Homeಮುಖಪುಟದಾಖಲೆರಹಿತ ವಲಸಿಗರ ಬಂಧನ ಕೇಂದ್ರಗಳನ್ನು ಸ್ಥಾಪಿಸಲು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸೂಚನೆ

ದಾಖಲೆರಹಿತ ವಲಸಿಗರ ಬಂಧನ ಕೇಂದ್ರಗಳನ್ನು ಸ್ಥಾಪಿಸಲು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸೂಚನೆ

- Advertisement -
- Advertisement -

ದಾಖಲೆರಹಿತ ವಲಸಿಗರನ್ನು ಗಡಿಪಾರು ಮಾಡುವವರೆಗೆ ಅವರ ಓಡಾಟವನ್ನು ನಿರ್ಬಂಧಿಸಲು ಬಂಧನ ಕೇಂದ್ರಗಳನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.

ಈ ಸಂಬಂಧ, ವಲಸೆ ಮತ್ತು ವಿದೇಶಿಯರ ಆದೇಶ, 2025ರ ಭಾಗವಾಗಿ ಕೇಂದ್ರ ಗೃಹ ಸಚಿವಾಲಯ ಸೋಮವಾರ (ಸೆ.1) ಅಧಿಸೂಚನೆ ಹೊರಡಿಸಿದೆ.

ವಲಸೆ ಮತ್ತು ವಿದೇಶಿಯರ ಕಾಯ್ದೆ, 2025ರ ಅಡಿ ಅಧಿಸೂಚನೆ ಹೊರಡಿಸಲಾಗಿದೆ. ಈ ಕಾಯ್ದೆಯನ್ನು 2025ರ ಏಪ್ರಿಲ್‌ನಲ್ಲಿ ಸಂಸತ್ತು ಅಂಗೀಕರಿಸಿದೆ. ಇದು 1920ರ ಪಾಸ್‌ಪೋರ್ಟ್ (ಭಾರತಕ್ಕೆ ಪ್ರವೇಶ) ಕಾಯ್ದೆ, 1939ರ ವಿದೇಶಿಯರ ನೋಂದಣಿ ಕಾಯ್ದೆ, 1946 ವಿದೇಶಿಯರ ಕಾಯ್ದೆ ಮತ್ತು ವಲಸೆ ವಾಹಕರ ಹೊಣೆಗಾರಿಕೆ ಕಾಯ್ದೆ, 2000 ಅನ್ನು ಬದಲಾಯಿಸಿದೆ.

ವಿದೇಶಿಗಳನ್ನು ವಿಚಾರಣೆ ನಡೆಸುವ ಮೂಲಕ, ಯಾವುದೇ ವಿಮಾನ ಅಥವಾ ಇತರ ಸಾರಿಗೆ ವಿಧಾನವನ್ನು ಪರಿಶೀಲಿಸುವ ಮೂಲಕ ಮತ್ತು ಯಾವುದೇ ಸ್ಥಳವನ್ನು ಪರಿಶೀಲಿಸುವ ಮೂಲಕ ‘ಕಾಲಕಾಲಕ್ಕೆ’ ಭಾರತದಲ್ಲಿ ಅಕ್ರಮ ವಲಸಿಗರನ್ನು ಪತ್ತೆಹಚ್ಚಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕೇಂದ್ರದ ಆದೇಶದಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಲಾಗಿದೆ.

ದಾಖಲೆರಹಿತ ವಲಸಿಗರು ಕಂಡುಬಂದರೆ ಅವರನ್ನು ಬಂಧನ ಕೇಂದ್ರಗಳಲ್ಲಿ ಇಟ್ಟು ಓಡಾಟಕ್ಕೆ ನಿರ್ಬಂಧ ವಿಧಿಸುವಂತೆ ಮತ್ತು ಅವರನ್ನು ಗಡಿಪಾರು ಮಾಡಲು ಅಧಿಕಾರಿಗಳು ‘ಸೂಕ್ತ ಕ್ರಮಗಳನ್ನು’ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಈ ಅಧಿಸೂಚನೆಯೊಂದಿಗೆ ಕೇಂದ್ರ ಸರ್ಕಾರವು ಯಾವುದೇ ವ್ಯಕ್ತಿಗೆ ಸಮನ್ಸ್‌ ನೀಡುವ ಮತ್ತು ಅವರು ತನ್ನ ಮುಂದೆ ಹಾಜರಾಗಲು ವಿಫಲವಾದರೆ ಬಂಧನ ವಾರಂಟ್ ಹೊರಡಿಸುವ ಅಧಿಕಾರವನ್ನು ವಿದೇಶಿ ನ್ಯಾಯಮಂಡಳಿಗಳಿಗೆ ನೀಡಿದೆ.

ಕೇಂದ್ರದ ಅಧಿಸೂಚನೆ ದೇಶದಾದ್ಯಂತ ಅನ್ವಯವಾಗುತ್ತಿದ್ದರೂ, ವಿದೇಶಿಯರ ನ್ಯಾಯಮಂಡಳಿಗಳು ಪ್ರಸ್ತುತ ಅಸ್ಸಾಂನಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಇತರ ರಾಜ್ಯಗಳಲ್ಲಿ, ದಾಖಲೆರಹಿತ ವಲಸಿಗರನ್ನು ನ್ಯಾಯಾಲಯಗಳ ಮುಂದೆ ಹಾಜರುಪಡಿಸಲಾಗುತ್ತದೆ.

ಅಸ್ಸಾಂನಲ್ಲಿರುವ ವಿದೇಶಿಯರ ನ್ಯಾಯಮಂಡಳಿಗಳು ಅರೆ-ನ್ಯಾಯಾಂಗ ಸಂಸ್ಥೆಗಳಾಗಿದ್ದು, ಅವು ವಂಶಾವಳಿ ಮತ್ತು 1971ರ ಅಂತಿಮ ದಿನಾಂಕದ ಆಧಾರದ ಮೇಲೆ ಪೌರತ್ವದ ವಿಷಯಗಳಲ್ಲಿ ತೀರ್ಪು ನೀಡುತ್ತವೆ. ಅವು ಪ್ರಾಥಮಿಕವಾಗಿ 1971ಕ್ಕಿಂತ ಮೊದಲು ಅಸ್ಸಾಂ ಅಥವಾ ಭಾರತದಲ್ಲಿ ತಮ್ಮ ಕುಟುಂಬದ ವಾಸವನ್ನು ಖಚಿತಪಡಿಸಲು ವ್ಯಕ್ತಿಗಳು ಸಲ್ಲಿಸಿದ ದಾಖಲೆಗಳನ್ನು ಅವಲಂಬಿಸಿವೆ.

ಆದರೆ, ಈ ನ್ಯಾಯಮಂಡಳಿಗಳು ಅನಿಯಂತ್ರಿತತೆ ಮತ್ತು ಪಕ್ಷಪಾತದ ಆರೋಪಗಳನ್ನು ಹೊಂದಿವೆ. ಸಣ್ಣ ಕಾಗುಣಿತ ತಪ್ಪುಗಳು, ದಾಖಲೆಗಳ ಕೊರತೆ ಅಥವಾ ನೆನಪಿನ ಕೊರತೆಗಳ ಆಧಾರದ ಮೇಲೆ ಜನರನ್ನು ವಿದೇಶಿಯರೆಂದು ಘೋಷಿಸುತ್ತಿವೆ ಎನ್ನಲಾಗ್ತಿದೆ.

ದೇಶದ ಯಾವುದೇ ನ್ಯಾಯಾಲಯಕ್ಕೆ ಒಬ್ಬರು ವ್ಯಕ್ತಿಯ ಉಪಸ್ಥಿತಿ ಅಗತ್ಯವಿದ್ದರೆ ಅಥವಾ ಅವರು ದೇಶದಿಂದ ಹೊರಹೋಗುವುದು ವಿದೇಶಿ ಸಂಬಂಧದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದಿದ್ದರೆ ಅಂತವರು ದೇಶ ತೊರೆಯಲು ಅನುಮತಿ ನಿರಾಕರಿಸಬಹುದು ಎಂದು ಸೋಮವಾರ ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆ ಹೇಳಿದೆ.

ಭಾರತವನ್ನು ತೊರೆಯಲು ಅನುಮತಿ ತಡೆ ಹಿಡಿದ ವ್ಯಕ್ತಿಗಳ ಪಟ್ಟಿಯನ್ನು ವಲಸೆ ಬ್ಯೂರೋ ನಿರ್ವಹಿಸುತ್ತದೆ.

ಖಾಸಗಿ ವಲಯದಲ್ಲಿ ವಿದೇಶಿಯರನ್ನು ನೇಮಿಸಿಕೊಳ್ಳುವ ಮಾರ್ಗಸೂಚಿಗಳನ್ನೂ ಕೂಡ ಗೃಹ ಸಚಿವಾಲಯದ ಆದೇಶ ಪಟ್ಟಿ ಮಾಡಿದೆ. ನಾಗರಿಕ ಪ್ರಾಧಿಕಾರದ ಅನುಮತಿಯಿಲ್ಲದೆ, ಯಾವುದೇ ವಿದೇಶಿಯರೂ ಕೂಡ ‘ಖಾಸಗಿ ವಲಯದ ವಿದ್ಯುತ್, ನೀರು ಪೂರೈಕೆಯಲ್ಲಿ ಅಥವಾ ಪೆಟ್ರೋಲಿಯಂ ವಲಯದಲ್ಲಿ ತೊಡಗಿರುವ ಉದ್ಯಮಗಳಲ್ಲಿ ಉದ್ಯೋಗ ಪಡೆಯಲು ಅವಕಾಶವಿಲ್ಲ ಎಂದು ಹೇಳಿದೆ.

ರಕ್ಷಣೆ, ಬಾಹ್ಯಾಕಾಶ ತಂತ್ರಜ್ಞಾನ, ಪರಮಾಣು ಶಕ್ತಿ, ಮಾನವ ಹಕ್ಕುಗಳು ಅಥವಾ ಇವುಗಳ ಪರವಾಗಿ ನಿರ್ದಿಷ್ಟಪಡಿಸಿದ ಯಾವುದೇ ವಲಯದಲ್ಲಿ ತೊಡಗಿಸಿಕೊಂಡಿರುವ ಖಾಸಗಿ ವಲಯದ ಯಾವುದೇ ಉದ್ಯಮವು ಕೇಂದ್ರ ಸರ್ಕಾರದ ಪೂರ್ವಾನುಮತಿಯಿಲ್ಲದೆ ಯಾವುದೇ ವಿದೇಶಿಯರನ್ನು ನೇಮಿಸಿಕೊಳ್ಳಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಸ್ಸಾಂನಲ್ಲಿ CAA ಅಡಿಯಲ್ಲಿ ಕೇವಲ ಮೂವರು ವಿದೇಶಿಯರಿಗೆ ಪೌರತ್ವ: ಮುಖ್ಯಮಂತ್ರಿ ಶರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...