಗಿರುವ ಉದ್ಯಮಗಳಲ್ಲಿ ಉದ್ಯೋಗ ಪಡೆಯಲು ಅವಕಾಶವಿಲ್ಲ ಎಂದು ಹೇಳಿದೆ.

ರಕ್ಷಣೆ, ಬಾಹ್ಯಾಕಾಶ ತಂತ್ರಜ್ಞಾನ, ಪರಮಾಣು ಶಕ್ತಿ, ಮಾನವ ಹಕ್ಕುಗಳು ಅಥವಾ ಇವುಗಳ ಪರವಾಗಿ ನಿರ್ದಿಷ್ಟಪಡಿಸಿದ ಯಾವುದೇ ವಲಯದಲ್ಲಿ ತೊಡಗಿಸಿಕೊಂಡಿರುವ ಖಾಸಗಿ ವಲಯದ ಯಾವುದೇ ಉದ್ಯಮವು ಕೇಂದ್ರ ಸರ್ಕಾರದ ಪೂರ್ವಾನುಮತಿಯಿಲ್ಲದೆ ಯಾವುದೇ ವಿದೇಶಿಯರನ್ನು ನೇಮಿಸಿಕೊಳ್ಳಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಸ್ಸಾಂನಲ್ಲಿ CAA ಅಡಿಯಲ್ಲಿ ಕೇವಲ ಮೂವರು ವಿದೇಶಿಯರಿಗೆ ಪೌರತ್ವ: ಮುಖ್ಯಮಂತ್ರಿ ಶರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...