Homeಮುಖಪುಟದಾಖಲೆರಹಿತ ವಲಸಿಗರ ಬಂಧನ ಕೇಂದ್ರಗಳನ್ನು ಸ್ಥಾಪಿಸಲು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸೂಚನೆ

ದಾಖಲೆರಹಿತ ವಲಸಿಗರ ಬಂಧನ ಕೇಂದ್ರಗಳನ್ನು ಸ್ಥಾಪಿಸಲು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸೂಚನೆ

- Advertisement -
- Advertisement -

ದಾಖಲೆರಹಿತ ವಲಸಿಗರನ್ನು ಗಡಿಪಾರು ಮಾಡುವವರೆಗೆ ಅವರ ಓಡಾಟವನ್ನು ನಿರ್ಬಂಧಿಸಲು ಬಂಧನ ಕೇಂದ್ರಗಳನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.

ಈ ಸಂಬಂಧ, ವಲಸೆ ಮತ್ತು ವಿದೇಶಿಯರ ಆದೇಶ, 2025ರ ಭಾಗವಾಗಿ ಕೇಂದ್ರ ಗೃಹ ಸಚಿವಾಲಯ ಸೋಮವಾರ (ಸೆ.1) ಅಧಿಸೂಚನೆ ಹೊರಡಿಸಿದೆ.

ವಲಸೆ ಮತ್ತು ವಿದೇಶಿಯರ ಕಾಯ್ದೆ, 2025ರ ಅಡಿ ಅಧಿಸೂಚನೆ ಹೊರಡಿಸಲಾಗಿದೆ. ಈ ಕಾಯ್ದೆಯನ್ನು 2025ರ ಏಪ್ರಿಲ್‌ನಲ್ಲಿ ಸಂಸತ್ತು ಅಂಗೀಕರಿಸಿದೆ. ಇದು 1920ರ ಪಾಸ್‌ಪೋರ್ಟ್ (ಭಾರತಕ್ಕೆ ಪ್ರವೇಶ) ಕಾಯ್ದೆ, 1939ರ ವಿದೇಶಿಯರ ನೋಂದಣಿ ಕಾಯ್ದೆ, 1946 ವಿದೇಶಿಯರ ಕಾಯ್ದೆ ಮತ್ತು ವಲಸೆ ವಾಹಕರ ಹೊಣೆಗಾರಿಕೆ ಕಾಯ್ದೆ, 2000 ಅನ್ನು ಬದಲಾಯಿಸಿದೆ.

ವಿದೇಶಿಗಳನ್ನು ವಿಚಾರಣೆ ನಡೆಸುವ ಮೂಲಕ, ಯಾವುದೇ ವಿಮಾನ ಅಥವಾ ಇತರ ಸಾರಿಗೆ ವಿಧಾನವನ್ನು ಪರಿಶೀಲಿಸುವ ಮೂಲಕ ಮತ್ತು ಯಾವುದೇ ಸ್ಥಳವನ್ನು ಪರಿಶೀಲಿಸುವ ಮೂಲಕ ‘ಕಾಲಕಾಲಕ್ಕೆ’ ಭಾರತದಲ್ಲಿ ಅಕ್ರಮ ವಲಸಿಗರನ್ನು ಪತ್ತೆಹಚ್ಚಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕೇಂದ್ರದ ಆದೇಶದಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಲಾಗಿದೆ.

ದಾಖಲೆರಹಿತ ವಲಸಿಗರು ಕಂಡುಬಂದರೆ ಅವರನ್ನು ಬಂಧನ ಕೇಂದ್ರಗಳಲ್ಲಿ ಇಟ್ಟು ಓಡಾಟಕ್ಕೆ ನಿರ್ಬಂಧ ವಿಧಿಸುವಂತೆ ಮತ್ತು ಅವರನ್ನು ಗಡಿಪಾರು ಮಾಡಲು ಅಧಿಕಾರಿಗಳು ‘ಸೂಕ್ತ ಕ್ರಮಗಳನ್ನು’ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಈ ಅಧಿಸೂಚನೆಯೊಂದಿಗೆ ಕೇಂದ್ರ ಸರ್ಕಾರವು ಯಾವುದೇ ವ್ಯಕ್ತಿಗೆ ಸಮನ್ಸ್‌ ನೀಡುವ ಮತ್ತು ಅವರು ತನ್ನ ಮುಂದೆ ಹಾಜರಾಗಲು ವಿಫಲವಾದರೆ ಬಂಧನ ವಾರಂಟ್ ಹೊರಡಿಸುವ ಅಧಿಕಾರವನ್ನು ವಿದೇಶಿ ನ್ಯಾಯಮಂಡಳಿಗಳಿಗೆ ನೀಡಿದೆ.

ಕೇಂದ್ರದ ಅಧಿಸೂಚನೆ ದೇಶದಾದ್ಯಂತ ಅನ್ವಯವಾಗುತ್ತಿದ್ದರೂ, ವಿದೇಶಿಯರ ನ್ಯಾಯಮಂಡಳಿಗಳು ಪ್ರಸ್ತುತ ಅಸ್ಸಾಂನಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಇತರ ರಾಜ್ಯಗಳಲ್ಲಿ, ದಾಖಲೆರಹಿತ ವಲಸಿಗರನ್ನು ನ್ಯಾಯಾಲಯಗಳ ಮುಂದೆ ಹಾಜರುಪಡಿಸಲಾಗುತ್ತದೆ.

ಅಸ್ಸಾಂನಲ್ಲಿರುವ ವಿದೇಶಿಯರ ನ್ಯಾಯಮಂಡಳಿಗಳು ಅರೆ-ನ್ಯಾಯಾಂಗ ಸಂಸ್ಥೆಗಳಾಗಿದ್ದು, ಅವು ವಂಶಾವಳಿ ಮತ್ತು 1971ರ ಅಂತಿಮ ದಿನಾಂಕದ ಆಧಾರದ ಮೇಲೆ ಪೌರತ್ವದ ವಿಷಯಗಳಲ್ಲಿ ತೀರ್ಪು ನೀಡುತ್ತವೆ. ಅವು ಪ್ರಾಥಮಿಕವಾಗಿ 1971ಕ್ಕಿಂತ ಮೊದಲು ಅಸ್ಸಾಂ ಅಥವಾ ಭಾರತದಲ್ಲಿ ತಮ್ಮ ಕುಟುಂಬದ ವಾಸವನ್ನು ಖಚಿತಪಡಿಸಲು ವ್ಯಕ್ತಿಗಳು ಸಲ್ಲಿಸಿದ ದಾಖಲೆಗಳನ್ನು ಅವಲಂಬಿಸಿವೆ.

ಆದರೆ, ಈ ನ್ಯಾಯಮಂಡಳಿಗಳು ಅನಿಯಂತ್ರಿತತೆ ಮತ್ತು ಪಕ್ಷಪಾತದ ಆರೋಪಗಳನ್ನು ಹೊಂದಿವೆ. ಸಣ್ಣ ಕಾಗುಣಿತ ತಪ್ಪುಗಳು, ದಾಖಲೆಗಳ ಕೊರತೆ ಅಥವಾ ನೆನಪಿನ ಕೊರತೆಗಳ ಆಧಾರದ ಮೇಲೆ ಜನರನ್ನು ವಿದೇಶಿಯರೆಂದು ಘೋಷಿಸುತ್ತಿವೆ ಎನ್ನಲಾಗ್ತಿದೆ.

ದೇಶದ ಯಾವುದೇ ನ್ಯಾಯಾಲಯಕ್ಕೆ ಒಬ್ಬರು ವ್ಯಕ್ತಿಯ ಉಪಸ್ಥಿತಿ ಅಗತ್ಯವಿದ್ದರೆ ಅಥವಾ ಅವರು ದೇಶದಿಂದ ಹೊರಹೋಗುವುದು ವಿದೇಶಿ ಸಂಬಂಧದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದಿದ್ದರೆ ಅಂತವರು ದೇಶ ತೊರೆಯಲು ಅನುಮತಿ ನಿರಾಕರಿಸಬಹುದು ಎಂದು ಸೋಮವಾರ ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆ ಹೇಳಿದೆ.

ಭಾರತವನ್ನು ತೊರೆಯಲು ಅನುಮತಿ ತಡೆ ಹಿಡಿದ ವ್ಯಕ್ತಿಗಳ ಪಟ್ಟಿಯನ್ನು ವಲಸೆ ಬ್ಯೂರೋ ನಿರ್ವಹಿಸುತ್ತದೆ.

ಖಾಸಗಿ ವಲಯದಲ್ಲಿ ವಿದೇಶಿಯರನ್ನು ನೇಮಿಸಿಕೊಳ್ಳುವ ಮಾರ್ಗಸೂಚಿಗಳನ್ನೂ ಕೂಡ ಗೃಹ ಸಚಿವಾಲಯದ ಆದೇಶ ಪಟ್ಟಿ ಮಾಡಿದೆ. ನಾಗರಿಕ ಪ್ರಾಧಿಕಾರದ ಅನುಮತಿಯಿಲ್ಲದೆ, ಯಾವುದೇ ವಿದೇಶಿಯರೂ ಕೂಡ ‘ಖಾಸಗಿ ವಲಯದ ವಿದ್ಯುತ್, ನೀರು ಪೂರೈಕೆಯಲ್ಲಿ ಅಥವಾ ಪೆಟ್ರೋಲಿಯಂ ವಲಯದಲ್ಲಿ ತೊಡಗಿರುವ ಉದ್ಯಮಗಳಲ್ಲಿ ಉದ್ಯೋಗ ಪಡೆಯಲು ಅವಕಾಶವಿಲ್ಲ ಎಂದು ಹೇಳಿದೆ.

ರಕ್ಷಣೆ, ಬಾಹ್ಯಾಕಾಶ ತಂತ್ರಜ್ಞಾನ, ಪರಮಾಣು ಶಕ್ತಿ, ಮಾನವ ಹಕ್ಕುಗಳು ಅಥವಾ ಇವುಗಳ ಪರವಾಗಿ ನಿರ್ದಿಷ್ಟಪಡಿಸಿದ ಯಾವುದೇ ವಲಯದಲ್ಲಿ ತೊಡಗಿಸಿಕೊಂಡಿರುವ ಖಾಸಗಿ ವಲಯದ ಯಾವುದೇ ಉದ್ಯಮವು ಕೇಂದ್ರ ಸರ್ಕಾರದ ಪೂರ್ವಾನುಮತಿಯಿಲ್ಲದೆ ಯಾವುದೇ ವಿದೇಶಿಯರನ್ನು ನೇಮಿಸಿಕೊಳ್ಳಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಸ್ಸಾಂನಲ್ಲಿ CAA ಅಡಿಯಲ್ಲಿ ಕೇವಲ ಮೂವರು ವಿದೇಶಿಯರಿಗೆ ಪೌರತ್ವ: ಮುಖ್ಯಮಂತ್ರಿ ಶರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...